Homeಮುಖಪುಟಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಮಂಡನೆಯಾಗಲಿವೆ 26 ಹೊಸ ಮಸೂದೆ: ಇಲ್ಲಿದೆ ಸಂಕ್ಷಿಪ್ತ ವಿವರ

ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಮಂಡನೆಯಾಗಲಿವೆ 26 ಹೊಸ ಮಸೂದೆ: ಇಲ್ಲಿದೆ ಸಂಕ್ಷಿಪ್ತ ವಿವರ

ಎರಡು ಬ್ಯಾಂಕುಗಳ ಖಾಸಗೀಕರಣಕ್ಕೆ ಸರ್ಕಾರ ಮುಂದಾಗಿದ್ದು, ಬ್ಯಾಂಕ್‌ ನೌಕರರ ವಿರೋಧ ವ್ಯಕ್ತವಾಗಿದೆ.

- Advertisement -
- Advertisement -

ಕ್ರಿಪ್ಟೋ ಕರೆನ್ಸಿ ನಿಯಂತ್ರಣ, ಬ್ಯಾಂಕುಗಳ ಖಾಗೀಕರಣ, ಕೃಷಿ ಕಾಯ್ದೆಗಳ ರದ್ದು ಮಸೂಸೆ ಸೇರಿದಂತೆ 26 ಹೊಸ ಮಸೂದೆಗಳನ್ನು ಈ ಬಾರಿಯ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುತ್ತಿದೆ. ಚಳಿಗಾಲದ ಅಧಿವೇಶನವು ನವೆಂಬರ್‌ 29ರಿಂದ ಆರಂಭವಾಗಲಿದೆ.

ಲೋಕಸಭೆಯ ಬುಲೆಟಿನ್‌ನಲ್ಲಿ ಬಹಿರಂಗಪಡಿಸಿದ ಶಾಸಕಾಂಗ ಕಾರ್ಯಸೂಚಿಯ ಪ್ರಕಾರ, ಹಲವು ಬದಲಾವಣೆಗಳನ್ನು ತರಲು ಸರ್ಕಾರ ಮುಂದಾಗಿದೆ. ದಿವಾಳಿ ಮತ್ತು ದಿವಾಳಿತನ ಸಂಹಿತೆ 2016ಕ್ಕೆ ಬದಲಾವಣೆಗಳನ್ನು ತರಲು ಸರ್ಕಾರ ನಿರ್ಧರಿಸಿದೆ. ಬ್ಯಾಂಕುಗಳ ಖಾಸಗೀಕರಣಕ್ಕೆ ಬ್ಯಾಂಕ್‌ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ.

1.ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಮಸೂದೆ 2021

ಕಾರ್ಯಸೂಚಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಅಧಿಕೃತ ಡಿಜಿಟಲ್ ಕರೆನ್ಸಿಯ ರಚನೆಗೆ ಅನುಕೂಲಕರ ಚೌಕಟ್ಟು ರಚಿಸುವುದು. ಮಸೂದೆಯು ಭಾರತದಲ್ಲಿ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಲು ಪ್ರಯತ್ನಿಸುತ್ತದೆ. ಆದಾಗ್ಯೂ, ಕ್ರಿಪ್ಟೋಕರೆನ್ಸಿಯ ಆಧಾರವಾಗಿರುವ ತಂತ್ರಜ್ಞಾನ ಮತ್ತು ಅದರ ಬಳಕೆಗಳನ್ನು ಉತ್ತೇಜಿಸಲು ಕೆಲವು ವಿನಾಯಿತಿಗಳನ್ನು ನೀಡುವುದು.

2.ದಿವಾಳಿ ಮತ್ತು ದಿವಾಳಿತನ ನೀತಿ (ಎರಡನೇ ತಿದ್ದುಪಡಿ) ಮಸೂದೆ

ಕಾರ್ಯಸೂಚಿ: 2016ರ ದಿವಾಳಿ ಮತ್ತು ದಿವಾಳಿತನ ಕಾಯ್ದೆಯನ್ನು ಬಲಿಷ್ಠಗೊಳಿಸುವುದು ಹಾಗೂ ಸುಗಮಗೊಳಿಸುವುದು.

