Homeಕರ್ನಾಟಕದೌರ್ಜನ್ಯ 25% ಹೆಚ್ಚಳ: ಮಹಿಳೆಯರಿಗೆ ಕೊರೊನಾ ಲಾಕ್‌ಡೌನ್‌‌ ಕರಾಳ!

ದೌರ್ಜನ್ಯ 25% ಹೆಚ್ಚಳ: ಮಹಿಳೆಯರಿಗೆ ಕೊರೊನಾ ಲಾಕ್‌ಡೌನ್‌‌ ಕರಾಳ!

- Advertisement -
- Advertisement -

ಕೊರೊನಾ ಸಮಯದಲ್ಲಿ ಭಾರತೀಯ ಮಹಿಳೆಯರ ಮೇಲಿನ ದೌರ್ಜನ್ಯವು ಹೆಚ್ಚಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಇತ್ತೀಚಿನ ವರದಿಯು ಹೇಳಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 25% ಕ್ಕಿಂತಲೂ ಹೆಚ್ಚು ಮಹಿಳಾ ದೌರ್ಜನ್ಯದ ದೂರು ಈ ವರ್ಷ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಮಹಿಳಾ ಆಯೋಗವು 2019-20 ರಲ್ಲಿ 20,309 ದೂರುಗಳನ್ನು ಸ್ವೀಕರಿಸಿತ್ತು, ಆದರೆ 2020-21ರಲ್ಲಿ 26,513 ಮಹಿಳೆಯರು ಆಯೋಗಕ್ಕೆ ದೂರುಗಳನ್ನು ನೀಡಿದ್ದಾರೆ. ಒಟ್ಟು ಕಳೆದ ವರ್ಷಕ್ಕಿಂತ ಈ ವರ್ಷ 25.09% ದಷ್ಟು ದೂರುಗಳು ಹೆಚ್ಚಳವಾಗಿದೆ. 2020-21ರಲ್ಲಿ ಆಯೋಗಕ್ಕೆ ಸಲ್ಲಿಸಲಾದ ಗರಿಷ್ಠ ಸಂಖ್ಯೆಯ ದೂರುಗಳು ಘನತೆಯಿಂದ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ನೋಂದಾಯಿಸಲಾಗಿದೆ. ಒಟ್ಟು 8,688 ಮಹಿಳೆಯರು ಈ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಆಯೋಗವನ್ನು ಸಂಪರ್ಕಿಸಿದ್ದಾರೆ.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲೂ ತೀವ್ರ ಏರಿಕೆ ಕಂಡುಬಂದಿದ್ದು, ಈ ವಿಭಾಗದಲ್ಲಿ ಒಟ್ಟು 6,049 ಮಹಿಳೆಯರು 2020-21ರಲ್ಲಿ ದೂರು ದಾಖಲಿಸಿದ್ದಾರೆ. ಇದು ಹಿಂದಿನ ವರ್ಷಕ್ಕಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಮಹಿಳೆಯರ ವಿರುದ್ಧ ತೀವ್ರ ಏರಿಕೆ ಕಂಡ ಇತರ ವಿಭಾಗಗಳಲ್ಲಿ ಸೈಬರ್‌ ಅಪರಾಧ ಮತ್ತು ವರದಕ್ಷಿಣೆ ಕಿರುಕುಳ ಸೇರಿವೆ.

ಇದನ್ನೂ ಓದಿ: ಭಾರತಕ್ಕೆ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗುವ ಸಮಯ ದೂರವಿಲ್ಲ: ಜಸ್ಟಿಸ್ ಆರ್‌‌.ಎ‌ಫ್‌. ನಾರಿಮನ್

ಕೊರೊನಾ ಪ್ರೇರಿತ ಲಾಕ್‌ಡೌನ್‌ಗಳು, ಪುರುಷರು ಹೆಚ್ಚು ಕಾಲ ಮನೆಯಲ್ಲೆ ಇರುವುದು ಮತ್ತು ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಕುಟುಂಬಗಳು ಅನುಭವಿಸಿದ ಆರ್ಥಿಕ ಹಿನ್ನಡೆಯು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿರಬಹುದು ಎಂದು ಮಹಿಳಾ ಹಕ್ಕುಗಳ ಹೋರಾಟಗಾರರು ಹೇಳಿದ್ದಾರೆ.

ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮಾತನಾಡಿ, ಮಹಿಳೆಯರ ವಿರುದ್ದ ನಡೆಯುವ ಅಪರಾಧಗಳಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ, ಆದರೆ ಆಯೋಗವು ಮಹಿಳೆಯರನ್ನು ತಲುಪಲು ಮತ್ತು ದೂರು ನೀಡುವ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ ಎಂದು ಹೇಳಿದ್ದಾರೆ.

“ಸಂತ್ರಸ್ತ ಮಹಿಳೆಯರ ದೂರುಗಳನ್ನು ದಾಖಲಿಸಲು ಮತ್ತು ಪರಿಹರಿಸಲು ಲಾಕ್‌ಡೌನ್ ಸಮಯದಲ್ಲಿ ನಮ್ಮ ತಂಡವು ಮೂರು ಪಾಳಿಯಲ್ಲಿ ಕೆಲಸ ಮಾಡುತ್ತಿತ್ತು. ಆಯೋಗವು ಪ್ರತಿಯೊಂದು ದೂರುಗಳ ಬಗ್ಗೆ ನಿಗಾ ಇಟ್ಟಿದ್ದು, ಎಲ್ಲಾ ಸಂದರ್ಭಗಳಲ್ಲಿಯೂ ಸೂಕ್ತವಾದ ಅನುಸರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ರೇಖಾ ಹೇಳಿದ್ದಾರೆ.

“ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಕೌಟುಂಬಿಕ ಹಿಂಸಾಚಾರ, ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಾಣಿಕೆ ಹಠಾತ್ ಏರಿಕೆ ಕಂಡುಬಂದಿದೆ ಎಂದು ಸಮಿತಿ ಹೇಳುತ್ತದೆ. ಇದಕ್ಕೆ ಕಾರಣ, ಮುಖ್ಯವಾಗಿ ಆರ್ಥಿಕ ಚಟುವಟಿಕೆಗಳಲ್ಲಿ ಅಡ್ಡಿ, ವರ್ಕ್‌ ಫ್ರಂ ಹೋಂ ಮತ್ತು ಲಾಕ್‌ಡೌನ್‌‌ನಲ್ಲಿ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವುದು” ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಯುವ ಕಾರ್ಮಿಕರಿಗೆ ಭಾರಿ ಹೊಡೆತ ನೀಡಿದ ಕೊರೋನಾ ಸಾಂಕ್ರಾಮಿಕ: ಮತ್ತಷ್ಟು ದಯನೀಯ ಸ್ಥಿತಿಗೆ ತಲುಪಿದ ಮಹಿಳಾ ಕಾರ್ಮಿಕರ ಸ್ಥಿತಿ

