Homeಮುಖಪುಟಕರ್ನಾಟಕ ಸೇರಿ 11 ರಾಜ್ಯಗಳ 26 ಗ್ರಾಮೀಣ ಬ್ಯಾಂಕ್‌ಗಳು ವಿಲೀನ

ಕರ್ನಾಟಕ ಸೇರಿ 11 ರಾಜ್ಯಗಳ 26 ಗ್ರಾಮೀಣ ಬ್ಯಾಂಕ್‌ಗಳು ವಿಲೀನ

- Advertisement -
- Advertisement -

ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 26 ಗ್ರಾಮೀಣ ಬ್ಯಾಂಕ್‌ಗಳನ್ನು ವಿಲೀನಗೊಳಿಸಲಾಗಿದೆ. ಮೇ 1ರಿಂದ ಇದು ಅಧಿಕೃತವಾಗಿ ಜಾರಿಯಾಗಿದೆ.

“11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 26 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ವಿಲೀನವು ಇಂದಿನಿಂದ ಜಾರಿಗೆ ಬರಲಿದೆ. ಇದು ಆರ್‌ಆರ್‌ಬಿಗಳನ್ನು ಬಲಿಷ್ಠಗೊಳಿಸುವುದು, ಉತ್ತಮ ಆಡಳಿತ, ಸುಧಾರಿತ ಸಾಲದ ಹರಿವು ಮತ್ತು ಆರ್ಥಿಕ ಸೇರ್ಪಡೆಯತ್ತ ಮಹತ್ವದ ಹೆಜ್ಜೆಯಿಡುವುದನ್ನು ಸೂಚಿಸುತ್ತದೆ” ಎಂದು ಹಣಕಾಸು ಸೇವೆಗಳ ಇಲಾಖೆ (ಡಿಎಫ್‌ಎಸ್‌) ಎಕ್ಸ್‌ನಲ್ಲಿ ಗುರುವಾರ (ಮೇ 1) ಪೋಸ್ಟ್‌ ಮಾಡಿದೆ.

ಏಪ್ರಿಲ್ 8ರಂದು, ಡಿಎಫ್‌ಎಸ್‌ ‘ಒಂದು ರಾಜ್ಯ ಒಂದು ಗ್ರಾಮೀಣ ಬ್ಯಾಂಕ್’ ತತ್ವದಡಿ 26 ಆರ್‌ಆರ್‌ಬಿಗಳ ವಿಲೀನಕ್ಕೆ ಅಧಿಸೂಚನೆ ಹೊರಡಿಸಿತ್ತು. ಇದು ಆರ್‌ಆರ್‌ಬಿಗಳ ವಿಲೀನದ ನಾಲ್ಕನೇ ಹಂತವಾಗಿದೆ.

ಈ ಹಿಂದೆ ನಡೆದ ವಿಲೀನಗಳಿಂದಾಗಿ ಆರ್‌ಆರ್‌ಬಿಗಳ ದಕ್ಷತೆಯಲ್ಲಿ ಸುಧಾರಣೆಯಾಗಿದೆ ಎಂದ ಹಣಕಾಸು ಸಚಿವಾಲಯ, ನವೆಂಬರ್ 2024ರಲ್ಲಿ ಪಾಲುದಾರರೊಂದಿಗೆ ಸಮಾಲೋಚನೆಗಾಗಿ ವಿಲೀನ ಯೋಜನೆಯನ್ನು ರೂಪಿಸಿತ್ತು.

ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿದ ನಂತರ, 10 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ 26 ಆರ್‌ಆರ್‌ಬಿಗಳ ವಿಲೀನವನ್ನು ಪ್ರಾಥಮಿಕವಾಗಿ ಪ್ರಮಾಣದ ದಕ್ಷತೆ ಮತ್ತು ವೆಚ್ಚ ತರ್ಕಬದ್ಧಗೊಳಿಸುವಿಕೆಯ ಸುಧಾರಣೆಯ ಮೇಲೆ ಕೇಂದ್ರೀಕರಿಸಲಾಗಿತ್ತು.

ಇತ್ತೀಚಿನ ವಿಲೀನದ ನಂತರ, 26 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 28 ಆರ್‌ಆರ್‌ಬಿಗಳು ಉಳಿದುಕೊಂಡಿವೆ. ಇವುಗಳು 700 ಜಿಲ್ಲೆಗಳಲ್ಲಿ 22,000ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿವೆ.

ಆರ್‌ಆರ್‌ಬಿಗಳ ಪ್ರಮುಖ ಕಾರ್ಯಕ್ಷೇತ್ರ ಗ್ರಾಮೀಣ ಪ್ರದೇಶಗಳಲ್ಲಿದ್ದು, ಶೇಕಡ 92ರಷ್ಟು ಶಾಖೆಗಳು ಗ್ರಾಮೀಣ ಅಥವಾ ಅರೆ ನಗರ ಪ್ರದೇಶಗಳಲ್ಲಿವೆ.

