Homeಮುಖಪುಟ2023ರಲ್ಲಿ ದೇಶದಾದ್ಯಂತ 24,678 ರೈಲ್ವೆ ಅಪಘಾತಗಳು, 21,803 ಜನರು ಸಾವು: ಎನ್‌ಸಿಆರ್‌ಬಿ ವರದಿ

2023ರಲ್ಲಿ ದೇಶದಾದ್ಯಂತ 24,678 ರೈಲ್ವೆ ಅಪಘಾತಗಳು, 21,803 ಜನರು ಸಾವು: ಎನ್‌ಸಿಆರ್‌ಬಿ ವರದಿ

- Advertisement -
- Advertisement -

2023ರಲ್ಲಿ ದೇಶದಲ್ಲಿ ನಡೆದ 24,678 ರೈಲ್ವೆ ಸಂಬಂಧಿತ ಅಪಘಾತಗಳಲ್ಲಿ 21,803 ಜನರು ಸಾವನ್ನಪ್ಪಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿ ತಿಳಿಸಿದೆ.

ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿ ಅತಿ ಹೆಚ್ಚು ಸಾವು ನೋವುಗಳು ವರದಿಯಾಗಿವೆ. 2023ರಲ್ಲಿ ನಡೆದ ಒಟ್ಟು ರೈಲ್ವೆ ಅಪಘಾತಗಳಲ್ಲಿ 56 ಪ್ರಕರಣಗಳು ಚಾಲಕನ ತಪ್ಪಿನಿಂದ ಉಂಟಾಗಿದ್ದರೆ, 43 ರೈಲು ಅಪಘಾತಗಳು ಕಳಪೆ ವಿನ್ಯಾಸ, ಹಳಿ ದೋಷಗಳು, ಸೇತುವೆ ಅಥವಾ ಸುರಂಗ ಕುಸಿತದಂತಹ ಯಾಂತ್ರಿಕ ದೋಷಗಳಿಂದ ಸಂಭವಿಸಿವೆ ಎಂದು ವರದಿ ವಿವರಿಸಿದೆ.

ರೈಲುಗಳಿಂದ ಜನರು ಬೀಳುವುದು, ಹಳಿಗಳಲ್ಲಿ ಜನರಿಗೆ ರೈಲು ಡಿಕ್ಕಿ ಹೊಡೆಯುವುದು ರೈಲ್ವೆ ಅಪಘಾತಗಳಲ್ಲಿ ಅತಿ ಹೆಚ್ಚು (ಶೇ.74.9ರಷ್ಟು ಅಥವಾ 24,678ರಲ್ಲಿ 18,480 ಪ್ರಕರಣಗಳು) ಸಂಭವಿಸಿದೆ. ರೈಲುಗಳಿಂದ ಬೀಳುವುದು ಅಥವಾ ಹಳಿಗಳಲ್ಲಿ ಜನರಿಗೆ ರೈಲುಗಳು ಡಿಕ್ಕಿ ಹೊಡೆಯುವುದರಿಂದ 15,878 ಜನರು ಸಾವನ್ನಪ್ಪಿದ್ದಾರೆ. ಇದು ರೈಲ್ವೆ ಅಪಘಾತಗಳ ಒಟ್ಟು ಸಾವುಗಳಲ್ಲಿ ಶೇ.72.8ರಷ್ಟು ಎಂದು ಎಂದು ವರದಿ ಬಹಿರಂಗಪಡಿಸಿದೆ.

ರೈಲಿನಿಂದ ಬೀಳುವುದು ಅಥವಾ ಹಳಿಯಲ್ಲಿ ರೈಲು ಡಿಕ್ಕಿ ಹೊಡೆದ ಒಟ್ಟು ಪ್ರಕರಣಗಳ ಪೈಕಿ ಮಹಾರಾಷ್ಟ್ರದಲ್ಲಿ ಶೇ. 29.8ರಷ್ಟು ಅಥವಾ 5,507 ಪ್ರಕರಣಗಳು ದಾಖಲಾಗಿವೆ.

