Homeಮುಖಪುಟಕರ್ನಾಟಕ ಸೇರಿ 11 ರಾಜ್ಯಗಳ 26 ಗ್ರಾಮೀಣ ಬ್ಯಾಂಕ್‌ಗಳು ವಿಲೀನ

ಕರ್ನಾಟಕ ಸೇರಿ 11 ರಾಜ್ಯಗಳ 26 ಗ್ರಾಮೀಣ ಬ್ಯಾಂಕ್‌ಗಳು ವಿಲೀನ

- Advertisement -
- Advertisement -

ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 26 ಗ್ರಾಮೀಣ ಬ್ಯಾಂಕ್‌ಗಳನ್ನು ವಿಲೀನಗೊಳಿಸಲಾಗಿದೆ. ಮೇ 1ರಿಂದ ಇದು ಅಧಿಕೃತವಾಗಿ ಜಾರಿಯಾಗಿದೆ.

“11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 26 ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ವಿಲೀನವು ಇಂದಿನಿಂದ ಜಾರಿಗೆ ಬರಲಿದೆ. ಇದು ಆರ್‌ಆರ್‌ಬಿಗಳನ್ನು ಬಲಿಷ್ಠಗೊಳಿಸುವುದು, ಉತ್ತಮ ಆಡಳಿತ, ಸುಧಾರಿತ ಸಾಲದ ಹರಿವು ಮತ್ತು ಆರ್ಥಿಕ ಸೇರ್ಪಡೆಯತ್ತ ಮಹತ್ವದ ಹೆಜ್ಜೆಯಿಡುವುದನ್ನು ಸೂಚಿಸುತ್ತದೆ” ಎಂದು ಹಣಕಾಸು ಸೇವೆಗಳ ಇಲಾಖೆ (ಡಿಎಫ್‌ಎಸ್‌) ಎಕ್ಸ್‌ನಲ್ಲಿ ಗುರುವಾರ (ಮೇ 1) ಪೋಸ್ಟ್‌ ಮಾಡಿದೆ.

ಏಪ್ರಿಲ್ 8ರಂದು, ಡಿಎಫ್‌ಎಸ್‌ ‘ಒಂದು ರಾಜ್ಯ ಒಂದು ಗ್ರಾಮೀಣ ಬ್ಯಾಂಕ್’ ತತ್ವದಡಿ 26 ಆರ್‌ಆರ್‌ಬಿಗಳ ವಿಲೀನಕ್ಕೆ ಅಧಿಸೂಚನೆ ಹೊರಡಿಸಿತ್ತು. ಇದು ಆರ್‌ಆರ್‌ಬಿಗಳ ವಿಲೀನದ ನಾಲ್ಕನೇ ಹಂತವಾಗಿದೆ.

ಈ ಹಿಂದೆ ನಡೆದ ವಿಲೀನಗಳಿಂದಾಗಿ ಆರ್‌ಆರ್‌ಬಿಗಳ ದಕ್ಷತೆಯಲ್ಲಿ ಸುಧಾರಣೆಯಾಗಿದೆ ಎಂದ ಹಣಕಾಸು ಸಚಿವಾಲಯ, ನವೆಂಬರ್ 2024ರಲ್ಲಿ ಪಾಲುದಾರರೊಂದಿಗೆ ಸಮಾಲೋಚನೆಗಾಗಿ ವಿಲೀನ ಯೋಜನೆಯನ್ನು ರೂಪಿಸಿತ್ತು.

ಪಾಲುದಾರರೊಂದಿಗೆ ಸಮಾಲೋಚನೆ ನಡೆಸಿದ ನಂತರ, 10 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ 26 ಆರ್‌ಆರ್‌ಬಿಗಳ ವಿಲೀನವನ್ನು ಪ್ರಾಥಮಿಕವಾಗಿ ಪ್ರಮಾಣದ ದಕ್ಷತೆ ಮತ್ತು ವೆಚ್ಚ ತರ್ಕಬದ್ಧಗೊಳಿಸುವಿಕೆಯ ಸುಧಾರಣೆಯ ಮೇಲೆ ಕೇಂದ್ರೀಕರಿಸಲಾಗಿತ್ತು.

ಇತ್ತೀಚಿನ ವಿಲೀನದ ನಂತರ, 26 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 28 ಆರ್‌ಆರ್‌ಬಿಗಳು ಉಳಿದುಕೊಂಡಿವೆ. ಇವುಗಳು 700 ಜಿಲ್ಲೆಗಳಲ್ಲಿ 22,000ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿವೆ.

ಆರ್‌ಆರ್‌ಬಿಗಳ ಪ್ರಮುಖ ಕಾರ್ಯಕ್ಷೇತ್ರ ಗ್ರಾಮೀಣ ಪ್ರದೇಶಗಳಲ್ಲಿದ್ದು, ಶೇಕಡ 92ರಷ್ಟು ಶಾಖೆಗಳು ಗ್ರಾಮೀಣ ಅಥವಾ ಅರೆ ನಗರ ಪ್ರದೇಶಗಳಲ್ಲಿವೆ.

