Homeಕರ್ನಾಟಕದೌರ್ಜನ್ಯ 25% ಹೆಚ್ಚಳ: ಮಹಿಳೆಯರಿಗೆ ಕೊರೊನಾ ಲಾಕ್‌ಡೌನ್‌‌ ಕರಾಳ!

ದೌರ್ಜನ್ಯ 25% ಹೆಚ್ಚಳ: ಮಹಿಳೆಯರಿಗೆ ಕೊರೊನಾ ಲಾಕ್‌ಡೌನ್‌‌ ಕರಾಳ!

- Advertisement -
- Advertisement -

ಕೊರೊನಾ ಸಮಯದಲ್ಲಿ ಭಾರತೀಯ ಮಹಿಳೆಯರ ಮೇಲಿನ ದೌರ್ಜನ್ಯವು ಹೆಚ್ಚಾಗಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಇತ್ತೀಚಿನ ವರದಿಯು ಹೇಳಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ 25% ಕ್ಕಿಂತಲೂ ಹೆಚ್ಚು ಮಹಿಳಾ ದೌರ್ಜನ್ಯದ ದೂರು ಈ ವರ್ಷ ದಾಖಲಾಗಿದೆ ಎಂದು ವರದಿ ತಿಳಿಸಿದೆ.

ಮಹಿಳಾ ಆಯೋಗವು 2019-20 ರಲ್ಲಿ 20,309 ದೂರುಗಳನ್ನು ಸ್ವೀಕರಿಸಿತ್ತು, ಆದರೆ 2020-21ರಲ್ಲಿ 26,513 ಮಹಿಳೆಯರು ಆಯೋಗಕ್ಕೆ ದೂರುಗಳನ್ನು ನೀಡಿದ್ದಾರೆ. ಒಟ್ಟು ಕಳೆದ ವರ್ಷಕ್ಕಿಂತ ಈ ವರ್ಷ 25.09% ದಷ್ಟು ದೂರುಗಳು ಹೆಚ್ಚಳವಾಗಿದೆ. 2020-21ರಲ್ಲಿ ಆಯೋಗಕ್ಕೆ ಸಲ್ಲಿಸಲಾದ ಗರಿಷ್ಠ ಸಂಖ್ಯೆಯ ದೂರುಗಳು ಘನತೆಯಿಂದ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ನೋಂದಾಯಿಸಲಾಗಿದೆ. ಒಟ್ಟು 8,688 ಮಹಿಳೆಯರು ಈ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಆಯೋಗವನ್ನು ಸಂಪರ್ಕಿಸಿದ್ದಾರೆ.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲೂ ತೀವ್ರ ಏರಿಕೆ ಕಂಡುಬಂದಿದ್ದು, ಈ ವಿಭಾಗದಲ್ಲಿ ಒಟ್ಟು 6,049 ಮಹಿಳೆಯರು 2020-21ರಲ್ಲಿ ದೂರು ದಾಖಲಿಸಿದ್ದಾರೆ. ಇದು ಹಿಂದಿನ ವರ್ಷಕ್ಕಿಂತ ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಮಹಿಳೆಯರ ವಿರುದ್ಧ ತೀವ್ರ ಏರಿಕೆ ಕಂಡ ಇತರ ವಿಭಾಗಗಳಲ್ಲಿ ಸೈಬರ್‌ ಅಪರಾಧ ಮತ್ತು ವರದಕ್ಷಿಣೆ ಕಿರುಕುಳ ಸೇರಿವೆ.

ಇದನ್ನೂ ಓದಿ: ಭಾರತಕ್ಕೆ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗುವ ಸಮಯ ದೂರವಿಲ್ಲ: ಜಸ್ಟಿಸ್ ಆರ್‌‌.ಎ‌ಫ್‌. ನಾರಿಮನ್

ಕೊರೊನಾ ಪ್ರೇರಿತ ಲಾಕ್‌ಡೌನ್‌ಗಳು, ಪುರುಷರು ಹೆಚ್ಚು ಕಾಲ ಮನೆಯಲ್ಲೆ ಇರುವುದು ಮತ್ತು ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದರಿಂದ ಕುಟುಂಬಗಳು ಅನುಭವಿಸಿದ ಆರ್ಥಿಕ ಹಿನ್ನಡೆಯು ಮಹಿಳೆಯರ ಮೇಲಿನ ದೌರ್ಜನ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿರಬಹುದು ಎಂದು ಮಹಿಳಾ ಹಕ್ಕುಗಳ ಹೋರಾಟಗಾರರು ಹೇಳಿದ್ದಾರೆ.

ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಮಾತನಾಡಿ, ಮಹಿಳೆಯರ ವಿರುದ್ದ ನಡೆಯುವ ಅಪರಾಧಗಳಲ್ಲಿ ಆತಂಕಕಾರಿ ಏರಿಕೆ ಕಂಡುಬಂದಿದೆ, ಆದರೆ ಆಯೋಗವು ಮಹಿಳೆಯರನ್ನು ತಲುಪಲು ಮತ್ತು ದೂರು ನೀಡುವ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ ಎಂದು ಹೇಳಿದ್ದಾರೆ.

“ಸಂತ್ರಸ್ತ ಮಹಿಳೆಯರ ದೂರುಗಳನ್ನು ದಾಖಲಿಸಲು ಮತ್ತು ಪರಿಹರಿಸಲು ಲಾಕ್‌ಡೌನ್ ಸಮಯದಲ್ಲಿ ನಮ್ಮ ತಂಡವು ಮೂರು ಪಾಳಿಯಲ್ಲಿ ಕೆಲಸ ಮಾಡುತ್ತಿತ್ತು. ಆಯೋಗವು ಪ್ರತಿಯೊಂದು ದೂರುಗಳ ಬಗ್ಗೆ ನಿಗಾ ಇಟ್ಟಿದ್ದು, ಎಲ್ಲಾ ಸಂದರ್ಭಗಳಲ್ಲಿಯೂ ಸೂಕ್ತವಾದ ಅನುಸರಣಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ” ಎಂದು ರೇಖಾ ಹೇಳಿದ್ದಾರೆ.

“ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಕೌಟುಂಬಿಕ ಹಿಂಸಾಚಾರ, ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಾಣಿಕೆ ಹಠಾತ್ ಏರಿಕೆ ಕಂಡುಬಂದಿದೆ ಎಂದು ಸಮಿತಿ ಹೇಳುತ್ತದೆ. ಇದಕ್ಕೆ ಕಾರಣ, ಮುಖ್ಯವಾಗಿ ಆರ್ಥಿಕ ಚಟುವಟಿಕೆಗಳಲ್ಲಿ ಅಡ್ಡಿ, ವರ್ಕ್‌ ಫ್ರಂ ಹೋಂ ಮತ್ತು ಲಾಕ್‌ಡೌನ್‌‌ನಲ್ಲಿ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯುವುದು” ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಯುವ ಕಾರ್ಮಿಕರಿಗೆ ಭಾರಿ ಹೊಡೆತ ನೀಡಿದ ಕೊರೋನಾ ಸಾಂಕ್ರಾಮಿಕ: ಮತ್ತಷ್ಟು ದಯನೀಯ ಸ್ಥಿತಿಗೆ ತಲುಪಿದ ಮಹಿಳಾ ಕಾರ್ಮಿಕರ ಸ್ಥಿತಿ

ಮಹಿಳಾ ದೌರ್ಜನ್ಯ ಹೆಚ್ಚಳದ ಬಗ್ಗೆ “ನಾನುಗೌರಿ.ಕಾಂ” ಜೊತೆ ಮಾತನಾಡಿದ ಹೈಕೋರ್ಟ್‌‌ ವಕೀಲೆ ರಾಜಲಕ್ಷ್ಮಿ ಅಂಕಲಗಿ, “ಇದಕ್ಕೆ ಮೊದಲ ಕಾರಣ ಕೆಲಸಕ್ಕೆ ಹೋಗುವ ಮಹಿಳೆಗೆ ‘ವರ್ಕ್‌ ಫ್ರಂ ಹೋಂ’ ಪ್ರಾರಂಭ ಆಗಿದ್ದು. ಈ ಮಹಿಳೆಯರು ಸಾಮಾನ್ಯವಾಗಿ ಕೆಲಸಕ್ಕೆ ತೆರಳುತ್ತಿದ್ದ ಸಮಯದಲ್ಲಿ ಹೊರಗಿನ ವಾತಾವರಣದಿಂದ ಒಂದಷ್ಟು ನಿರಾಳತೆಯನ್ನು ಮತ್ತು ಸ್ವಾತಂತ್ಯ್ರವನ್ನು ಅನುಭವಿಸುತ್ತಿದ್ದರು. ಆದರೆ ಈಗ ಹೊರ ವಾತಾವಣದಲ್ಲಿ ಸಿಗುತ್ತಿದ್ದ ನಿರಾಳತೆ ಸಿಗುತ್ತಿಲ್ಲ. ಆಫೀಸ್‌ ಕೆಲಸ ಮುಗಿಯುವ ಹೊತ್ತಿಗೆ ಮನೆಯ ಕೆಲಸ, ಮನೆ ಕೆಲಸ ಮುಗಿಯುವ ಹೊತ್ತಿಗೆ ಆಫೀಸ್‌ ಕೆಲಸ ಮಾಡುತ್ತಲೆ ಇರಬೇಕಾಗುತ್ತದೆ.

