Homeಮುಖಪುಟಯುಎಇಯಲ್ಲಿ 25 ಭಾರತೀಯರಿಗೆ ಮರಣದಂಡನೆ ಪ್ರಕಟ: ಕೇಂದ್ರ ಸರ್ಕಾರ

ಯುಎಇಯಲ್ಲಿ 25 ಭಾರತೀಯರಿಗೆ ಮರಣದಂಡನೆ ಪ್ರಕಟ: ಕೇಂದ್ರ ಸರ್ಕಾರ

- Advertisement -
- Advertisement -

ಯುಎಇಯಲ್ಲಿ ಮರಣದಂಡನೆ ಪ್ರಕಟಗೊಂಡಿರುವ ಭಾರತೀಯ ಪ್ರಜೆಗಳ ಸಂಖ್ಯೆ 25 ಆಗಿದ್ದು, ಇನ್ನಷ್ಟೇ ಶಿಕ್ಷೆ ಜಾರಿಯಾಗಬೇಕಿದೆ ಎಂದು ಕೇಂದ್ರ ಸರ್ಕಾರ ಗುರುವಾರ (ಮಾ.20) ಸಂಸತ್ತಿಗೆ ತಿಳಿಸಿದೆ.

ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ರಾಜ್ಯಸಭೆಯಲ್ಲಿ ಲಿಖಿತ ಪ್ರಶ್ನೆಗೆ ನೀಡಿದ ಉತ್ತರದಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.

“ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ವಿದೇಶಿ ಕಾರಾಗೃಹಗಳಲ್ಲಿ ಪ್ರಸ್ತುತ ವಿಚಾರಣಾಧೀನ ಕೈದಿಗಳು ಸೇರಿದಂತೆ ಭಾರತೀಯ ಕೈದಿಗಳ ಸಂಖ್ಯೆ 10,152” ಎಂದು ಸಿಂಗ್ ಹೇಳಿದ್ದಾರೆ.

ವಿದೇಶಗಳಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯರ ವಿವರಗಳು ಮತ್ತು ಅವರಿಗೆ ಸಹಾಯ ಮಾಡಲು ಭಾರತ ಸರ್ಕಾರ ಮಾಡಿದ ಪ್ರಯತ್ನಗಳ ಬಗ್ಗೆಯೂ ಪ್ರಶ್ನೆಯಲ್ಲಿ ಕೇಳಲಾಗಿತ್ತು.

“ವಿದೇಶಿ ಜೈಲುಗಳಲ್ಲಿರುವವರು ಸೇರಿದಂತೆ ವಿದೇಶಗಳಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ” ಎಂದು ಸಿಂಗ್ ತಿಳಿಸಿದ್ದಾರೆ.

ಭಾರತೀಯರಿಗೆ ಮರಣದಂಡನೆ ಶಿಕ್ಷೆ ಘೋಷಣೆಯಾಗಿರುವ, ಇನ್ನೂ ಜಾರಿಯಾಗದ ಎಂಟು ದೇಶಗಳ ಡೇಟಾವನ್ನು ಸಚಿವರು ಹಂಚಿಕೊಂಡಿದ್ದಾರೆ. ಅಂಕಿ ಅಂಶಗಳ ಪ್ರಕಾರ, ಯುಎಇಯಲ್ಲಿ 25, ಸೌದಿ ಅರೇಬಿಯಾದಲ್ಲಿ 11, ಮಲೇಷ್ಯಾದಲ್ಲಿ 6, ಕುವೈತ್‌ನಲ್ಲಿ 3 ಮತ್ತು ಇಂಡೋನೇಷ್ಯಾ, ಕತಾರ್, ಅಮೆರಿಕ ಮತ್ತು ಯೆಮೆನ್‌ನಲ್ಲಿ ತಲಾ ಒಬ್ಬರಿಗೆ ಮರಣದಂಡನೆ ವಿಧಿಸಲಾಗಿದೆ.

