Homeಮುಖಪುಟಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

ಮಣಿಪುರ ಹಿಂಸಾಚಾರದಲ್ಲಿ 253 ಚರ್ಚ್‌ಗಳಿಗೆ ಬೆಂಕಿ; ಜ್ಞಾಪಕ ಪತ್ರ ಸಲ್ಲಿಕೆ

- Advertisement -
- Advertisement -

ಮಣಿಪುರದಲ್ಲಿ ಭುಗಿಲೆದ್ದಿರುವ ಕುಕಿ ಮತ್ತು ಮೈತೇಯಿ ಸಮುದಾಯಗಳ ನಡುವಿನ ಕಲಹದಲ್ಲಿ, “253 ಚರ್ಚ್‌ಗಳನ್ನು ಸುಟ್ಟು ಹಾಕಲಾಗಿದೆ” ಎಂದು ಚುರಾಚಂದ್‌ಪುರ ಜಿಲ್ಲೆಯ ಬುಡಕಟ್ಟುಗಳ ಒಕ್ಕೂಟವಾದ ‘ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ’ (ಐಟಿಎಲ್‌ಎಫ್‌) ಆರೋಪಿಸಿದೆ.

ಇಂಫಾಲ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಚುರಾಚಂದ್‌ಪುರಕ್ಕೆ ಸೋಮವಾರ ಭೇಟಿ ನೀಡಿದ್ದ ರಾಜ್ಯಪಾಲ ಅನುಸೂಯಾ ಉಯಿಕೆ ಅವರಿಗೆ ಸಲ್ಲಿಸಿದ ಜ್ಞಾಪಕ ಪತ್ರದಲ್ಲಿ ಐಟಿಎಲ್‌ಎಫ್ ಈ ಆರೋಪಗಳನ್ನು ಮಾಡಿದೆ.

ಪರಿಶಿಷ್ಟ ಪಂಗಡದ ಸ್ಥಾನಮಾನ ನೀಡಬೇಕೆಂದು ಬಹುಸಂಖ್ಯಾತ ಮೈತೇಯಿಗಳು ಇಟ್ಟಿರುವ ಬೇಡಿಕೆಯನ್ನು ವಿರೋಧಿಸಿ 10 ಗುಡ್ಡಗಾಡು ಜಿಲ್ಲೆಗಳಲ್ಲಿ ಐಕಮತ ರ್‍ಯಾಲಿ ನಡೆದಿತ್ತು. ಆನಂತರ ಮೇ 3ರಂದು ಪ್ರಾರಂಭವಾದ ಹಿಂಸಾಚಾರದಲ್ಲಿ ಅತಿ ಹೆಚ್ಚು ಹಿಂಸಾಚಾರವನ್ನು ಕಂಡ ಜಿಲ್ಲೆಗಳ ಪೈಕಿ ಚುರಚಂದ್‌ಪುರವೂ ಒಂದಾಗಿದೆ.

ಹಿಂದೂ ಮೈತೇಯಿ ಮತ್ತು ಕ್ರಿಶ್ಚಿಯನ್ ಕುಕಿಗಳ ನಡುವೆ ನಡೆದ ಘರ್ಷಣೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ, 50,698 ಮಂದಿಯನ್ನು ಸ್ಥಳಾಂತರ ಮಾಡಲಾಗಿದೆ.

ಸೋಮವಾರ ಚುರಚಂದಪುರ ಗ್ರಾಮದ ಮೇಲೆ ನಡೆದ ದಾಳಿಯಲ್ಲಿ ಕೂಡ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಐಟಿಎಲ್ಎಫ್ ಮಾಹಿತಿ ನೀಡಿದೆ.