3.ಬ್ಯಾಂಕಿಂಗ್‌ ಕಾನೂನು (ತಿದ್ದುಪಡಿ) ಮಸೂದೆ 2021

ಕಾರ್ಯಸೂಚಿ: 1970 ಮತ್ತು 1980ರ ಬ್ಯಾಂಕಿಂಗ್ ಕಂಪನಿಗಳ (ಸ್ವಾಧೀನ ಮತ್ತು ಉದ್ಯಮಗಳ ವರ್ಗಾವಣೆ) ಕಾಯಿದೆಗಳಲ್ಲಿ ತಿದ್ದುಪಡಿಗಳನ್ನು ತರುವುದು, ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ 1949ಗೆ ಪ್ರಾಸಂಗಿಕ ತಿದ್ದುಪಡಿಗಳನ್ನು ಜಾರಿಗೆ ತರುವುದು.

4.ಕೃಷಿ ಕಾನೂನುಗಳ ರದ್ದತಿ ಮಸೂದೆ, 2021

ಕಾರ್ಯಸೂಚಿ: ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಅನುಕೂಲ) ಕಾಯಿದೆ, 2020, ರೈತರ (ಸಬಲೀಕರಣ ಮತ್ತು ರಕ್ಷಣೆ) ಬೆಲೆ ಭರವಸೆ, ಕೃಷಿ ಸೇವೆಗಳ ಕಾಯಿದೆ, 2020; ಅಗತ್ಯ ಸರಕುಗಳ (ತಿದ್ದುಪಡಿ) ಕಾಯಿದೆ, 2020- ಈ ಕಾಯ್ದೆಗಳನ್ನು ರದ್ದುಪಡಿಸುವುದು.


ಇದನ್ನೂ ಓದಿರಿ: ರೈತ ಹೋರಾಟದ ಮುಂದಿನ ಯೋಜನೆ ನ.27 ರಂದು ನಿರ್ಧಾರ: ರಾಕೇಶ್ ಟಿಕಾಯತ್


5.ಮಧ್ಯಸ್ಥಿಕೆ ಮಸೂದೆ, 2021

ಕಾರ್ಯಸೂಚಿ: ಈ ಮಸೂದೆಯು ವ್ಯಾಜ್ಯಪೂರ್ವ ಮಧ್ಯಸ್ಥಿಕೆಯನ್ನು ಪ್ರಸ್ತಾಪಿಸುತ್ತದೆ ಮತ್ತು ಅದೇ ಸಮಯದಲ್ಲಿ ತುರ್ತು ಪರಿಹಾರವನ್ನು ಕೋರಿದರೆ ಸಮರ್ಥ ನ್ಯಾಯಾಧಿಕರಣ ವೇದಿಕೆಗಳು/ನ್ಯಾಯಾಲಯಗಳನ್ನು ಸಂಪರ್ಕಿಸಲು ದಾವೆದಾರರ ಹಿತಾಸಕ್ತಿ ಕಾಪಾಡುತ್ತದೆ.