ಈ ಹಿಂದಿನ ಮೂರು ಹಂತಗಳಲ್ಲಿ, ಅಂದರೆ ಹಂತ-I (ಹಣಕಾಸು ವರ್ಷ 2006 ರಿಂದ 2010) ಆರ್‌ಆರ್‌ಬಿಗಳ ಸಂಖ್ಯೆಯನ್ನು 196 ರಿಂದ 82ಕ್ಕೆ ಇಳಿಸಲಾಗಿತ್ತು. ಹಂತ-2 (ಹಣಕಾಸು ವರ್ಷ 2013ರಿಂದ 2015) ಆರ್‌ಆರ್‌ಬಿಗಳ ಸಂಖ್ಯೆಯನ್ನು 82ರಿಂದ 56ಕ್ಕೆ ಇಳಿಸಲಾಗಿತ್ತು. ಹಂತ-3 (ಹಣಕಾಸು ವರ್ಷ 2019 ರಿಂದ 2021) ಆರ್‌ಆರ್‌ಬಿಗಳ ಸಂಖ್ಯೆಯನ್ನು 56ರಿಂದ 43ಕ್ಕೆ ಇಳಿಸಲಾಗಿತ್ತು.

ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ, ವ್ಯಾಪಾರ, ವಾಣಿಜ್ಯ, ಕೈಗಾರಿಕೆ ಮತ್ತು ಇತರ ಉತ್ಪಾದಕ ಚಟುವಟಿಕೆಗಳ ಅಭಿವೃದ್ಧಿಗೆ, ವಿಶೇಷವಾಗಿ ಸಣ್ಣ ಮತ್ತು ಅತಿ ಸಣ್ಣ ರೈತರು, ಕೃಷಿ ಕಾರ್ಮಿಕರು, ಕುಶಲಕರ್ಮಿಗಳು ಮತ್ತು ಸಣ್ಣ ಉದ್ಯಮಿಗಳಿಗೆ ಸಾಲ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮೀಣ ಆರ್ಥಿಕತೆಯನ್ನು ಅಭಿವೃದ್ಧಿಪಡಿಸಲು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳನ್ನು (ಆರ್‌ಆರ್‌ಬಿ) 1975ರಲ್ಲಿ ಸ್ಥಾಪಿಸಲಾಯಿತು.

ಕರ್ನಾಟಕದ ಎರಡು ಬ್ಯಾಂಕ್‌ಗಳು ವಿಲೀನ

ಕರ್ನಾಟಕದಲ್ಲಿ ಎರಡು ರೀತಿಯ ಗ್ರಾಮೀಣ ಬ್ಯಾಂಕ್‌ಗಳು ಕಾರ್ಯನಿರ್ವಹಿಸುತ್ತಿತ್ತು. 1. ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (ಕೆವಿಜಿಬಿ) ಮತ್ತು 2. ಕರ್ನಾಟಕ ಗ್ರಾಮೀಣ ಬ್ಯಾಂಕ್ (ಕೆಜಿಬಿ). ಇದೀಗ ಈ ಎರಡೂ ಬ್ಯಾಂಕ್‌ಗಳನ್ನು ವಿಲೀನಗೊಳಿಸಿ, ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಗಿ ಮಾಡಲಾಗಿದೆ. ಈ ಬ್ಯಾಂಕ್‌ನ ಕೇಂದ್ರ ಕಚೇರಿ ಬಳ್ಳಾರಿಯಲ್ಲಿ ಇರಲಿದೆ.

ಗಮನಾರ್ಹವಾಗಿ, 1970ರ ದಶಕದಲ್ಲಿ ರಾಜ್ಯದಲ್ಲಿ 13 ರೀತಿಯ ಗ್ರಾಮೀಣ ಬ್ಯಾಂಕ್‌ಗಳು ಇದ್ದವು. ಅವುಗಳನ್ನು ಹಂತ, ಹಂತವಾಗಿ ವಿಲೀನಗೊಳಿಸುತ್ತಾ ಬಂದು, ಅಂತಿಮವಾಗಿ ಎರಡು ಗ್ರಾಮೀಣ ಬ್ಯಾಂಕ್‌ಗಳು ಉಳಿದಿದ್ದವು. ಇದೀಗ, ಅವುಗಳನ್ನೂ ವಿಲೀನಗೊಳಿಸಲಾಗಿದೆ.

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ರಾಜ್ಯದ 9 ಜಿಲ್ಲೆಗಳಲ್ಲಿ 629 ಶಾಖೆಗಳನ್ನು ಹೊಂದಿತ್ತು. ಕರ್ನಾಟಕ ಗ್ರಾಮೀಣ ಬ್ಯಾಂಕ್ ರಾಜ್ಯದ 22 ಜಿಲ್ಲೆಗಳಲ್ಲಿ 1,122 ಶಾಖೆಗಳನ್ನು ಹೊಂದಿತ್ತು. ಇದೀಗ ಎರಡೂ ಬ್ಯಾಂಕ್‌ಗಳ ವಿಲೀನದೊಂದಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ದೇಶದ ಎರಡನೇ ಅತಿದೊಡ್ಡ ಗ್ರಾಮೀಣ ಬ್ಯಾಂಕ್ ಎನಿಸಿಕೊಂಡಿದೆ.

ಹಿಂತೆಗೆದುಕೊಂಡ ಬಳಿಕವೂ ಚಲಾವಣೆಯಲ್ಲಿ ರೂ. 6266 ಕೋಟಿ ಮೌಲ್ಯದ ರೂ.2000 ನೋಟುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...