HomeUncategorizedಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

ಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ - ಖರ್ಗೆ

- Advertisement -
- Advertisement -

ಹಿಂಡೆನ್‌ ಬರ್ಗ್ ವರದಿಯ ನಂತರ ಹಲವಾರು ದೊಡ್ಡ ಹೂಡಿಕೆದಾರರು ಅದಾನಿ ಗ್ರೂಪ್ ಶೇರುಗಳಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಅದಾನಿಯ ಉದ್ಯಮ ಸಾಮ್ರಾಜ್ಯ ಕುಸಿದಿದೆ. ಆದರೆ ಭಾರತದ ಅತ್ಯಂತ ದೊಡ್ಡ ನಿವೃತ್ತಿ ನಿಧಿಯಾಗಿರುವ ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ (ಇಪಿಎಫ್ಒ)ಯು ಅದಾನಿ ಎಂಟರ್ಪ್ರೈಸಸ್  ಸೇರಿದಂತೆ ಅದಾನಿ ಗ್ರೂಪ್‌ನ ಎರಡು ಕಂಪನಿಗಳ ಶೇರುಗಳಲ್ಲಿ ಹೂಡಿಕೆ ಮಾಡುವುದನ್ನು ಮುಂದುವರಿಸಿದೆ. ಮುಂದಿನ ವಾರ ಸಭೆ ಸೇರಲಿರುವ ಇಪಿಎಫ್ಒ ಟ್ರಸ್ಟಿಗಳು ತಮ್ಮ ಹೂಡಿಕೆ ವಿಧಾನವನ್ನು ಮರುಪರಿಶೀಲಿಸದಿದ್ದರೆ, ಕನಿಷ್ಠ ಈ ವರ್ಷದ ಸೆಪ್ಟಂಬರ್‌ವರೆಗೂ ಸಂಸ್ಥೆಯ ಹೂಡಿಕೆ ಮುಂದುವರಿಸಲಿದೆ ಎನ್ನಲಾಗಿದೆ.

ಈ ಮೂಲಕ ಕೇಂದ್ರ ಸರ್ಕಾರ ಇಪಿಎಫ್‌ಒ ಉದ್ಯೋಗಿಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದು, ”27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ! ಜೆಪಿಸಿ ತನಿಖೆಗೆ ಹೆದರಬೇಡಿ. ಪ್ರಜಾಪ್ರಭುತ್ವವನ್ನು ಅನರ್ಹಗೊಳಿಸಬೇಡಿ! ನಿಮ್ಮ ಸರ್ಕಾರ 140 ಕೋಟಿ ಭಾರತೀಯರಿಗೆ ಉತ್ತರಿಸುವಂತೆ ಮಾಡಿ” ಎಂದು ಒತ್ತಾಯಿಸಿದ್ದಾರೆ.

ದೇಶದ ಎರಡನೇ ಅತಿದೊಡ್ಡ ಬ್ಯಾಂಕೇತರ ಸಂಸ್ಥೆಯಾಗಿರುವ ಇಪಿಎಫ್ಒ ತನ್ನ ಈಕ್ವಿಟಿ ಹೂಡಿಕೆಗಳ ಶೇ.85ರಷ್ಟು ಮೊತ್ತವನ್ನು ನಿಫ್ಟಿ 50 ಜೊತೆ ಜೊಡಣೆಗೊಂಡಿರುವ ಇಟಿಎಫ್‌ಗಳಲ್ಲಿ ತೊಡಗಿಸುತ್ತದೆ. ಅದಾನಿ ಎಂಟರ್ಪ್ರೈಸಸ್ ಕಳೆದ ಸೆಪ್ಟಂಬರ್‌ನಲ್ಲಿ ನಿಫ್ಟಿ 50 ಶೇರುಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು, ಈ ವರ್ಷದ ಸೆಪ್ಟಂಬರ್‌ವರೆಗೆ ನಿಫ್ಟಿ 50ರಲ್ಲಿ ಮುಂದುವರಿಯಲಿದೆ.

ಇಪಿಎಫ್ಒ ಔಪಚಾರಿಕ ವಲಯದ 27.73 ಕೋಟಿ ಉದ್ಯೋಗಿಗಳ ಹಣ ಸುರಕ್ಷಿತವಾಗಿದ್ದರೆ ಅವರ ವೃದ್ಧಾಪ್ಯ ನಿರ್ವಹಣೆ ಸುಲಭವಾಗುತ್ತದೆ. ಆದರೆ ಆ ನಿಧಿಯ ಶೇ.15ರಷ್ಟನ್ನು ಎನ್ಎಸ್ಇ ನಿಫ್ಟಿ 50 ಮತ್ತು ಬಿಎಸ್ಇ ಸೆನ್ಸೆಕ್ಸ್ ಜೊತೆ ಜೋಡಣೆಗೊಂಡಿರುವ ಎಕ್ಸ್ಚೇಂಜ್ ಟ್ರೇಡೆಡ್ ಫಂಡ್ (ಇಟಿಎಫ್)ಗಳಲ್ಲಿ ಹೂಡಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಅಪಾಯದಲ್ಲಿ ಇಪಿಎಫ್‌ಒ ಉದ್ಯೋಗಿಳು

ಅದಾನಿ ಗ್ರೂಪ್ ಶೇರುಗಳಲ್ಲಿ ಇಫಿಎಫ್ಒ ಹೂಡಿಕೆಗಳ ಕುರಿತು ಸುದ್ದಿಸಂಸ್ಥೆಯು ಕಳುಹಿಸಿದ್ದ ಪ್ರಶ್ನಾವಳಿಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರಾದ ನೀಲಂ ಶಮಿ ರಾವ್ ಅವರು ಉತ್ತರಿಸಿಲ್ಲ. ಜನರ ವೃದ್ಧಾಪ್ಯ ಉಳಿತಾಯದ ಸುರಕ್ಷತೆಗಾಗಿ ಅದಾನಿ ಗ್ರೂಪ್ ಶೇರುಗಳಲ್ಲಿ ಹೊಸದಾಗಿ ಹೂಡಿಕೆ ಮಾಡದಂತೆ ಸಂಸ್ಥೆಯು ತನ್ನ ಫಂಡ್ ಮ್ಯಾನೇಜರ್‌ಗಳಿಗೆ ಸೂಚಿಸಿದೆಯೇ? ನಿಫ್ಟಿ 50 ಜೊತೆ ಜೋಡಣೆಗೊಂಡಿರುವ ಹೂಡಿಕೆಗಳನ್ನು ಹಿಂದೆಗೆದುಕೊಳ್ಳುವ ಬಗ್ಗೆ ಚಿಂತನೆ ನಡೆದಿದೆಯೇ? ಎಂಬ ಪ್ರಶ್ನೆಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರು ಉತ್ತರಿಸಿಲ್ಲ.

”ಅದಾನಿ ಗ್ರೂಪ್ ಶೇರುಗಳಲ್ಲಿ ಪಿಎಫ್‌ ಹಣ ಹೂಡಿಕೆ ಮಾಡಿರುವ ಬಗ್ಗೆ ತಮಗೆ ತಿಳಿದಿಲ್ಲ” ಎಂದು ಇಪಿಎಫ್ಒ ಟ್ರಸ್ಟಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದ್ರ ಯಾದವ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯುವ ಮಂಡಳಿಯ ಸಭೆಯಲ್ಲಿ ಈ ವಿಷಯವು ಪ್ರಸ್ತಾವಗೊಳ್ಳಬಹುದು ಎಂದು  ಅವರು ಹೇಳಿದ್ದಾರೆ.

ಇದನ್ನೂ ಓದಿ; ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...