Homeಮುಖಪುಟಬಂಗಾಳ ರಾಜ್ಯಪಾಲರ ಭೇಟಿಗೆ 24 ಬಿಜೆಪಿ ಶಾಸಕರ ಗೈರು: ಟಿಎಂಸಿಗೆ ವಲಸೆ ತಡೆಯಲು ಬಿಜೆಪಿ ಹರಸಾಹಸ

ಬಂಗಾಳ ರಾಜ್ಯಪಾಲರ ಭೇಟಿಗೆ 24 ಬಿಜೆಪಿ ಶಾಸಕರ ಗೈರು: ಟಿಎಂಸಿಗೆ ವಲಸೆ ತಡೆಯಲು ಬಿಜೆಪಿ ಹರಸಾಹಸ

- Advertisement -
- Advertisement -

ಬಂಗಾಳ ಬಿಜೆಪಿಯಲ್ಲಿ ಪಕ್ಷಾಂತರದ ಪರ್ವ ಆರಂಭವಾಗಿದೆ. ಒಬ್ಬರ ನಂತರ ಒಬ್ಬರು ಬಿಜೆಪಿ ತೊರೆದು ತಮ್ಮ ಹಳೆಯ ಟಿಎಂಸಿ ಪಕ್ಷ ಸೇರುತ್ತಿದ್ದಾರೆ. ಇದು ಅಲ್ಲಿನ ಬಿಜೆಪಿ ನಾಯಕರಿಗೆ ದೊಡ್ಡ ತಲೆನೋವಾಗಿದೆ. ಈ ಕುರಿತು ನಿನ್ನೆ ಪಕ್ಷದ ಶಾಸಕರೊಂದಗೆ ವಿರೋಧ ಪಕ್ಷದ ನಾಯಕ ಸುವೆಂದು ಅಧಿಕಾರಿ ಬಂಗಾಳ ರಾಜ್ಯಪಾಲರನ್ನು ಭೇಟಿಯಾದರು. ಆದರೆ ಮೂರನೇ ಒಂದು ಭಾಗ ಅಂದರೆ 74 ಶಾಸಕರಲ್ಲಿ 24 ಶಾಸಕರು ಸುವೆಂದು ಅಧಿಕಾರಿಯಿಂದ ದೂರವುಳಿದಿದ್ದು, ರಾಜ್ಯಪಾಲರ ಭೇಟಿಗೆ ಗೈರು ಹಾಜರಾಗಿದ್ದಾರೆ. ಇದು ಬಂಗಾಳ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ಮತ್ತೊಮ್ಮೆ ಜಗಜ್ಜಾಹೀರಾಗಿದೆ.

‘ತೋಡ್ನಾ-ಜೋಡ್ನಾ (ಕಳಿಸುವುದು-ಕರೆದುಕೊಳ್ಳುವುದು)’ ಟಿಎಂಸಿಯ ಕೊಳಕು ರಾಜಕೀಯದ ಒಂದು ಭಾಗವಾಗಿದೆ. ಅವರು ಕಳೆದ 10 ವರ್ಷಗಳಿಂದ ಇದನ್ನು ಮಾಡುತ್ತಿದ್ದಾರೆ ಮತ್ತು ಯಾರೂ ಇದನ್ನು ವಿರೋಧಿಸಲಿಲ್ಲ. ಆದರೆ ಇದೀಗ ಇದನ್ನು ವಿರೋಧಿಸಲಾಗುತ್ತಿದೆ ಮತ್ತು ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸುವೆಂದು ಅಧಿಕಾರಿ ಹೇಳಿದ್ದಾರೆ.

