Homeಮುಖಪುಟಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

ಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

- Advertisement -
- Advertisement -

ಮಣಿಪುರದಲ್ಲಿ ಭುಗಿಲೆದ್ದಿರುವ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಕಲಹದಲ್ಲಿ, “253 ಚರ್ಚ್‌ಗಳನ್ನು ಸುಟ್ಟು ಹಾಕಲಾಗಿದೆ” ಎಂದು ಚುರಾಚಂದ್‌ಪುರ ಜಿಲ್ಲೆಯ ಬುಡಕಟ್ಟುಗಳ ಒಕ್ಕೂಟವಾದ ‘ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ’ (ಐಟಿಎಲ್‌ಎಫ್‌) ಆರೋಪಿಸಿದೆ.

ಇಂಫಾಲ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಚುರಾಚಂದ್‌ಪುರಕ್ಕೆ ಸೋಮವಾರ ಭೇಟಿ ನೀಡಿದ್ದ ರಾಜ್ಯಪಾಲ ಅನುಸೂಯಾ ಉಯಿಕೆ ಅವರಿಗೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ ಐಟಿಎಲ್‌ಎಫ್ ಈ ಆರೋಪಗಳನ್ನು ಮಾಡಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಬೇಕೆಂದು ಬಹುಸಂಖ್ಯಾತ ಮೈತೇಯಿಗಳು ಇಟ್ಟಿರುವ ಬೇಡಿಕೆಯನ್ನು ವಿರೋಧಿಸಿ 10 ಗುಡ್ಡಗಾಡು ಜಿಲ್ಲೆಗಳಲ್ಲಿ ಐಕಮತ ರ್‍ಯಾಲಿ ನಡೆದಿತ್ತು. ಆನಂತರ ಮೇ 3ರಂದು ಪ್ರಾರಂಭವಾದ ಹಿಂಸಾಚಾರದಲ್ಲಿ ಅತಿ ಹೆಚ್ಚು ಹಿಂಸಾಚಾರವನ್ನು ಕಂಡ ಜಿಲ್ಲೆಗಳ ಪೈಕಿ ಚುರಚಂದ್‌ಪುರವೂ ಒಂದಾಗಿದೆ.

ಹಿಂದೂ ಮೈತೇಯಿ ಮತ್ತು ಕ್ರಿಶ್ಚಿಯನ್ ಕುಕಿಗಳ ನಡುವೆ ನಡೆದ ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ, 50,698 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

ಸೋಮವಾರ ಚುರಚಂದಪುರ ಗ್ರಾಮದ ಮೇಲೆ ನಡೆದ ದಾಳಿಯಲ್ಲಿ ಕೂಡ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಐಟಿಎಲ್ಎಫ್ ಮಾಹಿತಿ ನೀಡಿದೆ.

“ಮೈತೇಯಿ ಮತ್ತು ಮಣಿಪುರದ ಕೋಮುವಾದಿ ಸರ್ಕಾರದ ಜನಾಂಗೀಯ ಶುದ್ಧೀಕರಣ ಅಭಿಯಾನದ ಪರಿಣಾಮವಾಗಿ ಕುಕಿ-ಜೋ ಜನರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಇತಿಹಾಸದ ಕಂಡ ಅತ್ಯಂತ ಸವಾಲಿನ ದಿನಗಳನ್ನು ಕುಕಿಗಳು ಸಹಿಸಿಕೊಳ್ಳುತ್ತಿದ್ದಾರೆ” ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಮೂರು ಪುಟಗಳ ಜ್ಞಾಪಕ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಮೇ 3 ರಿಂದ ನಮ್ಮ ಜನರ ವಿರುದ್ಧ ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ನಡೆಯುತ್ತಿದೆ. ನಾವು 100 ಕ್ಕೂ ಹೆಚ್ಚು ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಸತ್ತವರ ಸಂಖ್ಯೆ ಸ್ಪಷ್ಟವಾಗಿಲ್ಲ. ಇದಲ್ಲದೆ 160 ಹಳ್ಳಿಗಳಲ್ಲಿ ಸುಮಾರು 4,500 ಮನೆಗಳು ಸುಟ್ಟುಹೋಗಿವೆ, ಇದರಿಂದಾಗಿ ಸುಮಾರು 36,000 ಜನರು ನಿರಾಶ್ರಿತರಾಗಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದೆ.

ಐಟಿಎಲ್‌ಎಫ್‌ ಅಧ್ಯಕ್ಷ ಪಗಿನ್ ಹಾಕಿಪ್, ಕಾರ್ಯದರ್ಶಿ ಮುವಾನ್ ಟಾಂಬಿಂಗ್ ನೀಡಿದ ಜ್ಞಾಪಕ ಪತ್ರದಲ್ಲಿ, “253 ಚರ್ಚ್‌ಗಳನ್ನು ಸುಟ್ಟುಹಾಕಲಾಯಿತು. ನಮ್ಮ ಸಾವಿರಾರು ಜನರು ದೇಶದ ವಿವಿಧ ಸ್ಥಳಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ” ಎಂದು ನೋವು ತೋಡಿಕೊಳ್ಳಲಾಗಿದೆ.

ಫೆಬ್ರವರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಪಾಲರು ಚರ್ಚಂದಪುರಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಎಂದು ಐಟಿಎಲ್‌ಎಫ್ ನಾಯಕರೊಬ್ಬರು ತಿಳಿಸಿದ್ದಾರೆ.

