Homeಮುಖಪುಟಛತ್ತೀಸ್‌ಗಢ: 25 ವಿದ್ಯಾರ್ಥಿಗಳ ಕೈಗೆ ಬಿಸಿ ಎಣ್ಣೆ ಸುರಿದ ಶಿಕ್ಷಕರು

ಛತ್ತೀಸ್‌ಗಢ: 25 ವಿದ್ಯಾರ್ಥಿಗಳ ಕೈಗೆ ಬಿಸಿ ಎಣ್ಣೆ ಸುರಿದ ಶಿಕ್ಷಕರು

- Advertisement -
- Advertisement -

ಛತ್ತೀಸ್‌ಗಢದ ಸರ್ಕಾರಿ ಶಾಲೆಯೊಂದರಲ್ಲಿ ಕನಿಷ್ಠ 25 ವಿದ್ಯಾರ್ಥಿಗಳ ಕೈಗೆ ಬಿಸಿ ಎಣ್ಣೆ ಸುರಿದು ಶಿಕ್ಷಕರು ಚಿತ್ರಹಿಂಸೆ ನೀಡಿದ ಅಮಾನವೀಯ ಘಟನೆ ನಡೆದಿದೆ.

ಕೊಂಡಗಾಂವ್‌ನ ಕೀರ್ವಾಹಿಯ ಸರಕಾರಿ ಪ.ಪೂ.ಶಾಲೆಯಲ್ಲಿ ಗುರುವಾರ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಮೂವರು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಯಾರೋ ವಿದ್ಯಾರ್ಥಿಗಳು ಶೌಚಾಲಯದ ಹೊರಗೆ ಮಲ ವಿಸರ್ಜನೆ ಮಾಡಿದ್ದರು. ಈ ಬಗ್ಗೆ ತಿಳಿದ ಶಿಕ್ಷಕರು ಯಾರು ಶೌಚಾಲಯದ ಹೊರಗೆ ಮಲ ವಿಸರ್ಜನೆ ಮಾಡಿರುವುದು ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಉತ್ತರಿಸಲು ವಿಫಲವಾದ ಮಕ್ಕಳ ಕೈಗೆ ಶಿಕ್ಷಕರು ಬಿಸಿ ಎಣ್ಣೆ ಸುರಿದಿದ್ದಾರೆ. ಇದರಿಂದ ಮಕ್ಕಳ ಕೈಗಳಿಗೆ ಸುಟ್ಟ ಗಾಯಗಳಾಗಿದೆ.

ಈ ಕುರಿತು ವಿಷಯ ತಿಳಿದು ವಿದ್ಯಾರ್ಥಿಗಳ ಪೋಷಕರು ವಿದ್ಯಾರ್ಥಿಗಳ ಜೊತೆ ಸೇರಿ ಪ್ರತಿಭಟನೆ ನಡೆಸಿದ್ದಾರೆ. ನಮ್ಮ ಮಕ್ಕಳಿಗೆ ಶಾಲೆಯಲ್ಲಿ ಈ ರೀತಿ ಶಿಕ್ಷೆ ಕೊಟ್ಟಿರುವುದು ಆಘಾತಕಾರಿಯಾಗಿದೆ. ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಬಿಸಿ ಎಣ್ಣೆ ಸುರಿದ ಕಾರಣ ಮಕ್ಕಳ ಕೈಗಳಲ್ಲಿ ಗುಳ್ಳೆಗಳು ಉಂಟಾಗಿವೆ ಎಂದು ಹೇಳಿದ್ದಾರೆ.

ಘಟನೆಯಲ್ಲಿ ಸಂತ್ರಸ್ತ ಮಕ್ಕಳು 11 ರಿಂದ 12 ವರ್ಷದವರು ಎನ್ನಲಾಗಿದ್ದು, ಮಕ್ಕಳ ಅಂಗೈಯಲ್ಲಿ ಸುಟ್ಟ ಗಾಯಗಳಾಗಿವೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಛತ್ತೀಸ್‌ಗಢ ಕೊಂಡಗಾಂವ್ ಜಿಲ್ಲಾ ಶಿಕ್ಷಣಾಧಿಕಾರಿ ತಿವಾರಿ, ಎಣ್ಣೆ ಅಷ್ಟೊಂದು ಬಿಸಿ ಇರಲಿಲ್ಲ ಎಂದು ಹೇಳಿ 25 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂಬ ವರದಿಗಳನ್ನು ನಿರಾಕರಿಸಿದ್ದಾರೆ.

ಶಾಲೆಯ ಮುಖ್ಯೋಪಾಧ್ಯಾಯರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಎಣ್ಣೆಯನ್ನು ವಿದ್ಯಾರ್ಥಿಗಳೇ ಕೈಗೆ ಹಾಕಿಕೊಂಡಿದ್ದಾರೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ವಿದ್ಯಾರ್ಥಿಗಳು ಶೌಚಾಲಯವನ್ನು ಸ್ವಚ್ಛವಾಗಿಟ್ಟುಕೊಂಡಿಲ್ಲ. ಹೀಗಾಗಿ ಮಕ್ಕಳು ತಮ್ಮನ್ನು ತಾವೇ ಶಿಕ್ಷಿಸಿಕೊಳ್ಳಲು ಈ ರೀತಿ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಜಿಲ್ಲಾ ಶಿಕ್ಷಣಾಧಿಕಾರಿ ಮಧುಲಿಕಾ ತಿವಾರಿ ಈ ಕುರಿತು ಪ್ರತಿಕ್ರಿಯಿಸಿದ್ದು, ತನಿಖಾ ತಂಡವು ಸಲ್ಲಿಸಿದ ವರದಿಯ ಆಧಾರದ ಮೇಲೆ ಶಾಲೆಯ ಸ್ವೀಪರ್ ದಮುರಾಮ್ ಅವರನ್ನು ವಜಾಗೊಳಿಸಲಾಗಿದೆ. ಜೋಹಾರಿ ಮಾರ್ಕಮ್, ಪೂನಂ ಠಾಕೂರ್ ಮತ್ತು ಮಿಥಾಲಿ ವರ್ಮಾ ಎಂಬ ಮೂವರು ಶಿಕ್ಷಕರನ್ನು ಕೂಡ ಪ್ರಕರಣಕ್ಕೆ ಸಂಬಂಧಿಸಿ  ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಎಸ್ಪಿ ಪಕ್ಷಕ್ಕೆ ಉತ್ತರಾಧಿಕಾರಿಯನ್ನು ನೇಮಿಸಿದ ಮಾಯಾವತಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...