Homeಮುಖಪುಟಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

ಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

- Advertisement -
- Advertisement -

ಮಣಿಪುರದಲ್ಲಿ ಭುಗಿಲೆದ್ದಿರುವ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಕಲಹದಲ್ಲಿ, “253 ಚರ್ಚ್‌ಗಳನ್ನು ಸುಟ್ಟು ಹಾಕಲಾಗಿದೆ” ಎಂದು ಚುರಾಚಂದ್‌ಪುರ ಜಿಲ್ಲೆಯ ಬುಡಕಟ್ಟುಗಳ ಒಕ್ಕೂಟವಾದ ‘ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ’ (ಐಟಿಎಲ್‌ಎಫ್‌) ಆರೋಪಿಸಿದೆ.

ಇಂಫಾಲ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಚುರಾಚಂದ್‌ಪುರಕ್ಕೆ ಸೋಮವಾರ ಭೇಟಿ ನೀಡಿದ್ದ ರಾಜ್ಯಪಾಲ ಅನುಸೂಯಾ ಉಯಿಕೆ ಅವರಿಗೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ ಐಟಿಎಲ್‌ಎಫ್ ಈ ಆರೋಪಗಳನ್ನು ಮಾಡಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಬೇಕೆಂದು ಬಹುಸಂಖ್ಯಾತ ಮೈತೇಯಿಗಳು ಇಟ್ಟಿರುವ ಬೇಡಿಕೆಯನ್ನು ವಿರೋಧಿಸಿ 10 ಗುಡ್ಡಗಾಡು ಜಿಲ್ಲೆಗಳಲ್ಲಿ ಐಕಮತ ರ್‍ಯಾಲಿ ನಡೆದಿತ್ತು. ಆನಂತರ ಮೇ 3ರಂದು ಪ್ರಾರಂಭವಾದ ಹಿಂಸಾಚಾರದಲ್ಲಿ ಅತಿ ಹೆಚ್ಚು ಹಿಂಸಾಚಾರವನ್ನು ಕಂಡ ಜಿಲ್ಲೆಗಳ ಪೈಕಿ ಚುರಚಂದ್‌ಪುರವೂ ಒಂದಾಗಿದೆ.

ಹಿಂದೂ ಮೈತೇಯಿ ಮತ್ತು ಕ್ರಿಶ್ಚಿಯನ್ ಕುಕಿಗಳ ನಡುವೆ ನಡೆದ ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ, 50,698 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

ಸೋಮವಾರ ಚುರಚಂದಪುರ ಗ್ರಾಮದ ಮೇಲೆ ನಡೆದ ದಾಳಿಯಲ್ಲಿ ಕೂಡ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಐಟಿಎಲ್ಎಫ್ ಮಾಹಿತಿ ನೀಡಿದೆ.

“ಮೈತೇಯಿ ಮತ್ತು ಮಣಿಪುರದ ಕೋಮುವಾದಿ ಸರ್ಕಾರದ ಜನಾಂಗೀಯ ಶುದ್ಧೀಕರಣ ಅಭಿಯಾನದ ಪರಿಣಾಮವಾಗಿ ಕುಕಿ-ಜೋ ಜನರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಇತಿಹಾಸದ ಕಂಡ ಅತ್ಯಂತ ಸವಾಲಿನ ದಿನಗಳನ್ನು ಕುಕಿಗಳು ಸಹಿಸಿಕೊಳ್ಳುತ್ತಿದ್ದಾರೆ” ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಮೂರು ಪುಟಗಳ ಜ್ಞಾಪಕ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಮೇ 3 ರಿಂದ ನಮ್ಮ ಜನರ ವಿರುದ್ಧ ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ನಡೆಯುತ್ತಿದೆ. ನಾವು 100 ಕ್ಕೂ ಹೆಚ್ಚು ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಸತ್ತವರ ಸಂಖ್ಯೆ ಸ್ಪಷ್ಟವಾಗಿಲ್ಲ. ಇದಲ್ಲದೆ 160 ಹಳ್ಳಿಗಳಲ್ಲಿ ಸುಮಾರು 4,500 ಮನೆಗಳು ಸುಟ್ಟುಹೋಗಿವೆ, ಇದರಿಂದಾಗಿ ಸುಮಾರು 36,000 ಜನರು ನಿರಾಶ್ರಿತರಾಗಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದೆ.

ಐಟಿಎಲ್‌ಎಫ್‌ ಅಧ್ಯಕ್ಷ ಪಗಿನ್ ಹಾಕಿಪ್, ಕಾರ್ಯದರ್ಶಿ ಮುವಾನ್ ಟಾಂಬಿಂಗ್ ನೀಡಿದ ಜ್ಞಾಪಕ ಪತ್ರದಲ್ಲಿ, “253 ಚರ್ಚ್‌ಗಳನ್ನು ಸುಟ್ಟುಹಾಕಲಾಯಿತು. ನಮ್ಮ ಸಾವಿರಾರು ಜನರು ದೇಶದ ವಿವಿಧ ಸ್ಥಳಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ” ಎಂದು ನೋವು ತೋಡಿಕೊಳ್ಳಲಾಗಿದೆ.

ಫೆಬ್ರವರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಪಾಲರು ಚರ್ಚಂದಪುರಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಎಂದು ಐಟಿಎಲ್‌ಎಫ್ ನಾಯಕರೊಬ್ಬರು ತಿಳಿಸಿದ್ದಾರೆ.

