Homeಮುಖಪುಟಯುಎಇಯಲ್ಲಿ 25 ಭಾರತೀಯರಿಗೆ ಮರಣದಂಡನೆ ಪ್ರಕಟ: ಕೇಂದ್ರ ಸರ್ಕಾರ

ಯುಎಇಯಲ್ಲಿ 25 ಭಾರತೀಯರಿಗೆ ಮರಣದಂಡನೆ ಪ್ರಕಟ: ಕೇಂದ್ರ ಸರ್ಕಾರ

- Advertisement -
- Advertisement -

ಯುಎಇಯಲ್ಲಿ ಮರಣದಂಡನೆ ಪ್ರಕಟಗೊಂಡಿರುವ ಭಾರತೀಯ ಪ್ರಜೆಗಳ ಸಂಖ್ಯೆ 25 ಆಗಿದ್ದು, ಇನ್ನಷ್ಟೇ ಶಿಕ್ಷೆ ಜಾರಿಯಾಗಬೇಕಿದೆ ಎಂದು ಕೇಂದ್ರ ಸರ್ಕಾರ ಗುರುವಾರ (ಮಾ.20) ಸಂಸತ್ತಿಗೆ ತಿಳಿಸಿದೆ.

ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ರಾಜ್ಯಸಭೆಯಲ್ಲಿ ಲಿಖಿತ ಪ್ರಶ್ನೆಗೆ ನೀಡಿದ ಉತ್ತರದಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.

“ಸಚಿವಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ವಿದೇಶಿ ಕಾರಾಗೃಹಗಳಲ್ಲಿ ಪ್ರಸ್ತುತ ವಿಚಾರಣಾಧೀನ ಕೈದಿಗಳು ಸೇರಿದಂತೆ ಭಾರತೀಯ ಕೈದಿಗಳ ಸಂಖ್ಯೆ 10,152” ಎಂದು ಸಿಂಗ್ ಹೇಳಿದ್ದಾರೆ.

ವಿದೇಶಗಳಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತೀಯರ ವಿವರಗಳು ಮತ್ತು ಅವರಿಗೆ ಸಹಾಯ ಮಾಡಲು ಭಾರತ ಸರ್ಕಾರ ಮಾಡಿದ ಪ್ರಯತ್ನಗಳ ಬಗ್ಗೆಯೂ ಪ್ರಶ್ನೆಯಲ್ಲಿ ಕೇಳಲಾಗಿತ್ತು.

“ವಿದೇಶಿ ಜೈಲುಗಳಲ್ಲಿರುವವರು ಸೇರಿದಂತೆ ವಿದೇಶಗಳಲ್ಲಿರುವ ಭಾರತೀಯ ಪ್ರಜೆಗಳ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ” ಎಂದು ಸಿಂಗ್ ತಿಳಿಸಿದ್ದಾರೆ.

ಭಾರತೀಯರಿಗೆ ಮರಣದಂಡನೆ ಶಿಕ್ಷೆ ಘೋಷಣೆಯಾಗಿರುವ, ಇನ್ನೂ ಜಾರಿಯಾಗದ ಎಂಟು ದೇಶಗಳ ಡೇಟಾವನ್ನು ಸಚಿವರು ಹಂಚಿಕೊಂಡಿದ್ದಾರೆ. ಅಂಕಿ ಅಂಶಗಳ ಪ್ರಕಾರ, ಯುಎಇಯಲ್ಲಿ 25, ಸೌದಿ ಅರೇಬಿಯಾದಲ್ಲಿ 11, ಮಲೇಷ್ಯಾದಲ್ಲಿ 6, ಕುವೈತ್‌ನಲ್ಲಿ 3 ಮತ್ತು ಇಂಡೋನೇಷ್ಯಾ, ಕತಾರ್, ಅಮೆರಿಕ ಮತ್ತು ಯೆಮೆನ್‌ನಲ್ಲಿ ತಲಾ ಒಬ್ಬರಿಗೆ ಮರಣದಂಡನೆ ವಿಧಿಸಲಾಗಿದೆ.

