Homeಅಂತರಾಷ್ಟ್ರೀಯ26/11 ಮುಂಬೈ ದಾಳಿ ರುವಾರಿ‌‌ ಹಫೀಜ್‌ ಸಯೀದ್‌ಗೆ ಮತ್ತೇ 10 ವರ್ಷಗಳ ಜೈಲು ಶಿಕ್ಷೆ!

26/11 ಮುಂಬೈ ದಾಳಿ ರುವಾರಿ‌‌ ಹಫೀಜ್‌ ಸಯೀದ್‌ಗೆ ಮತ್ತೇ 10 ವರ್ಷಗಳ ಜೈಲು ಶಿಕ್ಷೆ!

ಈ ವರ್ಷದ ಫೆಬ್ರವರಿಯಿಂದಲೆ ಜೈಲಿನಲ್ಲಿರುವ ಹಫೀಜ್ ಸಯೀದ್, ಈಗಾಗಲೇ ಎರಡು ಭಯೋತ್ಪಾದಕ-ಹಣಕಾಸು ಪ್ರಕರಣಗಳಲ್ಲಿ 11 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ.

- Advertisement -
- Advertisement -

ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಮತ್ತು ಜಮಾತ್-ಉದ್-ದವಾ ಮುಖ್ಯಸ್ಥ ಹಫೀಜ್ ಸಯೀದ್‌ಗೆ ಎರಡು ಭಯೋತ್ಪಾದಕ ಹಣಕಾಸು ಪ್ರಕರಣಗಳಲ್ಲಿ ಲಾಹೋರ್‌ನ ಭಯೋತ್ಪಾದನಾ ವಿರೋಧಿ ನ್ಯಾಯಾಲಯ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಈ ವರ್ಷದ ಫೆಬ್ರವರಿಯಿಂದಲೆ ಜೈಲಿನಲ್ಲಿರುವ ಹಫೀಜ್ ಸಯೀದ್, ಈಗಾಗಲೇ ಎರಡು ಭಯೋತ್ಪಾದಕ-ಹಣಕಾಸು ಪ್ರಕರಣಗಳಲ್ಲಿ 11 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ. ವಿಶ್ವಸಂಸ್ಥೆಯಿಂದ ಜಾಗತಿಕ ಭಯೋತ್ಪಾದಕ ಪಟ್ಟಿಗೆ ಸೇರಿರುವ ಹಫೀಜ್, ಕಳೆದ ವರ್ಷ ಜುಲೈ 17 ರಂದು ಭಯೋತ್ಪಾದಕ ಕೃತ್ಯಗಳಿಗೆ ಹಣಕಾಸು ನೆರವು ಪ್ರಕರಣಗಳಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ:  ಪಂಜಾಬ್: ಭಯೋತ್ಪಾದನೆ ವಿರುದ್ಧದ ಹೋರಾಟಗಾರ ಬಲ್ವಿಂದರ್ ಸಿಂಗ್ ಹತ್ಯೆ!

ಸದ್ಯ ಹಫೀಜ್ ಲಾಹೋರ್‌ನ ಉನ್ನತ ಭದ್ರತೆಯಿರುವ ಕೋಟ್ ಲಖ್‌ಪತ್ ಜೈಲಿನದ್ದು, “ಲಾಹೋರ್‌ನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ (ಎಟಿಸಿ) ಗುರುವಾರ ಜಮಾತ್-ಉದ್-ದವಾದ ಮುಖ್ಯಸ್ಥ ಹಫೀಜ್ ಸಯೀದ್ ಸೇರಿದಂತೆ ನಾಲ್ಕು ನಾಯಕರಿಗೆ ಎರಡು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿದೆ” ಎಂದು ನ್ಯಾಯಾಲಯದ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

”ಎಟಿಸಿ ನ್ಯಾಯಾಲಯದ ನಂ 1 ರ ನ್ಯಾಯಾಧೀಶ ಅರ್ಷದ್ ಹುಸೇನ್ ಭುಟ್ಟಾ ಅವರು ಭಯೋತ್ಪಾದನಾ ನಿಗ್ರಹ ಇಲಾಖೆ (ಸಿಟಿಡಿ) ಸಲ್ಲಿಸಿದ್ದ ಪ್ರಕರಣ ಸಂಖ್ಯೆ 16/19 ಮತ್ತು 25/19 ಗಳ ವಿಚಾರಣೆ ನಡೆಸಿದರು. ಸಾಕ್ಷಿಗಳ ಹೇಳಿಕೆಗಳನ್ನು ವಕೀಲರಾದ ನಸೀರುದ್ದೀನ್ ನಯ್ಯರ್ ಮತ್ತು ಮೊಹಮ್ಮದ್ ಇಮ್ರಾನ್ ಫಜಲ್ ಗುಲ್ ಅವರು ಪರಿಶೀಲನೆ ನಡೆಸಿದ ನಂತರ ತೀರ್ಪನ್ನು ಪ್ರಕಟಿಸಲಾಗಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಜಮಾತ್-ಉದ್-ದವಾ ನಾಯಕರ ವಿರುದ್ಧ ಒಟ್ಟು 41 ಪ್ರಕರಣಗಳನ್ನು ಭಯೋತ್ಪಾದನಾ ನಿಗ್ರಹ ಇಲಾಖೆ ದಾಖಲಿಸಿದ್ದು, ಈ ಪೈಕಿ 24 ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದೆ. ಉಳಿದ ಪ್ರಕರಣಗಳು ನ್ಯಾಯಾಲಯಗಳಲ್ಲಿ ಬಾಕಿ ಉಳಿದಿವೆ ಎನ್ನಲಾಗಿದೆ.

ಇದನ್ನೂ ಓದಿ: ಹತ್ರಾಸ್‌: ಬಂಧಿತ ಪತ್ರಕರ್ತನ ಮೇಲೆ “ಭಯೋತ್ಪಾದನೆ ನಿಗ್ರಹ” ಕಾನೂನಿನಡಿಯಲ್ಲಿ FIR!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...