Homeಮುಖಪುಟಕರ್ನಾಟಕ ಸೇರಿ 11 ರಾಜ್ಯಗಳ 26 ಗ್ರಾಮೀಣ ಬ್ಯಾಂಕ್‌ಗಳು ವಿಲೀನ

ಕರ್ನಾಟಕ ಸೇರಿ 11 ರಾಜ್ಯಗಳ 26 ಗ್ರಾಮೀಣ ಬ್ಯಾಂಕ್‌ಗಳು ವಿಲೀನ

- Advertisement -
- Advertisement -

ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 26 ಗ್ರಾಮೀಣ ಬ್ಯಾಂಕ್‌ಗಳನ್ನು ವಿಲೀನಗೊಳಿಸಲಾಗಿದೆ. ಮೇ 1ರಿಂದ ಇದು ಅಧಿಕೃತವಾಗಿ ಜಾರಿಯಾಗಿದೆ.

“11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 26 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ವಿಲೀನವು ಇಂದಿನಿಂದ ಜಾರಿಗೆ ಬರಲಿದೆ. ಇದು ಆರ್‌ಆರ್‌ಬಿಗಳನ್ನು ಬಲಿಷ್ಠಗೊಳಿಸುವುದು, ಉತ್ತಮ ಆಡಳಿತ, ಸುಧಾರಿತ ಸಾಲದ ಹರಿವು ಮತ್ತು ಆರ್ಥಿಕ ಸೇರ್ಪಡೆಯತ್ತ ಮಹತ್ವದ ಹೆಜ್ಜೆಯಿಡುವುದನ್ನು ಸೂಚಿಸುತ್ತದೆ” ಎಂದು ಹಣಕಾಸು ಸೇವೆಗಳ ಇಲಾಖೆ (ಡಿಎಫ್‌ಎಸ್‌) ಎಕ್ಸ್‌ನಲ್ಲಿ ಗುರುವಾರ (ಮೇ 1) ಪೋಸ್ಟ್‌ ಮಾಡಿದೆ.

ಏಪ್ರಿಲ್ 8ರಂದು, ಡಿಎಫ್‌ಎಸ್‌ ‘ಒಂದು ರಾಜ್ಯ ಒಂದು ಗ್ರಾಮೀಣ ಬ್ಯಾಂಕ್’ ತತ್ವದಡಿ 26 ಆರ್‌ಆರ್‌ಬಿಗಳ ವಿಲೀನಕ್ಕೆ ಅಧಿಸೂಚನೆ ಹೊರಡಿಸಿತ್ತು. ಇದು ಆರ್‌ಆರ್‌ಬಿಗಳ ವಿಲೀನದ ನಾಲ್ಕನೇ ಹಂತವಾಗಿದೆ.

ಈ ಹಿಂದೆ ನಡೆದ ವಿಲೀನಗಳಿಂದಾಗಿ ಆರ್‌ಆರ್‌ಬಿಗಳ ದಕ್ಷತೆಯಲ್ಲಿ ಸುಧಾರಣೆಯಾಗಿದೆ ಎಂದ ಹಣಕಾಸು ಸಚಿವಾಲಯ, ನವೆಂಬರ್ 2024ರಲ್ಲಿ ಪಾಲುದಾರರೊಂದಿಗೆ ಸಮಾಲೋಚನೆಗಾಗಿ ವಿಲೀನ ಯೋಜನೆಯನ್ನು ರೂಪಿಸಿತ್ತು.

ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿದ ನಂತರ, 10 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ 26 ಆರ್‌ಆರ್‌ಬಿಗಳ ವಿಲೀನವನ್ನು ಪ್ರಾಥಮಿಕವಾಗಿ ಪ್ರಮಾಣದ ದಕ್ಷತೆ ಮತ್ತು ವೆಚ್ಚ ತರ್ಕಬದ್ಧಗೊಳಿಸುವಿಕೆಯ ಸುಧಾರಣೆಯ ಮೇಲೆ ಕೇಂದ್ರೀಕರಿಸಲಾಗಿತ್ತು.

ಇತ್ತೀಚಿನ ವಿಲೀನದ ನಂತರ, 26 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 28 ಆರ್‌ಆರ್‌ಬಿಗಳು ಉಳಿದುಕೊಂಡಿವೆ. ಇವುಗಳು 700 ಜಿಲ್ಲೆಗಳಲ್ಲಿ 22,000ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿವೆ.

ಆರ್‌ಆರ್‌ಬಿಗಳ ಪ್ರಮುಖ ಕಾರ್ಯಕ್ಷೇತ್ರ ಗ್ರಾಮೀಣ ಪ್ರದೇಶಗಳಲ್ಲಿದ್ದು, ಶೇಕಡ 92ರಷ್ಟು ಶಾಖೆಗಳು ಗ್ರಾಮೀಣ ಅಥವಾ ಅರೆ ನಗರ ಪ್ರದೇಶಗಳಲ್ಲಿವೆ.

