Homeಮುಖಪುಟಲೋಕಸಭೆ ಪ್ರವೇಶಿಸಿದ ಮುಸ್ಲಿಂ ಸಂಸದರ ಸಂಖ್ಯೆಯಲ್ಲಿ ಇಳಿಕೆ: ಈ ಭಾರಿ ಎಷ್ಟು ಮುಸ್ಲಿಂ ಅಭ್ಯರ್ಥಿಗಳು ಗೆಲುವು...

ಲೋಕಸಭೆ ಪ್ರವೇಶಿಸಿದ ಮುಸ್ಲಿಂ ಸಂಸದರ ಸಂಖ್ಯೆಯಲ್ಲಿ ಇಳಿಕೆ: ಈ ಭಾರಿ ಎಷ್ಟು ಮುಸ್ಲಿಂ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ? ಡಿಟೇಲ್ಸ್…

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ 24 ಮುಸ್ಲಿಂ ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದು, ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಮುಸ್ಲಿಂ ಸಂಸದರು ಲೋಕಸಭೆಗೆ ಪ್ರವೇಶಿಸಿರುವ ಸಂಖ್ಯೆಯಲ್ಲಿ ಕುಸಿತ ಕಂಡು ಬಂದಿದೆ. ಕಳೆದ ಬಾರಿ 26 ಮಂದಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಸಂಸದರು ಲೋಕಸಭೆ ಪ್ರವೇಶಿಸಿದ್ದರು.

18ನೇ ಲೋಕಸಭೆಯಲ್ಲಿ ಮುಸ್ಲಿಂ ಸಮುದಾಯದ ಉಪಸ್ಥಿತಿಯು 2014ಕ್ಕೆ ಹೋಲಿಕೆ ಮಾಡಿದರೆ ಅಲ್ಪ ಚೇತರಿಕೆಯಾಗಿದ್ದು, 2014ರಲ್ಲಿ 23 ಮುಸ್ಲಿಂ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದು ಸಂಸತ್ತನ್ನು ಪ್ರವೇಶಿಸಿದ್ದರು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 78 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದರು. ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ ಇದು ಗಣನೀಯವಾಗಿ ಇಳಿಕೆಯಾಗಿದ್ದು, ವಿವಿಧ ಪಕ್ಷಗಳಿಂದ ಕಳೆದ ಬಾರಿ 115 ಮುಸ್ಲಿಂ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು.

ಪಶ್ಚಿಮ ಬಂಗಾಳದ ಬಹರಂಪುರದಿಂದ ತೃಣಮೂಲ ಕಾಂಗ್ರೆಸ್‌ನ ಸಂಸದರಾಗಿ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮತ್ತು ಅಸ್ಸಾಂನ ಧುಬ್ರಿಯಿಂದ ಕಾಂಗ್ರೆಸ್‌ನ ರಕಿಬುಲ್ ಹುಸೇನ್ ಗೆಲುವನ್ನು ಸಾಧಿಸಿದ್ದಾರೆ. ಈ ಬಾರಿ ಗೆದ್ದಿರುವ ಮುಸ್ಲಿಂ ಅಭ್ಯರ್ಥಿಗಳ ಪೈಕಿ ಧುಬ್ರಿಯಲ್ಲಿ ರಕಿಬುಲ್ ಹುಸೇನ್ ಅವರ ಗೆಲುವಿನ ಅಂತರ ಬಹಳ ಮಹತ್ವದ್ದಾಗಿದೆ. ಕಾಂಗ್ರೆಸ್ ಅಭ್ಯರ್ಥಿ 14.71 ಲಕ್ಷ ಮತಗಳನ್ನು ಗಳಿಸಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಮೊಹಮ್ಮದ್ ಬದ್ರುದ್ದೀನ್ ಅಜ್ಮಲ್ ಅವರನ್ನು ಸುಮಾರು 10 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದಾರೆ.

ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರಾಗಿದ್ದ ಮತ್ತು ಆರು ಬಾರಿ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ ಅವರನ್ನು ಮೊದಲ ಬಾರಿಗೆ ಸ್ಪರ್ಧಿಸಿದ ಯೂಸುಫ್ ಪಠಾಣ್ ಅವರು 85,022 ಮತಗಳಿಂದ ಸೋಲಿಸಿದ್ದಾರೆ.

