Homeಮುಖಪುಟಬಿಜೆಪಿ ಜೊತೆಗಿನ ಮೈತ್ರಿಯಿಂದ 25 ವರ್ಷಗಳು ವ್ಯರ್ಥವಾದವು: ಉದ್ಧವ್ ಠಾಕ್ರೆ

ಬಿಜೆಪಿ ಜೊತೆಗಿನ ಮೈತ್ರಿಯಿಂದ 25 ವರ್ಷಗಳು ವ್ಯರ್ಥವಾದವು: ಉದ್ಧವ್ ಠಾಕ್ರೆ

"ಶಿವಸೇನೆಯು ಬಿಜೆಪಿಯನ್ನು ತೊರೆದಿದೆಯೇ ಹೊರತು ಹಿಂದುತ್ವದ ಸಿದ್ಧಾಂತವನ್ನಲ್ಲ" ಎಂದು ಮಹಾರಾಷ್ಟ್ರದ ಸಿಎಂ ಸ್ಪಷ್ಟಪಡಿಸಿದ್ದಾರೆ.

- Advertisement -
- Advertisement -

ಮುಂಬೈ: ಬಿಜೆಪಿಯು ತನ್ನ ರಾಜಕೀಯ ಅನುಕೂಲಕ್ಕಾಗಿ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು, “ನಮ್ಮ ಪಕ್ಷವು ರಾಜ್ಯದ ಹೊರಗೆ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತದೆ, ರಾಷ್ಟ್ರ ರಾಜಕಾರಣಕ್ಕೂ ಕಾಲಿಡಲಿದೆ” ಎಂದು ಭಾನುವಾರ ಹೇಳಿದ್ದಾರೆ.

ಅಕಾಲಿದಳ ಮತ್ತು ಶಿವಸೇನೆಯಂತಹ ಪಕ್ಷಗಳು ಈಗಾಗಲೇ ಹೊರನಡೆದಿರುವುದರಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಶಕ್ತಿ ಕುಗ್ಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪಕ್ಷದ ಸಂಸ್ಥಾಪಕ ಮತ್ತು ಅವರ ತಂದೆ ಬಾಳ ಠಾಕ್ರೆ ಅವರ 96ನೇ ಜನ್ಮ ವಾರ್ಷಿಕೋತ್ಸವದಂದು ಶಿವಸೇನೆ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್‌ ಠಾಕ್ರೆ, ಅಧಿಕಾರದ ಮೂಲಕ ಹಿಂದುತ್ವದ ಕಾರ್ಯಸೂಚಿಯನ್ನು ಮುಂದಕ್ಕೆ ಕೊಂಡೊಯ್ಯಲು ಸೇನೆಯು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾಗಿ ಎಂದು ತಿಳಿಸಿದ್ದಾರೆ.

ಹಿಂದುತ್ವಕ್ಕೆ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತು. ಸೇನೆ ಎಂದಿಗೂ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿಲ್ಲ. ಶಿವಸೇನೆ ಬಿಜೆಪಿಯನ್ನು ಬಿಟ್ಟಿದೆಯೇ ಹೊರತು ಹಿಂದುತ್ವವನ್ನಲ್ಲ. ಬಿಜೆಪಿಯ ಅವಕಾಶವಾದಿ ಹಿಂದುತ್ವ ಅಧಿಕಾರಕ್ಕಾಗಿ ಮಾತ್ರ ಎಂದು ನಾನು ನಂಬುತ್ತೇನೆ ಎಂದು ಹೇಳಿದ್ದಾರೆ.

ಶಿವಸೇನೆಯು ಬಿಜೆಪಿಯೊಂದಿಗೆ ಮಿತ್ರಪಕ್ಷವಾಗಿ ಕಳೆದ 25 ವರ್ಷಗಳನ್ನು ವ್ಯರ್ಥ ಮಾಡಿಕೊಂಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಛತ್ತೀಸ್‌ಗಡ: ಭಾರತವನ್ನು ತೀವ್ರವಾದಿ ಹಿಂದೂ ರಾಷ್ಟ್ರ ಮಾಡುವ ಪ್ರತಿಜ್ಞೆ ವಿಡಿಯೋ ವೈರಲ್: ಪ್ರಕರಣ ದಾಖಲು

2019ರ ಮಹಾರಾಷ್ಟ್ರ ಚುನಾವಣೆಯ ನಂತರ ಶಿವಸೇನೆಯು ಬಿಜೆಪಿಯಿಂದ ಹೊರಗುಳಿದು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ರಚಿಸಲು ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿತು.

“ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ನಾವು ಬಿಜೆಪಿಯನ್ನು ಪೂರ್ಣ ಹೃದಯದಿಂದ ಬೆಂಬಲಿಸಿದೆವು. ಮಹಾರಾಷ್ಟ್ರದಲ್ಲಿ ನಾವಿದ್ದರೆ, ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂಬು ಭಾವಿಸಿದ್ದೆವು. ಆದರೆ ನಮಗೆ ದ್ರೋಹ ಬಗೆದರು. ನಮ್ಮ ಮನೆಯಲ್ಲಿ ನಮ್ಮನ್ನು ನಾಶಮಾಡಲು ಪ್ರಯತ್ನಿಸಲಾಯಿತು. ಆದ್ದರಿಂದ ನಾವು ಉಲ್ಟಾ ಹೊಡೆಯಬೇಕಾಯಿತು” ಎನ್ನುವ ಮೂಲಕ 2019ರ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ತಮ್ಮ ನಿರ್ಧಾರವನ್ನು ಠಾಕ್ರೆ ಸಮರ್ಥಿಸಿದ್ದಾರೆ.

ಬಿಜೆಪಿ ತನ್ನ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಮಿತ್ರಪಕ್ಷಗಳನ್ನು ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಶಿವಸೇನೆ ಅಧಿಕಾರಕ್ಕಾಗಿ ಹಿಂದುತ್ವವನ್ನು ತ್ಯಜಿಸಿದೆ ಎಂಬ ಬಿಜೆಪಿಯ ವ್ಯಂಗ್ಯಕ್ಕೆ ಪ್ರತಿಕ್ರಿಯಿಸಿದ ಅವರು, “ನಮ್ಮ ಪಕ್ಷವು ಬಿಜೆಪಿಯನ್ನು ತೊರೆದಿದೆಯೇ ಹೊರತು ಹಿಂದುತ್ವದ ಸಿದ್ಧಾಂತವನ್ನಲ್ಲ” ಎಂದು ಉತ್ತರಿಸಿದ್ದಾರೆ.

“ಬಿಜೆಪಿ ಎಂದರೆ ಹಿಂದುತ್ವವಲ್ಲ, ಶಿವಸೇನೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು 25 ವರ್ಷಗಳನ್ನು ವ್ಯರ್ಥ ಮಾಡಿಕೊಂಡಿದೆ ಎಂಬ ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಶಿವಸೇನೆ ಕಳಪೆ ಪ್ರದರ್ಶನ ನೀಡಿ ನಾಲ್ಕನೇ ಸ್ಥಾನ ಗಳಿಸಿದ ಇತ್ತೀಚಿನ ನಗರ ಪಂಚಾಯತ್ ಚುನಾವಣೆಗಳನ್ನು ಉಲ್ಲೇಖಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ, ತಾವು ಸೇರಿದಂತೆ ಶಿವಸೇನೆಯ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಮತ್ತು ಅದಕ್ಕೆ ತಕ್ಕಂತೆ ಪ್ರಚಾರ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ನಮ್ಮ ಹೊಸ ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ತಳಮಟ್ಟದಲ್ಲಿ ಸಂಸ್ಥೆಗಳನ್ನು ನಿರ್ಮಿಸಿವೆ. ನಾವೂ ಆ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಕಳೆದ ಎರಡು ವರ್ಷಗಳಲ್ಲಿ ದ್ವೈವಾರ್ಷಿಕ ಚುನಾವಣೆಯಲ್ಲಿ ನಾವು ಹೊಂದಿದ್ದ ಎರಡು ವಿಧಾನ ಪರಿಷತ್ ಸ್ಥಾನಗಳನ್ನು ಕಳೆದುಕೊಂಡಿದ್ದೇವೆ. ನಮ್ಮ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಪಕ್ಷದ ಸದಸ್ಯರಿಗೆ ಕಿವಿಮಾತು ಹೇಳಿದ್ದಾರೆ.

ಈ ಹಿನ್ನಡೆಯ ಹೊರತಾಗಿಯೂ, ಸೇನೆಯು ರಾಷ್ಟ್ರೀಯ ಮಟ್ಟದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ದೆಹಲಿಯಲ್ಲಿ ಅಧಿಕಾರವನ್ನು ಹಿಡಿಯುವ ಸಂಕಲ್ಪ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಸಹಕಾರಿ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಂಸ್ಥೆಗಳನ್ನು ನಿರ್ಮಿಸುವತ್ತ ಗಮನಹರಿಸುವಂತೆ ಶಿವ ಸೇನಾ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಮನವಿ ಮಾಡಿದ್ದಾರೆ.

ನಮ್ಮ ಕೈ ಬಲವಿಲ್ಲದಿದ್ದರೆ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ದೇಶದಲ್ಲಿ 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು: NITI ಆಯೋಗದ ಉಪಾಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...