Homeಮುಖಪುಟಕರ್ನಾಟಕ ಸೇರಿ 11 ರಾಜ್ಯಗಳ 26 ಗ್ರಾಮೀಣ ಬ್ಯಾಂಕ್‌ಗಳು ವಿಲೀನ

ಕರ್ನಾಟಕ ಸೇರಿ 11 ರಾಜ್ಯಗಳ 26 ಗ್ರಾಮೀಣ ಬ್ಯಾಂಕ್‌ಗಳು ವಿಲೀನ

- Advertisement -
- Advertisement -

ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 26 ಗ್ರಾಮೀಣ ಬ್ಯಾಂಕ್‌ಗಳನ್ನು ವಿಲೀನಗೊಳಿಸಲಾಗಿದೆ. ಮೇ 1ರಿಂದ ಇದು ಅಧಿಕೃತವಾಗಿ ಜಾರಿಯಾಗಿದೆ.

“11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 26 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ವಿಲೀನವು ಇಂದಿನಿಂದ ಜಾರಿಗೆ ಬರಲಿದೆ. ಇದು ಆರ್‌ಆರ್‌ಬಿಗಳನ್ನು ಬಲಿಷ್ಠಗೊಳಿಸುವುದು, ಉತ್ತಮ ಆಡಳಿತ, ಸುಧಾರಿತ ಸಾಲದ ಹರಿವು ಮತ್ತು ಆರ್ಥಿಕ ಸೇರ್ಪಡೆಯತ್ತ ಮಹತ್ವದ ಹೆಜ್ಜೆಯಿಡುವುದನ್ನು ಸೂಚಿಸುತ್ತದೆ” ಎಂದು ಹಣಕಾಸು ಸೇವೆಗಳ ಇಲಾಖೆ (ಡಿಎಫ್‌ಎಸ್‌) ಎಕ್ಸ್‌ನಲ್ಲಿ ಗುರುವಾರ (ಮೇ 1) ಪೋಸ್ಟ್‌ ಮಾಡಿದೆ.

ಏಪ್ರಿಲ್ 8ರಂದು, ಡಿಎಫ್‌ಎಸ್‌ ‘ಒಂದು ರಾಜ್ಯ ಒಂದು ಗ್ರಾಮೀಣ ಬ್ಯಾಂಕ್’ ತತ್ವದಡಿ 26 ಆರ್‌ಆರ್‌ಬಿಗಳ ವಿಲೀನಕ್ಕೆ ಅಧಿಸೂಚನೆ ಹೊರಡಿಸಿತ್ತು. ಇದು ಆರ್‌ಆರ್‌ಬಿಗಳ ವಿಲೀನದ ನಾಲ್ಕನೇ ಹಂತವಾಗಿದೆ.

ಈ ಹಿಂದೆ ನಡೆದ ವಿಲೀನಗಳಿಂದಾಗಿ ಆರ್‌ಆರ್‌ಬಿಗಳ ದಕ್ಷತೆಯಲ್ಲಿ ಸುಧಾರಣೆಯಾಗಿದೆ ಎಂದ ಹಣಕಾಸು ಸಚಿವಾಲಯ, ನವೆಂಬರ್ 2024ರಲ್ಲಿ ಪಾಲುದಾರರೊಂದಿಗೆ ಸಮಾಲೋಚನೆಗಾಗಿ ವಿಲೀನ ಯೋಜನೆಯನ್ನು ರೂಪಿಸಿತ್ತು.

ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿದ ನಂತರ, 10 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ 26 ಆರ್‌ಆರ್‌ಬಿಗಳ ವಿಲೀನವನ್ನು ಪ್ರಾಥಮಿಕವಾಗಿ ಪ್ರಮಾಣದ ದಕ್ಷತೆ ಮತ್ತು ವೆಚ್ಚ ತರ್ಕಬದ್ಧಗೊಳಿಸುವಿಕೆಯ ಸುಧಾರಣೆಯ ಮೇಲೆ ಕೇಂದ್ರೀಕರಿಸಲಾಗಿತ್ತು.

ಇತ್ತೀಚಿನ ವಿಲೀನದ ನಂತರ, 26 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 28 ಆರ್‌ಆರ್‌ಬಿಗಳು ಉಳಿದುಕೊಂಡಿವೆ. ಇವುಗಳು 700 ಜಿಲ್ಲೆಗಳಲ್ಲಿ 22,000ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿವೆ.

ಆರ್‌ಆರ್‌ಬಿಗಳ ಪ್ರಮುಖ ಕಾರ್ಯಕ್ಷೇತ್ರ ಗ್ರಾಮೀಣ ಪ್ರದೇಶಗಳಲ್ಲಿದ್ದು, ಶೇಕಡ 92ರಷ್ಟು ಶಾಖೆಗಳು ಗ್ರಾಮೀಣ ಅಥವಾ ಅರೆ ನಗರ ಪ್ರದೇಶಗಳಲ್ಲಿವೆ.

