Homeಅಂಕಣಗಳುಎರಡೂವರೆ ಸಾವಿರ ಕೋಟಿ ಹುಣಸಿ ಪಿಕ್ಕ ಅನಕೊಂಡಿರೇನ!

ಎರಡೂವರೆ ಸಾವಿರ ಕೋಟಿ ಹುಣಸಿ ಪಿಕ್ಕ ಅನಕೊಂಡಿರೇನ!

- Advertisement -
- Advertisement -

’ಎರಡೂವರೆ ಸಾವಿರ ಕೋಟಿ ಕೊಟ್ಟರೆ ನಿಮ್ಮನ್ನ ಮುಖ್ಯಮಂತ್ರಿ ಮಾಡುತ್ತೇವೆ’ ಎಂದು ದೆಹಲಿಯಿಂದ ಮಧ್ಯವರ್ತಿಗಳು ಬಂದಿದ್ದರೆಂದು ನಂಬಲನರ್ಹವಾದ, ಆದರೆ ಸದ್ಯದ ಬಿಜೆಪಿ ನೋಡಿದರೆ ನಂಬಬಹುದಾದ ಬಾಂಬನ್ನು ವಿಜಯಪುರದ ಯತ್ನಾಳ್ ಬಿಜೆಪಿ ಮೇಲೆ ಎಸೆದಿದ್ದಾರಲ್ಲಾ. ಕೂಡಲೇ ಆ ಪಾರ್ಟಿಯ ಅಧ್ಯಕ್ಷ ಕಟೀಲು ಯಕ್ಷಗಾನದ ಮಾತುಗಳನ್ನು ನೆನಪಿಸುವಂತೆ, ಯತ್ನಾಳ್ ಮಾತಿಗೂ ಬಿಜೆಪಿಗೂ ಸಂಬಂಧವಿಲ್ಲವೆಂದು ಹಾಸ್ಯ ಮಾಡಿದ್ದಾರಲ್ಲಾ. ಹಾಗದರೆ ಯತ್ನಾಳ್ ಯಾವ ಪಾರ್ಟಿಯಲ್ಲಿದ್ದಾರೆ? ದೆಹಲಿಯಿಂದ ಬಂದ ದಲ್ಲಾಳಿಗಳು ನಿಮ್ಮನ್ನ ಜೆಡಿಎಸ್‌ನಿಂದ ಮುಖ್ಯಮಂತ್ರಿ ಮಾಡುತ್ತೇವೆ ಅಥವಾ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಮಾಡುತ್ತೇವೆ ಎಂದಿದ್ದರೆ ಯತ್ನಾಳ್ ಮಾತಿಗೂ ನಮ್ಮ ಪಾರ್ಟಿಗೂ ಸಂಬಂಧವಿಲ್ಲ ಅನ್ನಬಹುದಿತ್ತು. ಇದಕ್ಕಿಂತ ತಮಾಷೆಯ ಮಾತ್ಯಾವುದೆಂದರೆ ಅಷ್ಟು ಹಣವನ್ನು ಹೇಗೆ ಇಡುವುದು, ಸಂಗ್ರಹಿಸುವುದು ಎಂಬ ದೂಡ್ಡ ಪ್ರಶ್ನೆ ಯತ್ನಾಳ್‌ರಿಂದ ಹೊರಬಿದ್ದಿದೆ. ನುರಿತ ರಾಜಕಾರಣಿಗಳ ಪ್ರಕಾರ 2500 ಸಾವಿರ ಕೋಟಿ ವಸೂಲಿ ಹಲವಾರು ಕಂತಿನಿಂದ ಸಂದಾಯವಾಗುತ್ತದೆ. ಪಿ.ವಿ ನರಸಿಂಹರಾಯ ವಿಶ್ವಾಸ ಮತ ಗಳಿಸಲು ಕರ್ನಾಟಕದಿಂದ ತರಿಸಿಕೂಂಡ ಹಣದ ಬಗ್ಗೆ ಕೇಳಿದ್ದರೆ ಯತ್ನಾಳ್‌ಗೆ ಉತ್ತರ ಸಿಗುತ್ತಿತ್ತಂತಲ್ಲಾ ಥೂತ್ತೇರಿ.

