Homeಮುಖಪುಟಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್‌‌ ಘೋಷ್‌ಗೆ ಚುನಾವಣಾ ಪ್ರಚಾರ ಮಾಡದಂತೆ 24 ಗಂಟೆಗಳ ನಿಷೇಧ

ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್‌‌ ಘೋಷ್‌ಗೆ ಚುನಾವಣಾ ಪ್ರಚಾರ ಮಾಡದಂತೆ 24 ಗಂಟೆಗಳ ನಿಷೇಧ

- Advertisement -
- Advertisement -

“ಹಲವಾರು ಕಡೆಗಳಲ್ಲಿ ಸೀತಾಲ್ಕುಚ್ಚಿಯ ಘಟನೆ ಮರುಕಳಿಸುತ್ತದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್‌ಗೆ ಚುನಾವಣಾ ಆಯೋಗವು ಗುರುವಾರ ಸಂಜೆ 24 ಗಂಟೆಗಳ ಪ್ರಚಾರ ನಿಷೇಧ ಹೇರಿದೆ. ಆಯೋಗವು ದಿಲೀಪ್‌ ಘೋಷ್‌ಗೆ ಕಟುವಾಗಿ ಎಚ್ಚರಿಕೆ ನೀಡಿದ್ದು ನೀತಿ ಸಂಹಿತೆ ಜಾರಿಯಲ್ಲಿರುವಾಗ ಸಾರ್ವಜನಿಕವಾಗಿ ಅಂತಹ ಮಾತುಗಳನ್ನು ಬಳಸದಂತೆ ಹೇಳಿದೆ.

ಪಶ್ಚಿಮ ಬಂಗಾಳದಲ್ಲಿ ಕಳೆದ ಶನಿವಾರ ನಡೆದ ನಾಲ್ಕನೇ ಹಂತದ ಮತದಾನದ ಸಂದರ್ಭ ಸಿತಾಲ್ಕುಚ್ಚಿಯಲ್ಲಿ ಕೇಂದ್ರ ಭದ್ರತಾ ಪಡೆಗಳು ನಡೆಸಿದ ಗೋಲಿಬಾರ್‌ ಘಟನೆಯಲ್ಲಿ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಸ್ಥಳೀಯ ಗುಂಪೊಂದು ತಮ್ಮ ಮೇಲೆ ದಾಳಿ ಮಾಡಿದ್ದರಿಂದ ಗುಂಡು ಹಾರಿಸಿದ್ದಾಗಿ ಅಧಿಕಾರಿಗಳು ಹೇಳಿದ್ದಾರೆ. ಆದರೆ ಸ್ಥಳೀಯರ ಪ್ರಕಾರ ಅಲ್ಲಿ ಯಾವುದೆ ಹಿಂಸಾಚಾರ ನಡೆದಿಲ್ಲ, ಭದ್ರತಾ ಪಡೆಗಳು ಏಕಾಏಕಿ ಗುಂಡು ಹಾರಿಸಿವೆ ಎಂದು ಹೇಳಿದ್ದಾರೆ. ಅಲ್ಲದೆ ಘಟನೆಯ ವಿಡಿಯೋಗಳು ವೈರಲಾಗಿದ್ದು, ಭದ್ರತಾ ಪಡೆಗಳು ನೀಡಿರುವ ಹೇಳಿಕೆಗಳು ಸುಳ್ಳು ಎಂದು ತೋರಿಸುತ್ತಿದೆ.

ಇದನ್ನೂ ಓದಿ: ಬಂಗಾಳ: ಸೀತಾಲ್ಕುಚ್ಚಿ ಗೋಲಿಬಾರ್‌ ವಿಡಿಯೋ ವೈರಲ್, ಕೇಂದ್ರ ಪಡೆಗಳ ಮೇಲೆ ಸಂಶಯದ ಹುತ್ತ!

ದಿಲೀಪ್ ಘೋಷ್ ಮೇಲಿನ ನಿಷೇಧವು ಏಪ್ರಿಲ್ 15 ರ ಸಂಜೆ 7 ರಿಂದ ಏಪ್ರಿಲ್ 16 ರವರೆಗೆ ಜಾರಿಯಲ್ಲಿರುತ್ತದೆ, ಈ ಸಮಯದಲ್ಲಿ ಅವರಿಗೆ ಚುನಾವಣಾ ಪ್ರಚಾರಕ್ಕೆ ಅನುಮತಿ ಇರುವುದಿಲ್ಲ.

