Homeಕರ್ನಾಟಕದೌರ್ಜನ್ಯ 25% ಹೆಚ್ಚಳ: ಮಹಿಳೆಯರಿಗೆ ಕೊರೊನಾ ಲಾಕ್‌ಡೌನ್‌‌ ಕರಾಳ!

ದೌರ್ಜನ್ಯ 25% ಹೆಚ್ಚಳ: ಮಹಿಳೆಯರಿಗೆ ಕೊರೊನಾ ಲಾಕ್‌ಡೌನ್‌‌ ಕರಾಳ!

- Advertisement -
- Advertisement -

ಕೊರೊನಾ ಸಮಯದಲ್ಲಿ ಭಾರತೀಯ ಮಹಿಳೆಯರ ಮೇಲಿನ ದೌರ್ಜನ್ಯವು ಹೆಚ್ಚಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಇತ್ತೀಚಿನ ವರದಿಯು ಹೇಳಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 25% ಕ್ಕಿಂತಲೂ ಹೆಚ್ಚು ಮಹಿಳಾ ದೌರ್ಜನ್ಯದ ದೂರು ಈ ವರ್ಷ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಮಹಿಳಾ ಆಯೋಗವು 2019-20 ರಲ್ಲಿ 20,309 ದೂರುಗಳನ್ನು ಸ್ವೀಕರಿಸಿತ್ತು, ಆದರೆ 2020-21ರಲ್ಲಿ 26,513 ಮಹಿಳೆಯರು ಆಯೋಗಕ್ಕೆ ದೂರುಗಳನ್ನು ನೀಡಿದ್ದಾರೆ. ಒಟ್ಟು ಕಳೆದ ವರ್ಷಕ್ಕಿಂತ ಈ ವರ್ಷ 25.09% ದಷ್ಟು ದೂರುಗಳು ಹೆಚ್ಚಳವಾಗಿದೆ. 2020-21ರಲ್ಲಿ ಆಯೋಗಕ್ಕೆ ಸಲ್ಲಿಸಲಾದ ಗರಿಷ್ಠ ಸಂಖ್ಯೆಯ ದೂರುಗಳು ಘನತೆಯಿಂದ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ನೋಂದಾಯಿಸಲಾಗಿದೆ. ಒಟ್ಟು 8,688 ಮಹಿಳೆಯರು ಈ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಆಯೋಗವನ್ನು ಸಂಪರ್ಕಿಸಿದ್ದಾರೆ.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲೂ ತೀವ್ರ ಏರಿಕೆ ಕಂಡುಬಂದಿದ್ದು, ಈ ವಿಭಾಗದಲ್ಲಿ ಒಟ್ಟು 6,049 ಮಹಿಳೆಯರು 2020-21ರಲ್ಲಿ ದೂರು ದಾಖಲಿಸಿದ್ದಾರೆ. ಇದು ಹಿಂದಿನ ವರ್ಷಕ್ಕಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಮಹಿಳೆಯರ ವಿರುದ್ಧ ತೀವ್ರ ಏರಿಕೆ ಕಂಡ ಇತರ ವಿಭಾಗಗಳಲ್ಲಿ ಸೈಬರ್‌ ಅಪರಾಧ ಮತ್ತು ವರದಕ್ಷಿಣೆ ಕಿರುಕುಳ ಸೇರಿವೆ.

ಇದನ್ನೂ ಓದಿ: ಭಾರತಕ್ಕೆ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗುವ ಸಮಯ ದೂರವಿಲ್ಲ: ಜಸ್ಟಿಸ್ ಆರ್‌‌.ಎ‌ಫ್‌. ನಾರಿಮನ್

ಕೊರೊನಾ ಪ್ರೇರಿತ ಲಾಕ್‌ಡೌನ್‌ಗಳು, ಪುರುಷರು ಹೆಚ್ಚು ಕಾಲ ಮನೆಯಲ್ಲೆ ಇರುವುದು ಮತ್ತು ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಕುಟುಂಬಗಳು ಅನುಭವಿಸಿದ ಆರ್ಥಿಕ ಹಿನ್ನಡೆಯು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿರಬಹುದು ಎಂದು ಮಹಿಳಾ ಹಕ್ಕುಗಳ ಹೋರಾಟಗಾರರು ಹೇಳಿದ್ದಾರೆ.

ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮಾತನಾಡಿ, ಮಹಿಳೆಯರ ವಿರುದ್ದ ನಡೆಯುವ ಅಪರಾಧಗಳಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ, ಆದರೆ ಆಯೋಗವು ಮಹಿಳೆಯರನ್ನು ತಲುಪಲು ಮತ್ತು ದೂರು ನೀಡುವ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ ಎಂದು ಹೇಳಿದ್ದಾರೆ.