6.ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ, 2021

ಕಾರ್ಯಸೂಚಿ: ಸಾರ್ವತ್ರಿಕ ಪಿಂಚಣಿ ವ್ಯಾಪ್ತಿಯನ್ನು ವಿಸ್ತರಿಸುವ ಮತ್ತು ಪಿಎಫ್ಆರ್‌‌ಡಿಎ ಬಲಪಡಿಸಲು ವಿತ್ತ ಸಚಿವರ 2020 ರ ಬಜೆಟ್ ಘೋಷಿತ ಭರವಸೆಯನ್ನು ಉದ್ದೇಶಿತ ಮಸೂದೆಯು ಪೂರೈಸುತ್ತದೆ. ಪಿಎಫ್ಆರ್ಡಿಎ ಕಾಯಿದೆ ತಿದ್ದುಪಡಿಯೊಂದಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಟ್ರಸ್ಟ್ ನ ಅಧಿಕಾರಗಳು, ಕಾರ್ಯಗಳು ಮತ್ತು ಕರ್ತವ್ಯಗಳು, ಪ್ರಸ್ತುತ ಪಿಎಫ್ಆರ್ಡಿಎ (ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಟ್ರಸ್ಟ್) ನಿಯಮಗಳು 2015 ರ ಅಡಿಯಲ್ಲಿ ನಿಗದಿಪಡಿಸಲಾಗಿದ್ದು, ತಿದ್ದುಪಡಿಯ ನಂತರ ಇದು ಚಾರಿಟಬಲ್ ಟ್ರಸ್ಟ್ ಅಥವಾ ಕಂಪನಿಗಳ ಕಾಯಿದೆಯ ಅಡಿಯಲ್ಲಿ ಬರಬಹುದಾಗಿದೆ.

7.ಇಂಧನ ಸಂರಕ್ಷಣೆ (ತಿದ್ದುಪಡಿ) ಮಸೂದೆ, 2021

ಕಾರ್ಯಸೂಚಿ: ಪ್ಯಾರಿಸ್ ಒಪ್ಪಂದವನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಹಣಕಾಸು, ತಾಂತ್ರಿಕ ಮತ್ತು ಸಾಮರ್ಥ್ಯ ನಿರ್ಮಾಣ ಮಾಡುವುದು.

8.ಚಾರ್ಟರ್ಡ್ ಅಕೌಂಟೆಂಟ್ಸ್, ಕಾಸ್ಟ್ ಅಂಡ್ ವರ್ಕ್ಸ್ ಅಕೌಂಟೆಂಟ್ಸ್ ಮತ್ತು ಕಂಪನಿ ಸೆಕ್ರೆಟರಿಗಳ (ತಿದ್ದುಪಡಿ) ಮಸೂದೆ

ಕಾರ್ಯಸೂಚಿ: ಸಂಸ್ಥೆಗಳ ಶಿಸ್ತಿನ ಕಾರ್ಯವಿಧಾನವನ್ನು ಸುಧಾರಿಸುವುದು ಹಾಗೂ ವೇಗಗೊಳಿಸುವುದು.

9.ವಿದ್ಯುಚ್ಛಕ್ತಿ (ತಿದ್ದುಪಡಿ) ಮಸೂದೆ, 2021

ಕಾರ್ಯಸೂಚಿ: ಇತರ ವಿತರಣಾ ವ್ಯವಹಾರಗಳಿಗೆ ಪರವಾನಗಿಯನ್ನು ನೀಡುವುದು, ವಿದ್ಯುತ್ ದಂಡಕ್ಕಾಗಿ ಮೇಲ್ಮನವಿ ನ್ಯಾಯಾಧಿಕರಣವನ್ನು ಬಲಪಡಿಸುವುದು ಇತ್ಯಾದಿ.


ಇದನ್ನೂ ಓದಿರಿ: ಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ನಾಳೆ ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ…’


ಇತರ ಮಸೂದೆಗಳು

10. ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟಿಕ್ ಸಬ್ಸ್ಟೆನ್ಸ್ (ತಿದ್ದುಪಡಿ) ಮಸೂದೆ

