Homeಮುಖಪುಟಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಮಂಡನೆಯಾಗಲಿವೆ 26 ಹೊಸ ಮಸೂದೆ: ಇಲ್ಲಿದೆ ಸಂಕ್ಷಿಪ್ತ ವಿವರ

ಚಳಿಗಾಲದ ಸಂಸತ್‌ ಅಧಿವೇಶನದಲ್ಲಿ ಮಂಡನೆಯಾಗಲಿವೆ 26 ಹೊಸ ಮಸೂದೆ: ಇಲ್ಲಿದೆ ಸಂಕ್ಷಿಪ್ತ ವಿವರ

ಎರಡು ಬ್ಯಾಂಕುಗಳ ಖಾಸಗೀಕರಣಕ್ಕೆ ಸರ್ಕಾರ ಮುಂದಾಗಿದ್ದು, ಬ್ಯಾಂಕ್‌ ನೌಕರರ ವಿರೋಧ ವ್ಯಕ್ತವಾಗಿದೆ.

- Advertisement -
- Advertisement -

ಕ್ರಿಪ್ಟೋ ಕರೆನ್ಸಿ ನಿಯಂತ್ರಣ, ಬ್ಯಾಂಕುಗಳ ಖಾಗೀಕರಣ, ಕೃಷಿ ಕಾಯ್ದೆಗಳ ರದ್ದು ಮಸೂಸೆ ಸೇರಿದಂತೆ 26 ಹೊಸ ಮಸೂದೆಗಳನ್ನು ಈ ಬಾರಿಯ ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲಾಗುತ್ತಿದೆ. ಚಳಿಗಾಲದ ಅಧಿವೇಶನವು ನವೆಂಬರ್‌ 29ರಿಂದ ಆರಂಭವಾಗಲಿದೆ.

ಲೋಕಸಭೆಯ ಬುಲೆಟಿನ್‌ನಲ್ಲಿ ಬಹಿರಂಗಪಡಿಸಿದ ಶಾಸಕಾಂಗ ಕಾರ್ಯಸೂಚಿಯ ಪ್ರಕಾರ, ಹಲವು ಬದಲಾವಣೆಗಳನ್ನು ತರಲು ಸರ್ಕಾರ ಮುಂದಾಗಿದೆ. ದಿವಾಳಿ ಮತ್ತು ದಿವಾಳಿತನ ಸಂಹಿತೆ 2016ಕ್ಕೆ ಬದಲಾವಣೆಗಳನ್ನು ತರಲು ಸರ್ಕಾರ ನಿರ್ಧರಿಸಿದೆ. ಬ್ಯಾಂಕುಗಳ ಖಾಸಗೀಕರಣಕ್ಕೆ ಬ್ಯಾಂಕ್‌ ನೌಕರರು ವಿರೋಧ ವ್ಯಕ್ತಪಡಿಸಿದ್ದಾರೆ.

1.ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಮಸೂದೆ 2021

ಕಾರ್ಯಸೂಚಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ಅಧಿಕೃತ ಡಿಜಿಟಲ್ ಕರೆನ್ಸಿಯ ರಚನೆಗೆ ಅನುಕೂಲಕರ ಚೌಕಟ್ಟು ರಚಿಸುವುದು. ಮಸೂದೆಯು ಭಾರತದಲ್ಲಿ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಲು ಪ್ರಯತ್ನಿಸುತ್ತದೆ. ಆದಾಗ್ಯೂ, ಕ್ರಿಪ್ಟೋಕರೆನ್ಸಿಯ ಆಧಾರವಾಗಿರುವ ತಂತ್ರಜ್ಞಾನ ಮತ್ತು ಅದರ ಬಳಕೆಗಳನ್ನು ಉತ್ತೇಜಿಸಲು ಕೆಲವು ವಿನಾಯಿತಿಗಳನ್ನು ನೀಡುವುದು.