“ಸಂತ್ರಸ್ತ ಮಹಿಳೆಯರ ದೂರುಗಳನ್ನು ದಾಖಲಿಸಲು ಮತ್ತು ಪರಿಹರಿಸಲು ಲಾಕ್‌ಡೌನ್ ಸಮಯದಲ್ಲಿ ನಮ್ಮ ತಂಡವು ಮೂರು ಪಾಳಿಯಲ್ಲಿ ಕೆಲಸ ಮಾಡುತ್ತಿತ್ತು. ಆಯೋಗವು ಪ್ರತಿಯೊಂದು ದೂರುಗಳ ಬಗ್ಗೆ ನಿಗಾ ಇಟ್ಟಿದ್ದು, ಎಲ್ಲಾ ಸಂದರ್ಭಗಳಲ್ಲಿಯೂ ಸೂಕ್ತವಾದ ಅನುಸರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ರೇಖಾ ಹೇಳಿದ್ದಾರೆ.

“ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಕೌಟುಂಬಿಕ ಹಿಂಸಾಚಾರ, ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಾಣಿಕೆ ಹಠಾತ್ ಏರಿಕೆ ಕಂಡುಬಂದಿದೆ ಎಂದು ಸಮಿತಿ ಹೇಳುತ್ತದೆ. ಇದಕ್ಕೆ ಕಾರಣ, ಮುಖ್ಯವಾಗಿ ಆರ್ಥಿಕ ಚಟುವಟಿಕೆಗಳಲ್ಲಿ ಅಡ್ಡಿ, ವರ್ಕ್‌ ಫ್ರಂ ಹೋಂ ಮತ್ತು ಲಾಕ್‌ಡೌನ್‌‌ನಲ್ಲಿ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವುದು” ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಯುವ ಕಾರ್ಮಿಕರಿಗೆ ಭಾರಿ ಹೊಡೆತ ನೀಡಿದ ಕೊರೋನಾ ಸಾಂಕ್ರಾಮಿಕ: ಮತ್ತಷ್ಟು ದಯನೀಯ ಸ್ಥಿತಿಗೆ ತಲುಪಿದ ಮಹಿಳಾ ಕಾರ್ಮಿಕರ ಸ್ಥಿತಿ

ಮಹಿಳಾ ದೌರ್ಜನ್ಯ ಹೆಚ್ಚಳದ ಬಗ್ಗೆ “ನಾನುಗೌರಿ.ಕಾಂ” ಜೊತೆ ಮಾತನಾಡಿದ ಹೈಕೋರ್ಟ್‌‌ ವಕೀಲೆ ರಾಜಲಕ್ಷ್ಮಿ ಅಂಕಲಗಿ, “ಇದಕ್ಕೆ ಮೊದಲ ಕಾರಣ ಕೆಲಸಕ್ಕೆ ಹೋಗುವ ಮಹಿಳೆಗೆ ‘ವರ್ಕ್‌ ಫ್ರಂ ಹೋಂ’ ಪ್ರಾರಂಭ ಆಗಿದ್ದು. ಈ ಮಹಿಳೆಯರು ಸಾಮಾನ್ಯವಾಗಿ ಕೆಲಸಕ್ಕೆ ತೆರಳುತ್ತಿದ್ದ ಸಮಯದಲ್ಲಿ ಹೊರಗಿನ ವಾತಾವರಣದಿಂದ ಒಂದಷ್ಟು ನಿರಾಳತೆಯನ್ನು ಮತ್ತು ಸ್ವಾತಂತ್ಯ್ರವನ್ನು ಅನುಭವಿಸುತ್ತಿದ್ದರು. ಆದರೆ ಈಗ ಹೊರ ವಾತಾವಣದಲ್ಲಿ ಸಿಗುತ್ತಿದ್ದ ನಿರಾಳತೆ ಸಿಗುತ್ತಿಲ್ಲ. ಆಫೀಸ್‌ ಕೆಲಸ ಮುಗಿಯುವ ಹೊತ್ತಿಗೆ ಮನೆಯ ಕೆಲಸ, ಮನೆ ಕೆಲಸ ಮುಗಿಯುವ ಹೊತ್ತಿಗೆ ಆಫೀಸ್‌ ಕೆಲಸ ಮಾಡುತ್ತಲೆ ಇರಬೇಕಾಗುತ್ತದೆ.