ಜೊತೆಗೆ ಗಂಡನಿಗೂ ವರ್ಕ್‌ ಫ್ರಂ ಹೋಮ್‌ ಇರುತ್ತದೆ. ಹೆಚ್ಚಿನ ಮನೆಗಳಲ್ಲಿ ಗಂಡನಿಗೆ ಬೇಕಾದ ಅಡುಗೆ ಹಾಗೂ ಗಂಡನ ಇನ್ನಿತರ ಕೆಲಸಗಳನ್ನೂ ಹೆಂಡತಿಯೆ ನಿರ್ವಹಿಸಬೇಕಾಗುತ್ತದೆ. ಗಂಡನ ಬೇಡಿಕೆಗಳೂ ನಿರಂತರವಾಗಿ ಇರುತ್ತದೆ. ಇದರ ಜೊತೆಗೆ ಮಕ್ಕಳು ಕೂಡಾ ಮನೆಯಲ್ಲೆ ಇರುತ್ತಾರೆ. ಅವರನ್ನು ನೋಡಿ ಕೊಳ್ಳುವುದು ಮಹಿಳೆಯೆ ಆಗಿರುವುದರಿಂದ ಅವರ ಕೆಲಸಗಳೂ ಸೇರಿ ಹೆಚ್ಚಿನ ಒತ್ತಡ ಉಂಟಾಗುತ್ತದೆ. ಈ ಒತ್ತಡ, ಸುಸ್ತು, ಎಲ್ಲಾ ಸೇರಿಕೊಂಡು ಮಾನಸಿಕ ಒತ್ತಡಕ್ಕೊಳಗಾಗಿ ಅದು ಮನಸ್ತಾಪವಾಗಿ ರೂಪುಗೊಂಡು ಕೊನೆಗೆ ಜಗಳದಲ್ಲೇ ಕೊನೆಯಾಗುತ್ತದೆ. ಅದರಲ್ಲೂ ಹೆಚ್ಚಿನ ಕಡೆಗಳಲ್ಲಿ ಹೊಡೆದಾಟ ಮತ್ತು ದೌರ್ಜನ್ಯಗಳಲ್ಲೆ ಮುಗಿಯುತ್ತದೆ” ಎಂದು ಅವರು ಹೇಳಿದರು.

“ಗೃಹಿಣಿಯಾಗಿ ಮನೆಯಲ್ಲೇ ಇರುವ ಮಹಿಳೆಯರು ಈ ಹಿಂದೆ ಸಾಮಾನ್ಯವಾಗಿ ಮನೆಗೆಲಸಗಳನ್ನು ಮುಗಿಸಿಕೊಂಡು ಒಂದಷ್ಟು ಹೊತ್ತು ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ಲಾಕ್‌ಡೌನ್‌ ನಂತರ ತನ್ನ ಕೆಲಸ ಕಳೆದುಕೊಂಡ ಗಂಡ ಹಾಗೂ ಮನೆಯಲ್ಲೇ ಇರುವ ಮಕ್ಕಳ ಕೆಲಸಗಳನ್ನು ಮತ್ತು ಬೇಡಿಕೆಗಳನ್ನು ಪೂರೈಸುತ್ತಲೆ ಇರಬೇಕಾಗುತ್ತದೆ. ಜೊತೆಗೆ ಆರ್ಥಿಕ ಮುಗ್ಗಟ್ಟು ಕೂಡಾ ಇರುವುದರಿಂದ ಗಂಡನ ಕೋಪ ಕೊನೆಯದಾಗಿ ಕೊನೆಗೊಳ್ಳುವುದು ಸುಲಭವಾಗಿ ಸಿಗುವ ತನ್ನ ಹೆಂಡತಿಯ ಮೇಲೆಯೆ ಆಗಿದೆ” ಎಂದು ರಾಜಲಕ್ಷ್ಮಿ ಹೇಳಿದರು.

“ಮನಸ್ತಾಪಗಳು ಬಂದಾಗ ನಿರಾಳವಾಗಲು ಹೊರ ಹೋಗಿ ಬರುತ್ತೇನೆ ಎಂಬ ಸ್ಥಿತಿ ಲಾಕ್‌ಡೌ‌ನ್‌ನಿಂದಾಗಿ ಇಲ್ಲ. ಏನೇ ಆದರೂ ಅವರು ಮನೆಯಲ್ಲೆ ಎದುರುಗೊಳ್ಳುತ್ತಲೆ ಇರಬೇಕಾಗುತ್ತದೆ. ಹಾಗಾಗಿಯೆ ದೌರ್ಜನ್ಯಗಳು ಹೆಚ್ಚಾಗಿದೆ” ಎಂದು ರಾಜಲಕ್ಷ್ಮಿ ಅಂಕಲಗಿ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಸಾಯುತ್ತೇವೆ ವಿನಃ ಹೋರಾಟದಿಂದ ಹಿಂದೆ ಸರಿಯುವುದಿಲ್ಲ: ಲಾಲು ಪ್ರಸಾದ್ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...