Homeಮುಖಪುಟಉತ್ತರ ಪ್ರದೇಶ: ಟ್ರಕ್ ಅಫಘಾತದಲ್ಲಿ 23 ವಲಸೆ ಕಾರ್ಮಿಕರು ಮೃತ

ಉತ್ತರ ಪ್ರದೇಶ: ಟ್ರಕ್ ಅಫಘಾತದಲ್ಲಿ 23 ವಲಸೆ ಕಾರ್ಮಿಕರು ಮೃತ

- Advertisement -
- Advertisement -

ಇಂದು ಉತ್ತರ ಪ್ರದೇಶದ ಔರಿಯಾ ಬಳಿ ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಟ್ರಕ್ ಮತ್ತೊಂದು ಟ್ರಕ್‌ಗೆ ಢಿಕ್ಕಿ ಹೊಡೆದು ಕನಿಷ್ಠ 23 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ.

ದುರಂತವೂ ಮುಂಜಾನೆ 3.30ರ ಸುಮಾರಿಗೆ ಸಂಭವಿಸಿದೆ. 15-20 ಮಂದಿ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಔರಿಯಾ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ “ಹೆಚ್ಚಿನವರು ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯದವರು” ಎಂದು ಹೇಳಿದ್ದಾರೆ.

ಇವರೆಲ್ಲರೂ ರಾಜಸ್ಥಾನದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಕಳೆದ ತಿಂಗಳು ದೇಶದಾದ್ಯಂತ ಘೋಷಿಸಿದ್ದ ಲಾಕ್‌ಡೌನ್ ನಿಂದಾಗಿ ಲಕ್ಷಾಂತರ ಕಾರ್ಮಿಕರು ತಮ್ಮ ಮನೆಗೆ ಮಹಾವಲಸೆಯನ್ನು ಪ್ರಾರಂಭಿಸಿದ್ದರು. ಈ ಸಮಯದಲ್ಲಿ ನೂರಾರು ಮಂದಿ ಅಫಘಾತ ಹಾಗೂ ಬಳಲಿಕೆಯಿಂದ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರಿಗೆ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ 50,000 ರೂ. ಘೋಷಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಅಲ್ಲದೆ ಎರಡೂ ಲಾರಿಗಳನ್ನು ವಶಪಡಿಸಿ ಟ್ರಕ್ ಚಾಲಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.

ಪ್ರಧಾನ ಮಂತ್ರಿ ಮೋದಿ ಸಂತಾಪ

ಘಟನೆಯ ಬಗ್ಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. “ಉತ್ತರ ಪ್ರದೇಶದ ಔರಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತ ಬಹಳ ದುರಂತ. ಪರಿಹಾರ ಕಾರ್ಯಗಳಲ್ಲಿ ಸರ್ಕಾರ ನಿರತವಾಗಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ, ಹಾಗೆಯೇ ಗಾಯಾಳುಗಳು ಆದಷ್ಟು ಬೇಗ ಚೇತರಿಕೆ ಹೊಂದಲಿ ಎಂದು ಹಾರೈಸುತ್ತೇನೆ.” ಎಂದು ಹೇಳಿದ್ದಾರೆ.

“ಔರಿಯಾ ಜಿಲ್ಲೆಯಲ್ಲಿ ರಸ್ತೆ ಅಪಘಾತದಿಂದ ವಲಸೆ ಕಾರ್ಮಿಕರ ಸಾವು ದುರದೃಷ್ಟಕರ ಮತ್ತು ದುಃಖಕರವಾಗಿದೆ. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪ. ಗಾಯಗೊಂಡವರಿಗೆ ಪರಿಹಾರ ಮತ್ತು ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸೂಚನೆಗಳನ್ನು ನೀಡಲಾಗಿದೆ. ತನಿಖೆಗೆ ಸಹ ಆದೇಶಿಸಲಾಗಿದೆ” ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

ಘಟನೆಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಕೂಡ ಸಂತಾಪ ಸೂಚಿಸಿದ್ದಾರೆ. “ಉತ್ತರ ಪ್ರದೇಶದ ಔರಿಯಾದಲ್ಲಿ ರಸ್ತೆ ಅಪಘಾತದಿಂದ ಹಲವಾರು ಕಾರ್ಮಿಕರು ಸಾವನ್ನಪ್ಪಿದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ. ಈ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಅಲ್ಲದೆ, ಗಾಯಗೊಂಡವರಿಗೆ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ” ಎಂದು ಹೇಳಿದ್ದಾರೆ.

ಅಪಘಾತದ ಬಗ್ಗೆ ಉತ್ತರ ಬಿಎಸ್ಪಿ ನಾಯಕಿ ಮಾಯಾವತಿ ಮಾತನಾಡಿ, “ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸದ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಕ್ರಮ ಕೈಗೊಳ್ಳಬೇಕೆಂದು ನಾನು ಒತ್ತಾಯಿಸುತ್ತೇನೆ. ಈ ಅಪಘಾತದಲ್ಲಿ ಮೃತಪಟ್ಟ ಅಥವಾ ಗಾಯಗೊಂಡವರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಬೇಕು. ದುಃಖಿತ ಕುಟುಂಬಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.” ಎಂದು ಹೇಳಿದ್ದಾರೆ.

ವಲಸೆ ಕಾರ್ಮಿಕರಿಗೆ ಆಹಾರ, ನೀರು ಒದಗಿಸಲು ಕೇಂದ್ರಕ್ಕೆ ಆದೇಶ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿನ್ನೆ ವಜಾಗೊಳಿಸಿದೆ.

“ನ್ಯಾಯಾಲಯ ಯಾರು ನಡೆಯುತ್ತಿದ್ದಾರೆ ಯಾರು ನಡೆಯುತ್ತಿಲ್ಲ ಎಂದು ಮೇಲ್ವಿಚಾರಣೆ ಮಾಡುವುದು ಅಸಾಧ್ಯ” ಎಂದಿತ್ತಲ್ಲದೆ, “ಈ ಬಗ್ಗೆ ರಾಜ್ಯ ತೀರ್ಮಾನಿಸಲಿ. ನ್ಯಾಯಾಲಯ ಯಾಕೆ ಕೇಳಬೇಕು ಅಥವಾ ತೀರ್ಮಾನಿಸಬೇಕು?” ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ಇನ್ನಷ್ಟು ಓದಿ: ವಲಸಿಗರ ಬಗ್ಗೆ ನಾವು ಯಾಕೆ ತೀರ್ಮಾನಿಸಬೇಕು, ರಾಜ್ಯಗಳು ತೀರ್ಮಾನಿಸಲಿ: ಸುಪ್ರೀಂ ಕೋರ್ಟ್


ನಮ್ಮ ಯೂಟ್ಯೂಬ್ ಚಾನೆಲ್ ಗೆ ಭೇಟಿ ನೀಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...