2.ದಿವಾಳಿ ಮತ್ತು ದಿವಾಳಿತನ ನೀತಿ (ಎರಡನೇ ತಿದ್ದುಪಡಿ) ಮಸೂದೆ

ಕಾರ್ಯಸೂಚಿ: 2016ರ ದಿವಾಳಿ ಮತ್ತು ದಿವಾಳಿತನ ಕಾಯ್ದೆಯನ್ನು ಬಲಿಷ್ಠಗೊಳಿಸುವುದು ಹಾಗೂ ಸುಗಮಗೊಳಿಸುವುದು.

3.ಬ್ಯಾಂಕಿಂಗ್‌ ಕಾನೂನು (ತಿದ್ದುಪಡಿ) ಮಸೂದೆ 2021

ಕಾರ್ಯಸೂಚಿ: 1970 ಮತ್ತು 1980ರ ಬ್ಯಾಂಕಿಂಗ್ ಕಂಪನಿಗಳ (ಸ್ವಾಧೀನ ಮತ್ತು ಉದ್ಯಮಗಳ ವರ್ಗಾವಣೆ) ಕಾಯಿದೆಗಳಲ್ಲಿ ತಿದ್ದುಪಡಿಗಳನ್ನು ತರುವುದು, ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ 1949ಗೆ ಪ್ರಾಸಂಗಿಕ ತಿದ್ದುಪಡಿಗಳನ್ನು ಜಾರಿಗೆ ತರುವುದು.

4.ಕೃಷಿ ಕಾನೂನುಗಳ ರದ್ದತಿ ಮಸೂದೆ, 2021

ಕಾರ್ಯಸೂಚಿ: ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಅನುಕೂಲ) ಕಾಯಿದೆ, 2020, ರೈತರ (ಸಬಲೀಕರಣ ಮತ್ತು ರಕ್ಷಣೆ) ಬೆಲೆ ಭರವಸೆ, ಕೃಷಿ ಸೇವೆಗಳ ಕಾಯಿದೆ, 2020; ಅಗತ್ಯ ಸರಕುಗಳ (ತಿದ್ದುಪಡಿ) ಕಾಯಿದೆ, 2020- ಈ ಕಾಯ್ದೆಗಳನ್ನು ರದ್ದುಪಡಿಸುವುದು.


ಇದನ್ನೂ ಓದಿರಿ: ರೈತ ಹೋರಾಟದ ಮುಂದಿನ ಯೋಜನೆ ನ.27 ರಂದು ನಿರ್ಧಾರ: ರಾಕೇಶ್ ಟಿಕಾಯತ್


5.ಮಧ್ಯಸ್ಥಿಕೆ ಮಸೂದೆ, 2021

ಕಾರ್ಯಸೂಚಿ: ಈ ಮಸೂದೆಯು ವ್ಯಾಜ್ಯಪೂರ್ವ ಮಧ್ಯಸ್ಥಿಕೆಯನ್ನು ಪ್ರಸ್ತಾಪಿಸುತ್ತದೆ ಮತ್ತು ಅದೇ ಸಮಯದಲ್ಲಿ ತುರ್ತು ಪರಿಹಾರವನ್ನು ಕೋರಿದರೆ ಸಮರ್ಥ ನ್ಯಾಯಾಧಿಕರಣ ವೇದಿಕೆಗಳು/ನ್ಯಾಯಾಲಯಗಳನ್ನು ಸಂಪರ್ಕಿಸಲು ದಾವೆದಾರರ ಹಿತಾಸಕ್ತಿ ಕಾಪಾಡುತ್ತದೆ.