ಮಹಿಳಾ ದೌರ್ಜನ್ಯ ಹೆಚ್ಚಳದ ಬಗ್ಗೆ “ನಾನುಗೌರಿ.ಕಾಂ” ಜೊತೆ ಮಾತನಾಡಿದ ಹೈಕೋರ್ಟ್‌‌ ವಕೀಲೆ ರಾಜಲಕ್ಷ್ಮಿ ಅಂಕಲಗಿ, “ಇದಕ್ಕೆ ಮೊದಲ ಕಾರಣ ಕೆಲಸಕ್ಕೆ ಹೋಗುವ ಮಹಿಳೆಗೆ ‘ವರ್ಕ್‌ ಫ್ರಂ ಹೋಂ’ ಪ್ರಾರಂಭ ಆಗಿದ್ದು. ಈ ಮಹಿಳೆಯರು ಸಾಮಾನ್ಯವಾಗಿ ಕೆಲಸಕ್ಕೆ ತೆರಳುತ್ತಿದ್ದ ಸಮಯದಲ್ಲಿ ಹೊರಗಿನ ವಾತಾವರಣದಿಂದ ಒಂದಷ್ಟು ನಿರಾಳತೆಯನ್ನು ಮತ್ತು ಸ್ವಾತಂತ್ಯ್ರವನ್ನು ಅನುಭವಿಸುತ್ತಿದ್ದರು. ಆದರೆ ಈಗ ಹೊರ ವಾತಾವಣದಲ್ಲಿ ಸಿಗುತ್ತಿದ್ದ ನಿರಾಳತೆ ಸಿಗುತ್ತಿಲ್ಲ. ಆಫೀಸ್‌ ಕೆಲಸ ಮುಗಿಯುವ ಹೊತ್ತಿಗೆ ಮನೆಯ ಕೆಲಸ, ಮನೆ ಕೆಲಸ ಮುಗಿಯುವ ಹೊತ್ತಿಗೆ ಆಫೀಸ್‌ ಕೆಲಸ ಮಾಡುತ್ತಲೆ ಇರಬೇಕಾಗುತ್ತದೆ.

ಜೊತೆಗೆ ಗಂಡನಿಗೂ ವರ್ಕ್‌ ಫ್ರಂ ಹೋಮ್‌ ಇರುತ್ತದೆ. ಹೆಚ್ಚಿನ ಮನೆಗಳಲ್ಲಿ ಗಂಡನಿಗೆ ಬೇಕಾದ ಅಡುಗೆ ಹಾಗೂ ಗಂಡನ ಇನ್ನಿತರ ಕೆಲಸಗಳನ್ನೂ ಹೆಂಡತಿಯೆ ನಿರ್ವಹಿಸಬೇಕಾಗುತ್ತದೆ. ಗಂಡನ ಬೇಡಿಕೆಗಳೂ ನಿರಂತರವಾಗಿ ಇರುತ್ತದೆ. ಇದರ ಜೊತೆಗೆ ಮಕ್ಕಳು ಕೂಡಾ ಮನೆಯಲ್ಲೆ ಇರುತ್ತಾರೆ. ಅವರನ್ನು ನೋಡಿ ಕೊಳ್ಳುವುದು ಮಹಿಳೆಯೆ ಆಗಿರುವುದರಿಂದ ಅವರ ಕೆಲಸಗಳೂ ಸೇರಿ ಹೆಚ್ಚಿನ ಒತ್ತಡ ಉಂಟಾಗುತ್ತದೆ. ಈ ಒತ್ತಡ, ಸುಸ್ತು, ಎಲ್ಲಾ ಸೇರಿಕೊಂಡು ಮಾನಸಿಕ ಒತ್ತಡಕ್ಕೊಳಗಾಗಿ ಅದು ಮನಸ್ತಾಪವಾಗಿ ರೂಪುಗೊಂಡು ಕೊನೆಗೆ ಜಗಳದಲ್ಲೇ ಕೊನೆಯಾಗುತ್ತದೆ. ಅದರಲ್ಲೂ ಹೆಚ್ಚಿನ ಕಡೆಗಳಲ್ಲಿ ಹೊಡೆದಾಟ ಮತ್ತು ದೌರ್ಜನ್ಯಗಳಲ್ಲೆ ಮುಗಿಯುತ್ತದೆ” ಎಂದು ಅವರು ಹೇಳಿದರು.

