Homeಮುಖಪುಟಯುಎಇಯಲ್ಲಿ 25 ಭಾರತೀಯರಿಗೆ ಮರಣದಂಡನೆ ಪ್ರಕಟ: ಕೇಂದ್ರ ಸರ್ಕಾರ

ಯುಎಇಯಲ್ಲಿ 25 ಭಾರತೀಯರಿಗೆ ಮರಣದಂಡನೆ ಪ್ರಕಟ: ಕೇಂದ್ರ ಸರ್ಕಾರ

- Advertisement -
- Advertisement -

ಯುಎಇಯಲ್ಲಿ ಮರಣದಂಡನೆ ಪ್ರಕಟಗೊಂಡಿರುವ ಭಾರತೀಯ ಪ್ರಜೆಗಳ ಸಂಖ್ಯೆ 25 ಆಗಿದ್ದು, ಇನ್ನಷ್ಟೇ ಶಿಕ್ಷೆ ಜಾರಿಯಾಗಬೇಕಿದೆ ಎಂದು ಕೇಂದ್ರ ಸರ್ಕಾರ ಗುರುವಾರ (ಮಾ.20) ಸಂಸತ್ತಿಗೆ ತಿಳಿಸಿದೆ.

ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ರಾಜ್ಯಸಭೆಯಲ್ಲಿ ಲಿಖಿತ ಪ್ರಶ್ನೆಗೆ ನೀಡಿದ ಉತ್ತರದಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.

“ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ವಿದೇಶಿ ಕಾರಾಗೃಹಗಳಲ್ಲಿ ಪ್ರಸ್ತುತ ವಿಚಾರಣಾಧೀನ ಕೈದಿಗಳು ಸೇರಿದಂತೆ ಭಾರತೀಯ ಕೈದಿಗಳ ಸಂಖ್ಯೆ 10,152” ಎಂದು ಸಿಂಗ್ ಹೇಳಿದ್ದಾರೆ.

ವಿದೇಶಗಳಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯರ ವಿವರಗಳು ಮತ್ತು ಅವರಿಗೆ ಸಹಾಯ ಮಾಡಲು ಭಾರತ ಸರ್ಕಾರ ಮಾಡಿದ ಪ್ರಯತ್ನಗಳ ಬಗ್ಗೆಯೂ ಪ್ರಶ್ನೆಯಲ್ಲಿ ಕೇಳಲಾಗಿತ್ತು.

“ವಿದೇಶಿ ಜೈಲುಗಳಲ್ಲಿರುವವರು ಸೇರಿದಂತೆ ವಿದೇಶಗಳಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ” ಎಂದು ಸಿಂಗ್ ತಿಳಿಸಿದ್ದಾರೆ.

ಭಾರತೀಯರಿಗೆ ಮರಣದಂಡನೆ ಶಿಕ್ಷೆ ಘೋಷಣೆಯಾಗಿರುವ, ಇನ್ನೂ ಜಾರಿಯಾಗದ ಎಂಟು ದೇಶಗಳ ಡೇಟಾವನ್ನು ಸಚಿವರು ಹಂಚಿಕೊಂಡಿದ್ದಾರೆ. ಅಂಕಿ ಅಂಶಗಳ ಪ್ರಕಾರ, ಯುಎಇಯಲ್ಲಿ 25, ಸೌದಿ ಅರೇಬಿಯಾದಲ್ಲಿ 11, ಮಲೇಷ್ಯಾದಲ್ಲಿ 6, ಕುವೈತ್‌ನಲ್ಲಿ 3 ಮತ್ತು ಇಂಡೋನೇಷ್ಯಾ, ಕತಾರ್, ಅಮೆರಿಕ ಮತ್ತು ಯೆಮೆನ್‌ನಲ್ಲಿ ತಲಾ ಒಬ್ಬರಿಗೆ ಮರಣದಂಡನೆ ವಿಧಿಸಲಾಗಿದೆ.