6.ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ, 2021

ಕಾರ್ಯಸೂಚಿ: ಸಾರ್ವತ್ರಿಕ ಪಿಂಚಣಿ ವ್ಯಾಪ್ತಿಯನ್ನು ವಿಸ್ತರಿಸುವ ಮತ್ತು ಪಿಎಫ್ಆರ್‌‌ಡಿಎ ಬಲಪಡಿಸಲು ವಿತ್ತ ಸಚಿವರ 2020 ರ ಬಜೆಟ್ ಘೋಷಿತ ಭರವಸೆಯನ್ನು ಉದ್ದೇಶಿತ ಮಸೂದೆಯು ಪೂರೈಸುತ್ತದೆ. ಪಿಎಫ್ಆರ್ಡಿಎ ಕಾಯಿದೆ ತಿದ್ದುಪಡಿಯೊಂದಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಟ್ರಸ್ಟ್ ನ ಅಧಿಕಾರಗಳು, ಕಾರ್ಯಗಳು ಮತ್ತು ಕರ್ತವ್ಯಗಳು, ಪ್ರಸ್ತುತ ಪಿಎಫ್ಆರ್ಡಿಎ (ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಟ್ರಸ್ಟ್) ನಿಯಮಗಳು 2015 ರ ಅಡಿಯಲ್ಲಿ ನಿಗದಿಪಡಿಸಲಾಗಿದ್ದು, ತಿದ್ದುಪಡಿಯ ನಂತರ ಇದು ಚಾರಿಟಬಲ್ ಟ್ರಸ್ಟ್ ಅಥವಾ ಕಂಪನಿಗಳ ಕಾಯಿದೆಯ ಅಡಿಯಲ್ಲಿ ಬರಬಹುದಾಗಿದೆ.

7.ಇಂಧನ ಸಂರಕ್ಷಣೆ (ತಿದ್ದುಪಡಿ) ಮಸೂದೆ, 2021

ಕಾರ್ಯಸೂಚಿ: ಪ್ಯಾರಿಸ್ ಒಪ್ಪಂದವನ್ನು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಹಣಕಾಸು, ತಾಂತ್ರಿಕ ಮತ್ತು ಸಾಮರ್ಥ್ಯ ನಿರ್ಮಾಣ ಮಾಡುವುದು.

8.ಚಾರ್ಟರ್ಡ್ ಅಕೌಂಟೆಂಟ್ಸ್, ಕಾಸ್ಟ್ ಅಂಡ್ ವರ್ಕ್ಸ್ ಅಕೌಂಟೆಂಟ್ಸ್ ಮತ್ತು ಕಂಪನಿ ಸೆಕ್ರೆಟರಿಗಳ (ತಿದ್ದುಪಡಿ) ಮಸೂದೆ

ಕಾರ್ಯಸೂಚಿ: ಸಂಸ್ಥೆಗಳ ಶಿಸ್ತಿನ ಕಾರ್ಯವಿಧಾನವನ್ನು ಸುಧಾರಿಸುವುದು ಹಾಗೂ ವೇಗಗೊಳಿಸುವುದು.

9.ವಿದ್ಯುಚ್ಛಕ್ತಿ (ತಿದ್ದುಪಡಿ) ಮಸೂದೆ, 2021

ಕಾರ್ಯಸೂಚಿ: ಇತರ ವಿತರಣಾ ವ್ಯವಹಾರಗಳಿಗೆ ಪರವಾನಗಿಯನ್ನು ನೀಡುವುದು, ವಿದ್ಯುತ್ ದಂಡಕ್ಕಾಗಿ ಮೇಲ್ಮನವಿ ನ್ಯಾಯಾಧಿಕರಣವನ್ನು ಬಲಪಡಿಸುವುದು ಇತ್ಯಾದಿ.


ಇದನ್ನೂ ಓದಿರಿ: ಅಭಿವ್ಯಕ್ತಿ ಸ್ವಾತಂತ್ರ್ಯ ಉಳಿವಿಗೆ ನಾಳೆ ಬೃಹತ್‌ ಜಾಥಾ, ಸಮಾವೇಶ; ‘ಬಾಡೂಟದ ಬುತ್ತಿಯೊಂದಿಗೆ ಬನ್ನಿ…’


ಇತರ ಮಸೂದೆಗಳು

10. ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟಿಕ್ ಸಬ್ಸ್ಟೆನ್ಸ್ (ತಿದ್ದುಪಡಿ) ಮಸೂದೆ

