Homeಅಂಕಣಗಳುಎರಡೂವರೆ ಸಾವಿರ ಕೋಟಿ ಹುಣಸಿ ಪಿಕ್ಕ ಅನಕೊಂಡಿರೇನ!

ಎರಡೂವರೆ ಸಾವಿರ ಕೋಟಿ ಹುಣಸಿ ಪಿಕ್ಕ ಅನಕೊಂಡಿರೇನ!

- Advertisement -
- Advertisement -

’ಎರಡೂವರೆ ಸಾವಿರ ಕೋಟಿ ಕೊಟ್ಟರೆ ನಿಮ್ಮನ್ನ ಮುಖ್ಯಮಂತ್ರಿ ಮಾಡುತ್ತೇವೆ’ ಎಂದು ದೆಹಲಿಯಿಂದ ಮಧ್ಯವರ್ತಿಗಳು ಬಂದಿದ್ದರೆಂದು ನಂಬಲನರ್ಹವಾದ, ಆದರೆ ಸದ್ಯದ ಬಿಜೆಪಿ ನೋಡಿದರೆ ನಂಬಬಹುದಾದ ಬಾಂಬನ್ನು ವಿಜಯಪುರದ ಯತ್ನಾಳ್ ಬಿಜೆಪಿ ಮೇಲೆ ಎಸೆದಿದ್ದಾರಲ್ಲಾ. ಕೂಡಲೇ ಆ ಪಾರ್ಟಿಯ ಅಧ್ಯಕ್ಷ ಕಟೀಲು ಯಕ್ಷಗಾನದ ಮಾತುಗಳನ್ನು ನೆನಪಿಸುವಂತೆ, ಯತ್ನಾಳ್ ಮಾತಿಗೂ ಬಿಜೆಪಿಗೂ ಸಂಬಂಧವಿಲ್ಲವೆಂದು ಹಾಸ್ಯ ಮಾಡಿದ್ದಾರಲ್ಲಾ. ಹಾಗದರೆ ಯತ್ನಾಳ್ ಯಾವ ಪಾರ್ಟಿಯಲ್ಲಿದ್ದಾರೆ? ದೆಹಲಿಯಿಂದ ಬಂದ ದಲ್ಲಾಳಿಗಳು ನಿಮ್ಮನ್ನ ಜೆಡಿಎಸ್‌ನಿಂದ ಮುಖ್ಯಮಂತ್ರಿ ಮಾಡುತ್ತೇವೆ ಅಥವಾ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಮಾಡುತ್ತೇವೆ ಎಂದಿದ್ದರೆ ಯತ್ನಾಳ್ ಮಾತಿಗೂ ನಮ್ಮ ಪಾರ್ಟಿಗೂ ಸಂಬಂಧವಿಲ್ಲ ಅನ್ನಬಹುದಿತ್ತು. ಇದಕ್ಕಿಂತ ತಮಾಷೆಯ ಮಾತ್ಯಾವುದೆಂದರೆ ಅಷ್ಟು ಹಣವನ್ನು ಹೇಗೆ ಇಡುವುದು, ಸಂಗ್ರಹಿಸುವುದು ಎಂಬ ದೂಡ್ಡ ಪ್ರಶ್ನೆ ಯತ್ನಾಳ್‌ರಿಂದ ಹೊರಬಿದ್ದಿದೆ. ನುರಿತ ರಾಜಕಾರಣಿಗಳ ಪ್ರಕಾರ 2500 ಸಾವಿರ ಕೋಟಿ ವಸೂಲಿ ಹಲವಾರು ಕಂತಿನಿಂದ ಸಂದಾಯವಾಗುತ್ತದೆ. ಪಿ.ವಿ ನರಸಿಂಹರಾಯ ವಿಶ್ವಾಸ ಮತ ಗಳಿಸಲು ಕರ್ನಾಟಕದಿಂದ ತರಿಸಿಕೂಂಡ ಹಣದ ಬಗ್ಗೆ ಕೇಳಿದ್ದರೆ ಯತ್ನಾಳ್‌ಗೆ ಉತ್ತರ ಸಿಗುತ್ತಿತ್ತಂತಲ್ಲಾ ಥೂತ್ತೇರಿ.