“ವಿದೇಶಿ ನ್ಯಾಯಾಲಯಗಳಿಂದ ಮರಣದಂಡನೆ ಸೇರಿದಂತೆ ಶಿಕ್ಷೆಗೊಳಗಾದ ಭಾರತೀಯ ಪ್ರಜೆಗಳಿಗೆ ವಿದೇಶದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು/ಠಾಣೆಗಳು ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುತ್ತಿವೆ. ಭಾರತೀಯ ರಾಯಭಾರ ಕಚೇರಿಗಳು/ಠಾಣೆಗಳು ಜೈಲುಗಳಿಗೆ ಭೇಟಿ ನೀಡುವ ಮೂಲಕ ಮತ್ತು ನ್ಯಾಯಾಲಯಗಳು, ಜೈಲುಗಳು, ಪಬ್ಲಿಕ್ ಪ್ರಾಸಿಕ್ಯೂಟರ್‌ಗಳು ಮತ್ತು ಇತರ ಸಂಬಂಧಿತ ಸಂಸ್ಥೆಗಳೊಂದಿಗೆ ಅವರ ಪ್ರಕರಣಗಳನ್ನು ಫಾಲೋ ಅಪ್ ಮಾಡುವ ಮೂಲಕ ಕಾನ್ಸುಲರ್ ಪ್ರವೇಶವನ್ನು ಒದಗಿಸುತ್ತಿವೆ.

ಜೈಲಿನಲ್ಲಿರುವ ಭಾರತೀಯ ಪ್ರಜೆಗಳಿಗೆ ಮೇಲ್ಮನವಿ ಸಲ್ಲಿಸುವುದು, ಕ್ಷಮಾದಾನ ಅರ್ಜಿ ಸಲ್ಲಿಸುವುದು ಸೇರಿದಂತೆ ವಿವಿಧ ಕಾನೂನು ಪರಿಹಾರಗಳನ್ನು ಅನ್ವೇಷಿಸುವಲ್ಲಿ ಸಹಾಯ ಮಾಡಲಾಗುತ್ತಿದೆ” ಎಂದು ಸಚಿವರು ವಿವರಿಸಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ವಿದೇಶಗಳಲ್ಲಿ ಯಾವುದಾರು ಭಾರತೀಯ ಪ್ರಜೆಗಳನ್ನು ಗಲ್ಲಿಗೇರಿಸಲಾಗಿದೆಯೇ ಎಂದು ಸಚಿವ ಸಿಂಗ್ ಅವರಿಗೆ ಕೇಳಲಾಗಿತ್ತು. ಮಲೇಷ್ಯಾ, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾದಲ್ಲಿ ಮರಣದಂಡನೆ ವಿಧಿಸಲಾಗಿದೆ ಸಚಿವರು ದೃಢಪಡಿಸಿದ್ದಾರೆ.

2024 ರಲ್ಲಿ ಕುವೈತ್, ಸೌದಿ ಅರೇಬಿಯಾದಲ್ಲಿ ಮೂವರು ಮತ್ತು ಜಿಂಬಾಬ್ವೆಯಲ್ಲಿ ಒಬ್ಬರು ಭಾರತೀಯರನ್ನು ಗಲ್ಲಿಗೇರಿಸಲಾಗಿದೆ. 2023 ರಲ್ಲಿ, ಕುವೈತ್ ಮತ್ತು ಸೌದಿ ಅರೇಬಿಯಾದಲ್ಲಿ ತಲಾ ಐದು ಭಾರತೀಯರನ್ನು ಮತ್ತು ಮಲೇಷ್ಯಾದಲ್ಲಿ ಒಬ್ಬರನ್ನು ಗಲ್ಲಿಗೇರಿಸಲಾಗಿದೆ.

ಯುಎಇಗೆ ಸಂಬಂಧಿಸಿದಂತೆ, ಅಧಿಕಾರಿಗಳು ಅಂತಹ ಡೇಟಾವನ್ನು ಹಂಚಿಕೊಳ್ಳುವುದಿಲ್ಲ ಎಂದು ಸಚಿವ ಸಿಂಗ್ ಹೇಳಿದ್ದು, ಆದಾಗ್ಯೂ, ಭಾರತೀಯ ರಾಯಭಾರ ಕಚೇರಿಯಲ್ಲಿ ಲಭ್ಯವಿರುವ ಅನೌಪಚಾರಿಕ ಮಾಹಿತಿಯ ಪ್ರಕಾರ, 2020 ಮತ್ತು 2024 ರ ನಡುವೆ ಯಾವುದೇ ಭಾರತೀಯರನ್ನು ಗಲ್ಲಿಗೇರಿಸಲಾಗಿಲ್ಲ.

ಅನ್ಯಾಯದ ಕ್ಷೇತ್ರ ಪುನರ್‌ವಿಂಗಡನೆ ರಾಜ್ಯಗಳನ್ನು ರಾಜಕೀಯವಾಗಿ ದುರ್ಬಲಗೊಳಿಸುತ್ತದೆ: ಎಂ.ಕೆ ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...