“ಗೃಹಿಣಿಯಾಗಿ ಮನೆಯಲ್ಲೇ ಇರುವ ಮಹಿಳೆಯರು ಈ ಹಿಂದೆ ಸಾಮಾನ್ಯವಾಗಿ ಮನೆಗೆಲಸಗಳನ್ನು ಮುಗಿಸಿಕೊಂಡು ಒಂದಷ್ಟು ಹೊತ್ತು ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಲಾಕ್‌ಡೌನ್‌ ನಂತರ ತನ್ನ ಕೆಲಸ ಕಳೆದುಕೊಂಡ ಗಂಡ ಹಾಗೂ ಮನೆಯಲ್ಲೇ ಇರುವ ಮಕ್ಕಳ ಕೆಲಸಗಳನ್ನು ಮತ್ತು ಬೇಡಿಕೆಗಳನ್ನು ಪೂರೈಸುತ್ತಲೆ ಇರಬೇಕಾಗುತ್ತದೆ. ಜೊತೆಗೆ ಆರ್ಥಿಕ ಮುಗ್ಗಟ್ಟು ಕೂಡಾ ಇರುವುದರಿಂದ ಗಂಡನ ಕೋಪ ಕೊನೆಯದಾಗಿ ಕೊನೆಗೊಳ್ಳುವುದು ಸುಲಭವಾಗಿ ಸಿಗುವ ತನ್ನ ಹೆಂಡತಿಯ ಮೇಲೆಯೆ ಆಗಿದೆ” ಎಂದು ರಾಜಲಕ್ಷ್ಮಿ ಹೇಳಿದರು.

“ಮನಸ್ತಾಪಗಳು ಬಂದಾಗ ನಿರಾಳವಾಗಲು ಹೊರ ಹೋಗಿ ಬರುತ್ತೇನೆ ಎಂಬ ಸ್ಥಿತಿ ಲಾಕ್‌ಡೌ‌ನ್‌ನಿಂದಾಗಿ ಇಲ್ಲ. ಏನೇ ಆದರೂ ಅವರು ಮನೆಯಲ್ಲೆ ಎದುರುಗೊಳ್ಳುತ್ತಲೆ ಇರಬೇಕಾಗುತ್ತದೆ. ಹಾಗಾಗಿಯೆ ದೌರ್ಜನ್ಯಗಳು ಹೆಚ್ಚಾಗಿದೆ” ಎಂದು ರಾಜಲಕ್ಷ್ಮಿ ಅಂಕಲಗಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಸಾಯುತ್ತೇವೆ ವಿನಃ ಹೋರಾಟದಿಂದ ಹಿಂದೆ ಸರಿಯುವುದಿಲ್ಲ: ಲಾಲು ಪ್ರಸಾದ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...

ಟೆಕ್ಸಾಸ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ಟೆಕ್ಸಾಸ್‌ನ ಆಸ್ಟಿನ್ ನಗರದ ಬಾರ್ ಒಂದರ ಹೊರಗಡೆ ನಡೆದ ಗುಂಡಿನ ದಾಳಿಯಲ್ಲಿ ಭಾರತ ಮೂಲದ ಅಮೆರಿಕನ್ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಈ ಘಟನೆಯನ್ನು ಭಯೋತ್ಪಾದನಾ ಕೃತ್ಯವಾಗಿರಬಹುದು ಎಂಬ ಶಂಕೆಯ ಮೇಲೆ ತನಿಖೆ...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್ : ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ

ಅಮೆರಿಕ ಮತ್ತು ಇಸ್ರೇಲ್ ದೇಶಗಳು ಇರಾನ್ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ ಒಂದಾದ 'ಹಾರ್ಮುಜ್ ಜಲಸಂಧಿ'ಗೆ ವ್ಯಾಪಿಸಿದೆ. ಈ ಬೆಳವಣಿಗೆಯಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆಗಳು...

ಹುಬ್ಬಳ್ಳಿಯಲ್ಲಿ ವಲಸೆ ಕಾರ್ಮಿಕನ ಎನ್‌ಕೌಂಟರ್ ಪ್ರಕರಣ: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ

ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಆರೋಪ ಎದುರಿಸುತ್ತಿದ್ದ ಬಿಹಾರ ಮೂಲದ ವಲಸೆ ಕಾರ್ಮಿಕ ರಿತೇಶ್ ಕುಮಾರ್ ಎನ್‌ಕೌಂಟರ್ ಪ್ರಕರಣವನ್ನು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರಿಂದ ಸ್ವತಂತ್ರ ತನಿಖೆಗೆ ವಹಿಸಿ ಸೋಮವಾರ...

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...