******

ಯತ್ನಾಳರ ಮಾತಿಗೆ ಮತ್ತೂಂದು ಕುಚ್ಯೋದ್ಯದ ಸಾಕ್ಷಿ ಒದಗಿಸುವುದಾದರೆ, ಸರ್ಕಾರಿ ಹುದ್ದೆ ನೀಡಲು ಸರಕಾರದ ಕೆಲವು ಪ್ರಮುಖರಿಂದಲೇ ಕೋಟಿಕೋಟಿ ಹಣ ಸಂಗ್ರಹ ಮಾಡಿದ ಹಗರಣ ಇಡೀ ಕರ್ನಾಟಕವನ್ನೇ ಅಲ್ಲೋಲ ಕಲ್ಲೋಲ ಮಾಡಿದೆಯಂತಲ್ಲಾ. ಈ ಸಂದರ್ಭದಲ್ಲಿ ಬೆಂಗಳೂರಿಗೆ ಬಂದಿದ್ದ ಅಮಿತ್ ಶಾ, ಹಿಂದಿ ಸಿನಿಮಾದಲ್ಲಿ ಸಮುದ್ರ ದಡದಲ್ಲಿ ಹೆಲಿಕಾಪ್ಟರಲ್ಲಿ ಇಳಿಯುವ ಡಾನ್ ಒಬ್ಬ, ಮತ್ತೊಂದು ಕಡೆಯಿಂದ ಬಂದವನಿಂದ ಸೂಟ್‌ಕೇಸ್ ಪಡೆದು ಮತ್ತೆ ಹೆಲಿಕಾಪ್ಟರ್ ಹತ್ತಿ ಮಾಯವಾದ ದೃಶ್ಯವನ್ನ ನೆನಪಿಸಿದರಂತಲ್ಲಾ. ಕರ್ನಾಟಕದ ಹಗರಣದ ಬಗ್ಗೆ ಒಂದಾದರೂ ಮಾತನಾಡಿದ್ದರೆ ಶಾ ಭೇಟಿ ಸಂಶಯಕ್ಕೊಳಪಡುತ್ತಿರಲಿಲ್ಲವೆಂಬುದು
ಒಂದಾಣಿಯಷ್ಟು ಮಾನವನ್ನು ಇನ್ನೂ ಉಳಿಸಿಕೂಂಡಿರುವ ಬಿಜೆಪಿ ಹಿರಿಯರ ಮಾತಾಗಿರುವಾಗಲೆ, ಜೆಡಿಎಸ್‌ನ ಕುಮಾರಸ್ವಾಮಿಯವರು ಪಿಎಸ್‌ಐ ನೇಮಕಾತಿ ಅವ್ಯವಹಾರದ ಕಿಂಗ್‌ಪಿನ್ ಯಾರೆಂದು ನಾನು ಹೇಳಿದರೆ ಕ್ಷಣಮಾತ್ರದಲ್ಲಿ ಬಾಬರಿ ಮಸೀದಿ ಉರುಳಿಸಿದಂಗೆ ಬಿಜೆಪಿ ಸರಕಾರ ಉರುಳಿಹೋಗುತ್ತದೆ ಎಂದುಬಿಟ್ಟಿದ್ದಾರಲ್ಲಾ. ಆದರೆ ಕುಮಾರಣ್ಣ ಎಂದಿನಂತೆ ಕಿಂಗ್‌ಪಿನ್ ಹೆಸರೇಳಲ್ಲ, ಕೇಳಿದರೆ ಸಮಯ ಬಂದಾಗ ಹೇಳುತ್ತೇನೆ ಎನ್ನುತ್ತಾರೆ. ಆ ಸಮಯ ಬರುವುದು ಸರಕಾರದ ಅವಧಿ ಮುಗಿದ ಮೇಲೆ, ಬಹುಶಃ ಚುನಾವಣಾ ಭಾಷಣದಲ್ಲಿ ಅಥವ ಅದೂ ಮುಗಿದ ಮೇಲೆ ಬರಬಹುದು. ಆದ್ದರಿಂದ ಕುಮಾರಣ್ಣನ ಕಿಂಗ್‌ಪಿನ್ ಬೆದರಿಕೆಗೆ ಯಾರೂ ಹೆದರಿಲ್ಲವಂತಲ್ಲಾ ಥೂತ್ತೇರಿ

