Homeಕರ್ನಾಟಕನೂತನ ಸಚಿವರ ಪೈಕಿ 24 ಮಂದಿಯ ಮೇಲಿವೆ ಕ್ರಿಮಿನಲ್ ಪ್ರಕರಣ: ವರದಿ

ನೂತನ ಸಚಿವರ ಪೈಕಿ 24 ಮಂದಿಯ ಮೇಲಿವೆ ಕ್ರಿಮಿನಲ್ ಪ್ರಕರಣ: ವರದಿ

- Advertisement -
- Advertisement -

ಕರ್ನಾಟಕದಲ್ಲಿ ಹೊಸದಾಗಿ ನೇಮಕಗೊಂಡ 32 ಸಚಿವರಲ್ಲಿ 31 ಮಂದಿ ಒಂದು ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂದು ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಚುನಾವಣಾ ಕಾವಲು ಸಮಿತಿಯ ವಿಶ್ಲೇಷಣೆಯು 24 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇರುವುದನ್ನು ಬಹಿರಂಗಪಡಿಸಿದೆ.

ವಿಧಾನಸಭೆ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದು, ಸಿದ್ದರಾಮಯ್ಯ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾರೆ. ಮೇ 20 ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಒಂಬತ್ತು ಇತರ ಸಚಿವರು ಸಂಪುಟಕ್ಕೆ ಸೇರ್ಪಡೆಗೊಂಡರು. ಮೇ 27 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು 24 ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. 34 ಸಂಖ್ಯಾಬಲದ ರಾಜ್ಯ ಸಚಿವ ಸಂಪುಟವು ಸಂಪೂರ್ಣ ವಿಸ್ತರಣೆಯಾಗಿದೆ.

ತನ್ನ ವರದಿಯಲ್ಲಿ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್, “34 ಮಂತ್ರಿಗಳಲ್ಲಿ 32 ಮಂದಿಯ ಚುನಾವಣಾ ಪ್ರಮಾಣ ಪತ್ರಗಳನ್ನು ವಿಶ್ಲೇಷಿಸಲಾಗಿದೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿನ ಸ್ಪಷ್ಟ ಮತ್ತು ಸಂಪೂರ್ಣ ಅಫಿಡವಿಟ್‌ಗಳ ಅಲಭ್ಯತೆಯಿಂದಾಗಿ ಸಚಿವ ಕೆ.ಜೆ.ಜಾರ್ಜ್ ಅವರ ಪ್ರಮಾಣಪತ್ರವನ್ನು ಸರಿಯಾಗಿ ವಿಶ್ಲೇಷಲು ಸಾಧ್ಯವಾಗಿಲ್ಲ” ಎಂದಿದೆ. ಮತ್ತೊಬ್ಬ ಸಚಿವ ಎನ್.ಎಸ್.ಬೋಸರಾಜು ಅವರು ರಾಜ್ಯ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನ ಸದಸ್ಯರಲ್ಲದ ಕಾರಣ ಅವರ ವಿವರಗಳನ್ನು ವಿಶ್ಲೇಷಿಸಲು ಸಾಧ್ಯವಾಗಿಲ್ಲ.

32 ಸಚಿವರ ಸರಾಸರಿ ಆಸ್ತಿ 119.06 ಕೋಟಿ ರೂಪಾಯಿ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ತಿಳಿಸಿದೆ. ಡಿ.ಕೆ.ಶಿವಕುಮಾರ್ ಅವರು 1,413.80 ಕೋಟಿ ರೂಪಾಯಿ ಮೌಲ್ಯದ ಘೋಷಿತ ಆಸ್ತಿ ಹೊಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು 51.93 ಕೋಟಿ ರೂ. ಆಸ್ತಿ ಹೊಂದಿದ್ದಾರೆ.

58.56 ಲಕ್ಷ ಆಸ್ತಿ ಹೊಂದಿರುವ, ಕೋಟ್ಯಾಧಿಪತಿಯಲ್ಲದ ಏಕೈಕ ಸಚಿವ ತಿಮ್ಮಾಪುರ್‌ ಆರ್‌.ಬಾಳಪ್ಪ.

ಇದನ್ನೂ ಓದಿರಿ: ಕುಸ್ತಿಪಟುಗಳಿಗೆ ಸವಾಲಾಗಿರುವ ‘ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌’ ಯಾರು? ಆತನ ಹಿನ್ನಲೆ, ಪ್ರಭಾವವೇನು?

ಏಳು ಸಚಿವರು ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣಗಳಿರುವುದನ್ನು ಘೋಷಿಸಿಕೊಂಡಿದ್ದಾರೆ ಎಂದು ವರದಿ ತೋರಿಸಿದೆ. ಡಿ.ಕೆ.ಶಿವಕುಮಾರ್, ಡಿ ಸುಧಾಕರ್, ಜಮೀರ್ ಅಹಮದ್ ಖಾನ್, ಕೆಎಚ್ ಮುನಿಯಪ್ಪ, ಸಿದ್ದರಾಮಯ್ಯ, ಬಿ ನಾಗೇಂದ್ರ ಮತ್ತು ಈಶ್ವರ್ ಖಂಡ್ರೆ ಅವರ ಮೇಲೆ ಕ್ರಿಮಿನಲ್ ಮೊಕದ್ದಮೆಗಳಿವೆ.

ಸಚಿವ ನಾಗೇಂದ್ರ ವಿರುದ್ಧ 105 ಗಂಭೀರ ಕ್ರಿಮಿನಲ್ ಪ್ರಕರಣಗಳಿವೆ. ಹೋರಾಟದ ಸಂದರ್ಭದಲ್ಲಿಯೂ ಅನೇಕ ಸಂದರ್ಭದಲ್ಲಿ ಕ್ರಿಮಿನಲ್ ಪ್ರಕರಣಗಳು ದಾಖಲಾಗಿರುವ ಸಾಧ್ಯತೆಗಳು ಇರುತ್ತವೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಗಂಭೀರ ಅಪರಾಧಗಳನ್ನು ಜಾಮೀನು ರಹಿತ ಅಪರಾಧಗಳೆಂದು ವ್ಯಾಖ್ಯಾನಿಸಿದೆ. ಇಂತಹ ಅಪರಾಧಗಳಲ್ಲಿ ಗರಿಷ್ಠ ಐದು ವರ್ಷಗಳು ಮತ್ತು ಅದಕ್ಕಿಂತ ಹೆಚ್ಚಿನ ಶಿಕ್ಷೆಯನ್ನು ನೀಡಲಾಗುತ್ತದೆ. ಹಲ್ಲೆ, ಕೊಲೆ, ಅಪಹರಣ, ಅತ್ಯಾಚಾರ, ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ಭ್ರಷ್ಟಾಚಾರ ಪ್ರಕರಣಗಳಿಗೆ ಇವುಗಳು ಸಂಬಂಧಿಸಿರುತ್ತವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...