Homeಮುಖಪುಟಬಿಜೆಪಿ ಜೊತೆಗಿನ ಮೈತ್ರಿಯಿಂದ 25 ವರ್ಷಗಳು ವ್ಯರ್ಥವಾದವು: ಉದ್ಧವ್ ಠಾಕ್ರೆ

ಬಿಜೆಪಿ ಜೊತೆಗಿನ ಮೈತ್ರಿಯಿಂದ 25 ವರ್ಷಗಳು ವ್ಯರ್ಥವಾದವು: ಉದ್ಧವ್ ಠಾಕ್ರೆ

"ಶಿವಸೇನೆಯು ಬಿಜೆಪಿಯನ್ನು ತೊರೆದಿದೆಯೇ ಹೊರತು ಹಿಂದುತ್ವದ ಸಿದ್ಧಾಂತವನ್ನಲ್ಲ" ಎಂದು ಮಹಾರಾಷ್ಟ್ರದ ಸಿಎಂ ಸ್ಪಷ್ಟಪಡಿಸಿದ್ದಾರೆ.

- Advertisement -
- Advertisement -

ಮುಂಬೈ: ಬಿಜೆಪಿಯು ತನ್ನ ರಾಜಕೀಯ ಅನುಕೂಲಕ್ಕಾಗಿ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು, “ನಮ್ಮ ಪಕ್ಷವು ರಾಜ್ಯದ ಹೊರಗೆ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತದೆ, ರಾಷ್ಟ್ರ ರಾಜಕಾರಣಕ್ಕೂ ಕಾಲಿಡಲಿದೆ” ಎಂದು ಭಾನುವಾರ ಹೇಳಿದ್ದಾರೆ.

ಅಕಾಲಿದಳ ಮತ್ತು ಶಿವಸೇನೆಯಂತಹ ಪಕ್ಷಗಳು ಈಗಾಗಲೇ ಹೊರನಡೆದಿರುವುದರಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಶಕ್ತಿ ಕುಗ್ಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪಕ್ಷದ ಸಂಸ್ಥಾಪಕ ಮತ್ತು ಅವರ ತಂದೆ ಬಾಳ ಠಾಕ್ರೆ ಅವರ 96ನೇ ಜನ್ಮ ವಾರ್ಷಿಕೋತ್ಸವದಂದು ಶಿವಸೇನೆ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್‌ ಠಾಕ್ರೆ, ಅಧಿಕಾರದ ಮೂಲಕ ಹಿಂದುತ್ವದ ಕಾರ್ಯಸೂಚಿಯನ್ನು ಮುಂದಕ್ಕೆ ಕೊಂಡೊಯ್ಯಲು ಸೇನೆಯು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾಗಿ ಎಂದು ತಿಳಿಸಿದ್ದಾರೆ.

ಹಿಂದುತ್ವಕ್ಕೆ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತು. ಸೇನೆ ಎಂದಿಗೂ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿಲ್ಲ. ಶಿವಸೇನೆ ಬಿಜೆಪಿಯನ್ನು ಬಿಟ್ಟಿದೆಯೇ ಹೊರತು ಹಿಂದುತ್ವವನ್ನಲ್ಲ. ಬಿಜೆಪಿಯ ಅವಕಾಶವಾದಿ ಹಿಂದುತ್ವ ಅಧಿಕಾರಕ್ಕಾಗಿ ಮಾತ್ರ ಎಂದು ನಾನು ನಂಬುತ್ತೇನೆ ಎಂದು ಹೇಳಿದ್ದಾರೆ.

ಶಿವಸೇನೆಯು ಬಿಜೆಪಿಯೊಂದಿಗೆ ಮಿತ್ರಪಕ್ಷವಾಗಿ ಕಳೆದ 25 ವರ್ಷಗಳನ್ನು ವ್ಯರ್ಥ ಮಾಡಿಕೊಂಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಛತ್ತೀಸ್‌ಗಡ: ಭಾರತವನ್ನು ತೀವ್ರವಾದಿ ಹಿಂದೂ ರಾಷ್ಟ್ರ ಮಾಡುವ ಪ್ರತಿಜ್ಞೆ ವಿಡಿಯೋ ವೈರಲ್: ಪ್ರಕರಣ ದಾಖಲು

2019ರ ಮಹಾರಾಷ್ಟ್ರ ಚುನಾವಣೆಯ ನಂತರ ಶಿವಸೇನೆಯು ಬಿಜೆಪಿಯಿಂದ ಹೊರಗುಳಿದು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ರಚಿಸಲು ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿತು.

“ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ನಾವು ಬಿಜೆಪಿಯನ್ನು ಪೂರ್ಣ ಹೃದಯದಿಂದ ಬೆಂಬಲಿಸಿದೆವು. ಮಹಾರಾಷ್ಟ್ರದಲ್ಲಿ ನಾವಿದ್ದರೆ, ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂಬು ಭಾವಿಸಿದ್ದೆವು. ಆದರೆ ನಮಗೆ ದ್ರೋಹ ಬಗೆದರು. ನಮ್ಮ ಮನೆಯಲ್ಲಿ ನಮ್ಮನ್ನು ನಾಶಮಾಡಲು ಪ್ರಯತ್ನಿಸಲಾಯಿತು. ಆದ್ದರಿಂದ ನಾವು ಉಲ್ಟಾ ಹೊಡೆಯಬೇಕಾಯಿತು” ಎನ್ನುವ ಮೂಲಕ 2019ರ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ತಮ್ಮ ನಿರ್ಧಾರವನ್ನು ಠಾಕ್ರೆ ಸಮರ್ಥಿಸಿದ್ದಾರೆ.

ಬಿಜೆಪಿ ತನ್ನ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಮಿತ್ರಪಕ್ಷಗಳನ್ನು ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಶಿವಸೇನೆ ಅಧಿಕಾರಕ್ಕಾಗಿ ಹಿಂದುತ್ವವನ್ನು ತ್ಯಜಿಸಿದೆ ಎಂಬ ಬಿಜೆಪಿಯ ವ್ಯಂಗ್ಯಕ್ಕೆ ಪ್ರತಿಕ್ರಿಯಿಸಿದ ಅವರು, “ನಮ್ಮ ಪಕ್ಷವು ಬಿಜೆಪಿಯನ್ನು ತೊರೆದಿದೆಯೇ ಹೊರತು ಹಿಂದುತ್ವದ ಸಿದ್ಧಾಂತವನ್ನಲ್ಲ” ಎಂದು ಉತ್ತರಿಸಿದ್ದಾರೆ.

“ಬಿಜೆಪಿ ಎಂದರೆ ಹಿಂದುತ್ವವಲ್ಲ, ಶಿವಸೇನೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು 25 ವರ್ಷಗಳನ್ನು ವ್ಯರ್ಥ ಮಾಡಿಕೊಂಡಿದೆ ಎಂಬ ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಶಿವಸೇನೆ ಕಳಪೆ ಪ್ರದರ್ಶನ ನೀಡಿ ನಾಲ್ಕನೇ ಸ್ಥಾನ ಗಳಿಸಿದ ಇತ್ತೀಚಿನ ನಗರ ಪಂಚಾಯತ್ ಚುನಾವಣೆಗಳನ್ನು ಉಲ್ಲೇಖಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ, ತಾವು ಸೇರಿದಂತೆ ಶಿವಸೇನೆಯ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಮತ್ತು ಅದಕ್ಕೆ ತಕ್ಕಂತೆ ಪ್ರಚಾರ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ನಮ್ಮ ಹೊಸ ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ತಳಮಟ್ಟದಲ್ಲಿ ಸಂಸ್ಥೆಗಳನ್ನು ನಿರ್ಮಿಸಿವೆ. ನಾವೂ ಆ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಕಳೆದ ಎರಡು ವರ್ಷಗಳಲ್ಲಿ ದ್ವೈವಾರ್ಷಿಕ ಚುನಾವಣೆಯಲ್ಲಿ ನಾವು ಹೊಂದಿದ್ದ ಎರಡು ವಿಧಾನ ಪರಿಷತ್ ಸ್ಥಾನಗಳನ್ನು ಕಳೆದುಕೊಂಡಿದ್ದೇವೆ. ನಮ್ಮ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಪಕ್ಷದ ಸದಸ್ಯರಿಗೆ ಕಿವಿಮಾತು ಹೇಳಿದ್ದಾರೆ.

ಈ ಹಿನ್ನಡೆಯ ಹೊರತಾಗಿಯೂ, ಸೇನೆಯು ರಾಷ್ಟ್ರೀಯ ಮಟ್ಟದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ದೆಹಲಿಯಲ್ಲಿ ಅಧಿಕಾರವನ್ನು ಹಿಡಿಯುವ ಸಂಕಲ್ಪ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಸಹಕಾರಿ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಂಸ್ಥೆಗಳನ್ನು ನಿರ್ಮಿಸುವತ್ತ ಗಮನಹರಿಸುವಂತೆ ಶಿವ ಸೇನಾ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಮನವಿ ಮಾಡಿದ್ದಾರೆ.

ನಮ್ಮ ಕೈ ಬಲವಿಲ್ಲದಿದ್ದರೆ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ದೇಶದಲ್ಲಿ 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು: NITI ಆಯೋಗದ ಉಪಾಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...