Homeಮುಖಪುಟಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್‌‌ ಘೋಷ್‌ಗೆ ಚುನಾವಣಾ ಪ್ರಚಾರ ಮಾಡದಂತೆ 24 ಗಂಟೆಗಳ ನಿಷೇಧ

ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್‌‌ ಘೋಷ್‌ಗೆ ಚುನಾವಣಾ ಪ್ರಚಾರ ಮಾಡದಂತೆ 24 ಗಂಟೆಗಳ ನಿಷೇಧ

- Advertisement -
- Advertisement -

“ಹಲವಾರು ಕಡೆಗಳಲ್ಲಿ ಸೀತಾಲ್ಕುಚ್ಚಿಯ ಘಟನೆ ಮರುಕಳಿಸುತ್ತದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್‌ಗೆ ಚುನಾವಣಾ ಆಯೋಗವು ಗುರುವಾರ ಸಂಜೆ 24 ಗಂಟೆಗಳ ಪ್ರಚಾರ ನಿಷೇಧ ಹೇರಿದೆ. ಆಯೋಗವು ದಿಲೀಪ್‌ ಘೋಷ್‌ಗೆ ಕಟುವಾಗಿ ಎಚ್ಚರಿಕೆ ನೀಡಿದ್ದು ನೀತಿ ಸಂಹಿತೆ ಜಾರಿಯಲ್ಲಿರುವಾಗ ಸಾರ್ವಜನಿಕವಾಗಿ ಅಂತಹ ಮಾತುಗಳನ್ನು ಬಳಸದಂತೆ ಹೇಳಿದೆ.

ಪಶ್ಚಿಮ ಬಂಗಾಳದಲ್ಲಿ ಕಳೆದ ಶನಿವಾರ ನಡೆದ ನಾಲ್ಕನೇ ಹಂತದ ಮತದಾನದ ಸಂದರ್ಭ ಸಿತಾಲ್ಕುಚ್ಚಿಯಲ್ಲಿ ಕೇಂದ್ರ ಭದ್ರತಾ ಪಡೆಗಳು ನಡೆಸಿದ ಗೋಲಿಬಾರ್‌ ಘಟನೆಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಸ್ಥಳೀಯ ಗುಂಪೊಂದು ತಮ್ಮ ಮೇಲೆ ದಾಳಿ ಮಾಡಿದ್ದರಿಂದ ಗುಂಡು ಹಾರಿಸಿದ್ದಾಗಿ ಅಧಿಕಾರಿಗಳು ಹೇಳಿದ್ದಾರೆ. ಆದರೆ ಸ್ಥಳೀಯರ ಪ್ರಕಾರ ಅಲ್ಲಿ ಯಾವುದೆ ಹಿಂಸಾಚಾರ ನಡೆದಿಲ್ಲ, ಭದ್ರತಾ ಪಡೆಗಳು ಏಕಾಏಕಿ ಗುಂಡು ಹಾರಿಸಿವೆ ಎಂದು ಹೇಳಿದ್ದಾರೆ. ಅಲ್ಲದೆ ಘಟನೆಯ ವಿಡಿಯೋಗಳು ವೈರಲಾಗಿದ್ದು, ಭದ್ರತಾ ಪಡೆಗಳು ನೀಡಿರುವ ಹೇಳಿಕೆಗಳು ಸುಳ್ಳು ಎಂದು ತೋರಿಸುತ್ತಿದೆ.

ಇದನ್ನೂ ಓದಿ: ಬಂಗಾಳ: ಸೀತಾಲ್ಕುಚ್ಚಿ ಗೋಲಿಬಾರ್‌ ವಿಡಿಯೋ ವೈರಲ್, ಕೇಂದ್ರ ಪಡೆಗಳ ಮೇಲೆ ಸಂಶಯದ ಹುತ್ತ!

ದಿಲೀಪ್ ಘೋಷ್ ಮೇಲಿನ ನಿಷೇಧವು ಏಪ್ರಿಲ್ 15 ರ ಸಂಜೆ 7 ರಿಂದ ಏಪ್ರಿಲ್ 16 ರವರೆಗೆ ಜಾರಿಯಲ್ಲಿರುತ್ತದೆ, ಈ ಸಮಯದಲ್ಲಿ ಅವರಿಗೆ ಚುನಾವಣಾ ಪ್ರಚಾರಕ್ಕೆ ಅನುಮತಿ ಇರುವುದಿಲ್ಲ.

