Homeಮುಖಪುಟಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್‌‌ ಘೋಷ್‌ಗೆ ಚುನಾವಣಾ ಪ್ರಚಾರ ಮಾಡದಂತೆ 24 ಗಂಟೆಗಳ ನಿಷೇಧ

ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್‌‌ ಘೋಷ್‌ಗೆ ಚುನಾವಣಾ ಪ್ರಚಾರ ಮಾಡದಂತೆ 24 ಗಂಟೆಗಳ ನಿಷೇಧ

- Advertisement -
- Advertisement -

“ಹಲವಾರು ಕಡೆಗಳಲ್ಲಿ ಸೀತಾಲ್ಕುಚ್ಚಿಯ ಘಟನೆ ಮರುಕಳಿಸುತ್ತದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್‌ಗೆ ಚುನಾವಣಾ ಆಯೋಗವು ಗುರುವಾರ ಸಂಜೆ 24 ಗಂಟೆಗಳ ಪ್ರಚಾರ ನಿಷೇಧ ಹೇರಿದೆ. ಆಯೋಗವು ದಿಲೀಪ್‌ ಘೋಷ್‌ಗೆ ಕಟುವಾಗಿ ಎಚ್ಚರಿಕೆ ನೀಡಿದ್ದು ನೀತಿ ಸಂಹಿತೆ ಜಾರಿಯಲ್ಲಿರುವಾಗ ಸಾರ್ವಜನಿಕವಾಗಿ ಅಂತಹ ಮಾತುಗಳನ್ನು ಬಳಸದಂತೆ ಹೇಳಿದೆ.

ಪಶ್ಚಿಮ ಬಂಗಾಳದಲ್ಲಿ ಕಳೆದ ಶನಿವಾರ ನಡೆದ ನಾಲ್ಕನೇ ಹಂತದ ಮತದಾನದ ಸಂದರ್ಭ ಸಿತಾಲ್ಕುಚ್ಚಿಯಲ್ಲಿ ಕೇಂದ್ರ ಭದ್ರತಾ ಪಡೆಗಳು ನಡೆಸಿದ ಗೋಲಿಬಾರ್‌ ಘಟನೆಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಸ್ಥಳೀಯ ಗುಂಪೊಂದು ತಮ್ಮ ಮೇಲೆ ದಾಳಿ ಮಾಡಿದ್ದರಿಂದ ಗುಂಡು ಹಾರಿಸಿದ್ದಾಗಿ ಅಧಿಕಾರಿಗಳು ಹೇಳಿದ್ದಾರೆ. ಆದರೆ ಸ್ಥಳೀಯರ ಪ್ರಕಾರ ಅಲ್ಲಿ ಯಾವುದೆ ಹಿಂಸಾಚಾರ ನಡೆದಿಲ್ಲ, ಭದ್ರತಾ ಪಡೆಗಳು ಏಕಾಏಕಿ ಗುಂಡು ಹಾರಿಸಿವೆ ಎಂದು ಹೇಳಿದ್ದಾರೆ. ಅಲ್ಲದೆ ಘಟನೆಯ ವಿಡಿಯೋಗಳು ವೈರಲಾಗಿದ್ದು, ಭದ್ರತಾ ಪಡೆಗಳು ನೀಡಿರುವ ಹೇಳಿಕೆಗಳು ಸುಳ್ಳು ಎಂದು ತೋರಿಸುತ್ತಿದೆ.

ಇದನ್ನೂ ಓದಿ: ಬಂಗಾಳ: ಸೀತಾಲ್ಕುಚ್ಚಿ ಗೋಲಿಬಾರ್‌ ವಿಡಿಯೋ ವೈರಲ್, ಕೇಂದ್ರ ಪಡೆಗಳ ಮೇಲೆ ಸಂಶಯದ ಹುತ್ತ!

ದಿಲೀಪ್ ಘೋಷ್ ಮೇಲಿನ ನಿಷೇಧವು ಏಪ್ರಿಲ್ 15 ರ ಸಂಜೆ 7 ರಿಂದ ಏಪ್ರಿಲ್ 16 ರವರೆಗೆ ಜಾರಿಯಲ್ಲಿರುತ್ತದೆ, ಈ ಸಮಯದಲ್ಲಿ ಅವರಿಗೆ ಚುನಾವಣಾ ಪ್ರಚಾರಕ್ಕೆ ಅನುಮತಿ ಇರುವುದಿಲ್ಲ.

