Homeಮುಖಪುಟಬಿಜೆಪಿ ಜೊತೆಗಿನ ಮೈತ್ರಿಯಿಂದ 25 ವರ್ಷಗಳು ವ್ಯರ್ಥವಾದವು: ಉದ್ಧವ್ ಠಾಕ್ರೆ

ಬಿಜೆಪಿ ಜೊತೆಗಿನ ಮೈತ್ರಿಯಿಂದ 25 ವರ್ಷಗಳು ವ್ಯರ್ಥವಾದವು: ಉದ್ಧವ್ ಠಾಕ್ರೆ

"ಶಿವಸೇನೆಯು ಬಿಜೆಪಿಯನ್ನು ತೊರೆದಿದೆಯೇ ಹೊರತು ಹಿಂದುತ್ವದ ಸಿದ್ಧಾಂತವನ್ನಲ್ಲ" ಎಂದು ಮಹಾರಾಷ್ಟ್ರದ ಸಿಎಂ ಸ್ಪಷ್ಟಪಡಿಸಿದ್ದಾರೆ.

- Advertisement -
- Advertisement -

ಮುಂಬೈ: ಬಿಜೆಪಿಯು ತನ್ನ ರಾಜಕೀಯ ಅನುಕೂಲಕ್ಕಾಗಿ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು, “ನಮ್ಮ ಪಕ್ಷವು ರಾಜ್ಯದ ಹೊರಗೆ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತದೆ, ರಾಷ್ಟ್ರ ರಾಜಕಾರಣಕ್ಕೂ ಕಾಲಿಡಲಿದೆ” ಎಂದು ಭಾನುವಾರ ಹೇಳಿದ್ದಾರೆ.

ಅಕಾಲಿದಳ ಮತ್ತು ಶಿವಸೇನೆಯಂತಹ ಪಕ್ಷಗಳು ಈಗಾಗಲೇ ಹೊರನಡೆದಿರುವುದರಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಶಕ್ತಿ ಕುಗ್ಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪಕ್ಷದ ಸಂಸ್ಥಾಪಕ ಮತ್ತು ಅವರ ತಂದೆ ಬಾಳ ಠಾಕ್ರೆ ಅವರ 96ನೇ ಜನ್ಮ ವಾರ್ಷಿಕೋತ್ಸವದಂದು ಶಿವಸೇನೆ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್‌ ಠಾಕ್ರೆ, ಅಧಿಕಾರದ ಮೂಲಕ ಹಿಂದುತ್ವದ ಕಾರ್ಯಸೂಚಿಯನ್ನು ಮುಂದಕ್ಕೆ ಕೊಂಡೊಯ್ಯಲು ಸೇನೆಯು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾಗಿ ಎಂದು ತಿಳಿಸಿದ್ದಾರೆ.

ಹಿಂದುತ್ವಕ್ಕೆ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತು. ಸೇನೆ ಎಂದಿಗೂ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿಲ್ಲ. ಶಿವಸೇನೆ ಬಿಜೆಪಿಯನ್ನು ಬಿಟ್ಟಿದೆಯೇ ಹೊರತು ಹಿಂದುತ್ವವನ್ನಲ್ಲ. ಬಿಜೆಪಿಯ ಅವಕಾಶವಾದಿ ಹಿಂದುತ್ವ ಅಧಿಕಾರಕ್ಕಾಗಿ ಮಾತ್ರ ಎಂದು ನಾನು ನಂಬುತ್ತೇನೆ ಎಂದು ಹೇಳಿದ್ದಾರೆ.

ಶಿವಸೇನೆಯು ಬಿಜೆಪಿಯೊಂದಿಗೆ ಮಿತ್ರಪಕ್ಷವಾಗಿ ಕಳೆದ 25 ವರ್ಷಗಳನ್ನು ವ್ಯರ್ಥ ಮಾಡಿಕೊಂಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಛತ್ತೀಸ್‌ಗಡ: ಭಾರತವನ್ನು ತೀವ್ರವಾದಿ ಹಿಂದೂ ರಾಷ್ಟ್ರ ಮಾಡುವ ಪ್ರತಿಜ್ಞೆ ವಿಡಿಯೋ ವೈರಲ್: ಪ್ರಕರಣ ದಾಖಲು

2019ರ ಮಹಾರಾಷ್ಟ್ರ ಚುನಾವಣೆಯ ನಂತರ ಶಿವಸೇನೆಯು ಬಿಜೆಪಿಯಿಂದ ಹೊರಗುಳಿದು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ರಚಿಸಲು ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿತು.

“ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ನಾವು ಬಿಜೆಪಿಯನ್ನು ಪೂರ್ಣ ಹೃದಯದಿಂದ ಬೆಂಬಲಿಸಿದೆವು. ಮಹಾರಾಷ್ಟ್ರದಲ್ಲಿ ನಾವಿದ್ದರೆ, ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂಬು ಭಾವಿಸಿದ್ದೆವು. ಆದರೆ ನಮಗೆ ದ್ರೋಹ ಬಗೆದರು. ನಮ್ಮ ಮನೆಯಲ್ಲಿ ನಮ್ಮನ್ನು ನಾಶಮಾಡಲು ಪ್ರಯತ್ನಿಸಲಾಯಿತು. ಆದ್ದರಿಂದ ನಾವು ಉಲ್ಟಾ ಹೊಡೆಯಬೇಕಾಯಿತು” ಎನ್ನುವ ಮೂಲಕ 2019ರ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ತಮ್ಮ ನಿರ್ಧಾರವನ್ನು ಠಾಕ್ರೆ ಸಮರ್ಥಿಸಿದ್ದಾರೆ.

ಬಿಜೆಪಿ ತನ್ನ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಮಿತ್ರಪಕ್ಷಗಳನ್ನು ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಶಿವಸೇನೆ ಅಧಿಕಾರಕ್ಕಾಗಿ ಹಿಂದುತ್ವವನ್ನು ತ್ಯಜಿಸಿದೆ ಎಂಬ ಬಿಜೆಪಿಯ ವ್ಯಂಗ್ಯಕ್ಕೆ ಪ್ರತಿಕ್ರಿಯಿಸಿದ ಅವರು, “ನಮ್ಮ ಪಕ್ಷವು ಬಿಜೆಪಿಯನ್ನು ತೊರೆದಿದೆಯೇ ಹೊರತು ಹಿಂದುತ್ವದ ಸಿದ್ಧಾಂತವನ್ನಲ್ಲ” ಎಂದು ಉತ್ತರಿಸಿದ್ದಾರೆ.

“ಬಿಜೆಪಿ ಎಂದರೆ ಹಿಂದುತ್ವವಲ್ಲ, ಶಿವಸೇನೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು 25 ವರ್ಷಗಳನ್ನು ವ್ಯರ್ಥ ಮಾಡಿಕೊಂಡಿದೆ ಎಂಬ ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಶಿವಸೇನೆ ಕಳಪೆ ಪ್ರದರ್ಶನ ನೀಡಿ ನಾಲ್ಕನೇ ಸ್ಥಾನ ಗಳಿಸಿದ ಇತ್ತೀಚಿನ ನಗರ ಪಂಚಾಯತ್ ಚುನಾವಣೆಗಳನ್ನು ಉಲ್ಲೇಖಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ, ತಾವು ಸೇರಿದಂತೆ ಶಿವಸೇನೆಯ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಮತ್ತು ಅದಕ್ಕೆ ತಕ್ಕಂತೆ ಪ್ರಚಾರ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ನಮ್ಮ ಹೊಸ ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ತಳಮಟ್ಟದಲ್ಲಿ ಸಂಸ್ಥೆಗಳನ್ನು ನಿರ್ಮಿಸಿವೆ. ನಾವೂ ಆ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಕಳೆದ ಎರಡು ವರ್ಷಗಳಲ್ಲಿ ದ್ವೈವಾರ್ಷಿಕ ಚುನಾವಣೆಯಲ್ಲಿ ನಾವು ಹೊಂದಿದ್ದ ಎರಡು ವಿಧಾನ ಪರಿಷತ್ ಸ್ಥಾನಗಳನ್ನು ಕಳೆದುಕೊಂಡಿದ್ದೇವೆ. ನಮ್ಮ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಪಕ್ಷದ ಸದಸ್ಯರಿಗೆ ಕಿವಿಮಾತು ಹೇಳಿದ್ದಾರೆ.

ಈ ಹಿನ್ನಡೆಯ ಹೊರತಾಗಿಯೂ, ಸೇನೆಯು ರಾಷ್ಟ್ರೀಯ ಮಟ್ಟದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ದೆಹಲಿಯಲ್ಲಿ ಅಧಿಕಾರವನ್ನು ಹಿಡಿಯುವ ಸಂಕಲ್ಪ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಸಹಕಾರಿ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಂಸ್ಥೆಗಳನ್ನು ನಿರ್ಮಿಸುವತ್ತ ಗಮನಹರಿಸುವಂತೆ ಶಿವ ಸೇನಾ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಮನವಿ ಮಾಡಿದ್ದಾರೆ.

ನಮ್ಮ ಕೈ ಬಲವಿಲ್ಲದಿದ್ದರೆ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ದೇಶದಲ್ಲಿ 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು: NITI ಆಯೋಗದ ಉಪಾಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...