HomeUncategorizedಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

ಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ - ಖರ್ಗೆ

- Advertisement -
- Advertisement -

ಹಿಂಡೆನ್‌ ಬರ್ಗ್ ವರದಿಯ ನಂತರ ಹಲವಾರು ದೊಡ್ಡ ಹೂಡಿಕೆದಾರರು ಅದಾನಿ ಗ್ರೂಪ್ ಶೇರುಗಳಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಅದಾನಿಯ ಉದ್ಯಮ ಸಾಮ್ರಾಜ್ಯ ಕುಸಿದಿದೆ. ಆದರೆ ಭಾರತದ ಅತ್ಯಂತ ದೊಡ್ಡ ನಿವೃತ್ತಿ ನಿಧಿಯಾಗಿರುವ ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ (ಇಪಿಎಫ್ಒ)ಯು ಅದಾನಿ ಎಂಟರ್ಪ್ರೈಸಸ್  ಸೇರಿದಂತೆ ಅದಾನಿ ಗ್ರೂಪ್‌ನ ಎರಡು ಕಂಪನಿಗಳ ಶೇರುಗಳಲ್ಲಿ ಹೂಡಿಕೆ ಮಾಡುವುದನ್ನು ಮುಂದುವರಿಸಿದೆ. ಮುಂದಿನ ವಾರ ಸಭೆ ಸೇರಲಿರುವ ಇಪಿಎಫ್ಒ ಟ್ರಸ್ಟಿಗಳು ತಮ್ಮ ಹೂಡಿಕೆ ವಿಧಾನವನ್ನು ಮರುಪರಿಶೀಲಿಸದಿದ್ದರೆ, ಕನಿಷ್ಠ ಈ ವರ್ಷದ ಸೆಪ್ಟಂಬರ್‌ವರೆಗೂ ಸಂಸ್ಥೆಯ ಹೂಡಿಕೆ ಮುಂದುವರಿಸಲಿದೆ ಎನ್ನಲಾಗಿದೆ.

ಈ ಮೂಲಕ ಕೇಂದ್ರ ಸರ್ಕಾರ ಇಪಿಎಫ್‌ಒ ಉದ್ಯೋಗಿಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದು, ”27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ! ಜೆಪಿಸಿ ತನಿಖೆಗೆ ಹೆದರಬೇಡಿ. ಪ್ರಜಾಪ್ರಭುತ್ವವನ್ನು ಅನರ್ಹಗೊಳಿಸಬೇಡಿ! ನಿಮ್ಮ ಸರ್ಕಾರ 140 ಕೋಟಿ ಭಾರತೀಯರಿಗೆ ಉತ್ತರಿಸುವಂತೆ ಮಾಡಿ” ಎಂದು ಒತ್ತಾಯಿಸಿದ್ದಾರೆ.

ದೇಶದ ಎರಡನೇ ಅತಿದೊಡ್ಡ ಬ್ಯಾಂಕೇತರ ಸಂಸ್ಥೆಯಾಗಿರುವ ಇಪಿಎಫ್ಒ ತನ್ನ ಈಕ್ವಿಟಿ ಹೂಡಿಕೆಗಳ ಶೇ.85ರಷ್ಟು ಮೊತ್ತವನ್ನು ನಿಫ್ಟಿ 50 ಜೊತೆ ಜೊಡಣೆಗೊಂಡಿರುವ ಇಟಿಎಫ್‌ಗಳಲ್ಲಿ ತೊಡಗಿಸುತ್ತದೆ. ಅದಾನಿ ಎಂಟರ್ಪ್ರೈಸಸ್ ಕಳೆದ ಸೆಪ್ಟಂಬರ್‌ನಲ್ಲಿ ನಿಫ್ಟಿ 50 ಶೇರುಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು, ಈ ವರ್ಷದ ಸೆಪ್ಟಂಬರ್‌ವರೆಗೆ ನಿಫ್ಟಿ 50ರಲ್ಲಿ ಮುಂದುವರಿಯಲಿದೆ.

ಇಪಿಎಫ್ಒ ಔಪಚಾರಿಕ ವಲಯದ 27.73 ಕೋಟಿ ಉದ್ಯೋಗಿಗಳ ಹಣ ಸುರಕ್ಷಿತವಾಗಿದ್ದರೆ ಅವರ ವೃದ್ಧಾಪ್ಯ ನಿರ್ವಹಣೆ ಸುಲಭವಾಗುತ್ತದೆ. ಆದರೆ ಆ ನಿಧಿಯ ಶೇ.15ರಷ್ಟನ್ನು ಎನ್ಎಸ್ಇ ನಿಫ್ಟಿ 50 ಮತ್ತು ಬಿಎಸ್ಇ ಸೆನ್ಸೆಕ್ಸ್ ಜೊತೆ ಜೋಡಣೆಗೊಂಡಿರುವ ಎಕ್ಸ್ಚೇಂಜ್ ಟ್ರೇಡೆಡ್ ಫಂಡ್ (ಇಟಿಎಫ್)ಗಳಲ್ಲಿ ಹೂಡಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಅಪಾಯದಲ್ಲಿ ಇಪಿಎಫ್‌ಒ ಉದ್ಯೋಗಿಳು

ಅದಾನಿ ಗ್ರೂಪ್ ಶೇರುಗಳಲ್ಲಿ ಇಫಿಎಫ್ಒ ಹೂಡಿಕೆಗಳ ಕುರಿತು ಸುದ್ದಿಸಂಸ್ಥೆಯು ಕಳುಹಿಸಿದ್ದ ಪ್ರಶ್ನಾವಳಿಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರಾದ ನೀಲಂ ಶಮಿ ರಾವ್ ಅವರು ಉತ್ತರಿಸಿಲ್ಲ. ಜನರ ವೃದ್ಧಾಪ್ಯ ಉಳಿತಾಯದ ಸುರಕ್ಷತೆಗಾಗಿ ಅದಾನಿ ಗ್ರೂಪ್ ಶೇರುಗಳಲ್ಲಿ ಹೊಸದಾಗಿ ಹೂಡಿಕೆ ಮಾಡದಂತೆ ಸಂಸ್ಥೆಯು ತನ್ನ ಫಂಡ್ ಮ್ಯಾನೇಜರ್‌ಗಳಿಗೆ ಸೂಚಿಸಿದೆಯೇ? ನಿಫ್ಟಿ 50 ಜೊತೆ ಜೋಡಣೆಗೊಂಡಿರುವ ಹೂಡಿಕೆಗಳನ್ನು ಹಿಂದೆಗೆದುಕೊಳ್ಳುವ ಬಗ್ಗೆ ಚಿಂತನೆ ನಡೆದಿದೆಯೇ? ಎಂಬ ಪ್ರಶ್ನೆಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರು ಉತ್ತರಿಸಿಲ್ಲ.

”ಅದಾನಿ ಗ್ರೂಪ್ ಶೇರುಗಳಲ್ಲಿ ಪಿಎಫ್‌ ಹಣ ಹೂಡಿಕೆ ಮಾಡಿರುವ ಬಗ್ಗೆ ತಮಗೆ ತಿಳಿದಿಲ್ಲ” ಎಂದು ಇಪಿಎಫ್ಒ ಟ್ರಸ್ಟಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದ್ರ ಯಾದವ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯುವ ಮಂಡಳಿಯ ಸಭೆಯಲ್ಲಿ ಈ ವಿಷಯವು ಪ್ರಸ್ತಾವಗೊಳ್ಳಬಹುದು ಎಂದು  ಅವರು ಹೇಳಿದ್ದಾರೆ.

ಇದನ್ನೂ ಓದಿ; ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...