Homeಮುಖಪುಟಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

ಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

- Advertisement -
- Advertisement -

ಮಣಿಪುರದಲ್ಲಿ ಭುಗಿಲೆದ್ದಿರುವ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಕಲಹದಲ್ಲಿ, “253 ಚರ್ಚ್‌ಗಳನ್ನು ಸುಟ್ಟು ಹಾಕಲಾಗಿದೆ” ಎಂದು ಚುರಾಚಂದ್‌ಪುರ ಜಿಲ್ಲೆಯ ಬುಡಕಟ್ಟುಗಳ ಒಕ್ಕೂಟವಾದ ‘ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ’ (ಐಟಿಎಲ್‌ಎಫ್‌) ಆರೋಪಿಸಿದೆ.

ಇಂಫಾಲ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಚುರಾಚಂದ್‌ಪುರಕ್ಕೆ ಸೋಮವಾರ ಭೇಟಿ ನೀಡಿದ್ದ ರಾಜ್ಯಪಾಲ ಅನುಸೂಯಾ ಉಯಿಕೆ ಅವರಿಗೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ ಐಟಿಎಲ್‌ಎಫ್ ಈ ಆರೋಪಗಳನ್ನು ಮಾಡಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಬೇಕೆಂದು ಬಹುಸಂಖ್ಯಾತ ಮೈತೇಯಿಗಳು ಇಟ್ಟಿರುವ ಬೇಡಿಕೆಯನ್ನು ವಿರೋಧಿಸಿ 10 ಗುಡ್ಡಗಾಡು ಜಿಲ್ಲೆಗಳಲ್ಲಿ ಐಕಮತ ರ್‍ಯಾಲಿ ನಡೆದಿತ್ತು. ಆನಂತರ ಮೇ 3ರಂದು ಪ್ರಾರಂಭವಾದ ಹಿಂಸಾಚಾರದಲ್ಲಿ ಅತಿ ಹೆಚ್ಚು ಹಿಂಸಾಚಾರವನ್ನು ಕಂಡ ಜಿಲ್ಲೆಗಳ ಪೈಕಿ ಚುರಚಂದ್‌ಪುರವೂ ಒಂದಾಗಿದೆ.

ಹಿಂದೂ ಮೈತೇಯಿ ಮತ್ತು ಕ್ರಿಶ್ಚಿಯನ್ ಕುಕಿಗಳ ನಡುವೆ ನಡೆದ ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ, 50,698 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

ಸೋಮವಾರ ಚುರಚಂದಪುರ ಗ್ರಾಮದ ಮೇಲೆ ನಡೆದ ದಾಳಿಯಲ್ಲಿ ಕೂಡ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಐಟಿಎಲ್ಎಫ್ ಮಾಹಿತಿ ನೀಡಿದೆ.

“ಮೈತೇಯಿ ಮತ್ತು ಮಣಿಪುರದ ಕೋಮುವಾದಿ ಸರ್ಕಾರದ ಜನಾಂಗೀಯ ಶುದ್ಧೀಕರಣ ಅಭಿಯಾನದ ಪರಿಣಾಮವಾಗಿ ಕುಕಿ-ಜೋ ಜನರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಇತಿಹಾಸದ ಕಂಡ ಅತ್ಯಂತ ಸವಾಲಿನ ದಿನಗಳನ್ನು ಕುಕಿಗಳು ಸಹಿಸಿಕೊಳ್ಳುತ್ತಿದ್ದಾರೆ” ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಮೂರು ಪುಟಗಳ ಜ್ಞಾಪಕ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಮೇ 3 ರಿಂದ ನಮ್ಮ ಜನರ ವಿರುದ್ಧ ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ನಡೆಯುತ್ತಿದೆ. ನಾವು 100 ಕ್ಕೂ ಹೆಚ್ಚು ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಸತ್ತವರ ಸಂಖ್ಯೆ ಸ್ಪಷ್ಟವಾಗಿಲ್ಲ. ಇದಲ್ಲದೆ 160 ಹಳ್ಳಿಗಳಲ್ಲಿ ಸುಮಾರು 4,500 ಮನೆಗಳು ಸುಟ್ಟುಹೋಗಿವೆ, ಇದರಿಂದಾಗಿ ಸುಮಾರು 36,000 ಜನರು ನಿರಾಶ್ರಿತರಾಗಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದೆ.

ಐಟಿಎಲ್‌ಎಫ್‌ ಅಧ್ಯಕ್ಷ ಪಗಿನ್ ಹಾಕಿಪ್, ಕಾರ್ಯದರ್ಶಿ ಮುವಾನ್ ಟಾಂಬಿಂಗ್ ನೀಡಿದ ಜ್ಞಾಪಕ ಪತ್ರದಲ್ಲಿ, “253 ಚರ್ಚ್‌ಗಳನ್ನು ಸುಟ್ಟುಹಾಕಲಾಯಿತು. ನಮ್ಮ ಸಾವಿರಾರು ಜನರು ದೇಶದ ವಿವಿಧ ಸ್ಥಳಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ” ಎಂದು ನೋವು ತೋಡಿಕೊಳ್ಳಲಾಗಿದೆ.

ಫೆಬ್ರವರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಪಾಲರು ಚರ್ಚಂದಪುರಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಎಂದು ಐಟಿಎಲ್‌ಎಫ್ ನಾಯಕರೊಬ್ಬರು ತಿಳಿಸಿದ್ದಾರೆ.

