Homeಕರ್ನಾಟಕದೌರ್ಜನ್ಯ 25% ಹೆಚ್ಚಳ: ಮಹಿಳೆಯರಿಗೆ ಕೊರೊನಾ ಲಾಕ್‌ಡೌನ್‌‌ ಕರಾಳ!

ದೌರ್ಜನ್ಯ 25% ಹೆಚ್ಚಳ: ಮಹಿಳೆಯರಿಗೆ ಕೊರೊನಾ ಲಾಕ್‌ಡೌನ್‌‌ ಕರಾಳ!

- Advertisement -
- Advertisement -

ಕೊರೊನಾ ಸಮಯದಲ್ಲಿ ಭಾರತೀಯ ಮಹಿಳೆಯರ ಮೇಲಿನ ದೌರ್ಜನ್ಯವು ಹೆಚ್ಚಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಇತ್ತೀಚಿನ ವರದಿಯು ಹೇಳಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 25% ಕ್ಕಿಂತಲೂ ಹೆಚ್ಚು ಮಹಿಳಾ ದೌರ್ಜನ್ಯದ ದೂರು ಈ ವರ್ಷ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಮಹಿಳಾ ಆಯೋಗವು 2019-20 ರಲ್ಲಿ 20,309 ದೂರುಗಳನ್ನು ಸ್ವೀಕರಿಸಿತ್ತು, ಆದರೆ 2020-21ರಲ್ಲಿ 26,513 ಮಹಿಳೆಯರು ಆಯೋಗಕ್ಕೆ ದೂರುಗಳನ್ನು ನೀಡಿದ್ದಾರೆ. ಒಟ್ಟು ಕಳೆದ ವರ್ಷಕ್ಕಿಂತ ಈ ವರ್ಷ 25.09% ದಷ್ಟು ದೂರುಗಳು ಹೆಚ್ಚಳವಾಗಿದೆ. 2020-21ರಲ್ಲಿ ಆಯೋಗಕ್ಕೆ ಸಲ್ಲಿಸಲಾದ ಗರಿಷ್ಠ ಸಂಖ್ಯೆಯ ದೂರುಗಳು ಘನತೆಯಿಂದ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ನೋಂದಾಯಿಸಲಾಗಿದೆ. ಒಟ್ಟು 8,688 ಮಹಿಳೆಯರು ಈ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಆಯೋಗವನ್ನು ಸಂಪರ್ಕಿಸಿದ್ದಾರೆ.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲೂ ತೀವ್ರ ಏರಿಕೆ ಕಂಡುಬಂದಿದ್ದು, ಈ ವಿಭಾಗದಲ್ಲಿ ಒಟ್ಟು 6,049 ಮಹಿಳೆಯರು 2020-21ರಲ್ಲಿ ದೂರು ದಾಖಲಿಸಿದ್ದಾರೆ. ಇದು ಹಿಂದಿನ ವರ್ಷಕ್ಕಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಮಹಿಳೆಯರ ವಿರುದ್ಧ ತೀವ್ರ ಏರಿಕೆ ಕಂಡ ಇತರ ವಿಭಾಗಗಳಲ್ಲಿ ಸೈಬರ್‌ ಅಪರಾಧ ಮತ್ತು ವರದಕ್ಷಿಣೆ ಕಿರುಕುಳ ಸೇರಿವೆ.

ಇದನ್ನೂ ಓದಿ: ಭಾರತಕ್ಕೆ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗುವ ಸಮಯ ದೂರವಿಲ್ಲ: ಜಸ್ಟಿಸ್ ಆರ್‌‌.ಎ‌ಫ್‌. ನಾರಿಮನ್

ಕೊರೊನಾ ಪ್ರೇರಿತ ಲಾಕ್‌ಡೌನ್‌ಗಳು, ಪುರುಷರು ಹೆಚ್ಚು ಕಾಲ ಮನೆಯಲ್ಲೆ ಇರುವುದು ಮತ್ತು ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಕುಟುಂಬಗಳು ಅನುಭವಿಸಿದ ಆರ್ಥಿಕ ಹಿನ್ನಡೆಯು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿರಬಹುದು ಎಂದು ಮಹಿಳಾ ಹಕ್ಕುಗಳ ಹೋರಾಟಗಾರರು ಹೇಳಿದ್ದಾರೆ.

ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮಾತನಾಡಿ, ಮಹಿಳೆಯರ ವಿರುದ್ದ ನಡೆಯುವ ಅಪರಾಧಗಳಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ, ಆದರೆ ಆಯೋಗವು ಮಹಿಳೆಯರನ್ನು ತಲುಪಲು ಮತ್ತು ದೂರು ನೀಡುವ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ ಎಂದು ಹೇಳಿದ್ದಾರೆ.

