HomeUncategorizedಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

ಅದಾನಿ ಕಂಪನಿಗಳಲ್ಲಿ 27.73 ಕೋಟಿ ಉದ್ಯೋಗಿಗಳ ಪಿಎಫ್‌ ಹಣ ಹೂಡಿಕೆ; ಮಲ್ಲಿಕಾರ್ಜುನ ಖರ್ಗೆ ವಿರೋಧ

27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ - ಖರ್ಗೆ

- Advertisement -
- Advertisement -

ಹಿಂಡೆನ್‌ ಬರ್ಗ್ ವರದಿಯ ನಂತರ ಹಲವಾರು ದೊಡ್ಡ ಹೂಡಿಕೆದಾರರು ಅದಾನಿ ಗ್ರೂಪ್ ಶೇರುಗಳಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಅದಾನಿಯ ಉದ್ಯಮ ಸಾಮ್ರಾಜ್ಯ ಕುಸಿದಿದೆ. ಆದರೆ ಭಾರತದ ಅತ್ಯಂತ ದೊಡ್ಡ ನಿವೃತ್ತಿ ನಿಧಿಯಾಗಿರುವ ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ (ಇಪಿಎಫ್ಒ)ಯು ಅದಾನಿ ಎಂಟರ್ಪ್ರೈಸಸ್  ಸೇರಿದಂತೆ ಅದಾನಿ ಗ್ರೂಪ್‌ನ ಎರಡು ಕಂಪನಿಗಳ ಶೇರುಗಳಲ್ಲಿ ಹೂಡಿಕೆ ಮಾಡುವುದನ್ನು ಮುಂದುವರಿಸಿದೆ. ಮುಂದಿನ ವಾರ ಸಭೆ ಸೇರಲಿರುವ ಇಪಿಎಫ್ಒ ಟ್ರಸ್ಟಿಗಳು ತಮ್ಮ ಹೂಡಿಕೆ ವಿಧಾನವನ್ನು ಮರುಪರಿಶೀಲಿಸದಿದ್ದರೆ, ಕನಿಷ್ಠ ಈ ವರ್ಷದ ಸೆಪ್ಟಂಬರ್‌ವರೆಗೂ ಸಂಸ್ಥೆಯ ಹೂಡಿಕೆ ಮುಂದುವರಿಸಲಿದೆ ಎನ್ನಲಾಗಿದೆ.

ಈ ಮೂಲಕ ಕೇಂದ್ರ ಸರ್ಕಾರ ಇಪಿಎಫ್‌ಒ ಉದ್ಯೋಗಿಳು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದು, ”27.73 ಕೋಟಿ ಇಪಿಎಫ್‌ಒ ಉದ್ಯೋಗಿಗಳ ಸಾಮಾಜಿಕ ಭದ್ರತೆಯನ್ನು ಕಸಿದುಕೊಳ್ಳಬೇಡಿ. ನಿಮ್ಮ ಪರಮ ಮಿತ್ರರಿಗೆ ಲೈಫ್‌ಲೈನ್ ಒದಗಿಸಲು ಉದ್ಯೋಗಿಗಳ ಜೀವಮಾನದ ಉಳಿತಾಯವನ್ನು ಅಪಾಯಕ್ಕೆ ತಳ್ಳಬೇಡಿ! ಜೆಪಿಸಿ ತನಿಖೆಗೆ ಹೆದರಬೇಡಿ. ಪ್ರಜಾಪ್ರಭುತ್ವವನ್ನು ಅನರ್ಹಗೊಳಿಸಬೇಡಿ! ನಿಮ್ಮ ಸರ್ಕಾರ 140 ಕೋಟಿ ಭಾರತೀಯರಿಗೆ ಉತ್ತರಿಸುವಂತೆ ಮಾಡಿ” ಎಂದು ಒತ್ತಾಯಿಸಿದ್ದಾರೆ.

ದೇಶದ ಎರಡನೇ ಅತಿದೊಡ್ಡ ಬ್ಯಾಂಕೇತರ ಸಂಸ್ಥೆಯಾಗಿರುವ ಇಪಿಎಫ್ಒ ತನ್ನ ಈಕ್ವಿಟಿ ಹೂಡಿಕೆಗಳ ಶೇ.85ರಷ್ಟು ಮೊತ್ತವನ್ನು ನಿಫ್ಟಿ 50 ಜೊತೆ ಜೊಡಣೆಗೊಂಡಿರುವ ಇಟಿಎಫ್‌ಗಳಲ್ಲಿ ತೊಡಗಿಸುತ್ತದೆ. ಅದಾನಿ ಎಂಟರ್ಪ್ರೈಸಸ್ ಕಳೆದ ಸೆಪ್ಟಂಬರ್‌ನಲ್ಲಿ ನಿಫ್ಟಿ 50 ಶೇರುಗಳ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದು, ಈ ವರ್ಷದ ಸೆಪ್ಟಂಬರ್‌ವರೆಗೆ ನಿಫ್ಟಿ 50ರಲ್ಲಿ ಮುಂದುವರಿಯಲಿದೆ.