“ಮೈತೇಯಿ ಮತ್ತು ಮಣಿಪುರದ ಕೋಮುವಾದಿ ಸರ್ಕಾರದ ಜನಾಂಗೀಯ ಶುದ್ಧೀಕರಣ ಅಭಿಯಾನದ ಪರಿಣಾಮವಾಗಿ ಕುಕಿ-ಜೋ ಜನರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಇತಿಹಾಸದ ಕಂಡ ಅತ್ಯಂತ ಸವಾಲಿನ ದಿನಗಳನ್ನು ಕುಕಿಗಳು ಸಹಿಸಿಕೊಳ್ಳುತ್ತಿದ್ದಾರೆ” ಎಂದು ರಾಜ್ಯಪಾಲರಿಗೆ ಸಲ್ಲಿಸಿರುವ ಮೂರು ಪುಟಗಳ ಜ್ಞಾಪಕ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಮೇ 3 ರಿಂದ ನಮ್ಮ ಜನರ ವಿರುದ್ಧ ಸರ್ಕಾರಿ ಪ್ರಾಯೋಜಿತ ಹತ್ಯಾಕಾಂಡ ನಡೆಯುತ್ತಿದೆ. ನಾವು 100 ಕ್ಕೂ ಹೆಚ್ಚು ಅಮೂಲ್ಯ ಜೀವಗಳನ್ನು ಕಳೆದುಕೊಂಡಿದ್ದೇವೆ. ಸತ್ತವರ ಸಂಖ್ಯೆ ಸ್ಪಷ್ಟವಾಗಿಲ್ಲ. ಇದಲ್ಲದೆ 160 ಹಳ್ಳಿಗಳಲ್ಲಿ ಸುಮಾರು 4,500 ಮನೆಗಳು ಸುಟ್ಟುಹೋಗಿವೆ, ಇದರಿಂದಾಗಿ ಸುಮಾರು 36,000 ಜನರು ನಿರಾಶ್ರಿತರಾಗಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದೆ.

ಐಟಿಎಲ್‌ಎಫ್‌ ಅಧ್ಯಕ್ಷ ಪಗಿನ್ ಹಾಕಿಪ್, ಕಾರ್ಯದರ್ಶಿ ಮುವಾನ್ ಟಾಂಬಿಂಗ್ ನೀಡಿದ ಜ್ಞಾಪಕ ಪತ್ರದಲ್ಲಿ, “253 ಚರ್ಚ್‌ಗಳನ್ನು ಸುಟ್ಟುಹಾಕಲಾಯಿತು. ನಮ್ಮ ಸಾವಿರಾರು ಜನರು ದೇಶದ ವಿವಿಧ ಸ್ಥಳಗಳಿಗೆ ಸ್ಥಳಾಂತರಗೊಳ್ಳುತ್ತಿದ್ದಾರೆ” ಎಂದು ನೋವು ತೋಡಿಕೊಳ್ಳಲಾಗಿದೆ.

ಫೆಬ್ರವರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ರಾಜ್ಯಪಾಲರು ಚರ್ಚಂದಪುರಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ ಎಂದು ಐಟಿಎಲ್‌ಎಫ್ ನಾಯಕರೊಬ್ಬರು ತಿಳಿಸಿದ್ದಾರೆ.

ಸತ್ತವರ ಪಟ್ಟಿ, ಹಿಂಸಾಚಾರ ಭುಗಿಲೆದ್ದ ಬಳಿಕ ನಾಶವಾದ ಚರ್ಚ್‌ಗಳು, ಆಡಳಿತಾತ್ಮಕ ಕಟ್ಟಡಗಳು, ಸುಟ್ಟುಹೋದ ಹಳ್ಳಿಗಳ ವಿವರಗಳನ್ನು ಜ್ಞಾಪಕ ಪತ್ರದೊಂದಿಗೆ ಐಟಿಎಲ್‌ಎಫ್‌ ಲಗತ್ತಿಸಿದೆ.

ನಿರಾಶ್ರಿತ ಶಿಬಿರಗಳ ವಿವರದೊಂದಿಗೆ, ಅರಾಂಬೈ ಟೆಂಗೋಲ್‌ ಸಂಘಟನೆ ಜೊತೆಯಲ್ಲಿ ರಾಜ್ಯ ನಾಯಕರು ಪಾಲ್ಗೊಂಡಿರುವುದನ್ನು ದೃಢೀಕರಿಸುವ ಫೋಟೋಗಳನ್ನೂ ಐಟಿಎಲ್‌ಎಫ್‌ ಒದಗಿಸಿದೆ.

ಅರಾಂಬೈ ತೆಂಗೋಲ್ ಎಂಬುದು ಮೇತೇಯಿ ಸಂಘಟನೆಯಾಗಿದ್ದು, ಕುಕಿಗಳು ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದೆ. ಈ ಸಂಘಟನೆಯನ್ನು ವಿಸರ್ಜನೆ ಮಾಡಲಾಗಿದೆ ಎಂದು ಕಳೆದ ವಾರ ಮಾಧ್ಯಮವೊಂದು ವರದಿ ಮಾಡಿತ್ತು.

