Homeಕರ್ನಾಟಕದೌರ್ಜನ್ಯ 25% ಹೆಚ್ಚಳ: ಮಹಿಳೆಯರಿಗೆ ಕೊರೊನಾ ಲಾಕ್‌ಡೌನ್‌‌ ಕರಾಳ!

ದೌರ್ಜನ್ಯ 25% ಹೆಚ್ಚಳ: ಮಹಿಳೆಯರಿಗೆ ಕೊರೊನಾ ಲಾಕ್‌ಡೌನ್‌‌ ಕರಾಳ!

- Advertisement -
- Advertisement -

ಕೊರೊನಾ ಸಮಯದಲ್ಲಿ ಭಾರತೀಯ ಮಹಿಳೆಯರ ಮೇಲಿನ ದೌರ್ಜನ್ಯವು ಹೆಚ್ಚಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಇತ್ತೀಚಿನ ವರದಿಯು ಹೇಳಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 25% ಕ್ಕಿಂತಲೂ ಹೆಚ್ಚು ಮಹಿಳಾ ದೌರ್ಜನ್ಯದ ದೂರು ಈ ವರ್ಷ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಮಹಿಳಾ ಆಯೋಗವು 2019-20 ರಲ್ಲಿ 20,309 ದೂರುಗಳನ್ನು ಸ್ವೀಕರಿಸಿತ್ತು, ಆದರೆ 2020-21ರಲ್ಲಿ 26,513 ಮಹಿಳೆಯರು ಆಯೋಗಕ್ಕೆ ದೂರುಗಳನ್ನು ನೀಡಿದ್ದಾರೆ. ಒಟ್ಟು ಕಳೆದ ವರ್ಷಕ್ಕಿಂತ ಈ ವರ್ಷ 25.09% ದಷ್ಟು ದೂರುಗಳು ಹೆಚ್ಚಳವಾಗಿದೆ. 2020-21ರಲ್ಲಿ ಆಯೋಗಕ್ಕೆ ಸಲ್ಲಿಸಲಾದ ಗರಿಷ್ಠ ಸಂಖ್ಯೆಯ ದೂರುಗಳು ಘನತೆಯಿಂದ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ನೋಂದಾಯಿಸಲಾಗಿದೆ. ಒಟ್ಟು 8,688 ಮಹಿಳೆಯರು ಈ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಆಯೋಗವನ್ನು ಸಂಪರ್ಕಿಸಿದ್ದಾರೆ.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲೂ ತೀವ್ರ ಏರಿಕೆ ಕಂಡುಬಂದಿದ್ದು, ಈ ವಿಭಾಗದಲ್ಲಿ ಒಟ್ಟು 6,049 ಮಹಿಳೆಯರು 2020-21ರಲ್ಲಿ ದೂರು ದಾಖಲಿಸಿದ್ದಾರೆ. ಇದು ಹಿಂದಿನ ವರ್ಷಕ್ಕಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಮಹಿಳೆಯರ ವಿರುದ್ಧ ತೀವ್ರ ಏರಿಕೆ ಕಂಡ ಇತರ ವಿಭಾಗಗಳಲ್ಲಿ ಸೈಬರ್‌ ಅಪರಾಧ ಮತ್ತು ವರದಕ್ಷಿಣೆ ಕಿರುಕುಳ ಸೇರಿವೆ.

ಇದನ್ನೂ ಓದಿ: ಭಾರತಕ್ಕೆ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗುವ ಸಮಯ ದೂರವಿಲ್ಲ: ಜಸ್ಟಿಸ್ ಆರ್‌‌.ಎ‌ಫ್‌. ನಾರಿಮನ್

ಕೊರೊನಾ ಪ್ರೇರಿತ ಲಾಕ್‌ಡೌನ್‌ಗಳು, ಪುರುಷರು ಹೆಚ್ಚು ಕಾಲ ಮನೆಯಲ್ಲೆ ಇರುವುದು ಮತ್ತು ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಕುಟುಂಬಗಳು ಅನುಭವಿಸಿದ ಆರ್ಥಿಕ ಹಿನ್ನಡೆಯು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿರಬಹುದು ಎಂದು ಮಹಿಳಾ ಹಕ್ಕುಗಳ ಹೋರಾಟಗಾರರು ಹೇಳಿದ್ದಾರೆ.

ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮಾತನಾಡಿ, ಮಹಿಳೆಯರ ವಿರುದ್ದ ನಡೆಯುವ ಅಪರಾಧಗಳಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ, ಆದರೆ ಆಯೋಗವು ಮಹಿಳೆಯರನ್ನು ತಲುಪಲು ಮತ್ತು ದೂರು ನೀಡುವ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ ಎಂದು ಹೇಳಿದ್ದಾರೆ.

