Homeಕರ್ನಾಟಕರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ

ರಾಜ್ಯದಲ್ಲಿ ಎರಡು ದಶಕದ ನಕ್ಸಲ್-ಪೊಲೀಸ್ ಮುಖಾಮುಖಿಯಲ್ಲಿ 38 ಮಂದಿಯ ಹತ್ಯೆ

- Advertisement -
- Advertisement -
ರಾಜ್ಯದ ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಕಳೆದ ಎರಡು ದಶಕದಲ್ಲಿ ನಡೆದ ನಕ್ಸಲ್ ಚಟುವಟಿಕೆಯಲ್ಲಿ ಇಲ್ಲಿಯವರೆಗೆ 38 ಮಂದಿ ಪ್ರಾಣ ತೆತ್ತಿದ್ದಾರೆ. ನಕ್ಸಲರು, ಪೊಲೀಸರು ಮತ್ತು ಎಎನ್ಎಫ್ ಮುಖಾಮುಖಿಯಲ್ಲಿ ಒಟ್ಟು 38 ಮಂದಿ ಪ್ರಾಣ ಕಳೆದುಕೊಂಡಿದ್ದು, ಇದರಲ್ಲಿ 20 ಮಂದಿ ನಕ್ಸಲರು, 8 ಮಂದಿ ನಾಗರಿಕರು ಹಾಗೂ 10 ಮಂದಿ ಪೊಲೀಸರು ಸೇರಿದ್ದಾರೆ.
ಪೊಲೀಸ್ ಮತ್ತು ಎಎನ್‌ಎಫ್ ಪಡೆಯಿಂದ ಹತ್ಯೆಯಾದ 20 ನಕ್ಸಲರ ಪಟ್ಟಿ
  • ಆಂಧ್ರ ಮೂಲದ ನಕ್ಸಲ್ ನಾಯಕ ಭಾಸ್ಕರ್ ಅವರನ್ನು ರಾಯಚೂರಿನಲ್ಲಿ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದರು
  • ನಕಲ್ಸ್ ಕಾರ್ಯಕರ್ತ ರಾಯಚೂರಿನ ಬುಡ್ಡಣ್ಣ ಅವರ ಹತ್ಯೆಯಾಗಿತ್ತು
  • ನಕ್ಸಲ್ ವಲಯದಲ್ಲಿ ಸರಳ ಎಂದು ಚಿರಪರಿಚಿತರಾಗಿದ್ದ ಮೈಸೂರಿನ ರಾಜೇಶ್ವರಿಯವರು ಆಂಧ್ರದಲ್ಲಿ ನಕ್ಸಲ್ ಹೋರಾಟದ ಕುರಿತು ಅಧ್ಯಯನಕ್ಕೆ ಹೋಗಿದ್ದಾಗ ನಡೆದ ಎನ್ ಕೌಂಟರ್ ವೊಂದರಲ್ಲಿ 2001ರ ಜನವರಿಯಲ್ಲಿ ಹತರಾಗಿದ್ದರು. ಇವರು ಸಾಕೇತ್ ರಾಜನ್ ಅವರ ಬಾಳಸಂಗಾತಿಯಾಗಿದ್ದರು.
  • 2003ರ ನವೆಂಬರ್ 17ರಂದು ರಾಯಚೂರು ಜಿಲ್ಲೆಯ ಸಿಂಧನೂರಿನ ಹಾಜಿಮಾ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಪಾರ್ವತಿ ಎಂಬಿಬ್ಬರು ಪೊಲೀಸರ ಗುಂಡಿಗೆ ಬಲಿಯಾಗಿದ್ದರು.
  • 2005ರ ಫೆಬ್ರವರಿ 6ರಂದು ಮಾವೋವಾದಿ ಪಕ್ಷದ ರಾಜ್ಯ ಕಾರ್ಯದರ್ಶಿ ಸಾಕೇತ್ ರಾಜನ್ ಪೊಲೀಸ್ ಎನ್‌ಕೌಂಟರ್‌ ಬಲಿಯಾಗಿದ್ದರು. ಇವರ ಅಂಗರಕ್ಷಕನಾಗಿದ್ದ ಸಿಂಧನೂರಿನ ಶಿವಲಿಂಗು ಅವರನ್ನು ಈ ಸಂದರ್ಭದಲ್ಲಿ ಹತ್ಯೆ ಮಾಡಲಾಗಿತ್ತು.