“ವಿದೇಶಿ ನ್ಯಾಯಾಲಯಗಳಿಂದ ಮರಣದಂಡನೆ ಸೇರಿದಂತೆ ಶಿಕ್ಷೆಗೊಳಗಾದ ಭಾರತೀಯ ಪ್ರಜೆಗಳಿಗೆ ವಿದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು/ಠಾಣೆಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿವೆ. ಭಾರತೀಯ ರಾಯಭಾರ ಕಚೇರಿಗಳು/ಠಾಣೆಗಳು ಜೈಲುಗಳಿಗೆ ಭೇಟಿ ನೀಡುವ ಮೂಲಕ ಮತ್ತು ನ್ಯಾಯಾಲಯಗಳು, ಜೈಲುಗಳು, ಪಬ್ಲಿಕ್ ಪ್ರಾಸಿಕ್ಯೂಟರ್‌ಗಳು ಮತ್ತು ಇತರ ಸಂಬಂಧಿತ ಸಂಸ್ಥೆಗಳೊಂದಿಗೆ ಅವರ ಪ್ರಕರಣಗಳನ್ನು ಫಾಲೋ ಅಪ್ ಮಾಡುವ ಮೂಲಕ ಕಾನ್ಸುಲರ್ ಪ್ರವೇಶವನ್ನು ಒದಗಿಸುತ್ತಿವೆ.

ಜೈಲಿನಲ್ಲಿರುವ ಭಾರತೀಯ ಪ್ರಜೆಗಳಿಗೆ ಮೇಲ್ಮನವಿ ಸಲ್ಲಿಸುವುದು, ಕ್ಷಮಾದಾನ ಅರ್ಜಿ ಸಲ್ಲಿಸುವುದು ಸೇರಿದಂತೆ ವಿವಿಧ ಕಾನೂನು ಪರಿಹಾರಗಳನ್ನು ಅನ್ವೇಷಿಸುವಲ್ಲಿ ಸಹಾಯ ಮಾಡಲಾಗುತ್ತಿದೆ” ಎಂದು ಸಚಿವರು ವಿವರಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ವಿದೇಶಗಳಲ್ಲಿ ಯಾವುದಾರು ಭಾರತೀಯ ಪ್ರಜೆಗಳನ್ನು ಗಲ್ಲಿಗೇರಿಸಲಾಗಿದೆಯೇ ಎಂದು ಸಚಿವ ಸಿಂಗ್ ಅವರಿಗೆ ಕೇಳಲಾಗಿತ್ತು. ಮಲೇಷ್ಯಾ, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾದಲ್ಲಿ ಮರಣದಂಡನೆ ವಿಧಿಸಲಾಗಿದೆ ಸಚಿವರು ದೃಢಪಡಿಸಿದ್ದಾರೆ.

2024 ರಲ್ಲಿ ಕುವೈತ್, ಸೌದಿ ಅರೇಬಿಯಾದಲ್ಲಿ ಮೂವರು ಮತ್ತು ಜಿಂಬಾಬ್ವೆಯಲ್ಲಿ ಒಬ್ಬರು ಭಾರತೀಯರನ್ನು ಗಲ್ಲಿಗೇರಿಸಲಾಗಿದೆ. 2023 ರಲ್ಲಿ, ಕುವೈತ್ ಮತ್ತು ಸೌದಿ ಅರೇಬಿಯಾದಲ್ಲಿ ತಲಾ ಐದು ಭಾರತೀಯರನ್ನು ಮತ್ತು ಮಲೇಷ್ಯಾದಲ್ಲಿ ಒಬ್ಬರನ್ನು ಗಲ್ಲಿಗೇರಿಸಲಾಗಿದೆ.

ಯುಎಇಗೆ ಸಂಬಂಧಿಸಿದಂತೆ, ಅಧಿಕಾರಿಗಳು ಅಂತಹ ಡೇಟಾವನ್ನು ಹಂಚಿಕೊಳ್ಳುವುದಿಲ್ಲ ಎಂದು ಸಚಿವ ಸಿಂಗ್ ಹೇಳಿದ್ದು, ಆದಾಗ್ಯೂ, ಭಾರತೀಯ ರಾಯಭಾರ ಕಚೇರಿಯಲ್ಲಿ ಲಭ್ಯವಿರುವ ಅನೌಪಚಾರಿಕ ಮಾಹಿತಿಯ ಪ್ರಕಾರ, 2020 ಮತ್ತು 2024 ರ ನಡುವೆ ಯಾವುದೇ ಭಾರತೀಯರನ್ನು ಗಲ್ಲಿಗೇರಿಸಲಾಗಿಲ್ಲ.

ಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...