Homeಮುಖಪುಟ2023ರಲ್ಲಿ ದೇಶದಾದ್ಯಂತ 24,678 ರೈಲ್ವೆ ಅಪಘಾತಗಳು, 21,803 ಜನರು ಸಾವು: ಎನ್‌ಸಿಆರ್‌ಬಿ ವರದಿ

2023ರಲ್ಲಿ ದೇಶದಾದ್ಯಂತ 24,678 ರೈಲ್ವೆ ಅಪಘಾತಗಳು, 21,803 ಜನರು ಸಾವು: ಎನ್‌ಸಿಆರ್‌ಬಿ ವರದಿ

- Advertisement -
- Advertisement -

2023ರಲ್ಲಿ ದೇಶದಲ್ಲಿ ನಡೆದ 24,678 ರೈಲ್ವೆ ಸಂಬಂಧಿತ ಅಪಘಾತಗಳಲ್ಲಿ 21,803 ಜನರು ಸಾವನ್ನಪ್ಪಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿ ತಿಳಿಸಿದೆ.

ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿ ಅತಿ ಹೆಚ್ಚು ಸಾವು ನೋವುಗಳು ವರದಿಯಾಗಿವೆ. 2023ರಲ್ಲಿ ನಡೆದ ಒಟ್ಟು ರೈಲ್ವೆ ಅಪಘಾತಗಳಲ್ಲಿ 56 ಪ್ರಕರಣಗಳು ಚಾಲಕನ ತಪ್ಪಿನಿಂದ ಉಂಟಾಗಿದ್ದರೆ, 43 ರೈಲು ಅಪಘಾತಗಳು ಕಳಪೆ ವಿನ್ಯಾಸ, ಹಳಿ ದೋಷಗಳು, ಸೇತುವೆ ಅಥವಾ ಸುರಂಗ ಕುಸಿತದಂತಹ ಯಾಂತ್ರಿಕ ದೋಷಗಳಿಂದ ಸಂಭವಿಸಿವೆ ಎಂದು ವರದಿ ವಿವರಿಸಿದೆ.

ರೈಲುಗಳಿಂದ ಜನರು ಬೀಳುವುದು, ಹಳಿಗಳಲ್ಲಿ ಜನರಿಗೆ ರೈಲು ಡಿಕ್ಕಿ ಹೊಡೆಯುವುದು ರೈಲ್ವೆ ಅಪಘಾತಗಳಲ್ಲಿ ಅತಿ ಹೆಚ್ಚು (ಶೇ.74.9ರಷ್ಟು ಅಥವಾ 24,678ರಲ್ಲಿ 18,480 ಪ್ರಕರಣಗಳು) ಸಂಭವಿಸಿದೆ. ರೈಲುಗಳಿಂದ ಬೀಳುವುದು ಅಥವಾ ಹಳಿಗಳಲ್ಲಿ ಜನರಿಗೆ ರೈಲುಗಳು ಡಿಕ್ಕಿ ಹೊಡೆಯುವುದರಿಂದ 15,878 ಜನರು ಸಾವನ್ನಪ್ಪಿದ್ದಾರೆ. ಇದು ರೈಲ್ವೆ ಅಪಘಾತಗಳ ಒಟ್ಟು ಸಾವುಗಳಲ್ಲಿ ಶೇ.72.8ರಷ್ಟು ಎಂದು ಎಂದು ವರದಿ ಬಹಿರಂಗಪಡಿಸಿದೆ.

ರೈಲಿನಿಂದ ಬೀಳುವುದು ಅಥವಾ ಹಳಿಯಲ್ಲಿ ರೈಲು ಡಿಕ್ಕಿ ಹೊಡೆದ ಒಟ್ಟು ಪ್ರಕರಣಗಳ ಪೈಕಿ ಮಹಾರಾಷ್ಟ್ರದಲ್ಲಿ ಶೇ. 29.8ರಷ್ಟು ಅಥವಾ 5,507 ಪ್ರಕರಣಗಳು ದಾಖಲಾಗಿವೆ.