ಜೊತೆಗೆ ಗಂಡನಿಗೂ ವರ್ಕ್‌ ಫ್ರಂ ಹೋಮ್‌ ಇರುತ್ತದೆ. ಹೆಚ್ಚಿನ ಮನೆಗಳಲ್ಲಿ ಗಂಡನಿಗೆ ಬೇಕಾದ ಅಡುಗೆ ಹಾಗೂ ಗಂಡನ ಇನ್ನಿತರ ಕೆಲಸಗಳನ್ನೂ ಹೆಂಡತಿಯೆ ನಿರ್ವಹಿಸಬೇಕಾಗುತ್ತದೆ. ಗಂಡನ ಬೇಡಿಕೆಗಳೂ ನಿರಂತರವಾಗಿ ಇರುತ್ತದೆ. ಇದರ ಜೊತೆಗೆ ಮಕ್ಕಳು ಕೂಡಾ ಮನೆಯಲ್ಲೆ ಇರುತ್ತಾರೆ. ಅವರನ್ನು ನೋಡಿ ಕೊಳ್ಳುವುದು ಮಹಿಳೆಯೆ ಆಗಿರುವುದರಿಂದ ಅವರ ಕೆಲಸಗಳೂ ಸೇರಿ ಹೆಚ್ಚಿನ ಒತ್ತಡ ಉಂಟಾಗುತ್ತದೆ. ಈ ಒತ್ತಡ, ಸುಸ್ತು, ಎಲ್ಲಾ ಸೇರಿಕೊಂಡು ಮಾನಸಿಕ ಒತ್ತಡಕ್ಕೊಳಗಾಗಿ ಅದು ಮನಸ್ತಾಪವಾಗಿ ರೂಪುಗೊಂಡು ಕೊನೆಗೆ ಜಗಳದಲ್ಲೇ ಕೊನೆಯಾಗುತ್ತದೆ. ಅದರಲ್ಲೂ ಹೆಚ್ಚಿನ ಕಡೆಗಳಲ್ಲಿ ಹೊಡೆದಾಟ ಮತ್ತು ದೌರ್ಜನ್ಯಗಳಲ್ಲೆ ಮುಗಿಯುತ್ತದೆ” ಎಂದು ಅವರು ಹೇಳಿದರು.

“ಗೃಹಿಣಿಯಾಗಿ ಮನೆಯಲ್ಲೇ ಇರುವ ಮಹಿಳೆಯರು ಈ ಹಿಂದೆ ಸಾಮಾನ್ಯವಾಗಿ ಮನೆಗೆಲಸಗಳನ್ನು ಮುಗಿಸಿಕೊಂಡು ಒಂದಷ್ಟು ಹೊತ್ತು ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಲಾಕ್‌ಡೌನ್‌ ನಂತರ ತನ್ನ ಕೆಲಸ ಕಳೆದುಕೊಂಡ ಗಂಡ ಹಾಗೂ ಮನೆಯಲ್ಲೇ ಇರುವ ಮಕ್ಕಳ ಕೆಲಸಗಳನ್ನು ಮತ್ತು ಬೇಡಿಕೆಗಳನ್ನು ಪೂರೈಸುತ್ತಲೆ ಇರಬೇಕಾಗುತ್ತದೆ. ಜೊತೆಗೆ ಆರ್ಥಿಕ ಮುಗ್ಗಟ್ಟು ಕೂಡಾ ಇರುವುದರಿಂದ ಗಂಡನ ಕೋಪ ಕೊನೆಯದಾಗಿ ಕೊನೆಗೊಳ್ಳುವುದು ಸುಲಭವಾಗಿ ಸಿಗುವ ತನ್ನ ಹೆಂಡತಿಯ ಮೇಲೆಯೆ ಆಗಿದೆ” ಎಂದು ರಾಜಲಕ್ಷ್ಮಿ ಹೇಳಿದರು.

“ಮನಸ್ತಾಪಗಳು ಬಂದಾಗ ನಿರಾಳವಾಗಲು ಹೊರ ಹೋಗಿ ಬರುತ್ತೇನೆ ಎಂಬ ಸ್ಥಿತಿ ಲಾಕ್‌ಡೌ‌ನ್‌ನಿಂದಾಗಿ ಇಲ್ಲ. ಏನೇ ಆದರೂ ಅವರು ಮನೆಯಲ್ಲೆ ಎದುರುಗೊಳ್ಳುತ್ತಲೆ ಇರಬೇಕಾಗುತ್ತದೆ. ಹಾಗಾಗಿಯೆ ದೌರ್ಜನ್ಯಗಳು ಹೆಚ್ಚಾಗಿದೆ” ಎಂದು ರಾಜಲಕ್ಷ್ಮಿ ಅಂಕಲಗಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಸಾಯುತ್ತೇವೆ ವಿನಃ ಹೋರಾಟದಿಂದ ಹಿಂದೆ ಸರಿಯುವುದಿಲ್ಲ: ಲಾಲು ಪ್ರಸಾದ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...