  • 2005ರ ಜೂನ್ 23ರಂದು ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಹಳ್ಳಿಹೊಳೆ ಸಮೀಪದ ದೇವರಬಾಳು ಎಂಬಲ್ಲಿ ಪೊಲೀಸರ ಗುಂಡಿಗೆ ಬೆಳಗಾವಿಯ ಅಜಿತ್ ಕುಸುಬಿ ಮತ್ತು ಮೂಡಿಗೆರೆಯ ಉಮೇಶ್ ಬಣಕಲ್ ಬಲಿಯಾಗಿದ್ದರು.
  • 2006ರ ಡಿಸೆಂಬರ್ 25ರಂದು ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಬಳಿಯ ಕಿಗ್ಗದಲ್ಲಿ ನಕ್ಸಲ್ ದಿನಕರ ಎಎನ್‌ಎಫ್‌ನಿಂದ ಹತ್ಯೆಯಾಗಿದ್ದರು.
  • 2007ರ ಜುಲೈ 10ರಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗುಡ್ಡೆ ತೋಟದ ಒಡೆಯರ ಮಠದಲ್ಲಿ ಸಿಂಧನೂರಿನ ಗೌತಮ್, ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವಿರೋಧಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪರಮೇಶ್ವರ, ಸುಂದರೇಶ್, ರಾಮೇಗೌಡ್ಲು, ಮತ್ತು ಕಾವೇರಿಯವರನ್ನು ಎಎನ್ಎಫ್ ಹತ್ಯೆ ಮಾಡಿತ್ತು.
  • 2008ರ ನವೆಂಬರ್ 20ರಂದು ಚಿಕ್ಕಮಗಳೂರು ಜಿಲ್ಲೆಯ ಹೊರನಾಡಿನ ಮಾವಿನಹೊಲದಲ್ಲಿ ಸೊರಬದ ಮನೋಹರ್, ನವೀನ್, ಅಭಿಲಾಷ್ ಹತ್ಯೆಯಾಗಿದ್ದರು.
  • 2010ರ ಮಾರ್ಚ್ 1ರಂದು ಕಾರ್ಕಳ ತಾಲೂಕಿನ ಮುನಿಯಾಲು ಮುಟ್ಲುಪಾಡಿಯ ಮೈರೋಳಿಯಲ್ಲಿ ಬೆಳ್ತಂಗಡಿ ತಾಲೂಕು ಕುತ್ಲೂರಿನ ವಸಂತ ಗೌಡ್ಲು ಅವರನ್ನು ಹತ್ಯೆ ಮಾಡಲಾಗಿತ್ತು.
  • 2024ರ ನವೆಂಬರ್ 18ರಂದು ಕಾರ್ಕಳ ತಾಲೂಕಿನ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಅವರನ್ನು ಹತ್ಯೆ ಮಾಡಲಾಗಿತ್ತು.
ನಕ್ಸಲರಿಂದ ಹತ್ಯೆಯಾದ 7 ಮಂದಿ ನಾಗರೀಕರು
  • ರಾಯಚೂರಿನಲ್ಲಿ ಶಂಕಿತ ನಕ್ಸಲರು ಸುದರ್ಶನ್ ರೆಡ್ಡಿಯವರನ್ನು ಹತ್ಯೆ ಮಾಡಿದ್ದರು.
  • 2005ರ ಮೇ17ರಂದು ಕೊಪ್ಪ ತಾಲೂಕಿನ ಮೆಣಸಿನ ಹಾಡ್ಯದಲ್ಲಿ ಗಿರಿಜನ ಮುಖಂಡ ಶೇಷಪ್ಪಗೌಡ್ಲು ಹತ್ಯೆ
  • 2007ರ ಜೂನ್ 3ರಂದು ಶೃಂಗೇರಿಯ ಕಿಗ್ಗ ಸಮೀಪದ ಗುಂಡಘಟ್ಟದಲ್ಲಿ ನಕ್ಸಲರಿಂದ ಅಂಗಡಿ ಮಾಲೀಕ ವೆಂಕಟೇಶ ಹತ್ಯೆ
  • 2008ರ ಮೇ 15ರಂದು ಹೆಬ್ರಿ ಸಮೀಪದ ಸೀತಾನದಿ ಬಳಿ ನಕ್ಸಲರ ಗುಂಡಿಗೆ ಶಿಕ್ಷಕ ಭೋಜ ಶೆಟ್ಟಿ ಹಾಗೂ ಅವರ ಗೆಳೆಯ ಕೃಷಿಕ ಸುರೇಶ್ ಶೆಟ್ಟಿ ಬಲಿ
  • 2008 ಡಿಸೆಂಬರ್ 7ರಂದು ಬೈಂದೂರಿನ ಹಳ್ಳಿಹೊಳೆ ಸಮೀಪದ ಕೃಷಿಕ ಜಮೀನ್ದಾರ ಕೇಶವ ಯಡಿಯಾಳರನ್ನು ಪೊಲೀಸರ ಮಾಹಿತಿದಾರನೆಂಬ ಆರೋಪದಲ್ಲಿ ಮನೆಗೆ ನುಗ್ಗಿ ನಕ್ಸಲರು ಹತ್ಯೆಗೈದಿದ್ದರು.
