Homeಮುಖಪುಟಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

ಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

- Advertisement -
- Advertisement -

ಮಣಿಪುರದಲ್ಲಿ ಭುಗಿಲೆದ್ದಿರುವ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಕಲಹದಲ್ಲಿ, “253 ಚರ್ಚ್‌ಗಳನ್ನು ಸುಟ್ಟು ಹಾಕಲಾಗಿದೆ” ಎಂದು ಚುರಾಚಂದ್‌ಪುರ ಜಿಲ್ಲೆಯ ಬುಡಕಟ್ಟುಗಳ ಒಕ್ಕೂಟವಾದ ‘ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ’ (ಐಟಿಎಲ್‌ಎಫ್‌) ಆರೋಪಿಸಿದೆ.

ಇಂಫಾಲ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಚುರಾಚಂದ್‌ಪುರಕ್ಕೆ ಸೋಮವಾರ ಭೇಟಿ ನೀಡಿದ್ದ ರಾಜ್ಯಪಾಲ ಅನುಸೂಯಾ ಉಯಿಕೆ ಅವರಿಗೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ ಐಟಿಎಲ್‌ಎಫ್ ಈ ಆರೋಪಗಳನ್ನು ಮಾಡಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಬೇಕೆಂದು ಬಹುಸಂಖ್ಯಾತ ಮೈತೇಯಿಗಳು ಇಟ್ಟಿರುವ ಬೇಡಿಕೆಯನ್ನು ವಿರೋಧಿಸಿ 10 ಗುಡ್ಡಗಾಡು ಜಿಲ್ಲೆಗಳಲ್ಲಿ ಐಕಮತ ರ್‍ಯಾಲಿ ನಡೆದಿತ್ತು. ಆನಂತರ ಮೇ 3ರಂದು ಪ್ರಾರಂಭವಾದ ಹಿಂಸಾಚಾರದಲ್ಲಿ ಅತಿ ಹೆಚ್ಚು ಹಿಂಸಾಚಾರವನ್ನು ಕಂಡ ಜಿಲ್ಲೆಗಳ ಪೈಕಿ ಚುರಚಂದ್‌ಪುರವೂ ಒಂದಾಗಿದೆ.

ಹಿಂದೂ ಮೈತೇಯಿ ಮತ್ತು ಕ್ರಿಶ್ಚಿಯನ್ ಕುಕಿಗಳ ನಡುವೆ ನಡೆದ ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ, 50,698 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

ಸೋಮವಾರ ಚುರಚಂದಪುರ ಗ್ರಾಮದ ಮೇಲೆ ನಡೆದ ದಾಳಿಯಲ್ಲಿ ಕೂಡ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಐಟಿಎಲ್ಎಫ್ ಮಾಹಿತಿ ನೀಡಿದೆ.

“ಮೈತೇಯಿ ಮತ್ತು ಮಣಿಪುರದ ಕೋಮುವಾದಿ ಸರ್ಕಾರದ ಜನಾಂಗೀಯ ಶುದ್ಧೀಕರಣ ಅಭಿಯಾನದ ಪರಿಣಾಮವಾಗಿ ಕುಕಿ-ಜೋ ಜನರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಇತಿಹಾಸದ ಕಂಡ ಅತ್ಯಂತ ಸವಾಲಿನ ದಿನಗಳನ್ನು ಕುಕಿಗಳು ಸಹಿಸಿಕೊಳ್ಳುತ್ತಿದ್ದಾರೆ” ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಮೂರು ಪುಟಗಳ ಜ್ಞಾಪಕ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಮೇ 3 ರಿಂದ ನಮ್ಮ ಜನರ ವಿರುದ್ಧ ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ನಡೆಯುತ್ತಿದೆ. ನಾವು 100 ಕ್ಕೂ ಹೆಚ್ಚು ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಸತ್ತವರ ಸಂಖ್ಯೆ ಸ್ಪಷ್ಟವಾಗಿಲ್ಲ. ಇದಲ್ಲದೆ 160 ಹಳ್ಳಿಗಳಲ್ಲಿ ಸುಮಾರು 4,500 ಮನೆಗಳು ಸುಟ್ಟುಹೋಗಿವೆ, ಇದರಿಂದಾಗಿ ಸುಮಾರು 36,000 ಜನರು ನಿರಾಶ್ರಿತರಾಗಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದೆ.

ಐಟಿಎಲ್‌ಎಫ್‌ ಅಧ್ಯಕ್ಷ ಪಗಿನ್ ಹಾಕಿಪ್, ಕಾರ್ಯದರ್ಶಿ ಮುವಾನ್ ಟಾಂಬಿಂಗ್ ನೀಡಿದ ಜ್ಞಾಪಕ ಪತ್ರದಲ್ಲಿ, “253 ಚರ್ಚ್‌ಗಳನ್ನು ಸುಟ್ಟುಹಾಕಲಾಯಿತು. ನಮ್ಮ ಸಾವಿರಾರು ಜನರು ದೇಶದ ವಿವಿಧ ಸ್ಥಳಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ” ಎಂದು ನೋವು ತೋಡಿಕೊಳ್ಳಲಾಗಿದೆ.

ಫೆಬ್ರವರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಪಾಲರು ಚರ್ಚಂದಪುರಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಎಂದು ಐಟಿಎಲ್‌ಎಫ್ ನಾಯಕರೊಬ್ಬರು ತಿಳಿಸಿದ್ದಾರೆ.

