Homeಮುಖಪುಟಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

ಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

- Advertisement -
- Advertisement -

ಮಣಿಪುರದಲ್ಲಿ ಭುಗಿಲೆದ್ದಿರುವ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಕಲಹದಲ್ಲಿ, “253 ಚರ್ಚ್‌ಗಳನ್ನು ಸುಟ್ಟು ಹಾಕಲಾಗಿದೆ” ಎಂದು ಚುರಾಚಂದ್‌ಪುರ ಜಿಲ್ಲೆಯ ಬುಡಕಟ್ಟುಗಳ ಒಕ್ಕೂಟವಾದ ‘ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ’ (ಐಟಿಎಲ್‌ಎಫ್‌) ಆರೋಪಿಸಿದೆ.

ಇಂಫಾಲ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಚುರಾಚಂದ್‌ಪುರಕ್ಕೆ ಸೋಮವಾರ ಭೇಟಿ ನೀಡಿದ್ದ ರಾಜ್ಯಪಾಲ ಅನುಸೂಯಾ ಉಯಿಕೆ ಅವರಿಗೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ ಐಟಿಎಲ್‌ಎಫ್ ಈ ಆರೋಪಗಳನ್ನು ಮಾಡಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಬೇಕೆಂದು ಬಹುಸಂಖ್ಯಾತ ಮೈತೇಯಿಗಳು ಇಟ್ಟಿರುವ ಬೇಡಿಕೆಯನ್ನು ವಿರೋಧಿಸಿ 10 ಗುಡ್ಡಗಾಡು ಜಿಲ್ಲೆಗಳಲ್ಲಿ ಐಕಮತ ರ್‍ಯಾಲಿ ನಡೆದಿತ್ತು. ಆನಂತರ ಮೇ 3ರಂದು ಪ್ರಾರಂಭವಾದ ಹಿಂಸಾಚಾರದಲ್ಲಿ ಅತಿ ಹೆಚ್ಚು ಹಿಂಸಾಚಾರವನ್ನು ಕಂಡ ಜಿಲ್ಲೆಗಳ ಪೈಕಿ ಚುರಚಂದ್‌ಪುರವೂ ಒಂದಾಗಿದೆ.

ಹಿಂದೂ ಮೈತೇಯಿ ಮತ್ತು ಕ್ರಿಶ್ಚಿಯನ್ ಕುಕಿಗಳ ನಡುವೆ ನಡೆದ ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ, 50,698 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

ಸೋಮವಾರ ಚುರಚಂದಪುರ ಗ್ರಾಮದ ಮೇಲೆ ನಡೆದ ದಾಳಿಯಲ್ಲಿ ಕೂಡ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಐಟಿಎಲ್ಎಫ್ ಮಾಹಿತಿ ನೀಡಿದೆ.

“ಮೈತೇಯಿ ಮತ್ತು ಮಣಿಪುರದ ಕೋಮುವಾದಿ ಸರ್ಕಾರದ ಜನಾಂಗೀಯ ಶುದ್ಧೀಕರಣ ಅಭಿಯಾನದ ಪರಿಣಾಮವಾಗಿ ಕುಕಿ-ಜೋ ಜನರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಇತಿಹಾಸದ ಕಂಡ ಅತ್ಯಂತ ಸವಾಲಿನ ದಿನಗಳನ್ನು ಕುಕಿಗಳು ಸಹಿಸಿಕೊಳ್ಳುತ್ತಿದ್ದಾರೆ” ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಮೂರು ಪುಟಗಳ ಜ್ಞಾಪಕ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಮೇ 3 ರಿಂದ ನಮ್ಮ ಜನರ ವಿರುದ್ಧ ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ನಡೆಯುತ್ತಿದೆ. ನಾವು 100 ಕ್ಕೂ ಹೆಚ್ಚು ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಸತ್ತವರ ಸಂಖ್ಯೆ ಸ್ಪಷ್ಟವಾಗಿಲ್ಲ. ಇದಲ್ಲದೆ 160 ಹಳ್ಳಿಗಳಲ್ಲಿ ಸುಮಾರು 4,500 ಮನೆಗಳು ಸುಟ್ಟುಹೋಗಿವೆ, ಇದರಿಂದಾಗಿ ಸುಮಾರು 36,000 ಜನರು ನಿರಾಶ್ರಿತರಾಗಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದೆ.

ಐಟಿಎಲ್‌ಎಫ್‌ ಅಧ್ಯಕ್ಷ ಪಗಿನ್ ಹಾಕಿಪ್, ಕಾರ್ಯದರ್ಶಿ ಮುವಾನ್ ಟಾಂಬಿಂಗ್ ನೀಡಿದ ಜ್ಞಾಪಕ ಪತ್ರದಲ್ಲಿ, “253 ಚರ್ಚ್‌ಗಳನ್ನು ಸುಟ್ಟುಹಾಕಲಾಯಿತು. ನಮ್ಮ ಸಾವಿರಾರು ಜನರು ದೇಶದ ವಿವಿಧ ಸ್ಥಳಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ” ಎಂದು ನೋವು ತೋಡಿಕೊಳ್ಳಲಾಗಿದೆ.

ಫೆಬ್ರವರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಪಾಲರು ಚರ್ಚಂದಪುರಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಎಂದು ಐಟಿಎಲ್‌ಎಫ್ ನಾಯಕರೊಬ್ಬರು ತಿಳಿಸಿದ್ದಾರೆ.

