Homeಕರ್ನಾಟಕರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ

ರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ

- Advertisement -
- Advertisement -
ರಾಜ್ಯದ ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಕಳೆದ ಎರಡು ದಶಕದಲ್ಲಿ ನಡೆದ ನಕ್ಸಲ್ ಚಟುವಟಿಕೆಯಲ್ಲಿ ಇಲ್ಲಿಯವರೆಗೆ 38 ಮಂದಿ ಪ್ರಾಣ ತೆತ್ತಿದ್ದಾರೆ. ನಕ್ಸಲರು, ಪೊಲೀಸರು ಮತ್ತು ಎಎನ್ಎಫ್ ಮುಖಾಮುಖಿಯಲ್ಲಿ ಒಟ್ಟು 38 ಮಂದಿ ಪ್ರಾಣ ಕಳೆದುಕೊಂಡಿದ್ದು, ಇದರಲ್ಲಿ 20 ಮಂದಿ ನಕ್ಸಲರು, 8 ಮಂದಿ ನಾಗರಿಕರು ಹಾಗೂ 10 ಮಂದಿ ಪೊಲೀಸರು ಸೇರಿದ್ದಾರೆ.
ಪೊಲೀಸ್ ಮತ್ತು ಎಎನ್‌ಎಫ್ ಪಡೆಯಿಂದ ಹತ್ಯೆಯಾದ 20 ನಕ್ಸಲರ ಪಟ್ಟಿ
  • ಆಂಧ್ರ ಮೂಲದ ನಕ್ಸಲ್ ನಾಯಕ ಭಾಸ್ಕರ್ ಅವರನ್ನು ರಾಯಚೂರಿನಲ್ಲಿ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದರು
  • ನಕಲ್ಸ್ ಕಾರ್ಯಕರ್ತ ರಾಯಚೂರಿನ ಬುಡ್ಡಣ್ಣ ಅವರ ಹತ್ಯೆಯಾಗಿತ್ತು
  • ನಕ್ಸಲ್ ವಲಯದಲ್ಲಿ ಸರಳ ಎಂದು ಚಿರಪರಿಚಿತರಾಗಿದ್ದ ಮೈಸೂರಿನ ರಾಜೇಶ್ವರಿಯವರು ಆಂಧ್ರದಲ್ಲಿ ನಕ್ಸಲ್ ಹೋರಾಟದ ಕುರಿತು ಅಧ್ಯಯನಕ್ಕೆ ಹೋಗಿದ್ದಾಗ ನಡೆದ ಎನ್ ಕೌಂಟರ್ ವೊಂದರಲ್ಲಿ 2001ರ ಜನವರಿಯಲ್ಲಿ ಹತರಾಗಿದ್ದರು. ಇವರು ಸಾಕೇತ್ ರಾಜನ್ ಅವರ ಬಾಳಸಂಗಾತಿಯಾಗಿದ್ದರು.
  • 2003ರ ನವೆಂಬರ್ 17ರಂದು ರಾಯಚೂರು ಜಿಲ್ಲೆಯ ಸಿಂಧನೂರಿನ ಹಾಜಿಮಾ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಪಾರ್ವತಿ ಎಂಬಿಬ್ಬರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು.
  • 2005ರ ಫೆಬ್ರವರಿ 6ರಂದು ಮಾವೋವಾದಿ ಪಕ್ಷದ ರಾಜ್ಯ ಕಾರ್ಯದರ್ಶಿ ಸಾಕೇತ್ ರಾಜನ್ ಪೊಲೀಸ್ ಎನ್‌ಕೌಂಟರ್‌ ಬಲಿಯಾಗಿದ್ದರು. ಇವರ ಅಂಗರಕ್ಷಕನಾಗಿದ್ದ ಸಿಂಧನೂರಿನ ಶಿವಲಿಂಗು ಅವರನ್ನು ಈ ಸಂದರ್ಭದಲ್ಲಿ ಹತ್ಯೆ ಮಾಡಲಾಗಿತ್ತು.

  • 2005ರ ಜೂನ್ 23ರಂದು ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಹಳ್ಳಿಹೊಳೆ ಸಮೀಪದ ದೇವರಬಾಳು ಎಂಬಲ್ಲಿ ಪೊಲೀಸರ ಗುಂಡಿಗೆ ಬೆಳಗಾವಿಯ ಅಜಿತ್ ಕುಸುಬಿ ಮತ್ತು ಮೂಡಿಗೆರೆಯ ಉಮೇಶ್ ಬಣಕಲ್ ಬಲಿಯಾಗಿದ್ದರು.