  • 2011ರ ಡಿಸೆಂಬರ್ 28ರಂದು ಉಡುಪಿಯ ತೆಂಗಿನಮಾರುವಿನಿಂದ ಎರಡು ಕಿ.ಮೀ. ದೂರ ದಟ್ಟಾರಣ್ಯದಲ್ಲಿ ಸದಾಶಿವ ಗೌಡ ಎಂಬವರ ಶವ ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
  • …………………………………………………………………………………
  • 2005ರ ಫೆಬ್ರವರಿ 10ರಂದು ತುಮಕೂರು ಜಿಲ್ಲೆ ಪಾವಗಡದಲ್ಲಿ ಕೆಎಸ್ಆರ್‌ಪಿ 9ನೇ ಕ್ಯಾಂಪ್ ಸಿಬ್ಬಂದಿ ಮೇಲಿನ ನಕ್ಸಲ್ ದಾಳಿಯಲ್ಲಿ ನಾಗರೀಕನೊಬ್ಬನ ಸಾವು
10 ಮಂದಿ ಪೊಲೀಸರ ಸಾವು
  • 2007ರ ಜುಲೈ 17ರಂದು ಆಗುಂಬೆ ಸಮೀಪದ ಹುಲ್ಲಾರಬೈಲಿನಲ್ಲಿ ಗುಂಡಿನ ಚಕಮಕಿ, ಎಸ್ಐ ವೆಂಕಟೇಶ ಹತ್ಯೆ
  • 2008ರ ನವೆಂಬರ್ 20ರಂದು ಹೊರನಾಡು ಸಮೀಪ ಮಾವಿನಹೊಲ ಬಳಿ ಎನ್‌ಕೌಂಟರ್‌ ವೇಳೆ ಪೇದೆ ಗುರುಪ್ರಸಾದ್ ಸಾವು
  • 2011ರ ಅಗಸ್ಟ್ 9ರಂದು ಬೆಳ್ತಂಗಡಿ ತಾಲೂಕು ಇಂದಬೆಟ್ಟು ಗ್ರಾ.ಪಂ ವ್ಯಾಪ್ತಿಯ ನಾವೂರ ಗ್ರಾಮದ ಮಂಜಲದಲ್ಲಿ ಬೆಳಗಿನ ಜಾವ ನಕ್ಸಲ್ ನಿಗ್ರಹದಳದ ಪೊಲೀಸರ ಗನ್ ಮಿಸ್ ಫೈರ್ ಆಗಿ ಎಎನ್ಎಫ್ ಸಿಬ್ಬಂದಿ ಮಹಾದೇವ ಮಾನೆ ಬಲಿ.
  • 2005ರ ಫೆಬ್ರವರಿ 10ರಂದು ರಾತ್ರಿ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ವೆಂಕಟಮ್ಮನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬೀಡು ಬಿಟ್ಟಿದ್ದ ಕೆಎಸ್ಆರ್‌ಪಿ 9ನೇ ಕ್ಯಾಂಪ್ ಸಿಬ್ಬಂದಿ ಮೇಲೆ ನಕ್ಸಲರು ದಾಳಿ ನಡೆಸಿದ್ದರು. ಆಂಧ್ರ ಗಡಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದ ಸಂದರ್ಭದಲ್ಲಿ ನಡೆದ ಈ ನಕ್ಸಲ್ ದಾಳಿಯಲ್ಲಿ 7 ಪೊಲೀಸರು ಸೇರಿ 8 ಜನ ಹತರಾಗಿದ್ದರು. 300ಕ್ಕೂ ಹೆಚ್ಚು ನಕ್ಸಲರ ತಂಡ ಒಮ್ಮೆಲೇ ದಾಳಿ ನಡೆಸಿತ್ತು.

ಶರಣಾಗತಿಗೂ ಮುನ್ನ ಸರ್ಕಾರಕ್ಕೆ ಪತ್ರ : ಹಕ್ಕೊತ್ತಾಯಗಳನ್ನು ಮುಂದಿಟ್ಟ ನಕ್ಸಲ್ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...