Homeಮುಖಪುಟಬಿಜೆಪಿ ಜೊತೆಗಿನ ಮೈತ್ರಿಯಿಂದ 25 ವರ್ಷಗಳು ವ್ಯರ್ಥವಾದವು: ಉದ್ಧವ್ ಠಾಕ್ರೆ

ಬಿಜೆಪಿ ಜೊತೆಗಿನ ಮೈತ್ರಿಯಿಂದ 25 ವರ್ಷಗಳು ವ್ಯರ್ಥವಾದವು: ಉದ್ಧವ್ ಠಾಕ್ರೆ

"ಶಿವಸೇನೆಯು ಬಿಜೆಪಿಯನ್ನು ತೊರೆದಿದೆಯೇ ಹೊರತು ಹಿಂದುತ್ವದ ಸಿದ್ಧಾಂತವನ್ನಲ್ಲ" ಎಂದು ಮಹಾರಾಷ್ಟ್ರದ ಸಿಎಂ ಸ್ಪಷ್ಟಪಡಿಸಿದ್ದಾರೆ.

- Advertisement -
- Advertisement -

ಮುಂಬೈ: ಬಿಜೆಪಿಯು ತನ್ನ ರಾಜಕೀಯ ಅನುಕೂಲಕ್ಕಾಗಿ ಹಿಂದುತ್ವವನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಮತ್ತು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಅವರು, “ನಮ್ಮ ಪಕ್ಷವು ರಾಜ್ಯದ ಹೊರಗೆ ತನ್ನ ಹೆಜ್ಜೆಗುರುತನ್ನು ವಿಸ್ತರಿಸಲು ಪ್ರಯತ್ನಿಸುತ್ತದೆ, ರಾಷ್ಟ್ರ ರಾಜಕಾರಣಕ್ಕೂ ಕಾಲಿಡಲಿದೆ” ಎಂದು ಭಾನುವಾರ ಹೇಳಿದ್ದಾರೆ.

ಅಕಾಲಿದಳ ಮತ್ತು ಶಿವಸೇನೆಯಂತಹ ಪಕ್ಷಗಳು ಈಗಾಗಲೇ ಹೊರನಡೆದಿರುವುದರಿಂದ ಬಿಜೆಪಿ ನೇತೃತ್ವದ ಎನ್‌ಡಿಎ ಶಕ್ತಿ ಕುಗ್ಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪಕ್ಷದ ಸಂಸ್ಥಾಪಕ ಮತ್ತು ಅವರ ತಂದೆ ಬಾಳ ಠಾಕ್ರೆ ಅವರ 96ನೇ ಜನ್ಮ ವಾರ್ಷಿಕೋತ್ಸವದಂದು ಶಿವಸೇನೆ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್‌ ಠಾಕ್ರೆ, ಅಧಿಕಾರದ ಮೂಲಕ ಹಿಂದುತ್ವದ ಕಾರ್ಯಸೂಚಿಯನ್ನು ಮುಂದಕ್ಕೆ ಕೊಂಡೊಯ್ಯಲು ಸೇನೆಯು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾಗಿ ಎಂದು ತಿಳಿಸಿದ್ದಾರೆ.

ಹಿಂದುತ್ವಕ್ಕೆ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತು. ಸೇನೆ ಎಂದಿಗೂ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿಲ್ಲ. ಶಿವಸೇನೆ ಬಿಜೆಪಿಯನ್ನು ಬಿಟ್ಟಿದೆಯೇ ಹೊರತು ಹಿಂದುತ್ವವನ್ನಲ್ಲ. ಬಿಜೆಪಿಯ ಅವಕಾಶವಾದಿ ಹಿಂದುತ್ವ ಅಧಿಕಾರಕ್ಕಾಗಿ ಮಾತ್ರ ಎಂದು ನಾನು ನಂಬುತ್ತೇನೆ ಎಂದು ಹೇಳಿದ್ದಾರೆ.

ಶಿವಸೇನೆಯು ಬಿಜೆಪಿಯೊಂದಿಗೆ ಮಿತ್ರಪಕ್ಷವಾಗಿ ಕಳೆದ 25 ವರ್ಷಗಳನ್ನು ವ್ಯರ್ಥ ಮಾಡಿಕೊಂಡಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಛತ್ತೀಸ್‌ಗಡ: ಭಾರತವನ್ನು ತೀವ್ರವಾದಿ ಹಿಂದೂ ರಾಷ್ಟ್ರ ಮಾಡುವ ಪ್ರತಿಜ್ಞೆ ವಿಡಿಯೋ ವೈರಲ್: ಪ್ರಕರಣ ದಾಖಲು

2019ರ ಮಹಾರಾಷ್ಟ್ರ ಚುನಾವಣೆಯ ನಂತರ ಶಿವಸೇನೆಯು ಬಿಜೆಪಿಯಿಂದ ಹೊರಗುಳಿದು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ರಚಿಸಲು ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿತು.