ಸತ್ತವರ ಪಟ್ಟಿ, ಹಿಂಸಾಚಾರ ಭುಗಿಲೆದ್ದ ಬಳಿಕ ನಾಶವಾದ ಚರ್ಚ್‌ಗಳು, ಆಡಳಿತಾತ್ಮಕ ಕಟ್ಟಡಗಳು, ಸುಟ್ಟುಹೋದ ಹಳ್ಳಿಗಳ ವಿವರಗಳನ್ನು ಜ್ಞಾಪಕ ಪತ್ರದೊಂದಿಗೆ ಐಟಿಎಲ್‌ಎಫ್‌ ಲಗತ್ತಿಸಿದೆ.

ನಿರಾಶ್ರಿತ ಶಿಬಿರಗಳ ವಿವರದೊಂದಿಗೆ, ಅರಾಂಬೈ ಟೆಂಗೋಲ್‌ ಸಂಘಟನೆ ಜೊತೆಯಲ್ಲಿ ರಾಜ್ಯ ನಾಯಕರು ಪಾಲ್ಗೊಂಡಿರುವುದನ್ನು ದೃಢೀಕರಿಸುವ ಫೋಟೋಗಳನ್ನೂ ಐಟಿಎಲ್‌ಎಫ್‌ ಒದಗಿಸಿದೆ.

ಅರಾಂಬೈ ತೆಂಗೋಲ್ ಎಂಬುದು ಮೇತೇಯಿ ಸಂಘಟನೆಯಾಗಿದ್ದು, ಕುಕಿಗಳು ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದೆ. ಈ ಸಂಘಟನೆಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಕಳೆದ ವಾರ ಮಾಧ್ಯಮವೊಂದು ವರದಿ ಮಾಡಿತ್ತು.

ಇದನ್ನೂ ಓದಿರಿ: ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ಹಾನಿಗೊಳಗಾದ ಚರ್ಚ್ ಆಸ್ತಿಗಳ ಬಗ್ಗೆ ಕೇಳಿದಾಗ, ಐಟಿಎಲ್‌ಎಫ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಗಿಂಜಾ ವುಲ್ಜಾಂಗ್ ಪ್ರತಿಕ್ರಿಯಿಸಿ, “ಮುಖ್ಯವಾಗಿ ಇಂಫಾಲ್ ಕಣಿವೆ, ಗುಡ್ಡಗಾಡು ಪ್ರದೇಶಗಳಲ್ಲಿ ಚರ್ಚ್‌ಗಳ ಜೊತೆಗೆ 93 ಚರ್ಚ್ ಆಡಳಿತ ಕಟ್ಟಡಗಳು ಮತ್ತು ಕ್ವಾರ್ಟರ್‌ಗಳನ್ನು ಸುಟ್ಟುಹಾಕಲಾಗಿದೆ” ಎಂದು ತಿಳಿಸಿದ್ದಾರೆ.

ಇಂಫಾಲ್ ಕಣಿವೆಯ ಆರು ಜಿಲ್ಲೆಗಳಲ್ಲಿ ಮೈತೇಯಿ ಪ್ರಾಬಲ್ಯವಿದೆ. 10 ಗುಡ್ಡಗಾಡು ಜಿಲ್ಲೆಗಳಲ್ಲಿ ಬುಡಕಟ್ಟು ಜನರನ್ನು ಹೆಚ್ಚಿದ್ದಾರೆ. ನಾಗಾಗಳು ಮತ್ತು ಕುಕಿಗಳು ಗುಡ್ಡಗಾಡು ಜಿಲ್ಲೆಗಳಲ್ಲಿ ಪ್ರಾಬಲ್ಯ ಹೊಂದಿದ್ದಾರೆ.

ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಆಫ್ ನಾರ್ತ್ ಈಸ್ಟ್ ಇಂಡಿಯಾದ ಸದಸ್ಯ ಅಲೆನ್ ಬ್ರೂಕ್ಸ್ ಅವರು ‘ದಿ ಟೆಲಿಗ್ರಾಫ್‌’ಗೆ ಪ್ರತಿಕ್ರಿಯಿಸಿ, “ಹಿಂಸಾಚಾರವು ಬಹಳ ದೊಡ್ಡ ಮಟ್ಟದಲ್ಲಿದೆ ಮತ್ತು ಅತ್ಯಂತ ದುರಂತಮಯವಾಗಿದೆ. ಹಿಂಸಾಚಾರ ಅಂಕಿ-ಅಂಶಗಳು ನಿಜವೆಂದು ನಾವು ನಂಬುತ್ತೇವೆ. ಏಕೆಂದರೆ ಇವುಗಳನ್ನು ಇಲ್ಲಿನ ಸ್ಥಳೀಯ ಸಂಸ್ಥೆಗಳು ರುಜುವಾತುಪಡಿಸಿವೆ. ಆದರೆ ಪ್ರಶ್ನೆ ಇರುವುದು ಒಂದು ಚರ್ಚ್ ಅನ್ನು ಸುಡುವುದು ಅಥವಾ 1,000 ಚರ್ಚ್‌ಗಳನ್ನು ಸುಡುವುದರ ಬಗ್ಗೆ ಅಲ್ಲ. ಜನರ ಸುರಕ್ಷತೆ ಮತ್ತು ದೇಶದ ಜಾತ್ಯತೀತತೆ ಅಪಾಯದಲ್ಲಿದೆ” ಎಂದು ವಿಷಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...