ಈ ಹಿಂದಿನ ಮೂರು ಹಂತಗಳಲ್ಲಿ, ಅಂದರೆ ಹಂತ-I (ಹಣಕಾಸು ವರ್ಷ 2006 ರಿಂದ 2010) ಆರ್‌ಆರ್‌ಬಿಗಳ ಸಂಖ್ಯೆಯನ್ನು 196 ರಿಂದ 82ಕ್ಕೆ ಇಳಿಸಲಾಗಿತ್ತು. ಹಂತ-2 (ಹಣಕಾಸು ವರ್ಷ 2013ರಿಂದ 2015) ಆರ್‌ಆರ್‌ಬಿಗಳ ಸಂಖ್ಯೆಯನ್ನು 82ರಿಂದ 56ಕ್ಕೆ ಇಳಿಸಲಾಗಿತ್ತು. ಹಂತ-3 (ಹಣಕಾಸು ವರ್ಷ 2019 ರಿಂದ 2021) ಆರ್‌ಆರ್‌ಬಿಗಳ ಸಂಖ್ಯೆಯನ್ನು 56ರಿಂದ 43ಕ್ಕೆ ಇಳಿಸಲಾಗಿತ್ತು.

ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ, ವ್ಯಾಪಾರ, ವಾಣಿಜ್ಯ, ಕೈಗಾರಿಕೆ ಮತ್ತು ಇತರ ಉತ್ಪಾದಕ ಚಟುವಟಿಕೆಗಳ ಅಭಿವೃದ್ಧಿಗೆ, ವಿಶೇಷವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರು, ಕೃಷಿ ಕಾರ್ಮಿಕರು, ಕುಶಲಕರ್ಮಿಗಳು ಮತ್ತು ಸಣ್ಣ ಉದ್ಯಮಿಗಳಿಗೆ ಸಾಲ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮೀಣ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಲು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳನ್ನು (ಆರ್‌ಆರ್‌ಬಿ) 1975ರಲ್ಲಿ ಸ್ಥಾಪಿಸಲಾಯಿತು.

ಕರ್ನಾಟಕದ ಎರಡು ಬ್ಯಾಂಕ್‌ಗಳು ವಿಲೀನ

ಕರ್ನಾಟಕದಲ್ಲಿ ಎರಡು ರೀತಿಯ ಗ್ರಾಮೀಣ ಬ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತಿತ್ತು. 1. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (ಕೆವಿಜಿಬಿ) ಮತ್ತು 2. ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ). ಇದೀಗ ಈ ಎರಡೂ ಬ್ಯಾಂಕ್‌ಗಳನ್ನು ವಿಲೀನಗೊಳಿಸಿ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಗಿ ಮಾಡಲಾಗಿದೆ. ಈ ಬ್ಯಾಂಕ್‌ನ ಕೇಂದ್ರ ಕಚೇರಿ ಬಳ್ಳಾರಿಯಲ್ಲಿ ಇರಲಿದೆ.

ಗಮನಾರ್ಹವಾಗಿ, 1970ರ ದಶಕದಲ್ಲಿ ರಾಜ್ಯದಲ್ಲಿ 13 ರೀತಿಯ ಗ್ರಾಮೀಣ ಬ್ಯಾಂಕ್‌ಗಳು ಇದ್ದವು. ಅವುಗಳನ್ನು ಹಂತ, ಹಂತವಾಗಿ ವಿಲೀನಗೊಳಿಸುತ್ತಾ ಬಂದು, ಅಂತಿಮವಾಗಿ ಎರಡು ಗ್ರಾಮೀಣ ಬ್ಯಾಂಕ್‌ಗಳು ಉಳಿದಿದ್ದವು. ಇದೀಗ, ಅವುಗಳನ್ನೂ ವಿಲೀನಗೊಳಿಸಲಾಗಿದೆ.

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ರಾಜ್ಯದ 9 ಜಿಲ್ಲೆಗಳಲ್ಲಿ 629 ಶಾಖೆಗಳನ್ನು ಹೊಂದಿತ್ತು. ಕರ್ನಾಟಕ ಗ್ರಾಮೀಣ ಬ್ಯಾಂಕ್ ರಾಜ್ಯದ 22 ಜಿಲ್ಲೆಗಳಲ್ಲಿ 1,122 ಶಾಖೆಗಳನ್ನು ಹೊಂದಿತ್ತು. ಇದೀಗ ಎರಡೂ ಬ್ಯಾಂಕ್‌ಗಳ ವಿಲೀನದೊಂದಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ದೇಶದ ಎರಡನೇ ಅತಿದೊಡ್ಡ ಗ್ರಾಮೀಣ ಬ್ಯಾಂಕ್ ಎನಿಸಿಕೊಂಡಿದೆ.

ಹಿಂತೆಗೆದುಕೊಂಡ ಬಳಿಕವೂ ಚಲಾವಣೆಯಲ್ಲಿ ರೂ. 6266 ಕೋಟಿ ಮೌಲ್ಯದ ರೂ.2000 ನೋಟುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...