“ಸಂತ್ರಸ್ತ ಮಹಿಳೆಯರ ದೂರುಗಳನ್ನು ದಾಖಲಿಸಲು ಮತ್ತು ಪರಿಹರಿಸಲು ಲಾಕ್‌ಡೌನ್ ಸಮಯದಲ್ಲಿ ನಮ್ಮ ತಂಡವು ಮೂರು ಪಾಳಿಯಲ್ಲಿ ಕೆಲಸ ಮಾಡುತ್ತಿತ್ತು. ಆಯೋಗವು ಪ್ರತಿಯೊಂದು ದೂರುಗಳ ಬಗ್ಗೆ ನಿಗಾ ಇಟ್ಟಿದ್ದು, ಎಲ್ಲಾ ಸಂದರ್ಭಗಳಲ್ಲಿಯೂ ಸೂಕ್ತವಾದ ಅನುಸರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ರೇಖಾ ಹೇಳಿದ್ದಾರೆ.

“ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಕೌಟುಂಬಿಕ ಹಿಂಸಾಚಾರ, ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಾಣಿಕೆ ಹಠಾತ್ ಏರಿಕೆ ಕಂಡುಬಂದಿದೆ ಎಂದು ಸಮಿತಿ ಹೇಳುತ್ತದೆ. ಇದಕ್ಕೆ ಕಾರಣ, ಮುಖ್ಯವಾಗಿ ಆರ್ಥಿಕ ಚಟುವಟಿಕೆಗಳಲ್ಲಿ ಅಡ್ಡಿ, ವರ್ಕ್‌ ಫ್ರಂ ಹೋಂ ಮತ್ತು ಲಾಕ್‌ಡೌನ್‌‌ನಲ್ಲಿ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವುದು” ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಯುವ ಕಾರ್ಮಿಕರಿಗೆ ಭಾರಿ ಹೊಡೆತ ನೀಡಿದ ಕೊರೋನಾ ಸಾಂಕ್ರಾಮಿಕ: ಮತ್ತಷ್ಟು ದಯನೀಯ ಸ್ಥಿತಿಗೆ ತಲುಪಿದ ಮಹಿಳಾ ಕಾರ್ಮಿಕರ ಸ್ಥಿತಿ

ಮಹಿಳಾ ದೌರ್ಜನ್ಯ ಹೆಚ್ಚಳದ ಬಗ್ಗೆ “ನಾನುಗೌರಿ.ಕಾಂ” ಜೊತೆ ಮಾತನಾಡಿದ ಹೈಕೋರ್ಟ್‌‌ ವಕೀಲೆ ರಾಜಲಕ್ಷ್ಮಿ ಅಂಕಲಗಿ, “ಇದಕ್ಕೆ ಮೊದಲ ಕಾರಣ ಕೆಲಸಕ್ಕೆ ಹೋಗುವ ಮಹಿಳೆಗೆ ‘ವರ್ಕ್‌ ಫ್ರಂ ಹೋಂ’ ಪ್ರಾರಂಭ ಆಗಿದ್ದು. ಈ ಮಹಿಳೆಯರು ಸಾಮಾನ್ಯವಾಗಿ ಕೆಲಸಕ್ಕೆ ತೆರಳುತ್ತಿದ್ದ ಸಮಯದಲ್ಲಿ ಹೊರಗಿನ ವಾತಾವರಣದಿಂದ ಒಂದಷ್ಟು ನಿರಾಳತೆಯನ್ನು ಮತ್ತು ಸ್ವಾತಂತ್ಯ್ರವನ್ನು ಅನುಭವಿಸುತ್ತಿದ್ದರು. ಆದರೆ ಈಗ ಹೊರ ವಾತಾವಣದಲ್ಲಿ ಸಿಗುತ್ತಿದ್ದ ನಿರಾಳತೆ ಸಿಗುತ್ತಿಲ್ಲ. ಆಫೀಸ್‌ ಕೆಲಸ ಮುಗಿಯುವ ಹೊತ್ತಿಗೆ ಮನೆಯ ಕೆಲಸ, ಮನೆ ಕೆಲಸ ಮುಗಿಯುವ ಹೊತ್ತಿಗೆ ಆಫೀಸ್‌ ಕೆಲಸ ಮಾಡುತ್ತಲೆ ಇರಬೇಕಾಗುತ್ತದೆ.