“ದಿಲೀಪ್ ಘೋಷ್ ಪ್ರಚೋದನಕಾರಿ ಮತ್ತು ಉದ್ವೇಗಕಾರಿ ಹೇಳಿಕೆಗಳನ್ನು ನೀಡಿದ್ದು ಅದು ಕಾನೂನು ಸುವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಜೊತೆಗೆ ಚುನಾವಣಾ ಪ್ರಕ್ರಿಯೆಯ ಮೇಲೆ ಕೂಡಾ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ” ಎಂದು ಆಯೊಗದ ಆದೇಶದಲ್ಲಿ ತಿಳಿಸಲಾಗಿದೆ.

ದಿಲೀಪ್ ಘೋಷ್‌ ಹೇಳಿಕೆಯ ವಿರುದ್ದ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

“ಯಾರಾದರೂ ತಮ್ಮ ಮಿತಿಗಳನ್ನು ಮೀರಿದರೆ ಸೀತಾಲ್ಕುಚ್ಚಿಯಲ್ಲಿ ಏನಾಯಿತು ಎಂದು ನೀವು ನೋಡಿದ್ದೀರಿ. ಅದರಂತೆ ಹಲವಾರು ಸ್ಥಳಗಳಲ್ಲಿ ಸೀತಾಲ್ಕುಚ್ಚಿ ನಡೆದಂತೆ ನಡೆಯುತ್ತದೆ” ಎಂದು ದಿಲೀಪ್ ಘೋಷ್ ಹೇಳಿದ್ದರು.

ಇದನ್ನೂ ಓದಿ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ವಿವಾದಿತ ಹೇಳಿಕೆ: ರಾಹುಲ್ ಸಿನ್ಹಾಗೆ 48 ಗಂಟೆ ಪ್ರಚಾರಕ್ಕೆ ನಿಷೇಧ

ಆಯೋಗದ ನೋಟಿಸ್‌ಗೆ ನೀಡಿದ ಉತ್ತರದಲ್ಲಿ, ದಿಲೀಪ್‌ ಘೋಷ್, “ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೆಗೆ ಸಂಬಂಧಿಸಿದ ಹಿಂಸಾಚಾರವು ವಿಶಿಷ್ಟವಾಗಿದೆ. ತೃಣಮೂಲ ಕಾಂಗ್ರೆಸ್ ನಾಯಕರು ಮುಕ್ತ, ನ್ಯಾಯಯುತ ಮತ್ತು ಶಾಂತಿಯುತ ಮತದಾನದ ಪ್ರಕ್ರಿಯೆಯನ್ನು ಅಪಾಯಕ್ಕೆ ತಳ್ಳುವ ಮೂಲಕ ಭಯ ಮತ್ತು ಬೆದರಿಕೆಯ ವಾತಾವರಣವನ್ನು ಸೃಷ್ಟಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪಕ್ಷದ ರಾಜ್ಯಾಧ್ಯಕ್ಷರಾಗಿ, ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ನಿಂತು ಮತದಾರರನ್ನು ಭಯವಿಲ್ಲದೆ ಮತ ಚಲಾಯಿಸುವಂತೆ ಪ್ರೋತ್ಸಾಹಿಸುವುದು ಕರ್ತವ್ಯವಾಗಿದೆ. ನೀತಿ ಸಂಹಿತೆಗೆ ವಿರುದ್ಧವಾದ ಯಾವುದೇ ಹೇಳಿಕೆ ನೀಡುವುದು ತನ್ನ ಉದ್ದೇಶವಲ್ಲ” ಎಂದು ಅವರು ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ.

“ತನ್ನ ಹೇಳಿಕೆಯು ಗೊಂದಲ ಸೃಷ್ಟಿಸುವ, ಕಾನೂನು ಮತ್ತು ಸುವ್ಯವಸ್ಥೆಯ ನಿರ್ವಹಣೆಗೆ ಋಣಾತ್ಮಕ ಪರಿಣಾಮ ಬೀರುವ ದುಷ್ಕರ್ಮಿಗಳು ಮತ್ತು ಸಮಾಜ ವಿರೋಧಿಗಳನ್ನು ಉದ್ದೇಶಿಸಿ ಹೇಳಲಾಗಿದೆ” ಎಂದು ಅವರು ಆಯೋಗಕ್ಕೆ ತಿಳಿಸಿದ್ದಾರೆ. ಜೊತೆಗೆ ತಮ್ಮ ಮಾತು ತಪ್ಪಾಗಿದ್ದರೆ ವಿಷಾದಿಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳ ಚುನಾವಣೆ: ಸೀತಾಲ್ಕುಚ್ಚಿ ಶೂಟೌಟ್ ಬಗ್ಗೆ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...