ಸತ್ತವರ ಪಟ್ಟಿ, ಹಿಂಸಾಚಾರ ಭುಗಿಲೆದ್ದ ಬಳಿಕ ನಾಶವಾದ ಚರ್ಚ್‌ಗಳು, ಆಡಳಿತಾತ್ಮಕ ಕಟ್ಟಡಗಳು, ಸುಟ್ಟುಹೋದ ಹಳ್ಳಿಗಳ ವಿವರಗಳನ್ನು ಜ್ಞಾಪಕ ಪತ್ರದೊಂದಿಗೆ ಐಟಿಎಲ್‌ಎಫ್‌ ಲಗತ್ತಿಸಿದೆ.

ನಿರಾಶ್ರಿತ ಶಿಬಿರಗಳ ವಿವರದೊಂದಿಗೆ, ಅರಾಂಬೈ ಟೆಂಗೋಲ್‌ ಸಂಘಟನೆ ಜೊತೆಯಲ್ಲಿ ರಾಜ್ಯ ನಾಯಕರು ಪಾಲ್ಗೊಂಡಿರುವುದನ್ನು ದೃಢೀಕರಿಸುವ ಫೋಟೋಗಳನ್ನೂ ಐಟಿಎಲ್‌ಎಫ್‌ ಒದಗಿಸಿದೆ.

ಅರಾಂಬೈ ತೆಂಗೋಲ್ ಎಂಬುದು ಮೇತೇಯಿ ಸಂಘಟನೆಯಾಗಿದ್ದು, ಕುಕಿಗಳು ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದೆ. ಈ ಸಂಘಟನೆಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಕಳೆದ ವಾರ ಮಾಧ್ಯಮವೊಂದು ವರದಿ ಮಾಡಿತ್ತು.

ಇದನ್ನೂ ಓದಿರಿ: ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ಹಾನಿಗೊಳಗಾದ ಚರ್ಚ್ ಆಸ್ತಿಗಳ ಬಗ್ಗೆ ಕೇಳಿದಾಗ, ಐಟಿಎಲ್‌ಎಫ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಗಿಂಜಾ ವುಲ್ಜಾಂಗ್ ಪ್ರತಿಕ್ರಿಯಿಸಿ, “ಮುಖ್ಯವಾಗಿ ಇಂಫಾಲ್ ಕಣಿವೆ, ಗುಡ್ಡಗಾಡು ಪ್ರದೇಶಗಳಲ್ಲಿ ಚರ್ಚ್‌ಗಳ ಜೊತೆಗೆ 93 ಚರ್ಚ್ ಆಡಳಿತ ಕಟ್ಟಡಗಳು ಮತ್ತು ಕ್ವಾರ್ಟರ್‌ಗಳನ್ನು ಸುಟ್ಟುಹಾಕಲಾಗಿದೆ” ಎಂದು ತಿಳಿಸಿದ್ದಾರೆ.

ಇಂಫಾಲ್ ಕಣಿವೆಯ ಆರು ಜಿಲ್ಲೆಗಳಲ್ಲಿ ಮೈತೇಯಿ ಪ್ರಾಬಲ್ಯವಿದೆ. 10 ಗುಡ್ಡಗಾಡು ಜಿಲ್ಲೆಗಳಲ್ಲಿ ಬುಡಕಟ್ಟು ಜನರನ್ನು ಹೆಚ್ಚಿದ್ದಾರೆ. ನಾಗಾಗಳು ಮತ್ತು ಕುಕಿಗಳು ಗುಡ್ಡಗಾಡು ಜಿಲ್ಲೆಗಳಲ್ಲಿ ಪ್ರಾಬಲ್ಯ ಹೊಂದಿದ್ದಾರೆ.

ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಆಫ್ ನಾರ್ತ್ ಈಸ್ಟ್ ಇಂಡಿಯಾದ ಸದಸ್ಯ ಅಲೆನ್ ಬ್ರೂಕ್ಸ್ ಅವರು ‘ದಿ ಟೆಲಿಗ್ರಾಫ್‌’ಗೆ ಪ್ರತಿಕ್ರಿಯಿಸಿ, “ಹಿಂಸಾಚಾರವು ಬಹಳ ದೊಡ್ಡ ಮಟ್ಟದಲ್ಲಿದೆ ಮತ್ತು ಅತ್ಯಂತ ದುರಂತಮಯವಾಗಿದೆ. ಹಿಂಸಾಚಾರ ಅಂಕಿ-ಅಂಶಗಳು ನಿಜವೆಂದು ನಾವು ನಂಬುತ್ತೇವೆ. ಏಕೆಂದರೆ ಇವುಗಳನ್ನು ಇಲ್ಲಿನ ಸ್ಥಳೀಯ ಸಂಸ್ಥೆಗಳು ರುಜುವಾತುಪಡಿಸಿವೆ. ಆದರೆ ಪ್ರಶ್ನೆ ಇರುವುದು ಒಂದು ಚರ್ಚ್ ಅನ್ನು ಸುಡುವುದು ಅಥವಾ 1,000 ಚರ್ಚ್‌ಗಳನ್ನು ಸುಡುವುದರ ಬಗ್ಗೆ ಅಲ್ಲ. ಜನರ ಸುರಕ್ಷತೆ ಮತ್ತು ದೇಶದ ಜಾತ್ಯತೀತತೆ ಅಪಾಯದಲ್ಲಿದೆ” ಎಂದು ವಿಷಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...