ಜೊತೆಗೆ ಗಂಡನಿಗೂ ವರ್ಕ್‌ ಫ್ರಂ ಹೋಮ್‌ ಇರುತ್ತದೆ. ಹೆಚ್ಚಿನ ಮನೆಗಳಲ್ಲಿ ಗಂಡನಿಗೆ ಬೇಕಾದ ಅಡುಗೆ ಹಾಗೂ ಗಂಡನ ಇನ್ನಿತರ ಕೆಲಸಗಳನ್ನೂ ಹೆಂಡತಿಯೆ ನಿರ್ವಹಿಸಬೇಕಾಗುತ್ತದೆ. ಗಂಡನ ಬೇಡಿಕೆಗಳೂ ನಿರಂತರವಾಗಿ ಇರುತ್ತದೆ. ಇದರ ಜೊತೆಗೆ ಮಕ್ಕಳು ಕೂಡಾ ಮನೆಯಲ್ಲೆ ಇರುತ್ತಾರೆ. ಅವರನ್ನು ನೋಡಿ ಕೊಳ್ಳುವುದು ಮಹಿಳೆಯೆ ಆಗಿರುವುದರಿಂದ ಅವರ ಕೆಲಸಗಳೂ ಸೇರಿ ಹೆಚ್ಚಿನ ಒತ್ತಡ ಉಂಟಾಗುತ್ತದೆ. ಈ ಒತ್ತಡ, ಸುಸ್ತು, ಎಲ್ಲಾ ಸೇರಿಕೊಂಡು ಮಾನಸಿಕ ಒತ್ತಡಕ್ಕೊಳಗಾಗಿ ಅದು ಮನಸ್ತಾಪವಾಗಿ ರೂಪುಗೊಂಡು ಕೊನೆಗೆ ಜಗಳದಲ್ಲೇ ಕೊನೆಯಾಗುತ್ತದೆ. ಅದರಲ್ಲೂ ಹೆಚ್ಚಿನ ಕಡೆಗಳಲ್ಲಿ ಹೊಡೆದಾಟ ಮತ್ತು ದೌರ್ಜನ್ಯಗಳಲ್ಲೆ ಮುಗಿಯುತ್ತದೆ” ಎಂದು ಅವರು ಹೇಳಿದರು.

“ಗೃಹಿಣಿಯಾಗಿ ಮನೆಯಲ್ಲೇ ಇರುವ ಮಹಿಳೆಯರು ಈ ಹಿಂದೆ ಸಾಮಾನ್ಯವಾಗಿ ಮನೆಗೆಲಸಗಳನ್ನು ಮುಗಿಸಿಕೊಂಡು ಒಂದಷ್ಟು ಹೊತ್ತು ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಲಾಕ್‌ಡೌನ್‌ ನಂತರ ತನ್ನ ಕೆಲಸ ಕಳೆದುಕೊಂಡ ಗಂಡ ಹಾಗೂ ಮನೆಯಲ್ಲೇ ಇರುವ ಮಕ್ಕಳ ಕೆಲಸಗಳನ್ನು ಮತ್ತು ಬೇಡಿಕೆಗಳನ್ನು ಪೂರೈಸುತ್ತಲೆ ಇರಬೇಕಾಗುತ್ತದೆ. ಜೊತೆಗೆ ಆರ್ಥಿಕ ಮುಗ್ಗಟ್ಟು ಕೂಡಾ ಇರುವುದರಿಂದ ಗಂಡನ ಕೋಪ ಕೊನೆಯದಾಗಿ ಕೊನೆಗೊಳ್ಳುವುದು ಸುಲಭವಾಗಿ ಸಿಗುವ ತನ್ನ ಹೆಂಡತಿಯ ಮೇಲೆಯೆ ಆಗಿದೆ” ಎಂದು ರಾಜಲಕ್ಷ್ಮಿ ಹೇಳಿದರು.

“ಮನಸ್ತಾಪಗಳು ಬಂದಾಗ ನಿರಾಳವಾಗಲು ಹೊರ ಹೋಗಿ ಬರುತ್ತೇನೆ ಎಂಬ ಸ್ಥಿತಿ ಲಾಕ್‌ಡೌ‌ನ್‌ನಿಂದಾಗಿ ಇಲ್ಲ. ಏನೇ ಆದರೂ ಅವರು ಮನೆಯಲ್ಲೆ ಎದುರುಗೊಳ್ಳುತ್ತಲೆ ಇರಬೇಕಾಗುತ್ತದೆ. ಹಾಗಾಗಿಯೆ ದೌರ್ಜನ್ಯಗಳು ಹೆಚ್ಚಾಗಿದೆ” ಎಂದು ರಾಜಲಕ್ಷ್ಮಿ ಅಂಕಲಗಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಸಾಯುತ್ತೇವೆ ವಿನಃ ಹೋರಾಟದಿಂದ ಹಿಂದೆ ಸರಿಯುವುದಿಲ್ಲ: ಲಾಲು ಪ್ರಸಾದ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...