ಸತ್ತವರ ಪಟ್ಟಿ, ಹಿಂಸಾಚಾರ ಭುಗಿಲೆದ್ದ ಬಳಿಕ ನಾಶವಾದ ಚರ್ಚ್‌ಗಳು, ಆಡಳಿತಾತ್ಮಕ ಕಟ್ಟಡಗಳು, ಸುಟ್ಟುಹೋದ ಹಳ್ಳಿಗಳ ವಿವರಗಳನ್ನು ಜ್ಞಾಪಕ ಪತ್ರದೊಂದಿಗೆ ಐಟಿಎಲ್‌ಎಫ್‌ ಲಗತ್ತಿಸಿದೆ.

ನಿರಾಶ್ರಿತ ಶಿಬಿರಗಳ ವಿವರದೊಂದಿಗೆ, ಅರಾಂಬೈ ಟೆಂಗೋಲ್‌ ಸಂಘಟನೆ ಜೊತೆಯಲ್ಲಿ ರಾಜ್ಯ ನಾಯಕರು ಪಾಲ್ಗೊಂಡಿರುವುದನ್ನು ದೃಢೀಕರಿಸುವ ಫೋಟೋಗಳನ್ನೂ ಐಟಿಎಲ್‌ಎಫ್‌ ಒದಗಿಸಿದೆ.

ಅರಾಂಬೈ ತೆಂಗೋಲ್ ಎಂಬುದು ಮೇತೇಯಿ ಸಂಘಟನೆಯಾಗಿದ್ದು, ಕುಕಿಗಳು ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದೆ. ಈ ಸಂಘಟನೆಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಕಳೆದ ವಾರ ಮಾಧ್ಯಮವೊಂದು ವರದಿ ಮಾಡಿತ್ತು.

ಇದನ್ನೂ ಓದಿರಿ: ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ಹಾನಿಗೊಳಗಾದ ಚರ್ಚ್ ಆಸ್ತಿಗಳ ಬಗ್ಗೆ ಕೇಳಿದಾಗ, ಐಟಿಎಲ್‌ಎಫ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಗಿಂಜಾ ವುಲ್ಜಾಂಗ್ ಪ್ರತಿಕ್ರಿಯಿಸಿ, “ಮುಖ್ಯವಾಗಿ ಇಂಫಾಲ್ ಕಣಿವೆ, ಗುಡ್ಡಗಾಡು ಪ್ರದೇಶಗಳಲ್ಲಿ ಚರ್ಚ್‌ಗಳ ಜೊತೆಗೆ 93 ಚರ್ಚ್ ಆಡಳಿತ ಕಟ್ಟಡಗಳು ಮತ್ತು ಕ್ವಾರ್ಟರ್‌ಗಳನ್ನು ಸುಟ್ಟುಹಾಕಲಾಗಿದೆ” ಎಂದು ತಿಳಿಸಿದ್ದಾರೆ.

ಇಂಫಾಲ್ ಕಣಿವೆಯ ಆರು ಜಿಲ್ಲೆಗಳಲ್ಲಿ ಮೈತೇಯಿ ಪ್ರಾಬಲ್ಯವಿದೆ. 10 ಗುಡ್ಡಗಾಡು ಜಿಲ್ಲೆಗಳಲ್ಲಿ ಬುಡಕಟ್ಟು ಜನರನ್ನು ಹೆಚ್ಚಿದ್ದಾರೆ. ನಾಗಾಗಳು ಮತ್ತು ಕುಕಿಗಳು ಗುಡ್ಡಗಾಡು ಜಿಲ್ಲೆಗಳಲ್ಲಿ ಪ್ರಾಬಲ್ಯ ಹೊಂದಿದ್ದಾರೆ.

ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಆಫ್ ನಾರ್ತ್ ಈಸ್ಟ್ ಇಂಡಿಯಾದ ಸದಸ್ಯ ಅಲೆನ್ ಬ್ರೂಕ್ಸ್ ಅವರು ‘ದಿ ಟೆಲಿಗ್ರಾಫ್‌’ಗೆ ಪ್ರತಿಕ್ರಿಯಿಸಿ, “ಹಿಂಸಾಚಾರವು ಬಹಳ ದೊಡ್ಡ ಮಟ್ಟದಲ್ಲಿದೆ ಮತ್ತು ಅತ್ಯಂತ ದುರಂತಮಯವಾಗಿದೆ. ಹಿಂಸಾಚಾರ ಅಂಕಿ-ಅಂಶಗಳು ನಿಜವೆಂದು ನಾವು ನಂಬುತ್ತೇವೆ. ಏಕೆಂದರೆ ಇವುಗಳನ್ನು ಇಲ್ಲಿನ ಸ್ಥಳೀಯ ಸಂಸ್ಥೆಗಳು ರುಜುವಾತುಪಡಿಸಿವೆ. ಆದರೆ ಪ್ರಶ್ನೆ ಇರುವುದು ಒಂದು ಚರ್ಚ್ ಅನ್ನು ಸುಡುವುದು ಅಥವಾ 1,000 ಚರ್ಚ್‌ಗಳನ್ನು ಸುಡುವುದರ ಬಗ್ಗೆ ಅಲ್ಲ. ಜನರ ಸುರಕ್ಷತೆ ಮತ್ತು ದೇಶದ ಜಾತ್ಯತೀತತೆ ಅಪಾಯದಲ್ಲಿದೆ” ಎಂದು ವಿಷಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...