******

ಯತ್ನಾಳರ ಮಾತಿಗೆ ಮತ್ತೂಂದು ಕುಚ್ಯೋದ್ಯದ ಸಾಕ್ಷಿ ಒದಗಿಸುವುದಾದರೆ, ಸರ್ಕಾರಿ ಹುದ್ದೆ ನೀಡಲು ಸರಕಾರದ ಕೆಲವು ಪ್ರಮುಖರಿಂದಲೇ ಕೋಟಿಕೋಟಿ ಹಣ ಸಂಗ್ರಹ ಮಾಡಿದ ಹಗರಣ ಇಡೀ ಕರ್ನಾಟಕವನ್ನೇ ಅಲ್ಲೋಲ ಕಲ್ಲೋಲ ಮಾಡಿದೆಯಂತಲ್ಲಾ. ಈ ಸಂದರ್ಭದಲ್ಲಿ ಬೆಂಗಳೂರಿಗೆ ಬಂದಿದ್ದ ಅಮಿತ್ ಶಾ, ಹಿಂದಿ ಸಿನಿಮಾದಲ್ಲಿ ಸಮುದ್ರ ದಡದಲ್ಲಿ ಹೆಲಿಕಾಪ್ಟರಲ್ಲಿ ಇಳಿಯುವ ಡಾನ್ ಒಬ್ಬ, ಮತ್ತೊಂದು ಕಡೆಯಿಂದ ಬಂದವನಿಂದ ಸೂಟ್‌ಕೇಸ್ ಪಡೆದು ಮತ್ತೆ ಹೆಲಿಕಾಪ್ಟರ್ ಹತ್ತಿ ಮಾಯವಾದ ದೃಶ್ಯವನ್ನ ನೆನಪಿಸಿದರಂತಲ್ಲಾ. ಕರ್ನಾಟಕದ ಹಗರಣದ ಬಗ್ಗೆ ಒಂದಾದರೂ ಮಾತನಾಡಿದ್ದರೆ ಶಾ ಭೇಟಿ ಸಂಶಯಕ್ಕೊಳಪಡುತ್ತಿರಲಿಲ್ಲವೆಂಬುದು
ಒಂದಾಣಿಯಷ್ಟು ಮಾನವನ್ನು ಇನ್ನೂ ಉಳಿಸಿಕೂಂಡಿರುವ ಬಿಜೆಪಿ ಹಿರಿಯರ ಮಾತಾಗಿರುವಾಗಲೆ, ಜೆಡಿಎಸ್‌ನ ಕುಮಾರಸ್ವಾಮಿಯವರು ಪಿಎಸ್‌ಐ ನೇಮಕಾತಿ ಅವ್ಯವಹಾರದ ಕಿಂಗ್‌ಪಿನ್ ಯಾರೆಂದು ನಾನು ಹೇಳಿದರೆ ಕ್ಷಣಮಾತ್ರದಲ್ಲಿ ಬಾಬರಿ ಮಸೀದಿ ಉರುಳಿಸಿದಂಗೆ ಬಿಜೆಪಿ ಸರಕಾರ ಉರುಳಿಹೋಗುತ್ತದೆ ಎಂದುಬಿಟ್ಟಿದ್ದಾರಲ್ಲಾ. ಆದರೆ ಕುಮಾರಣ್ಣ ಎಂದಿನಂತೆ ಕಿಂಗ್‌ಪಿನ್ ಹೆಸರೇಳಲ್ಲ, ಕೇಳಿದರೆ ಸಮಯ ಬಂದಾಗ ಹೇಳುತ್ತೇನೆ ಎನ್ನುತ್ತಾರೆ. ಆ ಸಮಯ ಬರುವುದು ಸರಕಾರದ ಅವಧಿ ಮುಗಿದ ಮೇಲೆ, ಬಹುಶಃ ಚುನಾವಣಾ ಭಾಷಣದಲ್ಲಿ ಅಥವ ಅದೂ ಮುಗಿದ ಮೇಲೆ ಬರಬಹುದು. ಆದ್ದರಿಂದ ಕುಮಾರಣ್ಣನ ಕಿಂಗ್‌ಪಿನ್ ಬೆದರಿಕೆಗೆ ಯಾರೂ ಹೆದರಿಲ್ಲವಂತಲ್ಲಾ ಥೂತ್ತೇರಿ