  • 2006ರ ಡಿಸೆಂಬರ್ 25ರಂದು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಬಳಿಯ ಕಿಗ್ಗದಲ್ಲಿ ನಕ್ಸಲ್ ದಿನಕರ ಎಎನ್‌ಎಫ್‌ನಿಂದ ಹತ್ಯೆಯಾಗಿದ್ದರು.
  • 2007ರ ಜುಲೈ 10ರಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗುಡ್ಡೆ ತೋಟದ ಒಡೆಯರ ಮಠದಲ್ಲಿ ಸಿಂಧನೂರಿನ ಗೌತಮ್, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪರಮೇಶ್ವರ, ಸುಂದರೇಶ್, ರಾಮೇಗೌಡ್ಲು, ಮತ್ತು ಕಾವೇರಿಯವರನ್ನು ಎಎನ್ಎಫ್ ಹತ್ಯೆ ಮಾಡಿತ್ತು.
  • 2008ರ ನವೆಂಬರ್ 20ರಂದು ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಮಾವಿನಹೊಲದಲ್ಲಿ ಸೊರಬದ ಮನೋಹರ್, ನವೀನ್, ಅಭಿಲಾಷ್ ಹತ್ಯೆಯಾಗಿದ್ದರು.
  • 2010ರ ಮಾರ್ಚ್ 1ರಂದು ಕಾರ್ಕಳ ತಾಲೂಕಿನ ಮುನಿಯಾಲು ಮುಟ್ಲುಪಾಡಿಯ ಮೈರೋಳಿಯಲ್ಲಿ ಬೆಳ್ತಂಗಡಿ ತಾಲೂಕು ಕುತ್ಲೂರಿನ ವಸಂತ ಗೌಡ್ಲು ಅವರನ್ನು ಹತ್ಯೆ ಮಾಡಲಾಗಿತ್ತು.
  • 2024ರ ನವೆಂಬರ್ 18ರಂದು ಕಾರ್ಕಳ ತಾಲೂಕಿನ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು.
ನಕ್ಸಲರಿಂದ ಹತ್ಯೆಯಾದ 7 ಮಂದಿ ನಾಗರೀಕರು
  • ರಾಯಚೂರಿನಲ್ಲಿ ಶಂಕಿತ ನಕ್ಸಲರು ಸುದರ್ಶನ್ ರೆಡ್ಡಿಯವರನ್ನು ಹತ್ಯೆ ಮಾಡಿದ್ದರು.
  • 2005ರ ಮೇ17ರಂದು ಕೊಪ್ಪ ತಾಲೂಕಿನ ಮೆಣಸಿನ ಹಾಡ್ಯದಲ್ಲಿ ಗಿರಿಜನ ಮುಖಂಡ ಶೇಷಪ್ಪಗೌಡ್ಲು ಹತ್ಯೆ
  • 2007ರ ಜೂನ್ 3ರಂದು ಶೃಂಗೇರಿಯ ಕಿಗ್ಗ ಸಮೀಪದ ಗುಂಡಘಟ್ಟದಲ್ಲಿ ನಕ್ಸಲರಿಂದ ಅಂಗಡಿ ಮಾಲೀಕ ವೆಂಕಟೇಶ ಹತ್ಯೆ
  • 2008ರ ಮೇ 15ರಂದು ಹೆಬ್ರಿ ಸಮೀಪದ ಸೀತಾನದಿ ಬಳಿ ನಕ್ಸಲರ ಗುಂಡಿಗೆ ಶಿಕ್ಷಕ ಭೋಜ ಶೆಟ್ಟಿ ಹಾಗೂ ಅವರ ಗೆಳೆಯ ಕೃಷಿಕ ಸುರೇಶ್ ಶೆಟ್ಟಿ ಬಲಿ
  • 2008 ಡಿಸೆಂಬರ್ 7ರಂದು ಬೈಂದೂರಿನ ಹಳ್ಳಿಹೊಳೆ ಸಮೀಪದ ಕೃಷಿಕ ಜಮೀನ್ದಾರ ಕೇಶವ ಯಡಿಯಾಳರನ್ನು ಪೊಲೀಸರ ಮಾಹಿತಿದಾರನೆಂಬ ಆರೋಪದಲ್ಲಿ ಮನೆಗೆ ನುಗ್ಗಿ ನಕ್ಸಲರು ಹತ್ಯೆಗೈದಿದ್ದರು.
