Homeಮುಖಪುಟಕರ್ನಾಟಕ ಸೇರಿ 11 ರಾಜ್ಯಗಳ 26 ಗ್ರಾಮೀಣ ಬ್ಯಾಂಕ್‌ಗಳು ವಿಲೀನ

ಕರ್ನಾಟಕ ಸೇರಿ 11 ರಾಜ್ಯಗಳ 26 ಗ್ರಾಮೀಣ ಬ್ಯಾಂಕ್‌ಗಳು ವಿಲೀನ

- Advertisement -
- Advertisement -

ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 26 ಗ್ರಾಮೀಣ ಬ್ಯಾಂಕ್‌ಗಳನ್ನು ವಿಲೀನಗೊಳಿಸಲಾಗಿದೆ. ಮೇ 1ರಿಂದ ಇದು ಅಧಿಕೃತವಾಗಿ ಜಾರಿಯಾಗಿದೆ.

“11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 26 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ವಿಲೀನವು ಇಂದಿನಿಂದ ಜಾರಿಗೆ ಬರಲಿದೆ. ಇದು ಆರ್‌ಆರ್‌ಬಿಗಳನ್ನು ಬಲಿಷ್ಠಗೊಳಿಸುವುದು, ಉತ್ತಮ ಆಡಳಿತ, ಸುಧಾರಿತ ಸಾಲದ ಹರಿವು ಮತ್ತು ಆರ್ಥಿಕ ಸೇರ್ಪಡೆಯತ್ತ ಮಹತ್ವದ ಹೆಜ್ಜೆಯಿಡುವುದನ್ನು ಸೂಚಿಸುತ್ತದೆ” ಎಂದು ಹಣಕಾಸು ಸೇವೆಗಳ ಇಲಾಖೆ (ಡಿಎಫ್‌ಎಸ್‌) ಎಕ್ಸ್‌ನಲ್ಲಿ ಗುರುವಾರ (ಮೇ 1) ಪೋಸ್ಟ್‌ ಮಾಡಿದೆ.

ಏಪ್ರಿಲ್ 8ರಂದು, ಡಿಎಫ್‌ಎಸ್‌ ‘ಒಂದು ರಾಜ್ಯ ಒಂದು ಗ್ರಾಮೀಣ ಬ್ಯಾಂಕ್’ ತತ್ವದಡಿ 26 ಆರ್‌ಆರ್‌ಬಿಗಳ ವಿಲೀನಕ್ಕೆ ಅಧಿಸೂಚನೆ ಹೊರಡಿಸಿತ್ತು. ಇದು ಆರ್‌ಆರ್‌ಬಿಗಳ ವಿಲೀನದ ನಾಲ್ಕನೇ ಹಂತವಾಗಿದೆ.

ಈ ಹಿಂದೆ ನಡೆದ ವಿಲೀನಗಳಿಂದಾಗಿ ಆರ್‌ಆರ್‌ಬಿಗಳ ದಕ್ಷತೆಯಲ್ಲಿ ಸುಧಾರಣೆಯಾಗಿದೆ ಎಂದ ಹಣಕಾಸು ಸಚಿವಾಲಯ, ನವೆಂಬರ್ 2024ರಲ್ಲಿ ಪಾಲುದಾರರೊಂದಿಗೆ ಸಮಾಲೋಚನೆಗಾಗಿ ವಿಲೀನ ಯೋಜನೆಯನ್ನು ರೂಪಿಸಿತ್ತು.

ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿದ ನಂತರ, 10 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ 26 ಆರ್‌ಆರ್‌ಬಿಗಳ ವಿಲೀನವನ್ನು ಪ್ರಾಥಮಿಕವಾಗಿ ಪ್ರಮಾಣದ ದಕ್ಷತೆ ಮತ್ತು ವೆಚ್ಚ ತರ್ಕಬದ್ಧಗೊಳಿಸುವಿಕೆಯ ಸುಧಾರಣೆಯ ಮೇಲೆ ಕೇಂದ್ರೀಕರಿಸಲಾಗಿತ್ತು.

ಇತ್ತೀಚಿನ ವಿಲೀನದ ನಂತರ, 26 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 28 ಆರ್‌ಆರ್‌ಬಿಗಳು ಉಳಿದುಕೊಂಡಿವೆ. ಇವುಗಳು 700 ಜಿಲ್ಲೆಗಳಲ್ಲಿ 22,000ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿವೆ.

ಆರ್‌ಆರ್‌ಬಿಗಳ ಪ್ರಮುಖ ಕಾರ್ಯಕ್ಷೇತ್ರ ಗ್ರಾಮೀಣ ಪ್ರದೇಶಗಳಲ್ಲಿದ್ದು, ಶೇಕಡ 92ರಷ್ಟು ಶಾಖೆಗಳು ಗ್ರಾಮೀಣ ಅಥವಾ ಅರೆ ನಗರ ಪ್ರದೇಶಗಳಲ್ಲಿವೆ.

