Homeಮುಖಪುಟಲೋಕಸಭೆ ಪ್ರವೇಶಿಸಿದ ಮುಸ್ಲಿಂ ಸಂಸದರ ಸಂಖ್ಯೆಯಲ್ಲಿ ಇಳಿಕೆ: ಈ ಭಾರಿ ಎಷ್ಟು ಮುಸ್ಲಿಂ ಅಭ್ಯರ್ಥಿಗಳು ಗೆಲುವು...

ಲೋಕಸಭೆ ಪ್ರವೇಶಿಸಿದ ಮುಸ್ಲಿಂ ಸಂಸದರ ಸಂಖ್ಯೆಯಲ್ಲಿ ಇಳಿಕೆ: ಈ ಭಾರಿ ಎಷ್ಟು ಮುಸ್ಲಿಂ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ? ಡಿಟೇಲ್ಸ್…

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ 24 ಮುಸ್ಲಿಂ ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದು, ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಮುಸ್ಲಿಂ ಸಂಸದರು ಲೋಕಸಭೆಗೆ ಪ್ರವೇಶಿಸಿರುವ ಸಂಖ್ಯೆಯಲ್ಲಿ ಕುಸಿತ ಕಂಡು ಬಂದಿದೆ. ಕಳೆದ ಬಾರಿ 26 ಮಂದಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಸಂಸದರು ಲೋಕಸಭೆ ಪ್ರವೇಶಿಸಿದ್ದರು.

18ನೇ ಲೋಕಸಭೆಯಲ್ಲಿ ಮುಸ್ಲಿಂ ಸಮುದಾಯದ ಉಪಸ್ಥಿತಿಯು 2014ಕ್ಕೆ ಹೋಲಿಕೆ ಮಾಡಿದರೆ ಅಲ್ಪ ಚೇತರಿಕೆಯಾಗಿದ್ದು, 2014ರಲ್ಲಿ 23 ಮುಸ್ಲಿಂ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದು ಸಂಸತ್ತನ್ನು ಪ್ರವೇಶಿಸಿದ್ದರು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 78 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದರು. ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ ಇದು ಗಣನೀಯವಾಗಿ ಇಳಿಕೆಯಾಗಿದ್ದು, ವಿವಿಧ ಪಕ್ಷಗಳಿಂದ ಕಳೆದ ಬಾರಿ 115 ಮುಸ್ಲಿಂ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು.

ಪಶ್ಚಿಮ ಬಂಗಾಳದ ಬಹರಂಪುರದಿಂದ ತೃಣಮೂಲ ಕಾಂಗ್ರೆಸ್‌ನ ಸಂಸದರಾಗಿ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮತ್ತು ಅಸ್ಸಾಂನ ಧುಬ್ರಿಯಿಂದ ಕಾಂಗ್ರೆಸ್‌ನ ರಕಿಬುಲ್ ಹುಸೇನ್ ಗೆಲುವನ್ನು ಸಾಧಿಸಿದ್ದಾರೆ. ಈ ಬಾರಿ ಗೆದ್ದಿರುವ ಮುಸ್ಲಿಂ ಅಭ್ಯರ್ಥಿಗಳ ಪೈಕಿ ಧುಬ್ರಿಯಲ್ಲಿ ರಕಿಬುಲ್ ಹುಸೇನ್ ಅವರ ಗೆಲುವಿನ ಅಂತರ ಬಹಳ ಮಹತ್ವದ್ದಾಗಿದೆ. ಕಾಂಗ್ರೆಸ್ ಅಭ್ಯರ್ಥಿ 14.71 ಲಕ್ಷ ಮತಗಳನ್ನು ಗಳಿಸಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಮೊಹಮ್ಮದ್ ಬದ್ರುದ್ದೀನ್ ಅಜ್ಮಲ್ ಅವರನ್ನು ಸುಮಾರು 10 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದಾರೆ.

ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರಾಗಿದ್ದ ಮತ್ತು ಆರು ಬಾರಿ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ ಅವರನ್ನು ಮೊದಲ ಬಾರಿಗೆ ಸ್ಪರ್ಧಿಸಿದ ಯೂಸುಫ್ ಪಠಾಣ್ ಅವರು 85,022 ಮತಗಳಿಂದ ಸೋಲಿಸಿದ್ದಾರೆ.