“ರಾಷ್ಟ್ರೀಯ ಮಹತ್ವಾಕಾಂಕ್ಷೆಗಳನ್ನು ಪೂರೈಸಲು ನಾವು ಬಿಜೆಪಿಯನ್ನು ಪೂರ್ಣ ಹೃದಯದಿಂದ ಬೆಂಬಲಿಸಿದೆವು. ಮಹಾರಾಷ್ಟ್ರದಲ್ಲಿ ನಾವಿದ್ದರೆ, ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂಬು ಭಾವಿಸಿದ್ದೆವು. ಆದರೆ ನಮಗೆ ದ್ರೋಹ ಬಗೆದರು. ನಮ್ಮ ಮನೆಯಲ್ಲಿ ನಮ್ಮನ್ನು ನಾಶಮಾಡಲು ಪ್ರಯತ್ನಿಸಲಾಯಿತು. ಆದ್ದರಿಂದ ನಾವು ಉಲ್ಟಾ ಹೊಡೆಯಬೇಕಾಯಿತು” ಎನ್ನುವ ಮೂಲಕ 2019ರ ಚುನಾವಣೆಯ ನಂತರ ಕಾಂಗ್ರೆಸ್ ಮತ್ತು ಎನ್‌ಸಿಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡ ತಮ್ಮ ನಿರ್ಧಾರವನ್ನು ಠಾಕ್ರೆ ಸಮರ್ಥಿಸಿದ್ದಾರೆ.

ಬಿಜೆಪಿ ತನ್ನ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಮಿತ್ರಪಕ್ಷಗಳನ್ನು ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಶಿವಸೇನೆ ಅಧಿಕಾರಕ್ಕಾಗಿ ಹಿಂದುತ್ವವನ್ನು ತ್ಯಜಿಸಿದೆ ಎಂಬ ಬಿಜೆಪಿಯ ವ್ಯಂಗ್ಯಕ್ಕೆ ಪ್ರತಿಕ್ರಿಯಿಸಿದ ಅವರು, “ನಮ್ಮ ಪಕ್ಷವು ಬಿಜೆಪಿಯನ್ನು ತೊರೆದಿದೆಯೇ ಹೊರತು ಹಿಂದುತ್ವದ ಸಿದ್ಧಾಂತವನ್ನಲ್ಲ” ಎಂದು ಉತ್ತರಿಸಿದ್ದಾರೆ.

“ಬಿಜೆಪಿ ಎಂದರೆ ಹಿಂದುತ್ವವಲ್ಲ, ಶಿವಸೇನೆಯು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು 25 ವರ್ಷಗಳನ್ನು ವ್ಯರ್ಥ ಮಾಡಿಕೊಂಡಿದೆ ಎಂಬ ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಶಿವಸೇನೆ ಕಳಪೆ ಪ್ರದರ್ಶನ ನೀಡಿ ನಾಲ್ಕನೇ ಸ್ಥಾನ ಗಳಿಸಿದ ಇತ್ತೀಚಿನ ನಗರ ಪಂಚಾಯತ್ ಚುನಾವಣೆಗಳನ್ನು ಉಲ್ಲೇಖಿಸಿದ ಮಹಾರಾಷ್ಟ್ರ ಮುಖ್ಯಮಂತ್ರಿ, ತಾವು ಸೇರಿದಂತೆ ಶಿವಸೇನೆಯ ನಾಯಕರು ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಮತ್ತು ಅದಕ್ಕೆ ತಕ್ಕಂತೆ ಪ್ರಚಾರ ಮಾಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ವ್ಯತಿರಿಕ್ತವಾಗಿ, ನಮ್ಮ ಹೊಸ ಮಿತ್ರಪಕ್ಷಗಳಾದ ಕಾಂಗ್ರೆಸ್ ಮತ್ತು ಎನ್‌ಸಿಪಿ ತಳಮಟ್ಟದಲ್ಲಿ ಸಂಸ್ಥೆಗಳನ್ನು ನಿರ್ಮಿಸಿವೆ. ನಾವೂ ಆ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ. ಕಳೆದ ಎರಡು ವರ್ಷಗಳಲ್ಲಿ ದ್ವೈವಾರ್ಷಿಕ ಚುನಾವಣೆಯಲ್ಲಿ ನಾವು ಹೊಂದಿದ್ದ ಎರಡು ವಿಧಾನ ಪರಿಷತ್ ಸ್ಥಾನಗಳನ್ನು ಕಳೆದುಕೊಂಡಿದ್ದೇವೆ. ನಮ್ಮ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಪಕ್ಷದ ಸದಸ್ಯರಿಗೆ ಕಿವಿಮಾತು ಹೇಳಿದ್ದಾರೆ.

ಈ ಹಿನ್ನಡೆಯ ಹೊರತಾಗಿಯೂ, ಸೇನೆಯು ರಾಷ್ಟ್ರೀಯ ಮಟ್ಟದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ದೆಹಲಿಯಲ್ಲಿ ಅಧಿಕಾರವನ್ನು ಹಿಡಿಯುವ ಸಂಕಲ್ಪ ಮಾಡಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಸಹಕಾರಿ ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಂಸ್ಥೆಗಳನ್ನು ನಿರ್ಮಿಸುವತ್ತ ಗಮನಹರಿಸುವಂತೆ ಶಿವ ಸೇನಾ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಮನವಿ ಮಾಡಿದ್ದಾರೆ.

ನಮ್ಮ ಕೈ ಬಲವಿಲ್ಲದಿದ್ದರೆ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ದೇಶದಲ್ಲಿ 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು: NITI ಆಯೋಗದ ಉಪಾಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...