ಸತ್ತವರ ಪಟ್ಟಿ, ಹಿಂಸಾಚಾರ ಭುಗಿಲೆದ್ದ ಬಳಿಕ ನಾಶವಾದ ಚರ್ಚ್‌ಗಳು, ಆಡಳಿತಾತ್ಮಕ ಕಟ್ಟಡಗಳು, ಸುಟ್ಟುಹೋದ ಹಳ್ಳಿಗಳ ವಿವರಗಳನ್ನು ಜ್ಞಾಪಕ ಪತ್ರದೊಂದಿಗೆ ಐಟಿಎಲ್‌ಎಫ್‌ ಲಗತ್ತಿಸಿದೆ.

ನಿರಾಶ್ರಿತ ಶಿಬಿರಗಳ ವಿವರದೊಂದಿಗೆ, ಅರಾಂಬೈ ಟೆಂಗೋಲ್‌ ಸಂಘಟನೆ ಜೊತೆಯಲ್ಲಿ ರಾಜ್ಯ ನಾಯಕರು ಪಾಲ್ಗೊಂಡಿರುವುದನ್ನು ದೃಢೀಕರಿಸುವ ಫೋಟೋಗಳನ್ನೂ ಐಟಿಎಲ್‌ಎಫ್‌ ಒದಗಿಸಿದೆ.

ಅರಾಂಬೈ ತೆಂಗೋಲ್ ಎಂಬುದು ಮೇತೇಯಿ ಸಂಘಟನೆಯಾಗಿದ್ದು, ಕುಕಿಗಳು ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದೆ. ಈ ಸಂಘಟನೆಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಕಳೆದ ವಾರ ಮಾಧ್ಯಮವೊಂದು ವರದಿ ಮಾಡಿತ್ತು.

ಇದನ್ನೂ ಓದಿರಿ: ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ಹಾನಿಗೊಳಗಾದ ಚರ್ಚ್ ಆಸ್ತಿಗಳ ಬಗ್ಗೆ ಕೇಳಿದಾಗ, ಐಟಿಎಲ್‌ಎಫ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಗಿಂಜಾ ವುಲ್ಜಾಂಗ್ ಪ್ರತಿಕ್ರಿಯಿಸಿ, “ಮುಖ್ಯವಾಗಿ ಇಂಫಾಲ್ ಕಣಿವೆ, ಗುಡ್ಡಗಾಡು ಪ್ರದೇಶಗಳಲ್ಲಿ ಚರ್ಚ್‌ಗಳ ಜೊತೆಗೆ 93 ಚರ್ಚ್ ಆಡಳಿತ ಕಟ್ಟಡಗಳು ಮತ್ತು ಕ್ವಾರ್ಟರ್‌ಗಳನ್ನು ಸುಟ್ಟುಹಾಕಲಾಗಿದೆ” ಎಂದು ತಿಳಿಸಿದ್ದಾರೆ.

ಇಂಫಾಲ್ ಕಣಿವೆಯ ಆರು ಜಿಲ್ಲೆಗಳಲ್ಲಿ ಮೈತೇಯಿ ಪ್ರಾಬಲ್ಯವಿದೆ. 10 ಗುಡ್ಡಗಾಡು ಜಿಲ್ಲೆಗಳಲ್ಲಿ ಬುಡಕಟ್ಟು ಜನರನ್ನು ಹೆಚ್ಚಿದ್ದಾರೆ. ನಾಗಾಗಳು ಮತ್ತು ಕುಕಿಗಳು ಗುಡ್ಡಗಾಡು ಜಿಲ್ಲೆಗಳಲ್ಲಿ ಪ್ರಾಬಲ್ಯ ಹೊಂದಿದ್ದಾರೆ.

ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಆಫ್ ನಾರ್ತ್ ಈಸ್ಟ್ ಇಂಡಿಯಾದ ಸದಸ್ಯ ಅಲೆನ್ ಬ್ರೂಕ್ಸ್ ಅವರು ‘ದಿ ಟೆಲಿಗ್ರಾಫ್‌’ಗೆ ಪ್ರತಿಕ್ರಿಯಿಸಿ, “ಹಿಂಸಾಚಾರವು ಬಹಳ ದೊಡ್ಡ ಮಟ್ಟದಲ್ಲಿದೆ ಮತ್ತು ಅತ್ಯಂತ ದುರಂತಮಯವಾಗಿದೆ. ಹಿಂಸಾಚಾರ ಅಂಕಿ-ಅಂಶಗಳು ನಿಜವೆಂದು ನಾವು ನಂಬುತ್ತೇವೆ. ಏಕೆಂದರೆ ಇವುಗಳನ್ನು ಇಲ್ಲಿನ ಸ್ಥಳೀಯ ಸಂಸ್ಥೆಗಳು ರುಜುವಾತುಪಡಿಸಿವೆ. ಆದರೆ ಪ್ರಶ್ನೆ ಇರುವುದು ಒಂದು ಚರ್ಚ್ ಅನ್ನು ಸುಡುವುದು ಅಥವಾ 1,000 ಚರ್ಚ್‌ಗಳನ್ನು ಸುಡುವುದರ ಬಗ್ಗೆ ಅಲ್ಲ. ಜನರ ಸುರಕ್ಷತೆ ಮತ್ತು ದೇಶದ ಜಾತ್ಯತೀತತೆ ಅಪಾಯದಲ್ಲಿದೆ” ಎಂದು ವಿಷಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...