ಅಪ್ಪ- ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ | Naanu gauri

******

ಯತ್ನಾಳ್ ಆರೋಪಕ್ಕೆ ಎಡೂರಪ್ಪನವರ ಮಗ ಎಗರಿಬಿದ್ದರಂತಲ್ಲಾ. ಅಲ್ಲದೆ, ಆಡಳಿತ ಮತ್ತು ವಿರೋಧ ಪಕ್ಷದ ಮಾತಿಗೆ ಮಣಿದು ಸದ್ಯದ ಹಗರಣಗಳಿಂದ ಕರ್ನಾಟಕದ ಗಮನವನ್ನು ಡೈವರ್ಟು ಮಾಡಲು ಸರಕಾರ ಯತ್ನಾಳ್ ಹೇಳಿಕೆಯನ್ನು ತನಿಖೆ ಮಾಡಲು ಆಯೋಗವೊಂದು ರಚನೆಯಾದರೆ, ಅದರ ಮುಂದೆ ಹಾಜರಾಗಿ ಹೇಳಿಕೆ ಕೊಡುವುದಕ್ಕೆ ಕಿಂಚಿತ್ತೂ ಅಂಜಿಕೆ ಯತ್ನಾಳ್‌ರಿಗಿಲ್ಲಾವಂತಲ್ಲಾ. ಒಂದು ವೇಳೆ ತನಿಖಾ ತಂಡ ರಚನೆಗೂಂಡು ವಿಜಯಪುರಕ್ಕೆ ಬಂದು ಎಮ್ಮೆ ಕೊಟ್ಟಿಗೆಯಲ್ಲಿ ಹಾಲಿಂಡುತ್ತಿರುವ ಯತ್ನಾಳರನ್ನ ಹಿಗ್ಗಾಮುಗ್ಗಾ ಪ್ರಶ್ನಿಸಿತು ಅನ್ನಿ ಆಗ,

“ತಮ್ಮ ಹೆಸರೇನ್ರಿ?”.

“ಬಸನಗೌಡ ಪಾಟೀಲ್ ಯತ್ನಾಳ್ ಅಂತ, ಯಮ್ಮಿ ಬೇಕಿತ್ತೇನ್ರಿ?”.

“ಇಲ್ಲ”.

“ಮತ್ತ ಕ್ವಾಣ ಬೇಕಿತ್ತೆನ?”.

“ಇಲ್ಲ”.

“ಗಬ್ಬದ ಯಮ್ಮಿ ಬೇಕಿದ್ರ ನೋಡ್ರಿ, ಅದೈತಿ. ಲಕ್ಷದ ಮ್ಯಾಲಾಕ್ಯತಿ. ಒಂದ ಹೂತ್ತಿಗೆ ಹತ್ತ ಲೀಟ್ರು ಹಾಲು ಕರಿತೈತೆ. ಆಂದ್ರ ದಿನ ಇಪತ್ತ ಲೀಟ್ರು. ಒಂದು ಲೀಟ್ರು ಹಾಲು ಮುವ್ವತ್ತು ರೂಪಾಯಂದ್ರ ಇಪ್ಪತ್ತು ಇಂಟು ಮೂವ್ವತ್ತು ಏಟಾತು ಮತ್ತ ಡೈರಿ ಹಾಲಿಗ ಲೀಟ್ರಗ ನಲವತ್ರ ಮಟ ಐತಿ”.

“ರೀ ನಾವು ಹಾಲಿನ ವ್ಯಾಪಾರದೊರಲ್ಲ”.

“ಮತ್ತ ಯಾರಂತ ಹೇಳ್ರಿ ಲಗೂನ, ಯಮ್ಮಿಗೆ ಹಿಂಡಿ ಹಾಕಬೇಕು”.

“ನಾವು ತನಿಖಾಧಿಕಾರಿಗಳು”.

“ದನ, ಯಮ್ಮಿ, ಕೊಟಗಿ ಹಿಂಡಿ ತನಿಖ ಮಾಡುವುರೇನು”.

“ನಿಮ್ಮನ್ನೆ ತನಿಖೆ ಮಾಡಕ್ಕೆ ಬಂದಿದ್ದೀವಿ”.

“ನನ್ನನ್ನು ತನಿಖೆ ಮಾಡ್ತಿರೇನು, ಬಪ್ಪರ ಮಕ್ಕಳ, ಮಾಡ್ರಲ”.

“ನಾವು ಸಿಐಡಿ ಅಧಿಕಾರಿಗಳು”.

“ನನಗ ಗುರುತಿಲ್ಲೇನು, ಏನ ತನಿಖಿ ಮಾಡುವುರದಿರಿ ಹೇಳ್ರಲ”.

“ನಿಮ್ಮನ್ನ ಮುಖ್ಯಮಂತ್ರಿ ಮಾಡ್ತಿವಿ. ಎರಡೂವರೆ ಸಾವಿರ ಕೋಟಿ ಕೂಡಿ ಅಂತ ನಿಮ್ಮನ್ನ ಕೇಳಿದ್ರ?”

“ಹೌದ್ರಿ”.