ಈ ಹಿಂದಿನ ಮೂರು ಹಂತಗಳಲ್ಲಿ, ಅಂದರೆ ಹಂತ-I (ಹಣಕಾಸು ವರ್ಷ 2006 ರಿಂದ 2010) ಆರ್‌ಆರ್‌ಬಿಗಳ ಸಂಖ್ಯೆಯನ್ನು 196 ರಿಂದ 82ಕ್ಕೆ ಇಳಿಸಲಾಗಿತ್ತು. ಹಂತ-2 (ಹಣಕಾಸು ವರ್ಷ 2013ರಿಂದ 2015) ಆರ್‌ಆರ್‌ಬಿಗಳ ಸಂಖ್ಯೆಯನ್ನು 82ರಿಂದ 56ಕ್ಕೆ ಇಳಿಸಲಾಗಿತ್ತು. ಹಂತ-3 (ಹಣಕಾಸು ವರ್ಷ 2019 ರಿಂದ 2021) ಆರ್‌ಆರ್‌ಬಿಗಳ ಸಂಖ್ಯೆಯನ್ನು 56ರಿಂದ 43ಕ್ಕೆ ಇಳಿಸಲಾಗಿತ್ತು.

ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ, ವ್ಯಾಪಾರ, ವಾಣಿಜ್ಯ, ಕೈಗಾರಿಕೆ ಮತ್ತು ಇತರ ಉತ್ಪಾದಕ ಚಟುವಟಿಕೆಗಳ ಅಭಿವೃದ್ಧಿಗೆ, ವಿಶೇಷವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರು, ಕೃಷಿ ಕಾರ್ಮಿಕರು, ಕುಶಲಕರ್ಮಿಗಳು ಮತ್ತು ಸಣ್ಣ ಉದ್ಯಮಿಗಳಿಗೆ ಸಾಲ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮೀಣ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಲು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳನ್ನು (ಆರ್‌ಆರ್‌ಬಿ) 1975ರಲ್ಲಿ ಸ್ಥಾಪಿಸಲಾಯಿತು.

ಕರ್ನಾಟಕದ ಎರಡು ಬ್ಯಾಂಕ್‌ಗಳು ವಿಲೀನ

ಕರ್ನಾಟಕದಲ್ಲಿ ಎರಡು ರೀತಿಯ ಗ್ರಾಮೀಣ ಬ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತಿತ್ತು. 1. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (ಕೆವಿಜಿಬಿ) ಮತ್ತು 2. ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ). ಇದೀಗ ಈ ಎರಡೂ ಬ್ಯಾಂಕ್‌ಗಳನ್ನು ವಿಲೀನಗೊಳಿಸಿ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಗಿ ಮಾಡಲಾಗಿದೆ. ಈ ಬ್ಯಾಂಕ್‌ನ ಕೇಂದ್ರ ಕಚೇರಿ ಬಳ್ಳಾರಿಯಲ್ಲಿ ಇರಲಿದೆ.

ಗಮನಾರ್ಹವಾಗಿ, 1970ರ ದಶಕದಲ್ಲಿ ರಾಜ್ಯದಲ್ಲಿ 13 ರೀತಿಯ ಗ್ರಾಮೀಣ ಬ್ಯಾಂಕ್‌ಗಳು ಇದ್ದವು. ಅವುಗಳನ್ನು ಹಂತ, ಹಂತವಾಗಿ ವಿಲೀನಗೊಳಿಸುತ್ತಾ ಬಂದು, ಅಂತಿಮವಾಗಿ ಎರಡು ಗ್ರಾಮೀಣ ಬ್ಯಾಂಕ್‌ಗಳು ಉಳಿದಿದ್ದವು. ಇದೀಗ, ಅವುಗಳನ್ನೂ ವಿಲೀನಗೊಳಿಸಲಾಗಿದೆ.

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ರಾಜ್ಯದ 9 ಜಿಲ್ಲೆಗಳಲ್ಲಿ 629 ಶಾಖೆಗಳನ್ನು ಹೊಂದಿತ್ತು. ಕರ್ನಾಟಕ ಗ್ರಾಮೀಣ ಬ್ಯಾಂಕ್ ರಾಜ್ಯದ 22 ಜಿಲ್ಲೆಗಳಲ್ಲಿ 1,122 ಶಾಖೆಗಳನ್ನು ಹೊಂದಿತ್ತು. ಇದೀಗ ಎರಡೂ ಬ್ಯಾಂಕ್‌ಗಳ ವಿಲೀನದೊಂದಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ದೇಶದ ಎರಡನೇ ಅತಿದೊಡ್ಡ ಗ್ರಾಮೀಣ ಬ್ಯಾಂಕ್ ಎನಿಸಿಕೊಂಡಿದೆ.

ಹಿಂತೆಗೆದುಕೊಂಡ ಬಳಿಕವೂ ಚಲಾವಣೆಯಲ್ಲಿ ರೂ. 6266 ಕೋಟಿ ಮೌಲ್ಯದ ರೂ.2000 ನೋಟುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...