“ವಿದೇಶಿ ನ್ಯಾಯಾಲಯಗಳಿಂದ ಮರಣದಂಡನೆ ಸೇರಿದಂತೆ ಶಿಕ್ಷೆಗೊಳಗಾದ ಭಾರತೀಯ ಪ್ರಜೆಗಳಿಗೆ ವಿದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು/ಠಾಣೆಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿವೆ. ಭಾರತೀಯ ರಾಯಭಾರ ಕಚೇರಿಗಳು/ಠಾಣೆಗಳು ಜೈಲುಗಳಿಗೆ ಭೇಟಿ ನೀಡುವ ಮೂಲಕ ಮತ್ತು ನ್ಯಾಯಾಲಯಗಳು, ಜೈಲುಗಳು, ಪಬ್ಲಿಕ್ ಪ್ರಾಸಿಕ್ಯೂಟರ್‌ಗಳು ಮತ್ತು ಇತರ ಸಂಬಂಧಿತ ಸಂಸ್ಥೆಗಳೊಂದಿಗೆ ಅವರ ಪ್ರಕರಣಗಳನ್ನು ಫಾಲೋ ಅಪ್ ಮಾಡುವ ಮೂಲಕ ಕಾನ್ಸುಲರ್ ಪ್ರವೇಶವನ್ನು ಒದಗಿಸುತ್ತಿವೆ.

ಜೈಲಿನಲ್ಲಿರುವ ಭಾರತೀಯ ಪ್ರಜೆಗಳಿಗೆ ಮೇಲ್ಮನವಿ ಸಲ್ಲಿಸುವುದು, ಕ್ಷಮಾದಾನ ಅರ್ಜಿ ಸಲ್ಲಿಸುವುದು ಸೇರಿದಂತೆ ವಿವಿಧ ಕಾನೂನು ಪರಿಹಾರಗಳನ್ನು ಅನ್ವೇಷಿಸುವಲ್ಲಿ ಸಹಾಯ ಮಾಡಲಾಗುತ್ತಿದೆ” ಎಂದು ಸಚಿವರು ವಿವರಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ವಿದೇಶಗಳಲ್ಲಿ ಯಾವುದಾರು ಭಾರತೀಯ ಪ್ರಜೆಗಳನ್ನು ಗಲ್ಲಿಗೇರಿಸಲಾಗಿದೆಯೇ ಎಂದು ಸಚಿವ ಸಿಂಗ್ ಅವರಿಗೆ ಕೇಳಲಾಗಿತ್ತು. ಮಲೇಷ್ಯಾ, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾದಲ್ಲಿ ಮರಣದಂಡನೆ ವಿಧಿಸಲಾಗಿದೆ ಸಚಿವರು ದೃಢಪಡಿಸಿದ್ದಾರೆ.

2024 ರಲ್ಲಿ ಕುವೈತ್, ಸೌದಿ ಅರೇಬಿಯಾದಲ್ಲಿ ಮೂವರು ಮತ್ತು ಜಿಂಬಾಬ್ವೆಯಲ್ಲಿ ಒಬ್ಬರು ಭಾರತೀಯರನ್ನು ಗಲ್ಲಿಗೇರಿಸಲಾಗಿದೆ. 2023 ರಲ್ಲಿ, ಕುವೈತ್ ಮತ್ತು ಸೌದಿ ಅರೇಬಿಯಾದಲ್ಲಿ ತಲಾ ಐದು ಭಾರತೀಯರನ್ನು ಮತ್ತು ಮಲೇಷ್ಯಾದಲ್ಲಿ ಒಬ್ಬರನ್ನು ಗಲ್ಲಿಗೇರಿಸಲಾಗಿದೆ.

ಯುಎಇಗೆ ಸಂಬಂಧಿಸಿದಂತೆ, ಅಧಿಕಾರಿಗಳು ಅಂತಹ ಡೇಟಾವನ್ನು ಹಂಚಿಕೊಳ್ಳುವುದಿಲ್ಲ ಎಂದು ಸಚಿವ ಸಿಂಗ್ ಹೇಳಿದ್ದು, ಆದಾಗ್ಯೂ, ಭಾರತೀಯ ರಾಯಭಾರ ಕಚೇರಿಯಲ್ಲಿ ಲಭ್ಯವಿರುವ ಅನೌಪಚಾರಿಕ ಮಾಹಿತಿಯ ಪ್ರಕಾರ, 2020 ಮತ್ತು 2024 ರ ನಡುವೆ ಯಾವುದೇ ಭಾರತೀಯರನ್ನು ಗಲ್ಲಿಗೇರಿಸಲಾಗಿಲ್ಲ.

ಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...