ಅಪ್ಪ- ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ | Naanu gauri

******

ಯತ್ನಾಳ್ ಆರೋಪಕ್ಕೆ ಎಡೂರಪ್ಪನವರ ಮಗ ಎಗರಿಬಿದ್ದರಂತಲ್ಲಾ. ಅಲ್ಲದೆ, ಆಡಳಿತ ಮತ್ತು ವಿರೋಧ ಪಕ್ಷದ ಮಾತಿಗೆ ಮಣಿದು ಸದ್ಯದ ಹಗರಣಗಳಿಂದ ಕರ್ನಾಟಕದ ಗಮನವನ್ನು ಡೈವರ್ಟು ಮಾಡಲು ಸರಕಾರ ಯತ್ನಾಳ್ ಹೇಳಿಕೆಯನ್ನು ತನಿಖೆ ಮಾಡಲು ಆಯೋಗವೊಂದು ರಚನೆಯಾದರೆ, ಅದರ ಮುಂದೆ ಹಾಜರಾಗಿ ಹೇಳಿಕೆ ಕೊಡುವುದಕ್ಕೆ ಕಿಂಚಿತ್ತೂ ಅಂಜಿಕೆ ಯತ್ನಾಳ್‌ರಿಗಿಲ್ಲಾವಂತಲ್ಲಾ. ಒಂದು ವೇಳೆ ತನಿಖಾ ತಂಡ ರಚನೆಗೂಂಡು ವಿಜಯಪುರಕ್ಕೆ ಬಂದು ಎಮ್ಮೆ ಕೊಟ್ಟಿಗೆಯಲ್ಲಿ ಹಾಲಿಂಡುತ್ತಿರುವ ಯತ್ನಾಳರನ್ನ ಹಿಗ್ಗಾಮುಗ್ಗಾ ಪ್ರಶ್ನಿಸಿತು ಅನ್ನಿ ಆಗ,

“ತಮ್ಮ ಹೆಸರೇನ್ರಿ?”.

“ಬಸನಗೌಡ ಪಾಟೀಲ್ ಯತ್ನಾಳ್ ಅಂತ, ಯಮ್ಮಿ ಬೇಕಿತ್ತೇನ್ರಿ?”.

“ಇಲ್ಲ”.

“ಮತ್ತ ಕ್ವಾಣ ಬೇಕಿತ್ತೆನ?”.

“ಇಲ್ಲ”.

“ಗಬ್ಬದ ಯಮ್ಮಿ ಬೇಕಿದ್ರ ನೋಡ್ರಿ, ಅದೈತಿ. ಲಕ್ಷದ ಮ್ಯಾಲಾಕ್ಯತಿ. ಒಂದ ಹೂತ್ತಿಗೆ ಹತ್ತ ಲೀಟ್ರು ಹಾಲು ಕರಿತೈತೆ. ಆಂದ್ರ ದಿನ ಇಪತ್ತ ಲೀಟ್ರು. ಒಂದು ಲೀಟ್ರು ಹಾಲು ಮುವ್ವತ್ತು ರೂಪಾಯಂದ್ರ ಇಪ್ಪತ್ತು ಇಂಟು ಮೂವ್ವತ್ತು ಏಟಾತು ಮತ್ತ ಡೈರಿ ಹಾಲಿಗ ಲೀಟ್ರಗ ನಲವತ್ರ ಮಟ ಐತಿ”.

“ರೀ ನಾವು ಹಾಲಿನ ವ್ಯಾಪಾರದೊರಲ್ಲ”.

“ಮತ್ತ ಯಾರಂತ ಹೇಳ್ರಿ ಲಗೂನ, ಯಮ್ಮಿಗೆ ಹಿಂಡಿ ಹಾಕಬೇಕು”.

“ನಾವು ತನಿಖಾಧಿಕಾರಿಗಳು”.

“ದನ, ಯಮ್ಮಿ, ಕೊಟಗಿ ಹಿಂಡಿ ತನಿಖ ಮಾಡುವುರೇನು”.

“ನಿಮ್ಮನ್ನೆ ತನಿಖೆ ಮಾಡಕ್ಕೆ ಬಂದಿದ್ದೀವಿ”.

“ನನ್ನನ್ನು ತನಿಖೆ ಮಾಡ್ತಿರೇನು, ಬಪ್ಪರ ಮಕ್ಕಳ, ಮಾಡ್ರಲ”.

“ನಾವು ಸಿಐಡಿ ಅಧಿಕಾರಿಗಳು”.

“ನನಗ ಗುರುತಿಲ್ಲೇನು, ಏನ ತನಿಖಿ ಮಾಡುವುರದಿರಿ ಹೇಳ್ರಲ”.

“ನಿಮ್ಮನ್ನ ಮುಖ್ಯಮಂತ್ರಿ ಮಾಡ್ತಿವಿ. ಎರಡೂವರೆ ಸಾವಿರ ಕೋಟಿ ಕೂಡಿ ಅಂತ ನಿಮ್ಮನ್ನ ಕೇಳಿದ್ರ?”

“ಹೌದ್ರಿ”.

“ಯಾರವುರು?”.

