Homeಮುಖಪುಟಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

ಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

- Advertisement -
- Advertisement -

ಮಣಿಪುರದಲ್ಲಿ ಭುಗಿಲೆದ್ದಿರುವ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಕಲಹದಲ್ಲಿ, “253 ಚರ್ಚ್‌ಗಳನ್ನು ಸುಟ್ಟು ಹಾಕಲಾಗಿದೆ” ಎಂದು ಚುರಾಚಂದ್‌ಪುರ ಜಿಲ್ಲೆಯ ಬುಡಕಟ್ಟುಗಳ ಒಕ್ಕೂಟವಾದ ‘ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ’ (ಐಟಿಎಲ್‌ಎಫ್‌) ಆರೋಪಿಸಿದೆ.

ಇಂಫಾಲ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಚುರಾಚಂದ್‌ಪುರಕ್ಕೆ ಸೋಮವಾರ ಭೇಟಿ ನೀಡಿದ್ದ ರಾಜ್ಯಪಾಲ ಅನುಸೂಯಾ ಉಯಿಕೆ ಅವರಿಗೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ ಐಟಿಎಲ್‌ಎಫ್ ಈ ಆರೋಪಗಳನ್ನು ಮಾಡಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಬೇಕೆಂದು ಬಹುಸಂಖ್ಯಾತ ಮೈತೇಯಿಗಳು ಇಟ್ಟಿರುವ ಬೇಡಿಕೆಯನ್ನು ವಿರೋಧಿಸಿ 10 ಗುಡ್ಡಗಾಡು ಜಿಲ್ಲೆಗಳಲ್ಲಿ ಐಕಮತ ರ್‍ಯಾಲಿ ನಡೆದಿತ್ತು. ಆನಂತರ ಮೇ 3ರಂದು ಪ್ರಾರಂಭವಾದ ಹಿಂಸಾಚಾರದಲ್ಲಿ ಅತಿ ಹೆಚ್ಚು ಹಿಂಸಾಚಾರವನ್ನು ಕಂಡ ಜಿಲ್ಲೆಗಳ ಪೈಕಿ ಚುರಚಂದ್‌ಪುರವೂ ಒಂದಾಗಿದೆ.

ಹಿಂದೂ ಮೈತೇಯಿ ಮತ್ತು ಕ್ರಿಶ್ಚಿಯನ್ ಕುಕಿಗಳ ನಡುವೆ ನಡೆದ ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ, 50,698 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

ಸೋಮವಾರ ಚುರಚಂದಪುರ ಗ್ರಾಮದ ಮೇಲೆ ನಡೆದ ದಾಳಿಯಲ್ಲಿ ಕೂಡ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಐಟಿಎಲ್ಎಫ್ ಮಾಹಿತಿ ನೀಡಿದೆ.

“ಮೈತೇಯಿ ಮತ್ತು ಮಣಿಪುರದ ಕೋಮುವಾದಿ ಸರ್ಕಾರದ ಜನಾಂಗೀಯ ಶುದ್ಧೀಕರಣ ಅಭಿಯಾನದ ಪರಿಣಾಮವಾಗಿ ಕುಕಿ-ಜೋ ಜನರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಇತಿಹಾಸದ ಕಂಡ ಅತ್ಯಂತ ಸವಾಲಿನ ದಿನಗಳನ್ನು ಕುಕಿಗಳು ಸಹಿಸಿಕೊಳ್ಳುತ್ತಿದ್ದಾರೆ” ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಮೂರು ಪುಟಗಳ ಜ್ಞಾಪಕ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಮೇ 3 ರಿಂದ ನಮ್ಮ ಜನರ ವಿರುದ್ಧ ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ನಡೆಯುತ್ತಿದೆ. ನಾವು 100 ಕ್ಕೂ ಹೆಚ್ಚು ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಸತ್ತವರ ಸಂಖ್ಯೆ ಸ್ಪಷ್ಟವಾಗಿಲ್ಲ. ಇದಲ್ಲದೆ 160 ಹಳ್ಳಿಗಳಲ್ಲಿ ಸುಮಾರು 4,500 ಮನೆಗಳು ಸುಟ್ಟುಹೋಗಿವೆ, ಇದರಿಂದಾಗಿ ಸುಮಾರು 36,000 ಜನರು ನಿರಾಶ್ರಿತರಾಗಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದೆ.

ಐಟಿಎಲ್‌ಎಫ್‌ ಅಧ್ಯಕ್ಷ ಪಗಿನ್ ಹಾಕಿಪ್, ಕಾರ್ಯದರ್ಶಿ ಮುವಾನ್ ಟಾಂಬಿಂಗ್ ನೀಡಿದ ಜ್ಞಾಪಕ ಪತ್ರದಲ್ಲಿ, “253 ಚರ್ಚ್‌ಗಳನ್ನು ಸುಟ್ಟುಹಾಕಲಾಯಿತು. ನಮ್ಮ ಸಾವಿರಾರು ಜನರು ದೇಶದ ವಿವಿಧ ಸ್ಥಳಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ” ಎಂದು ನೋವು ತೋಡಿಕೊಳ್ಳಲಾಗಿದೆ.

ಫೆಬ್ರವರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಪಾಲರು ಚರ್ಚಂದಪುರಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಎಂದು ಐಟಿಎಲ್‌ಎಫ್ ನಾಯಕರೊಬ್ಬರು ತಿಳಿಸಿದ್ದಾರೆ.