ಈ ಹಿಂದಿನ ಮೂರು ಹಂತಗಳಲ್ಲಿ, ಅಂದರೆ ಹಂತ-I (ಹಣಕಾಸು ವರ್ಷ 2006 ರಿಂದ 2010) ಆರ್‌ಆರ್‌ಬಿಗಳ ಸಂಖ್ಯೆಯನ್ನು 196 ರಿಂದ 82ಕ್ಕೆ ಇಳಿಸಲಾಗಿತ್ತು. ಹಂತ-2 (ಹಣಕಾಸು ವರ್ಷ 2013ರಿಂದ 2015) ಆರ್‌ಆರ್‌ಬಿಗಳ ಸಂಖ್ಯೆಯನ್ನು 82ರಿಂದ 56ಕ್ಕೆ ಇಳಿಸಲಾಗಿತ್ತು. ಹಂತ-3 (ಹಣಕಾಸು ವರ್ಷ 2019 ರಿಂದ 2021) ಆರ್‌ಆರ್‌ಬಿಗಳ ಸಂಖ್ಯೆಯನ್ನು 56ರಿಂದ 43ಕ್ಕೆ ಇಳಿಸಲಾಗಿತ್ತು.

ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ, ವ್ಯಾಪಾರ, ವಾಣಿಜ್ಯ, ಕೈಗಾರಿಕೆ ಮತ್ತು ಇತರ ಉತ್ಪಾದಕ ಚಟುವಟಿಕೆಗಳ ಅಭಿವೃದ್ಧಿಗೆ, ವಿಶೇಷವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರು, ಕೃಷಿ ಕಾರ್ಮಿಕರು, ಕುಶಲಕರ್ಮಿಗಳು ಮತ್ತು ಸಣ್ಣ ಉದ್ಯಮಿಗಳಿಗೆ ಸಾಲ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮೀಣ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಲು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳನ್ನು (ಆರ್‌ಆರ್‌ಬಿ) 1975ರಲ್ಲಿ ಸ್ಥಾಪಿಸಲಾಯಿತು.

ಕರ್ನಾಟಕದ ಎರಡು ಬ್ಯಾಂಕ್‌ಗಳು ವಿಲೀನ

ಕರ್ನಾಟಕದಲ್ಲಿ ಎರಡು ರೀತಿಯ ಗ್ರಾಮೀಣ ಬ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತಿತ್ತು. 1. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (ಕೆವಿಜಿಬಿ) ಮತ್ತು 2. ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ). ಇದೀಗ ಈ ಎರಡೂ ಬ್ಯಾಂಕ್‌ಗಳನ್ನು ವಿಲೀನಗೊಳಿಸಿ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಗಿ ಮಾಡಲಾಗಿದೆ. ಈ ಬ್ಯಾಂಕ್‌ನ ಕೇಂದ್ರ ಕಚೇರಿ ಬಳ್ಳಾರಿಯಲ್ಲಿ ಇರಲಿದೆ.

ಗಮನಾರ್ಹವಾಗಿ, 1970ರ ದಶಕದಲ್ಲಿ ರಾಜ್ಯದಲ್ಲಿ 13 ರೀತಿಯ ಗ್ರಾಮೀಣ ಬ್ಯಾಂಕ್‌ಗಳು ಇದ್ದವು. ಅವುಗಳನ್ನು ಹಂತ, ಹಂತವಾಗಿ ವಿಲೀನಗೊಳಿಸುತ್ತಾ ಬಂದು, ಅಂತಿಮವಾಗಿ ಎರಡು ಗ್ರಾಮೀಣ ಬ್ಯಾಂಕ್‌ಗಳು ಉಳಿದಿದ್ದವು. ಇದೀಗ, ಅವುಗಳನ್ನೂ ವಿಲೀನಗೊಳಿಸಲಾಗಿದೆ.

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ರಾಜ್ಯದ 9 ಜಿಲ್ಲೆಗಳಲ್ಲಿ 629 ಶಾಖೆಗಳನ್ನು ಹೊಂದಿತ್ತು. ಕರ್ನಾಟಕ ಗ್ರಾಮೀಣ ಬ್ಯಾಂಕ್ ರಾಜ್ಯದ 22 ಜಿಲ್ಲೆಗಳಲ್ಲಿ 1,122 ಶಾಖೆಗಳನ್ನು ಹೊಂದಿತ್ತು. ಇದೀಗ ಎರಡೂ ಬ್ಯಾಂಕ್‌ಗಳ ವಿಲೀನದೊಂದಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ದೇಶದ ಎರಡನೇ ಅತಿದೊಡ್ಡ ಗ್ರಾಮೀಣ ಬ್ಯಾಂಕ್ ಎನಿಸಿಕೊಂಡಿದೆ.

ಹಿಂತೆಗೆದುಕೊಂಡ ಬಳಿಕವೂ ಚಲಾವಣೆಯಲ್ಲಿ ರೂ. 6266 ಕೋಟಿ ಮೌಲ್ಯದ ರೂ.2000 ನೋಟುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...