“ಸಂತ್ರಸ್ತ ಮಹಿಳೆಯರ ದೂರುಗಳನ್ನು ದಾಖಲಿಸಲು ಮತ್ತು ಪರಿಹರಿಸಲು ಲಾಕ್‌ಡೌನ್ ಸಮಯದಲ್ಲಿ ನಮ್ಮ ತಂಡವು ಮೂರು ಪಾಳಿಯಲ್ಲಿ ಕೆಲಸ ಮಾಡುತ್ತಿತ್ತು. ಆಯೋಗವು ಪ್ರತಿಯೊಂದು ದೂರುಗಳ ಬಗ್ಗೆ ನಿಗಾ ಇಟ್ಟಿದ್ದು, ಎಲ್ಲಾ ಸಂದರ್ಭಗಳಲ್ಲಿಯೂ ಸೂಕ್ತವಾದ ಅನುಸರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ರೇಖಾ ಹೇಳಿದ್ದಾರೆ.

“ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಕೌಟುಂಬಿಕ ಹಿಂಸಾಚಾರ, ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಾಣಿಕೆ ಹಠಾತ್ ಏರಿಕೆ ಕಂಡುಬಂದಿದೆ ಎಂದು ಸಮಿತಿ ಹೇಳುತ್ತದೆ. ಇದಕ್ಕೆ ಕಾರಣ, ಮುಖ್ಯವಾಗಿ ಆರ್ಥಿಕ ಚಟುವಟಿಕೆಗಳಲ್ಲಿ ಅಡ್ಡಿ, ವರ್ಕ್‌ ಫ್ರಂ ಹೋಂ ಮತ್ತು ಲಾಕ್‌ಡೌನ್‌‌ನಲ್ಲಿ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವುದು” ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಯುವ ಕಾರ್ಮಿಕರಿಗೆ ಭಾರಿ ಹೊಡೆತ ನೀಡಿದ ಕೊರೋನಾ ಸಾಂಕ್ರಾಮಿಕ: ಮತ್ತಷ್ಟು ದಯನೀಯ ಸ್ಥಿತಿಗೆ ತಲುಪಿದ ಮಹಿಳಾ ಕಾರ್ಮಿಕರ ಸ್ಥಿತಿ

ಮಹಿಳಾ ದೌರ್ಜನ್ಯ ಹೆಚ್ಚಳದ ಬಗ್ಗೆ “ನಾನುಗೌರಿ.ಕಾಂ” ಜೊತೆ ಮಾತನಾಡಿದ ಹೈಕೋರ್ಟ್‌‌ ವಕೀಲೆ ರಾಜಲಕ್ಷ್ಮಿ ಅಂಕಲಗಿ, “ಇದಕ್ಕೆ ಮೊದಲ ಕಾರಣ ಕೆಲಸಕ್ಕೆ ಹೋಗುವ ಮಹಿಳೆಗೆ ‘ವರ್ಕ್‌ ಫ್ರಂ ಹೋಂ’ ಪ್ರಾರಂಭ ಆಗಿದ್ದು. ಈ ಮಹಿಳೆಯರು ಸಾಮಾನ್ಯವಾಗಿ ಕೆಲಸಕ್ಕೆ ತೆರಳುತ್ತಿದ್ದ ಸಮಯದಲ್ಲಿ ಹೊರಗಿನ ವಾತಾವರಣದಿಂದ ಒಂದಷ್ಟು ನಿರಾಳತೆಯನ್ನು ಮತ್ತು ಸ್ವಾತಂತ್ಯ್ರವನ್ನು ಅನುಭವಿಸುತ್ತಿದ್ದರು. ಆದರೆ ಈಗ ಹೊರ ವಾತಾವಣದಲ್ಲಿ ಸಿಗುತ್ತಿದ್ದ ನಿರಾಳತೆ ಸಿಗುತ್ತಿಲ್ಲ. ಆಫೀಸ್‌ ಕೆಲಸ ಮುಗಿಯುವ ಹೊತ್ತಿಗೆ ಮನೆಯ ಕೆಲಸ, ಮನೆ ಕೆಲಸ ಮುಗಿಯುವ ಹೊತ್ತಿಗೆ ಆಫೀಸ್‌ ಕೆಲಸ ಮಾಡುತ್ತಲೆ ಇರಬೇಕಾಗುತ್ತದೆ.