ಉತ್ತರಪ್ರದೇಶದ ಸಹರಾನ್‌ಪುರದ ಕಾಂಗ್ರೆಸ್‌ ಅಭ್ಯರ್ಥಿ ಇಮ್ರಾನ್‌ ಮಸೂದ್‌ 64,542 ಮತಗಳ ಅಂತರದಿಂದ ಜಯಗಳಿಸಿದರೆ, ಕೈರಾನಾದಿಂದ ಸಮಾಜವಾದಿ ಪಕ್ಷದ 29 ವರ್ಷದ ಅಭ್ಯರ್ಥಿ ಇಕ್ರಾ ಚೌಧರಿ 69,116 ಮತಗಳಿಂದ ಬಿಜೆಪಿಯ ಪ್ರದೀಪ್‌ ಕುಮಾರ್‌ ವಿರುದ್ಧ ಗೆಲುವನ್ನು ಸಾಧಿಸಿದ್ದಾರೆ. ಘಾಜಿಪುರದ ಹಾಲಿ ಸಂಸದ ಅಫ್ಜಲ್ ಅನ್ಸಾರಿ 5.3 ಲಕ್ಷ ಮತಗಳನ್ನು ಪಡೆಯುವ ಮೂಲಕ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಸಮಾಜವಾದಿ ಪಕ್ಷದ ಮೊಹಿಬ್ಬುಲ್ಲಾ 4,81,503 ಮತಗಳನ್ನು ಪಡೆಯುವ ಮೂಲಕ ರಾಂಪುರ ಕ್ಷೇತ್ರವನ್ನು ಗೆದ್ದುಕೊಂಡರೆ, ಜಿಯಾ ಉರ್ ರೆಹಮಾನ್ ಸಂಭಾಲ್‌ನಲ್ಲಿ 1.2 ಲಕ್ಷ ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಿಜೆಪಿಯ ಮಾಧವಿ ಲತಾ ಕೊಂಪೆಲ್ಲಾ ವಿರುದ್ಧ 3,38,087 ಮತಗಳ ಅಂತರದಿಂದ ಹೈದರಾಬಾದ್ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ, ನ್ಯಾಷನಲ್ ಕಾನ್ಫರೆನ್ಸ್‌ನ ಶ್ರೀನಗರದ ಅಭ್ಯರ್ಥಿ ಅಗಾ ಸೈಯದ್ ರುಹುಲ್ಲಾ ಮೆಹದಿ 3,56,866 ಮತಗಳನ್ನು ಗಳಿಸಿದ್ದು, ಪ್ರತಿಸ್ಪರ್ಧಿ ಪಿಡಿಪಿಯ ವಹೀದ್-ಉರ್-ರೆಹಮಾನ್ ಪರ್ರಾ ವಿರುದ್ಧ 1.88 ಲಕ್ಷ ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್‌ನ ಮಿಯಾನ್ ಅಲ್ತಾಫ್ ಅಹ್ಮದ್ ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಿರುದ್ಧ ಅನಂತನಾಗ್-ರಜೌರಿಯಲ್ಲಿ 2,81,794 ಮತಗಳಿಂದ ಗೆಲುವನ್ನು ಸಾಧಿಸಿದ್ದಾರೆ. ಲಡಾಖ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಮೊಹಮ್ಮದ್ ಹನೀಫಾ 27,862 ಮತಗಳ ಅಂತರದಿಂದ ಗೆಲುವು ಸಾಧಿಸಿದರೆ, ಮತ್ತೋರ್ವ ಸ್ವತಂತ್ರ ಅಭ್ಯರ್ಥಿ ಅಬ್ದುಲ್ ರಶೀದ್ ಶೇಖ್ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಹಾರದ ಕತಿಹಾರ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತಾರಿಕ್ ಅನ್ವರ್ ಜೆಡಿಯು ಅಭ್ಯರ್ಥಿ ದುಲಾಲ್ ಚಂದ್ರ ಗೋಸ್ವಾಮಿ ವಿರುದ್ಧ 49,863 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಪಕ್ಷವಾರು ನೋಡಿದಾಗ ಕಾಂಗ್ರೆಸ್ ಈಗ ಅತಿ ಹೆಚ್ಚು ಅಂದರೆ 7 ಮುಸ್ಲಿಂ ಸಂಸದರನ್ನು ಹೊಂದಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಐವರು ಮತ್ತು ಸಮಾಜವಾದಿ ಪಕ್ಷ ನಾಲ್ವರು ಸಂಸದರನ್ನು ಹೊಂದಿದೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮಲಪ್ಪುರಂನಿಂದ ಟಿ ಮೊಹಮ್ಮದ್ ಬಶೀರ್, ಕೇರಳದ ಪೊನ್ನಾನಿಯಿಂದ ಎಂ ಪಿ ಅಬ್ದುರಸ್ಮದ್ ಸಮ್ದಾನಿ ಮತ್ತು ತಮಿಳುನಾಡಿನ ರಾಮನಾಥಪುರದಿಂದ ಕೆ ನವಾಸ್ಕಾನಿ ಸೇರಿ ಮೂವರು ಸಂಸದರನ್ನು ಹೊಂದಿದೆ.

ಇದನ್ನು ಓದಿ: ‘ಮೈತ್ರಿಯಿಂದ ಯಾವುದೇ ಪ್ರಯೋಜನವಾಗಿಲ್ಲ’: ಪ.ಬಂಗಾಳದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಕೊನೆಗೊಳಿಸಿದ ಕೆಲವು ಎಡ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...