ಸತ್ತವರ ಪಟ್ಟಿ, ಹಿಂಸಾಚಾರ ಭುಗಿಲೆದ್ದ ಬಳಿಕ ನಾಶವಾದ ಚರ್ಚ್‌ಗಳು, ಆಡಳಿತಾತ್ಮಕ ಕಟ್ಟಡಗಳು, ಸುಟ್ಟುಹೋದ ಹಳ್ಳಿಗಳ ವಿವರಗಳನ್ನು ಜ್ಞಾಪಕ ಪತ್ರದೊಂದಿಗೆ ಐಟಿಎಲ್‌ಎಫ್‌ ಲಗತ್ತಿಸಿದೆ.

ನಿರಾಶ್ರಿತ ಶಿಬಿರಗಳ ವಿವರದೊಂದಿಗೆ, ಅರಾಂಬೈ ಟೆಂಗೋಲ್‌ ಸಂಘಟನೆ ಜೊತೆಯಲ್ಲಿ ರಾಜ್ಯ ನಾಯಕರು ಪಾಲ್ಗೊಂಡಿರುವುದನ್ನು ದೃಢೀಕರಿಸುವ ಫೋಟೋಗಳನ್ನೂ ಐಟಿಎಲ್‌ಎಫ್‌ ಒದಗಿಸಿದೆ.

ಅರಾಂಬೈ ತೆಂಗೋಲ್ ಎಂಬುದು ಮೇತೇಯಿ ಸಂಘಟನೆಯಾಗಿದ್ದು, ಕುಕಿಗಳು ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದೆ. ಈ ಸಂಘಟನೆಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಕಳೆದ ವಾರ ಮಾಧ್ಯಮವೊಂದು ವರದಿ ಮಾಡಿತ್ತು.

ಇದನ್ನೂ ಓದಿರಿ: ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ಹಾನಿಗೊಳಗಾದ ಚರ್ಚ್ ಆಸ್ತಿಗಳ ಬಗ್ಗೆ ಕೇಳಿದಾಗ, ಐಟಿಎಲ್‌ಎಫ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಗಿಂಜಾ ವುಲ್ಜಾಂಗ್ ಪ್ರತಿಕ್ರಿಯಿಸಿ, “ಮುಖ್ಯವಾಗಿ ಇಂಫಾಲ್ ಕಣಿವೆ, ಗುಡ್ಡಗಾಡು ಪ್ರದೇಶಗಳಲ್ಲಿ ಚರ್ಚ್‌ಗಳ ಜೊತೆಗೆ 93 ಚರ್ಚ್ ಆಡಳಿತ ಕಟ್ಟಡಗಳು ಮತ್ತು ಕ್ವಾರ್ಟರ್‌ಗಳನ್ನು ಸುಟ್ಟುಹಾಕಲಾಗಿದೆ” ಎಂದು ತಿಳಿಸಿದ್ದಾರೆ.

ಇಂಫಾಲ್ ಕಣಿವೆಯ ಆರು ಜಿಲ್ಲೆಗಳಲ್ಲಿ ಮೈತೇಯಿ ಪ್ರಾಬಲ್ಯವಿದೆ. 10 ಗುಡ್ಡಗಾಡು ಜಿಲ್ಲೆಗಳಲ್ಲಿ ಬುಡಕಟ್ಟು ಜನರನ್ನು ಹೆಚ್ಚಿದ್ದಾರೆ. ನಾಗಾಗಳು ಮತ್ತು ಕುಕಿಗಳು ಗುಡ್ಡಗಾಡು ಜಿಲ್ಲೆಗಳಲ್ಲಿ ಪ್ರಾಬಲ್ಯ ಹೊಂದಿದ್ದಾರೆ.

ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಆಫ್ ನಾರ್ತ್ ಈಸ್ಟ್ ಇಂಡಿಯಾದ ಸದಸ್ಯ ಅಲೆನ್ ಬ್ರೂಕ್ಸ್ ಅವರು ‘ದಿ ಟೆಲಿಗ್ರಾಫ್‌’ಗೆ ಪ್ರತಿಕ್ರಿಯಿಸಿ, “ಹಿಂಸಾಚಾರವು ಬಹಳ ದೊಡ್ಡ ಮಟ್ಟದಲ್ಲಿದೆ ಮತ್ತು ಅತ್ಯಂತ ದುರಂತಮಯವಾಗಿದೆ. ಹಿಂಸಾಚಾರ ಅಂಕಿ-ಅಂಶಗಳು ನಿಜವೆಂದು ನಾವು ನಂಬುತ್ತೇವೆ. ಏಕೆಂದರೆ ಇವುಗಳನ್ನು ಇಲ್ಲಿನ ಸ್ಥಳೀಯ ಸಂಸ್ಥೆಗಳು ರುಜುವಾತುಪಡಿಸಿವೆ. ಆದರೆ ಪ್ರಶ್ನೆ ಇರುವುದು ಒಂದು ಚರ್ಚ್ ಅನ್ನು ಸುಡುವುದು ಅಥವಾ 1,000 ಚರ್ಚ್‌ಗಳನ್ನು ಸುಡುವುದರ ಬಗ್ಗೆ ಅಲ್ಲ. ಜನರ ಸುರಕ್ಷತೆ ಮತ್ತು ದೇಶದ ಜಾತ್ಯತೀತತೆ ಅಪಾಯದಲ್ಲಿದೆ” ಎಂದು ವಿಷಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...