“ಯಾರವುರು?”.

“ಯಾರಿಗೊತ್ತರಿ”.

“ಎಲ್ಲಿಂದ ಬಂದಿದ್ರು?”.

“ಡೆಲ್ಲಿಯಿಂದ ಅಂತ ಹೇಳಿದ್ರು”.

“ಹೆಸರೇನವುರದು”.

“ಗೊತ್ತಿಲ್ರಿ”.

“ನಿಮ್ಮತ್ರಕೇ ಯಾಕೆ ಬಂದ್ರು?”.

“ನಾನು ವಾಜಪೇಯಿ ಸಂಪುಟದಾಗ ಮಂತ್ರಿಯಾಗಿದ್ನಿ. ನಾನು ಎತ್ತರಕ್ಕೆ ಕೆಂಪಗೆ ಸಿಂದೂರ ಲಕ್ಷ್ಮಣನಂಗಿದ್ದಿನಿ. ಅದೂ ಅಲ್ದೆ ಹಿಂದೂವಾದಿ ಭಾಷಣಕಾರ. ಬಿಜಾಪುರದ ಸುಲ್ತಾನರ ನಾಡಿನಿಂದ ಬಂದವ. ನನ್ನ ನೋಡಿದ್ರೆ ಸಾಬರಿಗೆ ಅಂಜಿಕಿ ಬರತೈತಿ. ನಾನು ಕೇಂದ್ರ ಮಂತ್ರಿಯಾಗಕ್ಕೆ ಇವೆಲ್ಲ ಕಾರಣದಾವು. ಅಂಗ ರಾಜ್ಯದ ಮುಖ್ಯಮಂತ್ರಿಯಾಗಕ್ಕು ಬೇಷದಿನಿ ಅಂತ ಯಾರೊ ಕೇಳಿಕೂಂಡು ಬಂದಿದ್ರು”.

“ಏನು ಕೇಳಿದ್ರು?”

“ನಿಮ್ಮನ್ನ ರಾಜ್ಯದ ಮುಖ್ಯಮಂತ್ರಿ ಮಾಡ್ತಿವಿ ಅಂದ್ರು”.

“ಅದಕೆ ನೀವೇನೇಳಿದ್ರಿ?”.

“ಮಾಡ್ರಲ ಅಂದ್ನಿ”.

“ಅದಕವುರೇನೇಳಿದ್ರು?”.

“ಎರಡೂವರೆ ಸಾವಿರ ಕೋಟಿ ಕೂಡಿ ಅಂದ್ರು.

“ಅದಕ್ಕೆ ನೀವೇನಂದ್ರಿ?”.

“ಅಲ್ಲಲೇ ಮಕ್ಕಳ ಎರಡೂವರೆ ಸಾವಿರ ಕೋಟಿ ಅಂದ್ರೆ ಏನು ಹುಣುಸಿ ಪಿಕ್ಕ ಅನಕೊಂಡಿರೇನು? ಅಷ್ಟು ರ್‍ವಕ್ಕ ಯಂಗ ತುಗಂಡೋಕ್ಕಿ? ಎಲ್ಲಿ ಮಡಗತಿರೀ? ಗೋದಾಮೆಲೆ ಸಿಕ್ಕಿಬಿದ್ರ ಯಾವ ರ್‍ವಕ್ಕ ಅಂತ ಹೇಳತಿ. ಯಾರದು ಅಂತ ಹೇಳತಿರಿ? ಅಂತ ಪ್ರಶ್ನಿ ಮ್ಯಾಲೆ ಪ್ರಶ್ನಿ ಹಾಕಿದಿನ್ರಿ. ಅವತ್ತು ಹೋದ ಮಕ್ಕಳು ಮತ್ತ ವಳ್ಳಿ ನನ್ನ ಸನೇಕ ಬರಲಿಲ್ಲರಿ. ಆ ನಂತರ ಎರಡೂವರಿ ಸಾವಿರ ಕೋಟಿ ಯಾರು ಕೊಟ್ರು, ಯಾರು ಮುಖ್ಯಮಂತ್ರಿಯಾದ್ನೊ, ನನಗೆನ ಖರಿ ಗೊತ್ತಿಲ್ರಾ ಎಂದಾಗ ಅಲ್ಲಿಗೆ ತನಿಖೆ ಮುಗಿಯಿತಂತಲ್ಲಾ.
ಥೂಥೂ ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಕೊರೊನಾ ಅಲೆ ಬಿಜೆಪಿ ಒಂದೇ ತರ ಕಾಣುತ್ತಿವೆಯಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...