  • 2011ರ ಡಿಸೆಂಬರ್ 28ರಂದು ಉಡುಪಿಯ ತೆಂಗಿನಮಾರುವಿನಿಂದ ಎರಡು ಕಿ.ಮೀ. ದೂರ ದಟ್ಟಾರಣ್ಯದಲ್ಲಿ ಸದಾಶಿವ ಗೌಡ ಎಂಬವರ ಶವ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
  • …………………………………………………………………………………
  • 2005ರ ಫೆಬ್ರವರಿ 10ರಂದು ತುಮಕೂರು ಜಿಲ್ಲೆ ಪಾವಗಡದಲ್ಲಿ ಕೆಎಸ್ಆರ್‌ಪಿ 9ನೇ ಕ್ಯಾಂಪ್ ಸಿಬ್ಬಂದಿ ಮೇಲಿನ ನಕ್ಸಲ್ ದಾಳಿಯಲ್ಲಿ ನಾಗರೀಕನೊಬ್ಬನ ಸಾವು
10 ಮಂದಿ ಪೊಲೀಸರ ಸಾವು
  • 2007ರ ಜುಲೈ 17ರಂದು ಆಗುಂಬೆ ಸಮೀಪದ ಹುಲ್ಲಾರಬೈಲಿನಲ್ಲಿ ಗುಂಡಿನ ಚಕಮಕಿ, ಎಸ್ಐ ವೆಂಕಟೇಶ ಹತ್ಯೆ
  • 2008ರ ನವೆಂಬರ್ 20ರಂದು ಹೊರನಾಡು ಸಮೀಪ ಮಾವಿನಹೊಲ ಬಳಿ ಎನ್‌ಕೌಂಟರ್‌ ವೇಳೆ ಪೇದೆ ಗುರುಪ್ರಸಾದ್ ಸಾವು
  • 2011ರ ಅಗಸ್ಟ್ 9ರಂದು ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾ.ಪಂ ವ್ಯಾಪ್ತಿಯ ನಾವೂರ ಗ್ರಾಮದ ಮಂಜಲದಲ್ಲಿ ಬೆಳಗಿನ ಜಾವ ನಕ್ಸಲ್ ನಿಗ್ರಹದಳದ ಪೊಲೀಸರ ಗನ್ ಮಿಸ್ ಫೈರ್ ಆಗಿ ಎಎನ್ಎಫ್ ಸಿಬ್ಬಂದಿ ಮಹಾದೇವ ಮಾನೆ ಬಲಿ.
  • 2005ರ ಫೆಬ್ರವರಿ 10ರಂದು ರಾತ್ರಿ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ವೆಂಕಟಮ್ಮನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬೀಡು ಬಿಟ್ಟಿದ್ದ ಕೆಎಸ್ಆರ್‌ಪಿ 9ನೇ ಕ್ಯಾಂಪ್ ಸಿಬ್ಬಂದಿ ಮೇಲೆ ನಕ್ಸಲರು ದಾಳಿ ನಡೆಸಿದ್ದರು. ಆಂಧ್ರ ಗಡಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದ ಸಂದರ್ಭದಲ್ಲಿ ನಡೆದ ಈ ನಕ್ಸಲ್ ದಾಳಿಯಲ್ಲಿ 7 ಪೊಲೀಸರು ಸೇರಿ 8 ಜನ ಹತರಾಗಿದ್ದರು. 300ಕ್ಕೂ ಹೆಚ್ಚು ನಕ್ಸಲರ ತಂಡ ಒಮ್ಮೆಲೇ ದಾಳಿ ನಡೆಸಿತ್ತು.

ಶರಣಾಗತಿಗೂ ಮುನ್ನ ಸರ್ಕಾರಕ್ಕೆ ಪತ್ರ : ಹಕ್ಕೊತ್ತಾಯಗಳನ್ನು ಮುಂದಿಟ್ಟ ನಕ್ಸಲ್ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...