“ದಿಲೀಪ್ ಘೋಷ್ ಪ್ರಚೋದನಕಾರಿ ಮತ್ತು ಉದ್ವೇಗಕಾರಿ ಹೇಳಿಕೆಗಳನ್ನು ನೀಡಿದ್ದು ಅದು ಕಾನೂನು ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಜೊತೆಗೆ ಚುನಾವಣಾ ಪ್ರಕ್ರಿಯೆಯ ಮೇಲೆ ಕೂಡಾ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ” ಎಂದು ಆಯೊಗದ ಆದೇಶದಲ್ಲಿ ತಿಳಿಸಲಾಗಿದೆ.

ದಿಲೀಪ್ ಘೋಷ್‌ ಹೇಳಿಕೆಯ ವಿರುದ್ದ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

“ಯಾರಾದರೂ ತಮ್ಮ ಮಿತಿಗಳನ್ನು ಮೀರಿದರೆ ಸೀತಾಲ್ಕುಚ್ಚಿಯಲ್ಲಿ ಏನಾಯಿತು ಎಂದು ನೀವು ನೋಡಿದ್ದೀರಿ. ಅದರಂತೆ ಹಲವಾರು ಸ್ಥಳಗಳಲ್ಲಿ ಸೀತಾಲ್ಕುಚ್ಚಿ ನಡೆದಂತೆ ನಡೆಯುತ್ತದೆ” ಎಂದು ದಿಲೀಪ್ ಘೋಷ್ ಹೇಳಿದ್ದರು.

ಇದನ್ನೂ ಓದಿ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ವಿವಾದಿತ ಹೇಳಿಕೆ: ರಾಹುಲ್ ಸಿನ್ಹಾಗೆ 48 ಗಂಟೆ ಪ್ರಚಾರಕ್ಕೆ ನಿಷೇಧ

ಆಯೋಗದ ನೋಟಿಸ್‌ಗೆ ನೀಡಿದ ಉತ್ತರದಲ್ಲಿ, ದಿಲೀಪ್‌ ಘೋಷ್, “ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೆಗೆ ಸಂಬಂಧಿಸಿದ ಹಿಂಸಾಚಾರವು ವಿಶಿಷ್ಟವಾಗಿದೆ. ತೃಣಮೂಲ ಕಾಂಗ್ರೆಸ್ ನಾಯಕರು ಮುಕ್ತ, ನ್ಯಾಯಯುತ ಮತ್ತು ಶಾಂತಿಯುತ ಮತದಾನದ ಪ್ರಕ್ರಿಯೆಯನ್ನು ಅಪಾಯಕ್ಕೆ ತಳ್ಳುವ ಮೂಲಕ ಭಯ ಮತ್ತು ಬೆದರಿಕೆಯ ವಾತಾವರಣವನ್ನು ಸೃಷ್ಟಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪಕ್ಷದ ರಾಜ್ಯಾಧ್ಯಕ್ಷರಾಗಿ, ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ನಿಂತು ಮತದಾರರನ್ನು ಭಯವಿಲ್ಲದೆ ಮತ ಚಲಾಯಿಸುವಂತೆ ಪ್ರೋತ್ಸಾಹಿಸುವುದು ಕರ್ತವ್ಯವಾಗಿದೆ. ನೀತಿ ಸಂಹಿತೆಗೆ ವಿರುದ್ಧವಾದ ಯಾವುದೇ ಹೇಳಿಕೆ ನೀಡುವುದು ತನ್ನ ಉದ್ದೇಶವಲ್ಲ” ಎಂದು ಅವರು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.

“ತನ್ನ ಹೇಳಿಕೆಯು ಗೊಂದಲ ಸೃಷ್ಟಿಸುವ, ಕಾನೂನು ಮತ್ತು ಸುವ್ಯವಸ್ಥೆಯ ನಿರ್ವಹಣೆಗೆ ಋಣಾತ್ಮಕ ಪರಿಣಾಮ ಬೀರುವ ದುಷ್ಕರ್ಮಿಗಳು ಮತ್ತು ಸಮಾಜ ವಿರೋಧಿಗಳನ್ನು ಉದ್ದೇಶಿಸಿ ಹೇಳಲಾಗಿದೆ” ಎಂದು ಅವರು ಆಯೋಗಕ್ಕೆ ತಿಳಿಸಿದ್ದಾರೆ. ಜೊತೆಗೆ ತಮ್ಮ ಮಾತು ತಪ್ಪಾಗಿದ್ದರೆ ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...