11. ಕೇಂದ್ರ ಜಾಗೃತ ಆಯೋಗ (ತಿದ್ದುಪಡಿ) ಮಸೂದೆ

12. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ತಿದ್ದುಪಡಿ) ಮಸೂದೆ

13. ಕಂಟೋನ್ಮೆಂಟ್ ಮಸೂದೆ

14. ಅಂತರ-ಸೇವೆಗಳ ಸಂಸ್ಥೆಗಳು (ಕಮಾಂಡ್, ನಿಯಂತ್ರಣ ಮತ್ತು ಶಿಸ್ತು) ಮಸೂದೆ

15. ಭಾರತೀಯ ಅಂಟಾರ್ಟಿಕಾ ಮಸೂದೆ

16. ಎಮಿಗ್ರೇಷನ್ ಮಸೂದೆ

17. ಭಾರತೀಯ ಸಮುದ್ರ ಮೀನುಗಾರಿಕೆ ಮಸೂದೆ

18. ರಾಷ್ಟ್ರೀಯ ದಂತ ಆಯೋಗದ ಮಸೂದೆ

19. ರಾಷ್ಟ್ರೀಯ ನರ್ಸಿಂಗ್ ಮಿಡ್‌ವೈಫರಿ ಕಮಿಷನ್ ಬಿಲ್

20. ಮೆಟ್ರೋ ರೈಲು (ನಿರ್ಮಾಣ, ಕಾರ್ಯಾಚರಣೆ ಮತ್ತು ನಿರ್ವಹಣೆ) ಮಸೂದೆ

21. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರು (ಸಂಬಳ ಮತ್ತು ಸೇವಾ ಷರತ್ತುಗಳು) ತಿದ್ದುಪಡಿ ಮಸೂದೆ

22. ರಾಷ್ಟ್ರೀಯ ಸಾರಿಗೆ ವಿಶ್ವವಿದ್ಯಾಲಯದ ಮಸೂದೆ

23. ಸಂವಿಧಾನ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು) ಆದೇಶ (ತಿದ್ದುಪಡಿ) ಮಸೂದೆ

24. ಸಂವಿಧಾನ (ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳು) ಆದೇಶ (ತಿದ್ದುಪಡಿ) ಮಸೂದೆ

25. ಮಾನವ ಕಳ್ಳಸಾಗಣೆ (ತಡೆಗಟ್ಟುವಿಕೆ, ರಕ್ಷಣೆ ಮತ್ತು ಪುನರ್ವಸತಿ) ಮಸೂದೆ

26. ರಾಷ್ಟ್ರೀಯ ಡೋಪಿಂಗ್ ವಿರೋಧಿ ಮಸೂದೆ.

ಮೋದಿನಾಮಿಕ್ಸ್‌: ಬ್ಯಾಂಕುಗಳ ಖಾಸಗೀಕರಣಕ್ಕೆ ಬ್ಯಾಂಕ್‌ ನೌಕರರ ವಿರೋಧ

ರಾಷ್ಟ್ರೀಯಕೃತ ಬ್ಯಾಂಕುಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತಲೇ ಇದ್ದು, ಪ್ರಸಕ್ತ ಸಾಲಿನಲ್ಲಿ ಸಾರ್ವಜನಿಕ ವಲಯದ ಎರಡು ಬ್ಯಾಂಕುಗಳನ್ನು ಖಾಸಗೀಕರಣಗೊಳಿಸಲಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಬ್ಯಾಂಕ್ ಆಫ್ ಇಂಡಿಯಾ- ಈ ನಾಲ್ಕು ಬ್ಯಾಂಕುಗಳ ಪೈಕಿ ಎರಡು ಬ್ಯಾಂಕುಗಳು ಖಾಸಗೀಕರಣಗೊಳ್ಳಲಿವೆ. ಈ ನಿಟ್ಟಿನಲ್ಲಿ ಉದ್ದೇಶತ ಬ್ಯಾಂಕುಗಳ ನೌಕರರಿಗೆ ಸ್ವಯಂ ನಿವೃತ್ತಿ ಘೋಷಿಸಿದೆ. ಬ್ಯಾಂಕಿಂಗ್ ನೌಕರರ ಸಂಘಟನೆಗಳು ಖಾಸಗೀಕರಣವನ್ನು ವಿರೋಧಿಸಿವೆ.


ಇದನ್ನೂ ಓದಿರಿ: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆಗಳ ಮೂಲಕ ರೈತ ಹೋರಾಟದ ಅಪಪ್ರಚಾರ: ವರದಿಯಿಂದ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...