“ದಿಲೀಪ್ ಘೋಷ್ ಪ್ರಚೋದನಕಾರಿ ಮತ್ತು ಉದ್ವೇಗಕಾರಿ ಹೇಳಿಕೆಗಳನ್ನು ನೀಡಿದ್ದು ಅದು ಕಾನೂನು ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಜೊತೆಗೆ ಚುನಾವಣಾ ಪ್ರಕ್ರಿಯೆಯ ಮೇಲೆ ಕೂಡಾ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ” ಎಂದು ಆಯೊಗದ ಆದೇಶದಲ್ಲಿ ತಿಳಿಸಲಾಗಿದೆ.

ದಿಲೀಪ್ ಘೋಷ್‌ ಹೇಳಿಕೆಯ ವಿರುದ್ದ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

“ಯಾರಾದರೂ ತಮ್ಮ ಮಿತಿಗಳನ್ನು ಮೀರಿದರೆ ಸೀತಾಲ್ಕುಚ್ಚಿಯಲ್ಲಿ ಏನಾಯಿತು ಎಂದು ನೀವು ನೋಡಿದ್ದೀರಿ. ಅದರಂತೆ ಹಲವಾರು ಸ್ಥಳಗಳಲ್ಲಿ ಸೀತಾಲ್ಕುಚ್ಚಿ ನಡೆದಂತೆ ನಡೆಯುತ್ತದೆ” ಎಂದು ದಿಲೀಪ್ ಘೋಷ್ ಹೇಳಿದ್ದರು.

ಇದನ್ನೂ ಓದಿ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ವಿವಾದಿತ ಹೇಳಿಕೆ: ರಾಹುಲ್ ಸಿನ್ಹಾಗೆ 48 ಗಂಟೆ ಪ್ರಚಾರಕ್ಕೆ ನಿಷೇಧ

ಆಯೋಗದ ನೋಟಿಸ್‌ಗೆ ನೀಡಿದ ಉತ್ತರದಲ್ಲಿ, ದಿಲೀಪ್‌ ಘೋಷ್, “ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೆಗೆ ಸಂಬಂಧಿಸಿದ ಹಿಂಸಾಚಾರವು ವಿಶಿಷ್ಟವಾಗಿದೆ. ತೃಣಮೂಲ ಕಾಂಗ್ರೆಸ್ ನಾಯಕರು ಮುಕ್ತ, ನ್ಯಾಯಯುತ ಮತ್ತು ಶಾಂತಿಯುತ ಮತದಾನದ ಪ್ರಕ್ರಿಯೆಯನ್ನು ಅಪಾಯಕ್ಕೆ ತಳ್ಳುವ ಮೂಲಕ ಭಯ ಮತ್ತು ಬೆದರಿಕೆಯ ವಾತಾವರಣವನ್ನು ಸೃಷ್ಟಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪಕ್ಷದ ರಾಜ್ಯಾಧ್ಯಕ್ಷರಾಗಿ, ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ನಿಂತು ಮತದಾರರನ್ನು ಭಯವಿಲ್ಲದೆ ಮತ ಚಲಾಯಿಸುವಂತೆ ಪ್ರೋತ್ಸಾಹಿಸುವುದು ಕರ್ತವ್ಯವಾಗಿದೆ. ನೀತಿ ಸಂಹಿತೆಗೆ ವಿರುದ್ಧವಾದ ಯಾವುದೇ ಹೇಳಿಕೆ ನೀಡುವುದು ತನ್ನ ಉದ್ದೇಶವಲ್ಲ” ಎಂದು ಅವರು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.

“ತನ್ನ ಹೇಳಿಕೆಯು ಗೊಂದಲ ಸೃಷ್ಟಿಸುವ, ಕಾನೂನು ಮತ್ತು ಸುವ್ಯವಸ್ಥೆಯ ನಿರ್ವಹಣೆಗೆ ಋಣಾತ್ಮಕ ಪರಿಣಾಮ ಬೀರುವ ದುಷ್ಕರ್ಮಿಗಳು ಮತ್ತು ಸಮಾಜ ವಿರೋಧಿಗಳನ್ನು ಉದ್ದೇಶಿಸಿ ಹೇಳಲಾಗಿದೆ” ಎಂದು ಅವರು ಆಯೋಗಕ್ಕೆ ತಿಳಿಸಿದ್ದಾರೆ. ಜೊತೆಗೆ ತಮ್ಮ ಮಾತು ತಪ್ಪಾಗಿದ್ದರೆ ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...