ಈ ಹಿಂದಿನ ಮೂರು ಹಂತಗಳಲ್ಲಿ, ಅಂದರೆ ಹಂತ-I (ಹಣಕಾಸು ವರ್ಷ 2006 ರಿಂದ 2010) ಆರ್‌ಆರ್‌ಬಿಗಳ ಸಂಖ್ಯೆಯನ್ನು 196 ರಿಂದ 82ಕ್ಕೆ ಇಳಿಸಲಾಗಿತ್ತು. ಹಂತ-2 (ಹಣಕಾಸು ವರ್ಷ 2013ರಿಂದ 2015) ಆರ್‌ಆರ್‌ಬಿಗಳ ಸಂಖ್ಯೆಯನ್ನು 82ರಿಂದ 56ಕ್ಕೆ ಇಳಿಸಲಾಗಿತ್ತು. ಹಂತ-3 (ಹಣಕಾಸು ವರ್ಷ 2019 ರಿಂದ 2021) ಆರ್‌ಆರ್‌ಬಿಗಳ ಸಂಖ್ಯೆಯನ್ನು 56ರಿಂದ 43ಕ್ಕೆ ಇಳಿಸಲಾಗಿತ್ತು.

ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ, ವ್ಯಾಪಾರ, ವಾಣಿಜ್ಯ, ಕೈಗಾರಿಕೆ ಮತ್ತು ಇತರ ಉತ್ಪಾದಕ ಚಟುವಟಿಕೆಗಳ ಅಭಿವೃದ್ಧಿಗೆ, ವಿಶೇಷವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರು, ಕೃಷಿ ಕಾರ್ಮಿಕರು, ಕುಶಲಕರ್ಮಿಗಳು ಮತ್ತು ಸಣ್ಣ ಉದ್ಯಮಿಗಳಿಗೆ ಸಾಲ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮೀಣ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಲು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳನ್ನು (ಆರ್‌ಆರ್‌ಬಿ) 1975ರಲ್ಲಿ ಸ್ಥಾಪಿಸಲಾಯಿತು.

ಕರ್ನಾಟಕದ ಎರಡು ಬ್ಯಾಂಕ್‌ಗಳು ವಿಲೀನ

ಕರ್ನಾಟಕದಲ್ಲಿ ಎರಡು ರೀತಿಯ ಗ್ರಾಮೀಣ ಬ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತಿತ್ತು. 1. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (ಕೆವಿಜಿಬಿ) ಮತ್ತು 2. ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ). ಇದೀಗ ಈ ಎರಡೂ ಬ್ಯಾಂಕ್‌ಗಳನ್ನು ವಿಲೀನಗೊಳಿಸಿ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಗಿ ಮಾಡಲಾಗಿದೆ. ಈ ಬ್ಯಾಂಕ್‌ನ ಕೇಂದ್ರ ಕಚೇರಿ ಬಳ್ಳಾರಿಯಲ್ಲಿ ಇರಲಿದೆ.

ಗಮನಾರ್ಹವಾಗಿ, 1970ರ ದಶಕದಲ್ಲಿ ರಾಜ್ಯದಲ್ಲಿ 13 ರೀತಿಯ ಗ್ರಾಮೀಣ ಬ್ಯಾಂಕ್‌ಗಳು ಇದ್ದವು. ಅವುಗಳನ್ನು ಹಂತ, ಹಂತವಾಗಿ ವಿಲೀನಗೊಳಿಸುತ್ತಾ ಬಂದು, ಅಂತಿಮವಾಗಿ ಎರಡು ಗ್ರಾಮೀಣ ಬ್ಯಾಂಕ್‌ಗಳು ಉಳಿದಿದ್ದವು. ಇದೀಗ, ಅವುಗಳನ್ನೂ ವಿಲೀನಗೊಳಿಸಲಾಗಿದೆ.

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ರಾಜ್ಯದ 9 ಜಿಲ್ಲೆಗಳಲ್ಲಿ 629 ಶಾಖೆಗಳನ್ನು ಹೊಂದಿತ್ತು. ಕರ್ನಾಟಕ ಗ್ರಾಮೀಣ ಬ್ಯಾಂಕ್ ರಾಜ್ಯದ 22 ಜಿಲ್ಲೆಗಳಲ್ಲಿ 1,122 ಶಾಖೆಗಳನ್ನು ಹೊಂದಿತ್ತು. ಇದೀಗ ಎರಡೂ ಬ್ಯಾಂಕ್‌ಗಳ ವಿಲೀನದೊಂದಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ದೇಶದ ಎರಡನೇ ಅತಿದೊಡ್ಡ ಗ್ರಾಮೀಣ ಬ್ಯಾಂಕ್ ಎನಿಸಿಕೊಂಡಿದೆ.

ಹಿಂತೆಗೆದುಕೊಂಡ ಬಳಿಕವೂ ಚಲಾವಣೆಯಲ್ಲಿ ರೂ. 6266 ಕೋಟಿ ಮೌಲ್ಯದ ರೂ.2000 ನೋಟುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...