ಒಟ್ಟು 24,678 ರೈಲ್ವೆ ಅಪಘಾತ ಪ್ರಕರಣಗಳು ವರದಿಯಾಗಿದ್ದು, 2022ಕ್ಕಿಂತ (23,139) 2023ರಲ್ಲಿ ಶೇ. 6.7ರಷ್ಟು ಹೆಚ್ಚಳವಾಗಿದೆ. ಅಪಘಾತಗಳ ಪರಿಣಾಮವಾಗಿ, 2023ರಲ್ಲಿ 3,014 ಜನರು ಗಾಯಗೊಂಡಿದ್ದಾರೆ ಮತ್ತು 21,803 ಜನರು ಸಾವನ್ನಪ್ಪಿದ್ದಾರೆ ಎಂದು ಎನ್‌ಸಿಆರ್‌ಬಿ ವರದಿ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ರೈಲ್ವೆ ಅಪಘಾತಗಳು (5,559 ಪ್ರಕರಣಗಳು) ವರದಿಯಾಗಿದ್ದು, ಉತ್ತರ ಪ್ರದೇಶ (ಶೇ. 13ರಷ್ಟು ಅಥವಾ 3,212 ಪ್ರಕರಣಗಳು) ಎರಡನೇ ಸ್ಥಾನದಲ್ಲಿದೆ.

ದತ್ತಾಂಶದ ವಿಶ್ಲೇಷಣೆಯು ಹೆಚ್ಚಿನ ರೈಲ್ವೆ ಅಪಘಾತಗಳು (3,771 ಪ್ರಕರಣಗಳು) ಸಂಜೆ 6 ರಿಂದ ರಾತ್ರಿ 9ರ ನಡುವೆ ಸಂಭವಿಸಿವೆ ಎಂದು ಬಹಿರಂಗಪಡಿಸುತ್ತದೆ. ಇದು ಒಟ್ಟು ರೈಲ್ವೆ ಅಪಘಾತಗಳ ಶೇ.15.3ರಷ್ಟಿದೆ. ಇನ್ನು ಶೇ.15ರಷ್ಟು ಅಥವಾ 3,693 ರೈಲ್ವೆ ಅಪಘಾತಗಳು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರ ನಡುವೆ ವರದಿಯಾಗಿವೆ.

ರೈಲ್ವೆ ಅಪಘಾತಗಳಿಗೆ ಚಾಲಕನ ತಪ್ಪು, ವಿಧ್ವಂಸಕ ಕೃತ್ಯ, ಸಿಗ್ನಲ್‌ಮನ್‌ಗಳ ದೋಷ, ಯಾಂತ್ರಿಕ ವೈಫಲ್ಯ ಮತ್ತು ಇತರ ಕಾರಣಗಳನ್ನು ಉಲ್ಲೇಖಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಗರಿಷ್ಠ (ಶೇ.41.3 ಅಥವಾ 2,483 ಪ್ರಕರಣಗಳಲ್ಲಿ 1,025) ರೈಲ್ವೆ ಕ್ರಾಸಿಂಗ್ ಅಪಘಾತಗಳು ವರದಿಯಾಗಿವೆ. ನಂತರದ ಸ್ಥಾನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಶೇ. 32.4ರಷ್ಟು ಅಥವಾ 805 ಪ್ರಕರಣಗಳು ಮತ್ತು ಮಧ್ಯಪ್ರದೇಶದಲ್ಲಿ ಶೇ.15.1 ಅಥವಾ 375 ಪ್ರಕರಣಗಳು) ವರದಿಯಾಗಿವೆ.

2023ರಲ್ಲಿ ರೈಲ್ವೆ ಕ್ರಾಸಿಂಗ್ ಅಪಘಾತಗಳಲ್ಲಿ ಅತಿ ಹೆಚ್ಚು ಸಾವುನೋವುಗಳು ಸಂಭವಿಸಿದ ರಾಜ್ಯಗಳೆಂದರೆ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶ. 2023ರಲ್ಲಿ ಈ ರಾಜ್ಯಗಳಲ್ಲಿ ಕ್ರಮವಾಗಿ ಶೇ. 44.9 ಅಥವಾ 2,242ರಲ್ಲಿ 1,007 ಸಾವುಗಳು), ಶೇ. 25.9 ಅಥವಾ 581 ಸಾವುಗಳು ಮತ್ತು ಶೇ. 16.7 ಅಥವಾ 375 ಸಾವುಗಳು ವರದಿಯಾಗಿವೆ.

2023ರಲ್ಲಿ ವರದಕ್ಷಿಣೆ ಪ್ರಕರಣಗಳು ಶೇ.14 ರಷ್ಟು ಹೆಚ್ಚಳ; 6,100ಕ್ಕೂ ಅಧಿಕ ಮಹಿಳೆಯರ ಸಾವು: ಎನ್‌ಸಿಆರ್‌ಬಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...