Homeಅಂತರಾಷ್ಟ್ರೀಯನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ..

ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ..

ಬೌದ್ಧರ ತಾಯ್ನಾಡಾದ ಮ್ಯಾನ್ಮಾರ್‌ನಲ್ಲಿ ಕಿರುಕುಳವನ್ನು ಅನುಭವಿಸುತ್ತಿರವ ರೋಹಿಂಗ್ಯಾಗಳಿಗೆ ಮುಸ್ಲಿಂ ಬಹುಸಂಖ್ಯಾತ ಮಲೇಷ್ಯಾ ಅನುಕೂಲಕರ ತಾಣವಾಗಿದೆ. ಆದರೆ ಕೊರೊನಾ ವೈರಸ್ ಕಾರಣಕ್ಕೆ ಅಧಿಕಾರಿಗಳು ಮಲೇಷ್ಯಾಗೆ ಬರಲು ಬಿಡುತ್ತಿಲ್ಲ ಎನ್ನಲಾಗಿದೆ.

- Advertisement -
- Advertisement -

ರೋಹಿಂಗ್ಯಾ ವಲಸಿಗರು ಥೈಲ್ಯಾಂಡ್ ಬಳಿಯ ಮಲೇಷಿಯಾದ ಕರಾವಳಿಯಲ್ಲಿ ತೊಂದರೆಗೆ ಸಿಲುಕಿದ ಕಾರಣ ನೀರಿಗೆ ಹಾರಿದ್ದು, 24 ಜನರಲ್ಲಿ ಒಬ್ಬ ವ್ಯಕ್ತಿ ಮಾತ್ರ ದಡ ಸೇರಿದ್ದಾನೆ ಎಂದು ಕೋಸ್ಟ್‌ಗಾರ್ಡ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

27 ವರ್ಷದ ನಾರ್ ಹೊಸೇನ್ ಎನ್ನುವವನು ಲಂಗ್ಕಾವಿ ರೆಸಾರ್ಟ್ ದ್ವೀಪದ ದಡಕ್ಕೆ ಈಜಿ ಬಂದ ನಂತರ ಅವರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಉತ್ತರ ರಾಜ್ಯಗಳಾದ ಕೆಡಾ ಮತ್ತು ಪರ್ಲಿಸ್‌ನ ಕೋಸ್ಟ್‌ಗಾರ್ಡ್ ಮುಖ್ಯಸ್ಥ ಮೊಹಮದ್ ಜವಾವಿ ಅಬ್ದುಲ್ಲಾ ಹೇಳಿದ್ದಾರೆ.

“ಅಕ್ರಮ ರೋಹಿಂಗ್ಯಾ ವಲಸಿಗರು ಇತರ 24 ಜನರು ದೋಣಿಯಿಂದ ಹಾರಿದ್ದಾರೆ. ಆದರೆ ಈತ ಮಾತ್ರ ಸುರಕ್ಷಿತವಾಗಿ ದಡಕ್ಕೆ ಈಜುವಲ್ಲಿ ಯಶಸ್ವಿಯಾಗಿದ್ದಾನೆ” ಎಂದು ಜವಾವಿ ಹೇಳಿದ್ದಾರೆ.

ದೋಣಿಗೆ ಏನಾಯಿತು ಎಂಬುದು ಸ್ಪಷ್ಟವಾಗಿಲ್ಲ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ, ಆದರೆ ಯಾವುದೇ ಶವಗಳು ಅಥವಾ ಬದುಕುಳಿದವರು ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೌದ್ಧರ ತಾಯ್ನಾಡಾದ ಮ್ಯಾನ್ಮಾರ್‌ನಲ್ಲಿ ಕಿರುಕುಳವನ್ನು ಅನುಭವಿಸುತ್ತಿರವ ರೋಹಿಂಗ್ಯಾಗಳಿಗೆ ಮುಸ್ಲಿಂ ಬಹುಸಂಖ್ಯಾತ ಮಲೇಷ್ಯಾ ಅನುಕೂಲಕರ ತಾಣವಾಗಿದೆ. ಆದರೆ ಕೊರೊನಾ ವೈರಸ್ ಕಾರಣಕ್ಕೆ ಅಧಿಕಾರಿಗಳು ಮಲೇಷ್ಯಾಗೆ ಬರಲು ಬಿಡುತ್ತಿಲ್ಲ ಎನ್ನಲಾಗಿದೆ.

ಮೂರು ವರ್ಷಗಳ ಹಿಂದೆ ಮ್ಯಾನ್ಮಾರ್‌ನಲ್ಲಿ ಮಿಲಿಟರಿ ದೌರ್ಜನ್ಯದಿಂದ ಪಲಾಯನ ಮಾಡಿದ 7,00,000 ಕ್ಕಿಂತಲೂ ಹೆಚ್ಚಿನ ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶದ ಕಾಕ್ಸ್ ಬಜಾರ್ ಜಿಲ್ಲೆಯಲ್ಲಿ ಕಿಕ್ಕಿರಿದ ನಿರಾಶ್ರಿತರ ಶಿಬಿರಗಳಲ್ಲಿದ್ದಾರೆ. ಅಲ್ಲಿಂದ ಮಲೇಷ್ಯಾ ಮತ್ತು ನೆರೆಯ ಇಂಡೋನೇಷ್ಯಾಕ್ಕೆ ದೋಣಿಗಳಲ್ಲಿ ತೆರಳಲು ಯತ್ನಿಸುತ್ತಿದ್ದಾರೆ.

ಅವರು ದೋಣಿಯಿಂದ ಹಾರಿದ ಪ್ರದೇಶವನ್ನು ಹುಡುಕಲು ಎರಡು ಕೋಸ್ಟ್‌ಗಾರ್ಡ್ ವಿಮಾನಗಳು ಮತ್ತು ಎರಡು ದೋಣಿಗಳನ್ನು ನಿಯೋಜಿಸಲಾಗಿದೆ ಎಂದು ಜವಾವಿ ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗ ಹರಡಿದ ನಂತರ, ರೋಹಿಂಗ್ಯಾ ದೋಣಿಗಳನ್ನು ತಡೆಯುವ ಉದ್ದೇಶದಿಂದ ಮಲೇಷ್ಯಾ ಪಡೆ ಕಡಲ ಗಸ್ತು ತಿರುಗಿಸುತ್ತಿದೆ. ಕೆಲವರು ದೋಣಿಗಳಲ್ಲಿ ಮಲೇಷ್ಯಾದ ತೀರಕ್ಕೆ ಬಂದರೂ ಸಹ ರೋಗದ ಕಾರಣಕ್ಕಾಗಿ ಅವುಗಳನ್ನು ಹಿಂದಕ್ಕೆ ಕಳುಹಿಸಲಾಗಿದೆ ಎನ್ನಲಾಗಿದೆ.


ಇದನ್ನೂ ಓದಿ: ಕೂಡಲೇ ಕಾಶ್ಮೀರದಿಂದ ರೋಹಿಂಗ್ಯಾಗಳನ್ನು ಗಡಿಪಾರು ಮಾಡುತ್ತೇವೆ: ಕೇಂದ್ರ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...