ಉತ್ತರಪ್ರದೇಶದ ಸಹರಾನ್‌ಪುರದ ಕಾಂಗ್ರೆಸ್‌ ಅಭ್ಯರ್ಥಿ ಇಮ್ರಾನ್‌ ಮಸೂದ್‌ 64,542 ಮತಗಳ ಅಂತರದಿಂದ ಜಯಗಳಿಸಿದರೆ, ಕೈರಾನಾದಿಂದ ಸಮಾಜವಾದಿ ಪಕ್ಷದ 29 ವರ್ಷದ ಅಭ್ಯರ್ಥಿ ಇಕ್ರಾ ಚೌಧರಿ 69,116 ಮತಗಳಿಂದ ಬಿಜೆಪಿಯ ಪ್ರದೀಪ್‌ ಕುಮಾರ್‌ ವಿರುದ್ಧ ಗೆಲುವನ್ನು ಸಾಧಿಸಿದ್ದಾರೆ. ಘಾಜಿಪುರದ ಹಾಲಿ ಸಂಸದ ಅಫ್ಜಲ್ ಅನ್ಸಾರಿ 5.3 ಲಕ್ಷ ಮತಗಳನ್ನು ಪಡೆಯುವ ಮೂಲಕ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಸಮಾಜವಾದಿ ಪಕ್ಷದ ಮೊಹಿಬ್ಬುಲ್ಲಾ 4,81,503 ಮತಗಳನ್ನು ಪಡೆಯುವ ಮೂಲಕ ರಾಂಪುರ ಕ್ಷೇತ್ರವನ್ನು ಗೆದ್ದುಕೊಂಡರೆ, ಜಿಯಾ ಉರ್ ರೆಹಮಾನ್ ಸಂಭಾಲ್‌ನಲ್ಲಿ 1.2 ಲಕ್ಷ ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಿಜೆಪಿಯ ಮಾಧವಿ ಲತಾ ಕೊಂಪೆಲ್ಲಾ ವಿರುದ್ಧ 3,38,087 ಮತಗಳ ಅಂತರದಿಂದ ಹೈದರಾಬಾದ್ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ, ನ್ಯಾಷನಲ್ ಕಾನ್ಫರೆನ್ಸ್‌ನ ಶ್ರೀನಗರದ ಅಭ್ಯರ್ಥಿ ಅಗಾ ಸೈಯದ್ ರುಹುಲ್ಲಾ ಮೆಹದಿ 3,56,866 ಮತಗಳನ್ನು ಗಳಿಸಿದ್ದು, ಪ್ರತಿಸ್ಪರ್ಧಿ ಪಿಡಿಪಿಯ ವಹೀದ್-ಉರ್-ರೆಹಮಾನ್ ಪರ್ರಾ ವಿರುದ್ಧ 1.88 ಲಕ್ಷ ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್‌ನ ಮಿಯಾನ್ ಅಲ್ತಾಫ್ ಅಹ್ಮದ್ ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಿರುದ್ಧ ಅನಂತನಾಗ್-ರಜೌರಿಯಲ್ಲಿ 2,81,794 ಮತಗಳಿಂದ ಗೆಲುವನ್ನು ಸಾಧಿಸಿದ್ದಾರೆ. ಲಡಾಖ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಮೊಹಮ್ಮದ್ ಹನೀಫಾ 27,862 ಮತಗಳ ಅಂತರದಿಂದ ಗೆಲುವು ಸಾಧಿಸಿದರೆ, ಮತ್ತೋರ್ವ ಸ್ವತಂತ್ರ ಅಭ್ಯರ್ಥಿ ಅಬ್ದುಲ್ ರಶೀದ್ ಶೇಖ್ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಹಾರದ ಕತಿಹಾರ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತಾರಿಕ್ ಅನ್ವರ್ ಜೆಡಿಯು ಅಭ್ಯರ್ಥಿ ದುಲಾಲ್ ಚಂದ್ರ ಗೋಸ್ವಾಮಿ ವಿರುದ್ಧ 49,863 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಪಕ್ಷವಾರು ನೋಡಿದಾಗ ಕಾಂಗ್ರೆಸ್ ಈಗ ಅತಿ ಹೆಚ್ಚು ಅಂದರೆ 7 ಮುಸ್ಲಿಂ ಸಂಸದರನ್ನು ಹೊಂದಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಐವರು ಮತ್ತು ಸಮಾಜವಾದಿ ಪಕ್ಷ ನಾಲ್ವರು ಸಂಸದರನ್ನು ಹೊಂದಿದೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮಲಪ್ಪುರಂನಿಂದ ಟಿ ಮೊಹಮ್ಮದ್ ಬಶೀರ್, ಕೇರಳದ ಪೊನ್ನಾನಿಯಿಂದ ಎಂ ಪಿ ಅಬ್ದುರಸ್ಮದ್ ಸಮ್ದಾನಿ ಮತ್ತು ತಮಿಳುನಾಡಿನ ರಾಮನಾಥಪುರದಿಂದ ಕೆ ನವಾಸ್ಕಾನಿ ಸೇರಿ ಮೂವರು ಸಂಸದರನ್ನು ಹೊಂದಿದೆ.

ಇದನ್ನು ಓದಿ: ‘ಮೈತ್ರಿಯಿಂದ ಯಾವುದೇ ಪ್ರಯೋಜನವಾಗಿಲ್ಲ’: ಪ.ಬಂಗಾಳದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಕೊನೆಗೊಳಿಸಿದ ಕೆಲವು ಎಡ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...