ಸತ್ತವರ ಪಟ್ಟಿ, ಹಿಂಸಾಚಾರ ಭುಗಿಲೆದ್ದ ಬಳಿಕ ನಾಶವಾದ ಚರ್ಚ್‌ಗಳು, ಆಡಳಿತಾತ್ಮಕ ಕಟ್ಟಡಗಳು, ಸುಟ್ಟುಹೋದ ಹಳ್ಳಿಗಳ ವಿವರಗಳನ್ನು ಜ್ಞಾಪಕ ಪತ್ರದೊಂದಿಗೆ ಐಟಿಎಲ್‌ಎಫ್‌ ಲಗತ್ತಿಸಿದೆ.

ನಿರಾಶ್ರಿತ ಶಿಬಿರಗಳ ವಿವರದೊಂದಿಗೆ, ಅರಾಂಬೈ ಟೆಂಗೋಲ್‌ ಸಂಘಟನೆ ಜೊತೆಯಲ್ಲಿ ರಾಜ್ಯ ನಾಯಕರು ಪಾಲ್ಗೊಂಡಿರುವುದನ್ನು ದೃಢೀಕರಿಸುವ ಫೋಟೋಗಳನ್ನೂ ಐಟಿಎಲ್‌ಎಫ್‌ ಒದಗಿಸಿದೆ.

ಅರಾಂಬೈ ತೆಂಗೋಲ್ ಎಂಬುದು ಮೇತೇಯಿ ಸಂಘಟನೆಯಾಗಿದ್ದು, ಕುಕಿಗಳು ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದೆ. ಈ ಸಂಘಟನೆಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಕಳೆದ ವಾರ ಮಾಧ್ಯಮವೊಂದು ವರದಿ ಮಾಡಿತ್ತು.

ಇದನ್ನೂ ಓದಿರಿ: ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ಹಾನಿಗೊಳಗಾದ ಚರ್ಚ್ ಆಸ್ತಿಗಳ ಬಗ್ಗೆ ಕೇಳಿದಾಗ, ಐಟಿಎಲ್‌ಎಫ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಗಿಂಜಾ ವುಲ್ಜಾಂಗ್ ಪ್ರತಿಕ್ರಿಯಿಸಿ, “ಮುಖ್ಯವಾಗಿ ಇಂಫಾಲ್ ಕಣಿವೆ, ಗುಡ್ಡಗಾಡು ಪ್ರದೇಶಗಳಲ್ಲಿ ಚರ್ಚ್‌ಗಳ ಜೊತೆಗೆ 93 ಚರ್ಚ್ ಆಡಳಿತ ಕಟ್ಟಡಗಳು ಮತ್ತು ಕ್ವಾರ್ಟರ್‌ಗಳನ್ನು ಸುಟ್ಟುಹಾಕಲಾಗಿದೆ” ಎಂದು ತಿಳಿಸಿದ್ದಾರೆ.

ಇಂಫಾಲ್ ಕಣಿವೆಯ ಆರು ಜಿಲ್ಲೆಗಳಲ್ಲಿ ಮೈತೇಯಿ ಪ್ರಾಬಲ್ಯವಿದೆ. 10 ಗುಡ್ಡಗಾಡು ಜಿಲ್ಲೆಗಳಲ್ಲಿ ಬುಡಕಟ್ಟು ಜನರನ್ನು ಹೆಚ್ಚಿದ್ದಾರೆ. ನಾಗಾಗಳು ಮತ್ತು ಕುಕಿಗಳು ಗುಡ್ಡಗಾಡು ಜಿಲ್ಲೆಗಳಲ್ಲಿ ಪ್ರಾಬಲ್ಯ ಹೊಂದಿದ್ದಾರೆ.

ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಆಫ್ ನಾರ್ತ್ ಈಸ್ಟ್ ಇಂಡಿಯಾದ ಸದಸ್ಯ ಅಲೆನ್ ಬ್ರೂಕ್ಸ್ ಅವರು ‘ದಿ ಟೆಲಿಗ್ರಾಫ್‌’ಗೆ ಪ್ರತಿಕ್ರಿಯಿಸಿ, “ಹಿಂಸಾಚಾರವು ಬಹಳ ದೊಡ್ಡ ಮಟ್ಟದಲ್ಲಿದೆ ಮತ್ತು ಅತ್ಯಂತ ದುರಂತಮಯವಾಗಿದೆ. ಹಿಂಸಾಚಾರ ಅಂಕಿ-ಅಂಶಗಳು ನಿಜವೆಂದು ನಾವು ನಂಬುತ್ತೇವೆ. ಏಕೆಂದರೆ ಇವುಗಳನ್ನು ಇಲ್ಲಿನ ಸ್ಥಳೀಯ ಸಂಸ್ಥೆಗಳು ರುಜುವಾತುಪಡಿಸಿವೆ. ಆದರೆ ಪ್ರಶ್ನೆ ಇರುವುದು ಒಂದು ಚರ್ಚ್ ಅನ್ನು ಸುಡುವುದು ಅಥವಾ 1,000 ಚರ್ಚ್‌ಗಳನ್ನು ಸುಡುವುದರ ಬಗ್ಗೆ ಅಲ್ಲ. ಜನರ ಸುರಕ್ಷತೆ ಮತ್ತು ದೇಶದ ಜಾತ್ಯತೀತತೆ ಅಪಾಯದಲ್ಲಿದೆ” ಎಂದು ವಿಷಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...