ನಾನು ಎಲ್ಲ ಶಾಸಕರಿಗೂ ಕರೆ ಮಾಡಿದ್ದೆ. 50 ಶಾಸಕರು ಇಂದು ನಮ್ಮೊಂದಿಗೆ ಸೇರಿದ್ದಾರೆ. ರಾಜ ಭವನದಲ್ಲಿ ರಾಜ್ಯಪಾಲ ಜಗದೀಪ್ ಧಂಖರ್ ಅವರನ್ನು ಭೇಟಿಯಾಗಿ ಪಕ್ಷಾಂತರ ವಿರೋಧಿ ಕಾನೂನು ಸೇರಿದಂತೆ ಹಲವು ವಿಷಯಗಳ ಕುರಿತು ಮಾತನಾಡಲಿದ್ದೇವೆ. ಉಳಿದ ಶಾಸಕರನ್ನು ಇಂದು ನಮ್ಮನ್ನು ಸೇರಿಕೊಳ್ಳುತ್ತಾರೆ, ಇಲ್ಲದಿದ್ದರೆ ಪಕ್ಷಾಂತರ ನಿಷೇಧ ಕಾಯ್ದೆಯಡಿ ಶಿಕ್ಷೆ ಅನುಭವಿಸುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಸಭೆಗೆ ಹಾಜರಾಗದ 24 ಶಾಸಕರು ಮರಳಿ ಟಿಎಂಸಿಯೆಡೆಗೆ ಮಹಾವಲಸೆ ನಡೆಸಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡತೊಡಗಿವೆ. ಕೆಲ ಶಾಸಕರು ಬಹಿರಂಗ ಹೇಳಿಕೆಗಳನ್ನು ಸಹ ನೀಡಿರುವುದು ಇದಕ್ಕೆ ಪುಷ್ಠಿ ನೀಡಿದೆ. ಹಲವು ಶಾಸಕರು ಬಿಜೆಪಿಯಲ್ಲಿ ಸುವೆಂದು ಅಧಿಕಾರಿಯ ನಾಯಕತ್ವವನ್ನು ಒಪ್ಪಿಕೊಳ್ಳಲು ಸಿದ್ದರಿಲ್ಲ ಎನ್ನಲಾಗಿದೆ.

ಒಂದು ಕಾಲದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆತ್ಮೀಯರಾಗಿದ್ದ ಸುವೇಂಧು ಅಧಿಕಾರಿ, ಈ ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿ ಸೇರಿ ರಾಜ್ಯದ ಅಗ್ರ ನಾಯಕರಾಗಿ ಬೆಳೆದಿರುವುದು ಹಲವರಿಗೆ ಇರಿಸು ಮುರಿಸು ತಂದಿದೆ. ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡಲಾಗಿದೆ. ಚಂಡಮಾರುತದಿಂದಾದ ಹಾನಿ ಪರಿಶೀಲನಾ ಸಭೆಯಲ್ಲಿಯೂ ಮೋದಿ ಸುವೆಂದುಗೆ ಆಹ್ವಾನ ನೀಡಿದ್ದರು.

ಈ ಎಲ್ಲಾ ಬೆಳವಣಿಗೆಗಳಿಂದ ಈಗಗಾಲೇ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಪಕ್ಷ ತೊರೆದಿದ್ದಾರೆ. ಬಿಜೆಪಿಯಲ್ಲಿನ ಉಸಿರುಕಟ್ಟಿಸುವ ವಾತಾವರಣದಿಂದಾಗಿ ತನ್ನ ಪುತ್ರನೊಂದಿಗೆ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ ಎಂದು ಅವರು ಹೇಳಿದ್ದರು. ಅವರು ಟಿಎಂಸಿ ಸೇರಿದ ನಂತರ ರಾಜೀಬ್ ಬ್ಯಾನರ್ಜಿ ಮತ್ತು ದೀಪೇಂಡು ಬಿಸ್ವಾಸ್ ಸೇರಿದಂತೆ ಹಲವಾರು ನಾಯಕರು ಇದನ್ನು ಅನುಸರಿಸುತ್ತಾರೆ ಎಂದು ನಿರೀಕ್ಷಿಸಲಾಗಿದೆ.

ಇದೇ ಸಂದರ್ಭದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಈ ಹಿಂದೆ ಪಕ್ಷ ತೊರೆದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವ ಅಭಿಯಾನ ಆರಂಭಿಸಿದ್ದಾರೆ. ಕನಿಷ್ಠ 30 ಬಿಜೆಪಿ ಶಾಸಕರೊಂದಿಗೆ ಟಿಎಂಸಿ ಸಂಪರ್ಕದಲ್ಲಿದೆ ಎಂಬ ಮಾತುಗಳು ಕೇಳಿಬಂದಿದ್ದು ಇದು ಬಿಜೆಪಿಗೆ ತಲೆನೋವಾಗಿದೆ. ಹಾಗಾಗಿ ಅವರು ಪಕ್ಷಾಂತರ ನಿಷೇಧ ಕಾಯ್ದೆಯ ಮೊರೆ ಹೋಗಿದ್ದಾರೆ.


ಇದನ್ನೂ ಓದಿ: ಮುಕುಲ್ ರಾಯ್ ನಿರ್ಗಮನ: ಬಂಗಾಳ ಬಿಜೆಪಿಯಲ್ಲಿ ಆಂತರೀಕ ಕಲಹ ಆರಂಭ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...