“ಯಾರಿಗೊತ್ತರಿ”.

“ಎಲ್ಲಿಂದ ಬಂದಿದ್ರು?”.

“ಡೆಲ್ಲಿಯಿಂದ ಅಂತ ಹೇಳಿದ್ರು”.

“ಹೆಸರೇನವುರದು”.

“ಗೊತ್ತಿಲ್ರಿ”.

“ನಿಮ್ಮತ್ರಕೇ ಯಾಕೆ ಬಂದ್ರು?”.

“ನಾನು ವಾಜಪೇಯಿ ಸಂಪುಟದಾಗ ಮಂತ್ರಿಯಾಗಿದ್ನಿ. ನಾನು ಎತ್ತರಕ್ಕೆ ಕೆಂಪಗೆ ಸಿಂದೂರ ಲಕ್ಷ್ಮಣನಂಗಿದ್ದಿನಿ. ಅದೂ ಅಲ್ದೆ ಹಿಂದೂವಾದಿ ಭಾಷಣಕಾರ. ಬಿಜಾಪುರದ ಸುಲ್ತಾನರ ನಾಡಿನಿಂದ ಬಂದವ. ನನ್ನ ನೋಡಿದ್ರೆ ಸಾಬರಿಗೆ ಅಂಜಿಕಿ ಬರತೈತಿ. ನಾನು ಕೇಂದ್ರ ಮಂತ್ರಿಯಾಗಕ್ಕೆ ಇವೆಲ್ಲ ಕಾರಣದಾವು. ಅಂಗ ರಾಜ್ಯದ ಮುಖ್ಯಮಂತ್ರಿಯಾಗಕ್ಕು ಬೇಷದಿನಿ ಅಂತ ಯಾರೊ ಕೇಳಿಕೂಂಡು ಬಂದಿದ್ರು”.

“ಏನು ಕೇಳಿದ್ರು?”

“ನಿಮ್ಮನ್ನ ರಾಜ್ಯದ ಮುಖ್ಯಮಂತ್ರಿ ಮಾಡ್ತಿವಿ ಅಂದ್ರು”.

“ಅದಕೆ ನೀವೇನೇಳಿದ್ರಿ?”.

“ಮಾಡ್ರಲ ಅಂದ್ನಿ”.

“ಅದಕವುರೇನೇಳಿದ್ರು?”.

“ಎರಡೂವರೆ ಸಾವಿರ ಕೋಟಿ ಕೂಡಿ ಅಂದ್ರು.

“ಅದಕ್ಕೆ ನೀವೇನಂದ್ರಿ?”.

“ಅಲ್ಲಲೇ ಮಕ್ಕಳ ಎರಡೂವರೆ ಸಾವಿರ ಕೋಟಿ ಅಂದ್ರೆ ಏನು ಹುಣುಸಿ ಪಿಕ್ಕ ಅನಕೊಂಡಿರೇನು? ಅಷ್ಟು ರ್‍ವಕ್ಕ ಯಂಗ ತುಗಂಡೋಕ್ಕಿ? ಎಲ್ಲಿ ಮಡಗತಿರೀ? ಗೋದಾಮೆಲೆ ಸಿಕ್ಕಿಬಿದ್ರ ಯಾವ ರ್‍ವಕ್ಕ ಅಂತ ಹೇಳತಿ. ಯಾರದು ಅಂತ ಹೇಳತಿರಿ? ಅಂತ ಪ್ರಶ್ನಿ ಮ್ಯಾಲೆ ಪ್ರಶ್ನಿ ಹಾಕಿದಿನ್ರಿ. ಅವತ್ತು ಹೋದ ಮಕ್ಕಳು ಮತ್ತ ವಳ್ಳಿ ನನ್ನ ಸನೇಕ ಬರಲಿಲ್ಲರಿ. ಆ ನಂತರ ಎರಡೂವರಿ ಸಾವಿರ ಕೋಟಿ ಯಾರು ಕೊಟ್ರು, ಯಾರು ಮುಖ್ಯಮಂತ್ರಿಯಾದ್ನೊ, ನನಗೆನ ಖರಿ ಗೊತ್ತಿಲ್ರಾ ಎಂದಾಗ ಅಲ್ಲಿಗೆ ತನಿಖೆ ಮುಗಿಯಿತಂತಲ್ಲಾ.
ಥೂಥೂ ಥೂತ್ತೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಕೊರೊನಾ ಅಲೆ ಬಿಜೆಪಿ ಒಂದೇ ತರ ಕಾಣುತ್ತಿವೆಯಲ್ಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...