ಇದನ್ನೂ ಓದಿರಿ: ಅಣ್ಣಾಮಲೈರನ್ನ ಹಿಡಿತದಲ್ಲಿ ಇಟ್ಟುಕೊಳ್ಳಿ: ಕೇಂದ್ರದ ಬಿಜೆಪಿ ನಾಯಕರಿಗೆ ಮೈತ್ರಿ ಪಕ್ಷ ಎಐಎಡಿಎಂಕೆ ಎಚ್ಚರಿಕೆ

ಹಾನಿಗೊಳಗಾದ ಚರ್ಚ್ ಆಸ್ತಿಗಳ ಬಗ್ಗೆ ಕೇಳಿದಾಗ, ಐಟಿಎಲ್‌ಎಫ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಗಿಂಜಾ ವುಲ್ಜಾಂಗ್ ಪ್ರತಿಕ್ರಿಯಿಸಿ, “ಮುಖ್ಯವಾಗಿ ಇಂಫಾಲ್ ಕಣಿವೆ, ಗುಡ್ಡಗಾಡು ಪ್ರದೇಶಗಳಲ್ಲಿ ಚರ್ಚ್‌ಗಳ ಜೊತೆಗೆ 93 ಚರ್ಚ್ ಆಡಳಿತ ಕಟ್ಟಡಗಳು ಮತ್ತು ಕ್ವಾರ್ಟರ್‌ಗಳನ್ನು ಸುಟ್ಟುಹಾಕಲಾಗಿದೆ” ಎಂದು ತಿಳಿಸಿದ್ದಾರೆ.

ಇಂಫಾಲ್ ಕಣಿವೆಯ ಆರು ಜಿಲ್ಲೆಗಳಲ್ಲಿ ಮೈತೇಯಿ ಪ್ರಾಬಲ್ಯವಿದೆ. 10 ಗುಡ್ಡಗಾಡು ಜಿಲ್ಲೆಗಳಲ್ಲಿ ಬುಡಕಟ್ಟು ಜನರನ್ನು ಹೆಚ್ಚಿದ್ದಾರೆ. ನಾಗಾಗಳು ಮತ್ತು ಕುಕಿಗಳು ಗುಡ್ಡಗಾಡು ಜಿಲ್ಲೆಗಳಲ್ಲಿ ಪ್ರಾಬಲ್ಯ ಹೊಂದಿದ್ದಾರೆ.

ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಆಫ್ ನಾರ್ತ್ ಈಸ್ಟ್ ಇಂಡಿಯಾದ ಸದಸ್ಯ ಅಲೆನ್ ಬ್ರೂಕ್ಸ್ ಅವರು ‘ದಿ ಟೆಲಿಗ್ರಾಫ್‌’ಗೆ ಪ್ರತಿಕ್ರಿಯಿಸಿ, “ಹಿಂಸಾಚಾರವು ಬಹಳ ದೊಡ್ಡ ಮಟ್ಟದಲ್ಲಿದೆ ಮತ್ತು ಅತ್ಯಂತ ದುರಂತಮಯವಾಗಿದೆ. ಹಿಂಸಾಚಾರ ಅಂಕಿ-ಅಂಶಗಳು ನಿಜವೆಂದು ನಾವು ನಂಬುತ್ತೇವೆ. ಏಕೆಂದರೆ ಇವುಗಳನ್ನು ಇಲ್ಲಿನ ಸ್ಥಳೀಯ ಸಂಸ್ಥೆಗಳು ರುಜುವಾತುಪಡಿಸಿವೆ. ಆದರೆ ಪ್ರಶ್ನೆ ಇರುವುದು ಒಂದು ಚರ್ಚ್ ಅನ್ನು ಸುಡುವುದು ಅಥವಾ 1,000 ಚರ್ಚ್‌ಗಳನ್ನು ಸುಡುವುದರ ಬಗ್ಗೆ ಅಲ್ಲ. ಜನರ ಸುರಕ್ಷತೆ ಮತ್ತು ದೇಶದ ಜಾತ್ಯತೀತತೆ ಅಪಾಯದಲ್ಲಿದೆ” ಎಂದು ವಿಷಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...