Homeಮುಖಪುಟನೂತನ ಸಂಸತ್ ಕಟ್ಟಡದ ಉದ್ಘಾಟನೆಗೆ 25 ಪಕ್ಷಗಳು ಭಾಗಿ: 21 ಪಕ್ಷಗಳಿಂದ ಕಾರ್ಯಕ್ರಮ ಬಹಿಷ್ಕಾರ

ನೂತನ ಸಂಸತ್ ಕಟ್ಟಡದ ಉದ್ಘಾಟನೆಗೆ 25 ಪಕ್ಷಗಳು ಭಾಗಿ: 21 ಪಕ್ಷಗಳಿಂದ ಕಾರ್ಯಕ್ರಮ ಬಹಿಷ್ಕಾರ

- Advertisement -
- Advertisement -

ಇಂದು ನವದೆಹಲಿಯಲ್ಲಿ ನಿರ್ಮಿಸಲಾಗಿರುವ ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರ ಜೊತೆಗಿದ್ದರು. ಒಂದು ಗಂಟೆಗಳ ಪೂಜೆ ನಡೆಯಿತು. ಇದೇ ಸಂದರ್ಭದಲ್ಲಿ ಸರ್ವಧರ್ಮಗಳ ಪ್ರಾರ್ಥನೆ ಮತ್ತು ಪ್ರಧಾನಿ ಮೋದಿಗೆ ಸೆಂಗೋಲ್ ನೀಡಲಾಯಿತು.

ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯಪಾಲರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಬಿಜೆಪ ಸೇರಿ ದೇಶದ 25 ಪಕ್ಷಗಳ ಪ್ರತಿನಿಧಿಗಳು ಇಂದಿನ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಎನ್‌ಡಿಎ ಮೈತ್ರಿಕೂಟದಲ್ಲಿಲ್ಲದ ಹಲವು ಪಕ್ಷಗಳು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. ಅವುಗಳೆಂದರೆ ಬಿಜು ಜನತಾ ದಳ (ಬಿಜೆಡಿ), ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್), ಬಹುಜನ ಸಮಾಜ ಪಕ್ಷ (ಬಿಎಸ್‌ಪಿ), ಶಿರೋಮಣಿ ಅಕಾಲಿದಳ (ಎಸ್‌ಎಡಿ), ಜನತಾ ದಳ (ಜಾತ್ಯತೀತ), ತೆಲುಗು ದೇಶಂ ಪಕ್ಷ (ಟಿಡಿಪಿ), ಮತ್ತು ವೈಎಸ್‌ಆರ್ ಕಾಂಗ್ರೆಸ್ ಪಕ್ಷ ( YSRCP).

ಕಾರ್ಯಕ್ರಮ ಬಹಿಷ್ಕರಿಸಿದವರು

ಇಂದಿನ ನೂತನ ಸಂಸತ್ ಕಟ್ಟಡವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮುರವರು ಉದ್ಘಾಟಿಸಬೇಕೆ ಹೊರತು ಪ್ರಧಾನಿ ಮೋದಿಯಲ್ಲ ಎಂದು ಕಾಂಗ್ರೆಸ್ ಸೇರಿ ಹಲವು ವಿರೋಧ ಪಕ್ಷಗಳು ಕಾರ್ಯಕ್ರಮ ಬಹಿಷ್ಕರಿಸಿವೆ. ರಾಷ್ಟ್ರಾಧ್ಯಕ್ಷರು ದೇಶದ ಮುಖ್ಯಸ್ಥರಾಗಿ ಉದ್ಘಾಟಿಸುವ ಗೌರವ ಪಡೆಯಬೇಕಿತ್ತು. ಆದರೆ ಅವರನ್ನು ಆಹ್ವಾನಿಸದ ಕಾರಣ, ನರೇಂದ್ರ ಮೋದಿ ಸರ್ಕಾರವು ಅಧ್ಯಕ್ಷರ ಕುರ್ಚಿಗೆ ಅಗೌರವ ತೋರುತ್ತಿದೆ ಎಂದು ಈ ಪಕ್ಷಗಳು ಆರೋಪಿಸಿವೆ.

ಕಾಂಗ್ರೆಸ್, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಆಮ್ ಆದ್ಮಿ ಪಕ್ಷ (ಎಎಪಿ), ಶಿವಸೇನೆ (ಯುಬಿಟಿ), ಸಮಾಜವಾದಿ ಪಕ್ಷ (ಎಸ್‌ಪಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ), ಸಿಪಿಐ(ಎಂ), ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕೇರಳ ಕಾಂಗ್ರೆಸ್ (ಮಣಿ), ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ), ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ತೃಣಮೂಲ ಕಾಂಗ್ರೆಸ್ (ಟಿಎಂಸಿ), ಜನತಾ ದಳ (ಯುನೈಟೆಡ್), ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ), ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML), ನ್ಯಾಷನಲ್ ಕಾನ್ಫರೆನ್ಸ್ (NC), ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP), ಭಾರತ ರಾಷ್ಟ್ರ ಸಮಿತಿ (BRS), ಮತ್ತು ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK) ಪಕ್ಷಗಳು ಕಾರ್ಯಕ್ರಮದಿಂದ ದೂರ ಉಳಿದಿವೆ.

ಇಂದಿನ ಕಾರ್ಯಕ್ರಮದಲ್ಲಿ 382 ಲೋಕಸಭಾ ಸದಸ್ಯರು, 131 ರಾಜ್ಯಸಭಾ ಸದಸ್ಯರು ಭಾಗಿಯಾದರೆ, ವಿರೋಧ ಪಕ್ಷಗಳ 156 ಲೋಕಸಭಾ ಸದಸ್ಯರು ಮತ್ತು 104 ರಾಜ್ಯಸಭಾ ಸದಸ್ಯರು ಕಾರ್ಯಕ್ರಮ ಬಹಿಷ್ಕರಿಸಿದ್ದಾರೆ.

ಇದನ್ನೂ ಓದಿ; ಇಂದು ನೂತನ ಸಂಸತ್ ಕಟ್ಟಡದ ಎದುರು ಕುಸ್ತಿಪಟುಗಳ ಮಹಿಳಾ ಮಹಾ ಪಂಚಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...