Homeಅಂತರಾಷ್ಟ್ರೀಯನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ..

ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ..

ಬೌದ್ಧರ ತಾಯ್ನಾಡಾದ ಮ್ಯಾನ್ಮಾರ್‌ನಲ್ಲಿ ಕಿರುಕುಳವನ್ನು ಅನುಭವಿಸುತ್ತಿರವ ರೋಹಿಂಗ್ಯಾಗಳಿಗೆ ಮುಸ್ಲಿಂ ಬಹುಸಂಖ್ಯಾತ ಮಲೇಷ್ಯಾ ಅನುಕೂಲಕರ ತಾಣವಾಗಿದೆ. ಆದರೆ ಕೊರೊನಾ ವೈರಸ್ ಕಾರಣಕ್ಕೆ ಅಧಿಕಾರಿಗಳು ಮಲೇಷ್ಯಾಗೆ ಬರಲು ಬಿಡುತ್ತಿಲ್ಲ ಎನ್ನಲಾಗಿದೆ.

- Advertisement -
- Advertisement -

ರೋಹಿಂಗ್ಯಾ ವಲಸಿಗರು ಥೈಲ್ಯಾಂಡ್ ಬಳಿಯ ಮಲೇಷಿಯಾದ ಕರಾವಳಿಯಲ್ಲಿ ತೊಂದರೆಗೆ ಸಿಲುಕಿದ ಕಾರಣ ನೀರಿಗೆ ಹಾರಿದ್ದು, 24 ಜನರಲ್ಲಿ ಒಬ್ಬ ವ್ಯಕ್ತಿ ಮಾತ್ರ ದಡ ಸೇರಿದ್ದಾನೆ ಎಂದು ಕೋಸ್ಟ್‌ಗಾರ್ಡ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

27 ವರ್ಷದ ನಾರ್ ಹೊಸೇನ್ ಎನ್ನುವವನು ಲಂಗ್ಕಾವಿ ರೆಸಾರ್ಟ್ ದ್ವೀಪದ ದಡಕ್ಕೆ ಈಜಿ ಬಂದ ನಂತರ ಅವರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಉತ್ತರ ರಾಜ್ಯಗಳಾದ ಕೆಡಾ ಮತ್ತು ಪರ್ಲಿಸ್‌ನ ಕೋಸ್ಟ್‌ಗಾರ್ಡ್ ಮುಖ್ಯಸ್ಥ ಮೊಹಮದ್ ಜವಾವಿ ಅಬ್ದುಲ್ಲಾ ಹೇಳಿದ್ದಾರೆ.

“ಅಕ್ರಮ ರೋಹಿಂಗ್ಯಾ ವಲಸಿಗರು ಇತರ 24 ಜನರು ದೋಣಿಯಿಂದ ಹಾರಿದ್ದಾರೆ. ಆದರೆ ಈತ ಮಾತ್ರ ಸುರಕ್ಷಿತವಾಗಿ ದಡಕ್ಕೆ ಈಜುವಲ್ಲಿ ಯಶಸ್ವಿಯಾಗಿದ್ದಾನೆ” ಎಂದು ಜವಾವಿ ಹೇಳಿದ್ದಾರೆ.

ದೋಣಿಗೆ ಏನಾಯಿತು ಎಂಬುದು ಸ್ಪಷ್ಟವಾಗಿಲ್ಲ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ, ಆದರೆ ಯಾವುದೇ ಶವಗಳು ಅಥವಾ ಬದುಕುಳಿದವರು ಕಂಡುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೌದ್ಧರ ತಾಯ್ನಾಡಾದ ಮ್ಯಾನ್ಮಾರ್‌ನಲ್ಲಿ ಕಿರುಕುಳವನ್ನು ಅನುಭವಿಸುತ್ತಿರವ ರೋಹಿಂಗ್ಯಾಗಳಿಗೆ ಮುಸ್ಲಿಂ ಬಹುಸಂಖ್ಯಾತ ಮಲೇಷ್ಯಾ ಅನುಕೂಲಕರ ತಾಣವಾಗಿದೆ. ಆದರೆ ಕೊರೊನಾ ವೈರಸ್ ಕಾರಣಕ್ಕೆ ಅಧಿಕಾರಿಗಳು ಮಲೇಷ್ಯಾಗೆ ಬರಲು ಬಿಡುತ್ತಿಲ್ಲ ಎನ್ನಲಾಗಿದೆ.

ಮೂರು ವರ್ಷಗಳ ಹಿಂದೆ ಮ್ಯಾನ್ಮಾರ್‌ನಲ್ಲಿ ಮಿಲಿಟರಿ ದೌರ್ಜನ್ಯದಿಂದ ಪಲಾಯನ ಮಾಡಿದ 7,00,000 ಕ್ಕಿಂತಲೂ ಹೆಚ್ಚಿನ ರೋಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶದ ಕಾಕ್ಸ್ ಬಜಾರ್ ಜಿಲ್ಲೆಯಲ್ಲಿ ಕಿಕ್ಕಿರಿದ ನಿರಾಶ್ರಿತರ ಶಿಬಿರಗಳಲ್ಲಿದ್ದಾರೆ. ಅಲ್ಲಿಂದ ಮಲೇಷ್ಯಾ ಮತ್ತು ನೆರೆಯ ಇಂಡೋನೇಷ್ಯಾಕ್ಕೆ ದೋಣಿಗಳಲ್ಲಿ ತೆರಳಲು ಯತ್ನಿಸುತ್ತಿದ್ದಾರೆ.

ಅವರು ದೋಣಿಯಿಂದ ಹಾರಿದ ಪ್ರದೇಶವನ್ನು ಹುಡುಕಲು ಎರಡು ಕೋಸ್ಟ್‌ಗಾರ್ಡ್ ವಿಮಾನಗಳು ಮತ್ತು ಎರಡು ದೋಣಿಗಳನ್ನು ನಿಯೋಜಿಸಲಾಗಿದೆ ಎಂದು ಜವಾವಿ ತಿಳಿಸಿದ್ದಾರೆ.

ಕೊರೊನಾ ಸಾಂಕ್ರಾಮಿಕ ರೋಗ ಹರಡಿದ ನಂತರ, ರೋಹಿಂಗ್ಯಾ ದೋಣಿಗಳನ್ನು ತಡೆಯುವ ಉದ್ದೇಶದಿಂದ ಮಲೇಷ್ಯಾ ಪಡೆ ಕಡಲ ಗಸ್ತು ತಿರುಗಿಸುತ್ತಿದೆ. ಕೆಲವರು ದೋಣಿಗಳಲ್ಲಿ ಮಲೇಷ್ಯಾದ ತೀರಕ್ಕೆ ಬಂದರೂ ಸಹ ರೋಗದ ಕಾರಣಕ್ಕಾಗಿ ಅವುಗಳನ್ನು ಹಿಂದಕ್ಕೆ ಕಳುಹಿಸಲಾಗಿದೆ ಎನ್ನಲಾಗಿದೆ.


ಇದನ್ನೂ ಓದಿ: ಕೂಡಲೇ ಕಾಶ್ಮೀರದಿಂದ ರೋಹಿಂಗ್ಯಾಗಳನ್ನು ಗಡಿಪಾರು ಮಾಡುತ್ತೇವೆ: ಕೇಂದ್ರ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...