Homeಕರೋನಾ ತಲ್ಲಣಆಂಧ್ರ ಪ್ರದೇಶ: 262 ವಿದ್ಯಾರ್ಥಿಗಳಿಗೆ ಕೊರೊನಾ, ಆತಂಕ ಬೇಡ ಎಂದ ಇಲಾಖೆ!

ಆಂಧ್ರ ಪ್ರದೇಶ: 262 ವಿದ್ಯಾರ್ಥಿಗಳಿಗೆ ಕೊರೊನಾ, ಆತಂಕ ಬೇಡ ಎಂದ ಇಲಾಖೆ!

ಶಾಲೆಗಳು ತೆರೆಯದಿದ್ದರೆ ಬುಡಕಟ್ಟು ಮತ್ತು ಗ್ರಾಮೀಣ ಪ್ರದೇಶದ ಬಾಲಕಿಯರು ಬಾಲ್ಯ ವಿವಾಹಕ್ಕೆ ಬಲಿಯಾಗುವ ಆತಂಕವನ್ನು ಇಲಾಖೆ ಅಧಿಕಾರಿ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್‌ಡೌನ್ ನಂತರ ಶಾಲೆಗಳನ್ನು ತೆರೆಯಲು ರಾಜ್ಯಗಳು ಸಭೆಗಳ ಮೇಲೆ ಸಭೆ ನಡೆಸುತ್ತಿವೆ. ಗೊಂದಲದ ಹೇಳಿಕೆಗಳು ಬರುತ್ತಿವೆ. ಇವುಗಳ ನಡುವೆ ನವೆಂಬರ್ 2 ರಂದು ಶಾಲೆಗಳನ್ನು ಪುನರಾರಂಭಿಸಿದ ಆಂಧ್ರಪ್ರದೇಶದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳನ್ನು ಪುನರಾರಂಭಿಸಿದ ಮೂರು ದಿನಗಳಲ್ಲೇ ಆಂಧ್ರ ಪ್ರದೇಶದಲ್ಲಿ 262 ವಿದ್ಯಾರ್ಥಿಗಳು ಮತ್ತು ಸುಮಾರು 160 ಕ್ಕೂ ಹೆಚ್ಚು ಶಿಕ್ಷಕರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಶಾಲಾ ಶಿಕ್ಷಣ ಆಯುಕ್ತ ವಿ. ಚಿನ್ನಾ ವೀರಭದ್ರುಡು ಮಾತನಾಡಿ, “ಶಾಲೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಸಿದರೆ ಈ ಅಂಕಿ ಅಂಶವು ಆತಂಕಕಾರಿಯಲ್ಲ, ಆದರೆ ಪ್ರತಿ ಸಂಸ್ಥೆಯಲ್ಲಿ ಕೊರೊನಾ ಸುರಕ್ಷತಾ ಕ್ರಮ‌ಗಳು ಜಾರಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲ ಕಾಳಜಿ ವಹಿಸಲಾಗುತ್ತಿದೆ” ಎಂದಿದ್ದಾರೆ.

“ನಿನ್ನೆ (ನವೆಂಬರ್ 4) ಸುಮಾರು ನಾಲ್ಕು ಲಕ್ಷ ವಿದ್ಯಾರ್ಥಿಗಳು ಶಾಲೆಗಳಿಗೆ ಹಾಜರಾಗಿದ್ದಾರೆ. 262 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ಮಕ್ಕಳ ಸಂಖ್ಯೆಗೆ ಹೋಲಿಸಿದರೆ ಇದು ಶೇಕಡಾ 0.1 ಕೂಡ ಅಲ್ಲ. ಶಾಲೆಗಳಿಗೆ ಹಾಜರಾಗಿದ್ದರಿಂದ ಅವುಗಳು ಪರಿಣಾಮ ಬೀರಿವೆ ಎಂದು ಹೇಳುವುದು ಸರಿಯಲ್ಲ. ಪ್ರತಿ ಶಾಲಾ ಕೊಠಡಿಯಲ್ಲಿ ಕೇವಲ 15 ಅಥವಾ 16 ವಿದ್ಯಾರ್ಥಿಗಳು ಮಾತ್ರ ಇರುತ್ತಾರೆ”ಎಂದು ಚಿನ್ನಾ ವೀರಭದ್ರುಡು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಆಂಧ್ರ ಮುಖ್ಯಮಂತ್ರಿಯನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಸುಪ್ರೀಂನಲ್ಲಿ ಅರ್ಜಿ

“ರಾಜ್ಯದಲ್ಲಿ 9 ಮತ್ತು 10 ನೇ ತರಗತಿಗೆ 9.75 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ, ಅದರಲ್ಲಿ 3.93 ಲಕ್ಷ ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಿದ್ದಾರೆ. 1.11 ಲಕ್ಷ ಶಿಕ್ಷಕರಲ್ಲಿ, 99,000 ಸಾವಿರಕ್ಕೂ ಹೆಚ್ಚು ಮಂದಿ ಶಿಕ್ಷಣ ಸಂಸ್ಥೆಗಳಿಗೆ ಬುಧವಾರ ಹಾಜರಾಗಿದ್ದಾರೆ. ಅವರಲ್ಲಿ ಸುಮಾರು 160 ಶಿಕ್ಷಕರಿಗೆ ಸೋಂಕು ಬಂದಿದೆ. ವಿದ್ಯಾರ್ಥಿಗಳಲ್ಲದೆ ಶಿಕ್ಷಕರ ಜೀವವೂ ನಮಗೆ ಮುಖ್ಯವಾಗಿದೆ” ಎಂದು ವೀರಭದ್ರುಡು ತಿಳಿಸಿದ್ದಾರೆ.

‘ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ, ಕೊರೊನಾ ಸೋಂಕಿನ ಬಗ್ಗೆ ಹೆದರಿಕೆ ಇರುವುದರಿಂದ, ಶಾಲೆಯಲ್ಲಿ ಮಕ್ಕಳ ಹಾಜರಾತಿ ಶೇಕಡಾ 40ರಷ್ಟಿದೆ’ ಎಂದು ವೀರಭದ್ರುಡು ತಿಳಿಸಿದರು.

ಶಾಲೆಗಳು ತೆರೆಯದಿದ್ದರೆ ಆನ್‌ಲೈನ್ ತರಗತಿಗಳನ್ನು ಪಡೆಯಲು ಸಾಧ್ಯವಾಗದ ಬಡ ವಿದ್ಯಾರ್ಥಿಗಳ ಮೇಲೆ ಇದು ಹೆಚ್ಚು ಪರಿಣಾಮ ಬೀರುತ್ತದೆ. ಬುಡಕಟ್ಟು ಮತ್ತು ಗ್ರಾಮೀಣ ಪ್ರದೇಶದ ಬಾಲಕಿಯರಿಗೆ ದೊಡ್ಡ ತೊಂದರೆಯಾಗಿದೆ, ಏಕೆಂದರೆ ಹದಿಹರೆಯದವರು ಶಾಲೆಗಳಿಗೆ ಹೋಗುವುದನ್ನು ನಿಲ್ಲಿಸಿದರೆ ಪೋಷಕರು ಬಾಲ್ಯ ವಿವಾಹ ಮಾಡಬಹುದು ಅಧಿಕಾರಿ ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಕಸ್ಟಡಿಯಲ್ಲಿ ದಲಿತನ ಮೇಲೆ ಅಮಾನುಷ ಹಲ್ಲೆ: ಆಂಧ್ರದ ಇಬ್ಬರು ಪೊಲೀಸರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...