ಜೊತೆಗೆ ಗಂಡನಿಗೂ ವರ್ಕ್‌ ಫ್ರಂ ಹೋಮ್‌ ಇರುತ್ತದೆ. ಹೆಚ್ಚಿನ ಮನೆಗಳಲ್ಲಿ ಗಂಡನಿಗೆ ಬೇಕಾದ ಅಡುಗೆ ಹಾಗೂ ಗಂಡನ ಇನ್ನಿತರ ಕೆಲಸಗಳನ್ನೂ ಹೆಂಡತಿಯೆ ನಿರ್ವಹಿಸಬೇಕಾಗುತ್ತದೆ. ಗಂಡನ ಬೇಡಿಕೆಗಳೂ ನಿರಂತರವಾಗಿ ಇರುತ್ತದೆ. ಇದರ ಜೊತೆಗೆ ಮಕ್ಕಳು ಕೂಡಾ ಮನೆಯಲ್ಲೆ ಇರುತ್ತಾರೆ. ಅವರನ್ನು ನೋಡಿ ಕೊಳ್ಳುವುದು ಮಹಿಳೆಯೆ ಆಗಿರುವುದರಿಂದ ಅವರ ಕೆಲಸಗಳೂ ಸೇರಿ ಹೆಚ್ಚಿನ ಒತ್ತಡ ಉಂಟಾಗುತ್ತದೆ. ಈ ಒತ್ತಡ, ಸುಸ್ತು, ಎಲ್ಲಾ ಸೇರಿಕೊಂಡು ಮಾನಸಿಕ ಒತ್ತಡಕ್ಕೊಳಗಾಗಿ ಅದು ಮನಸ್ತಾಪವಾಗಿ ರೂಪುಗೊಂಡು ಕೊನೆಗೆ ಜಗಳದಲ್ಲೇ ಕೊನೆಯಾಗುತ್ತದೆ. ಅದರಲ್ಲೂ ಹೆಚ್ಚಿನ ಕಡೆಗಳಲ್ಲಿ ಹೊಡೆದಾಟ ಮತ್ತು ದೌರ್ಜನ್ಯಗಳಲ್ಲೆ ಮುಗಿಯುತ್ತದೆ” ಎಂದು ಅವರು ಹೇಳಿದರು.

“ಗೃಹಿಣಿಯಾಗಿ ಮನೆಯಲ್ಲೇ ಇರುವ ಮಹಿಳೆಯರು ಈ ಹಿಂದೆ ಸಾಮಾನ್ಯವಾಗಿ ಮನೆಗೆಲಸಗಳನ್ನು ಮುಗಿಸಿಕೊಂಡು ಒಂದಷ್ಟು ಹೊತ್ತು ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಲಾಕ್‌ಡೌನ್‌ ನಂತರ ತನ್ನ ಕೆಲಸ ಕಳೆದುಕೊಂಡ ಗಂಡ ಹಾಗೂ ಮನೆಯಲ್ಲೇ ಇರುವ ಮಕ್ಕಳ ಕೆಲಸಗಳನ್ನು ಮತ್ತು ಬೇಡಿಕೆಗಳನ್ನು ಪೂರೈಸುತ್ತಲೆ ಇರಬೇಕಾಗುತ್ತದೆ. ಜೊತೆಗೆ ಆರ್ಥಿಕ ಮುಗ್ಗಟ್ಟು ಕೂಡಾ ಇರುವುದರಿಂದ ಗಂಡನ ಕೋಪ ಕೊನೆಯದಾಗಿ ಕೊನೆಗೊಳ್ಳುವುದು ಸುಲಭವಾಗಿ ಸಿಗುವ ತನ್ನ ಹೆಂಡತಿಯ ಮೇಲೆಯೆ ಆಗಿದೆ” ಎಂದು ರಾಜಲಕ್ಷ್ಮಿ ಹೇಳಿದರು.

“ಮನಸ್ತಾಪಗಳು ಬಂದಾಗ ನಿರಾಳವಾಗಲು ಹೊರ ಹೋಗಿ ಬರುತ್ತೇನೆ ಎಂಬ ಸ್ಥಿತಿ ಲಾಕ್‌ಡೌ‌ನ್‌ನಿಂದಾಗಿ ಇಲ್ಲ. ಏನೇ ಆದರೂ ಅವರು ಮನೆಯಲ್ಲೆ ಎದುರುಗೊಳ್ಳುತ್ತಲೆ ಇರಬೇಕಾಗುತ್ತದೆ. ಹಾಗಾಗಿಯೆ ದೌರ್ಜನ್ಯಗಳು ಹೆಚ್ಚಾಗಿದೆ” ಎಂದು ರಾಜಲಕ್ಷ್ಮಿ ಅಂಕಲಗಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಸಾಯುತ್ತೇವೆ ವಿನಃ ಹೋರಾಟದಿಂದ ಹಿಂದೆ ಸರಿಯುವುದಿಲ್ಲ: ಲಾಲು ಪ್ರಸಾದ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...