11. ಕೇಂದ್ರ ಜಾಗೃತ ಆಯೋಗ (ತಿದ್ದುಪಡಿ) ಮಸೂದೆ

12. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ

13. ಕಂಟೋನ್ಮೆಂಟ್ ಮಸೂದೆ

14. ಅಂತರ-ಸೇವೆಗಳ ಸಂಸ್ಥೆಗಳು (ಕಮಾಂಡ್, ನಿಯಂತ್ರಣ ಮತ್ತು ಶಿಸ್ತು) ಮಸೂದೆ

15. ಭಾರತೀಯ ಅಂಟಾರ್ಟಿಕಾ ಮಸೂದೆ

16. ಎಮಿಗ್ರೇಷನ್ ಮಸೂದೆ

17. ಭಾರತೀಯ ಸಮುದ್ರ ಮೀನುಗಾರಿಕೆ ಮಸೂದೆ

18. ರಾಷ್ಟ್ರೀಯ ದಂತ ಆಯೋಗದ ಮಸೂದೆ

19. ರಾಷ್ಟ್ರೀಯ ನರ್ಸಿಂಗ್ ಮಿಡ್‌ವೈಫರಿ ಕಮಿಷನ್ ಬಿಲ್

20. ಮೆಟ್ರೋ ರೈಲು (ನಿರ್ಮಾಣ, ಕಾರ್ಯಾಚರಣೆ ಮತ್ತು ನಿರ್ವಹಣೆ) ಮಸೂದೆ

21. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರು (ಸಂಬಳ ಮತ್ತು ಸೇವಾ ಷರತ್ತುಗಳು) ತಿದ್ದುಪಡಿ ಮಸೂದೆ

22. ರಾಷ್ಟ್ರೀಯ ಸಾರಿಗೆ ವಿಶ್ವವಿದ್ಯಾಲಯದ ಮಸೂದೆ

23. ಸಂವಿಧಾನ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು) ಆದೇಶ (ತಿದ್ದುಪಡಿ) ಮಸೂದೆ

24. ಸಂವಿಧಾನ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು) ಆದೇಶ (ತಿದ್ದುಪಡಿ) ಮಸೂದೆ

25. ಮಾನವ ಕಳ್ಳಸಾಗಣೆ (ತಡೆಗಟ್ಟುವಿಕೆ, ರಕ್ಷಣೆ ಮತ್ತು ಪುನರ್ವಸತಿ) ಮಸೂದೆ

26. ರಾಷ್ಟ್ರೀಯ ಡೋಪಿಂಗ್ ವಿರೋಧಿ ಮಸೂದೆ.

ಮೋದಿನಾಮಿಕ್ಸ್‌: ಬ್ಯಾಂಕುಗಳ ಖಾಸಗೀಕರಣಕ್ಕೆ ಬ್ಯಾಂಕ್‌ ನೌಕರರ ವಿರೋಧ

ರಾಷ್ಟ್ರೀಯಕೃತ ಬ್ಯಾಂಕುಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತಲೇ ಇದ್ದು, ಪ್ರಸಕ್ತ ಸಾಲಿನಲ್ಲಿ ಸಾರ್ವಜನಿಕ ವಲಯದ ಎರಡು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಬ್ಯಾಂಕ್ ಆಫ್ ಇಂಡಿಯಾ- ಈ ನಾಲ್ಕು ಬ್ಯಾಂಕುಗಳ ಪೈಕಿ ಎರಡು ಬ್ಯಾಂಕುಗಳು ಖಾಸಗೀಕರಣಗೊಳ್ಳಲಿವೆ. ಈ ನಿಟ್ಟಿನಲ್ಲಿ ಉದ್ದೇಶತ ಬ್ಯಾಂಕುಗಳ ನೌಕರರಿಗೆ ಸ್ವಯಂ ನಿವೃತ್ತಿ ಘೋಷಿಸಿದೆ. ಬ್ಯಾಂಕಿಂಗ್ ನೌಕರರ ಸಂಘಟನೆಗಳು ಖಾಸಗೀಕರಣವನ್ನು ವಿರೋಧಿಸಿವೆ.


ಇದನ್ನೂ ಓದಿರಿ: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳ ಮೂಲಕ ರೈತ ಹೋರಾಟದ ಅಪಪ್ರಚಾರ: ವರದಿಯಿಂದ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...