HomeUncategorizedಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

ಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ - ಖರ್ಗೆ

- Advertisement -
- Advertisement -

ಹಿಂಡೆನ್‌ ಬರ್ಗ್ ವರದಿಯ ನಂತರ ಹಲವಾರು ದೊಡ್ಡ ಹೂಡಿಕೆದಾರರು ಅದಾನಿ ಗ್ರೂಪ್ ಶೇರುಗಳಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಅದಾನಿಯ ಉದ್ಯಮ ಸಾಮ್ರಾಜ್ಯ ಕುಸಿದಿದೆ. ಆದರೆ ಭಾರತದ ಅತ್ಯಂತ ದೊಡ್ಡ ನಿವೃತ್ತಿ ನಿಧಿಯಾಗಿರುವ ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ (ಇಪಿಎಫ್ಒ)ಯು ಅದಾನಿ ಎಂಟರ್ಪ್ರೈಸಸ್  ಸೇರಿದಂತೆ ಅದಾನಿ ಗ್ರೂಪ್‌ನ ಎರಡು ಕಂಪನಿಗಳ ಶೇರುಗಳಲ್ಲಿ ಹೂಡಿಕೆ ಮಾಡುವುದನ್ನು ಮುಂದುವರಿಸಿದೆ. ಮುಂದಿನ ವಾರ ಸಭೆ ಸೇರಲಿರುವ ಇಪಿಎಫ್ಒ ಟ್ರಸ್ಟಿಗಳು ತಮ್ಮ ಹೂಡಿಕೆ ವಿಧಾನವನ್ನು ಮರುಪರಿಶೀಲಿಸದಿದ್ದರೆ, ಕನಿಷ್ಠ ಈ ವರ್ಷದ ಸೆಪ್ಟಂಬರ್‌ವರೆಗೂ ಸಂಸ್ಥೆಯ ಹೂಡಿಕೆ ಮುಂದುವರಿಸಲಿದೆ ಎನ್ನಲಾಗಿದೆ.

ಈ ಮೂಲಕ ಕೇಂದ್ರ ಸರ್ಕಾರ ಇಪಿಎಫ್‌ಒ ಉದ್ಯೋಗಿಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದು, ”27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ! ಜೆಪಿಸಿ ತನಿಖೆಗೆ ಹೆದರಬೇಡಿ. ಪ್ರಜಾಪ್ರಭುತ್ವವನ್ನು ಅನರ್ಹಗೊಳಿಸಬೇಡಿ! ನಿಮ್ಮ ಸರ್ಕಾರ 140 ಕೋಟಿ ಭಾರತೀಯರಿಗೆ ಉತ್ತರಿಸುವಂತೆ ಮಾಡಿ” ಎಂದು ಒತ್ತಾಯಿಸಿದ್ದಾರೆ.

ದೇಶದ ಎರಡನೇ ಅತಿದೊಡ್ಡ ಬ್ಯಾಂಕೇತರ ಸಂಸ್ಥೆಯಾಗಿರುವ ಇಪಿಎಫ್ಒ ತನ್ನ ಈಕ್ವಿಟಿ ಹೂಡಿಕೆಗಳ ಶೇ.85ರಷ್ಟು ಮೊತ್ತವನ್ನು ನಿಫ್ಟಿ 50 ಜೊತೆ ಜೊಡಣೆಗೊಂಡಿರುವ ಇಟಿಎಫ್‌ಗಳಲ್ಲಿ ತೊಡಗಿಸುತ್ತದೆ. ಅದಾನಿ ಎಂಟರ್ಪ್ರೈಸಸ್ ಕಳೆದ ಸೆಪ್ಟಂಬರ್‌ನಲ್ಲಿ ನಿಫ್ಟಿ 50 ಶೇರುಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು, ಈ ವರ್ಷದ ಸೆಪ್ಟಂಬರ್‌ವರೆಗೆ ನಿಫ್ಟಿ 50ರಲ್ಲಿ ಮುಂದುವರಿಯಲಿದೆ.

ಇಪಿಎಫ್ಒ ಔಪಚಾರಿಕ ವಲಯದ 27.73 ಕೋಟಿ ಉದ್ಯೋಗಿಗಳ ಹಣ ಸುರಕ್ಷಿತವಾಗಿದ್ದರೆ ಅವರ ವೃದ್ಧಾಪ್ಯ ನಿರ್ವಹಣೆ ಸುಲಭವಾಗುತ್ತದೆ. ಆದರೆ ಆ ನಿಧಿಯ ಶೇ.15ರಷ್ಟನ್ನು ಎನ್ಎಸ್ಇ ನಿಫ್ಟಿ 50 ಮತ್ತು ಬಿಎಸ್ಇ ಸೆನ್ಸೆಕ್ಸ್ ಜೊತೆ ಜೋಡಣೆಗೊಂಡಿರುವ ಎಕ್ಸ್ಚೇಂಜ್ ಟ್ರೇಡೆಡ್ ಫಂಡ್ (ಇಟಿಎಫ್)ಗಳಲ್ಲಿ ಹೂಡಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಅಪಾಯದಲ್ಲಿ ಇಪಿಎಫ್‌ಒ ಉದ್ಯೋಗಿಳು

ಅದಾನಿ ಗ್ರೂಪ್ ಶೇರುಗಳಲ್ಲಿ ಇಫಿಎಫ್ಒ ಹೂಡಿಕೆಗಳ ಕುರಿತು ಸುದ್ದಿಸಂಸ್ಥೆಯು ಕಳುಹಿಸಿದ್ದ ಪ್ರಶ್ನಾವಳಿಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರಾದ ನೀಲಂ ಶಮಿ ರಾವ್ ಅವರು ಉತ್ತರಿಸಿಲ್ಲ. ಜನರ ವೃದ್ಧಾಪ್ಯ ಉಳಿತಾಯದ ಸುರಕ್ಷತೆಗಾಗಿ ಅದಾನಿ ಗ್ರೂಪ್ ಶೇರುಗಳಲ್ಲಿ ಹೊಸದಾಗಿ ಹೂಡಿಕೆ ಮಾಡದಂತೆ ಸಂಸ್ಥೆಯು ತನ್ನ ಫಂಡ್ ಮ್ಯಾನೇಜರ್‌ಗಳಿಗೆ ಸೂಚಿಸಿದೆಯೇ? ನಿಫ್ಟಿ 50 ಜೊತೆ ಜೋಡಣೆಗೊಂಡಿರುವ ಹೂಡಿಕೆಗಳನ್ನು ಹಿಂದೆಗೆದುಕೊಳ್ಳುವ ಬಗ್ಗೆ ಚಿಂತನೆ ನಡೆದಿದೆಯೇ? ಎಂಬ ಪ್ರಶ್ನೆಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರು ಉತ್ತರಿಸಿಲ್ಲ.

”ಅದಾನಿ ಗ್ರೂಪ್ ಶೇರುಗಳಲ್ಲಿ ಪಿಎಫ್‌ ಹಣ ಹೂಡಿಕೆ ಮಾಡಿರುವ ಬಗ್ಗೆ ತಮಗೆ ತಿಳಿದಿಲ್ಲ” ಎಂದು ಇಪಿಎಫ್ಒ ಟ್ರಸ್ಟಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದ್ರ ಯಾದವ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯುವ ಮಂಡಳಿಯ ಸಭೆಯಲ್ಲಿ ಈ ವಿಷಯವು ಪ್ರಸ್ತಾವಗೊಳ್ಳಬಹುದು ಎಂದು  ಅವರು ಹೇಳಿದ್ದಾರೆ.

ಇದನ್ನೂ ಓದಿ; ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...