ಒಟ್ಟು 24,678 ರೈಲ್ವೆ ಅಪಘಾತ ಪ್ರಕರಣಗಳು ವರದಿಯಾಗಿದ್ದು, 2022ಕ್ಕಿಂತ (23,139) 2023ರಲ್ಲಿ ಶೇ. 6.7ರಷ್ಟು ಹೆಚ್ಚಳವಾಗಿದೆ. ಅಪಘಾತಗಳ ಪರಿಣಾಮವಾಗಿ, 2023ರಲ್ಲಿ 3,014 ಜನರು ಗಾಯಗೊಂಡಿದ್ದಾರೆ ಮತ್ತು 21,803 ಜನರು ಸಾವನ್ನಪ್ಪಿದ್ದಾರೆ ಎಂದು ಎನ್‌ಸಿಆರ್‌ಬಿ ವರದಿ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ರೈಲ್ವೆ ಅಪಘಾತಗಳು (5,559 ಪ್ರಕರಣಗಳು) ವರದಿಯಾಗಿದ್ದು, ಉತ್ತರ ಪ್ರದೇಶ (ಶೇ. 13ರಷ್ಟು ಅಥವಾ 3,212 ಪ್ರಕರಣಗಳು) ಎರಡನೇ ಸ್ಥಾನದಲ್ಲಿದೆ.

ದತ್ತಾಂಶದ ವಿಶ್ಲೇಷಣೆಯು ಹೆಚ್ಚಿನ ರೈಲ್ವೆ ಅಪಘಾತಗಳು (3,771 ಪ್ರಕರಣಗಳು) ಸಂಜೆ 6 ರಿಂದ ರಾತ್ರಿ 9ರ ನಡುವೆ ಸಂಭವಿಸಿವೆ ಎಂದು ಬಹಿರಂಗಪಡಿಸುತ್ತದೆ. ಇದು ಒಟ್ಟು ರೈಲ್ವೆ ಅಪಘಾತಗಳ ಶೇ.15.3ರಷ್ಟಿದೆ. ಇನ್ನು ಶೇ.15ರಷ್ಟು ಅಥವಾ 3,693 ರೈಲ್ವೆ ಅಪಘಾತಗಳು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12ರ ನಡುವೆ ವರದಿಯಾಗಿವೆ.

ರೈಲ್ವೆ ಅಪಘಾತಗಳಿಗೆ ಚಾಲಕನ ತಪ್ಪು, ವಿಧ್ವಂಸಕ ಕೃತ್ಯ, ಸಿಗ್ನಲ್‌ಮನ್‌ಗಳ ದೋಷ, ಯಾಂತ್ರಿಕ ವೈಫಲ್ಯ ಮತ್ತು ಇತರ ಕಾರಣಗಳನ್ನು ಉಲ್ಲೇಖಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಗರಿಷ್ಠ (ಶೇ.41.3 ಅಥವಾ 2,483 ಪ್ರಕರಣಗಳಲ್ಲಿ 1,025) ರೈಲ್ವೆ ಕ್ರಾಸಿಂಗ್ ಅಪಘಾತಗಳು ವರದಿಯಾಗಿವೆ. ನಂತರದ ಸ್ಥಾನಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಶೇ. 32.4ರಷ್ಟು ಅಥವಾ 805 ಪ್ರಕರಣಗಳು ಮತ್ತು ಮಧ್ಯಪ್ರದೇಶದಲ್ಲಿ ಶೇ.15.1 ಅಥವಾ 375 ಪ್ರಕರಣಗಳು) ವರದಿಯಾಗಿವೆ.

2023ರಲ್ಲಿ ರೈಲ್ವೆ ಕ್ರಾಸಿಂಗ್ ಅಪಘಾತಗಳಲ್ಲಿ ಅತಿ ಹೆಚ್ಚು ಸಾವುನೋವುಗಳು ಸಂಭವಿಸಿದ ರಾಜ್ಯಗಳೆಂದರೆ ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಧ್ಯಪ್ರದೇಶ. 2023ರಲ್ಲಿ ಈ ರಾಜ್ಯಗಳಲ್ಲಿ ಕ್ರಮವಾಗಿ ಶೇ. 44.9 ಅಥವಾ 2,242ರಲ್ಲಿ 1,007 ಸಾವುಗಳು), ಶೇ. 25.9 ಅಥವಾ 581 ಸಾವುಗಳು ಮತ್ತು ಶೇ. 16.7 ಅಥವಾ 375 ಸಾವುಗಳು ವರದಿಯಾಗಿವೆ.

2023ರಲ್ಲಿ ವರದಕ್ಷಿಣೆ ಪ್ರಕರಣಗಳು ಶೇ.14 ರಷ್ಟು ಹೆಚ್ಚಳ; 6,100ಕ್ಕೂ ಅಧಿಕ ಮಹಿಳೆಯರ ಸಾವು: ಎನ್‌ಸಿಆರ್‌ಬಿ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...