ಇಪಿಎಫ್ಒ ಔಪಚಾರಿಕ ವಲಯದ 27.73 ಕೋಟಿ ಉದ್ಯೋಗಿಗಳ ಹಣ ಸುರಕ್ಷಿತವಾಗಿದ್ದರೆ ಅವರ ವೃದ್ಧಾಪ್ಯ ನಿರ್ವಹಣೆ ಸುಲಭವಾಗುತ್ತದೆ. ಆದರೆ ಆ ನಿಧಿಯ ಶೇ.15ರಷ್ಟನ್ನು ಎನ್ಎಸ್ಇ ನಿಫ್ಟಿ 50 ಮತ್ತು ಬಿಎಸ್ಇ ಸೆನ್ಸೆಕ್ಸ್ ಜೊತೆ ಜೋಡಣೆಗೊಂಡಿರುವ ಎಕ್ಸ್ಚೇಂಜ್ ಟ್ರೇಡೆಡ್ ಫಂಡ್ (ಇಟಿಎಫ್)ಗಳಲ್ಲಿ ಹೂಡಿಕೆ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.

ಅಪಾಯದಲ್ಲಿ ಇಪಿಎಫ್‌ಒ ಉದ್ಯೋಗಿಳು

ಅದಾನಿ ಗ್ರೂಪ್ ಶೇರುಗಳಲ್ಲಿ ಇಫಿಎಫ್ಒ ಹೂಡಿಕೆಗಳ ಕುರಿತು ಸುದ್ದಿಸಂಸ್ಥೆಯು ಕಳುಹಿಸಿದ್ದ ಪ್ರಶ್ನಾವಳಿಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರಾದ ನೀಲಂ ಶಮಿ ರಾವ್ ಅವರು ಉತ್ತರಿಸಿಲ್ಲ. ಜನರ ವೃದ್ಧಾಪ್ಯ ಉಳಿತಾಯದ ಸುರಕ್ಷತೆಗಾಗಿ ಅದಾನಿ ಗ್ರೂಪ್ ಶೇರುಗಳಲ್ಲಿ ಹೊಸದಾಗಿ ಹೂಡಿಕೆ ಮಾಡದಂತೆ ಸಂಸ್ಥೆಯು ತನ್ನ ಫಂಡ್ ಮ್ಯಾನೇಜರ್‌ಗಳಿಗೆ ಸೂಚಿಸಿದೆಯೇ? ನಿಫ್ಟಿ 50 ಜೊತೆ ಜೋಡಣೆಗೊಂಡಿರುವ ಹೂಡಿಕೆಗಳನ್ನು ಹಿಂದೆಗೆದುಕೊಳ್ಳುವ ಬಗ್ಗೆ ಚಿಂತನೆ ನಡೆದಿದೆಯೇ? ಎಂಬ ಪ್ರಶ್ನೆಗಳಿಗೆ ಕೇಂದ್ರ ಭವಿಷ್ಯನಿಧಿ ಆಯುಕ್ತರು ಉತ್ತರಿಸಿಲ್ಲ.

”ಅದಾನಿ ಗ್ರೂಪ್ ಶೇರುಗಳಲ್ಲಿ ಪಿಎಫ್‌ ಹಣ ಹೂಡಿಕೆ ಮಾಡಿರುವ ಬಗ್ಗೆ ತಮಗೆ ತಿಳಿದಿಲ್ಲ” ಎಂದು ಇಪಿಎಫ್ಒ ಟ್ರಸ್ಟಿಗಳು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದ್ರ ಯಾದವ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯುವ ಮಂಡಳಿಯ ಸಭೆಯಲ್ಲಿ ಈ ವಿಷಯವು ಪ್ರಸ್ತಾವಗೊಳ್ಳಬಹುದು ಎಂದು  ಅವರು ಹೇಳಿದ್ದಾರೆ.

ಇದನ್ನೂ ಓದಿ; ಪಾನ್-ಆಧಾರ್ ಜೋಡಣೆ ಶುಲ್ಕವಾಗಿ 4,000 ಕೋಟಿ ರೂಗೂ ಅಧಿಕ ಸಂಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...

ಮಹಾರಾಷ್ಟ್ರ: ನಾಗ್ಪುರದ ಸ್ಫೋಟಕ ಕಾರ್ಖಾನೆಯಲ್ಲಿ ಸ್ಫೋಟ, 17ಸಾವು, 18 ಜನರಿಗೆ ಗಂಭೀರ ಗಾಯ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದು, 18 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ (ನಾಗ್ಪುರ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಯುದ್ಧ ಪೀಡಿತ ಸ್ಥಳಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಸ್ಥಳಾಂತರಿಸಲು ತುರ್ತು ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಹೆಚ್ಚುತ್ತಿರುವ ಮಧ್ಯೆ, ಇಸ್ರೇಲ್, ಯುಎಇ, ಇರಾನ್ ಮತ್ತು ಕತಾರ್ ಸೇರಿದಂತೆ ಪೀಡಿತ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ವಾಸಿಸುವ ಕನ್ನಡಿಗರ ಸುರಕ್ಷತೆ ಮತ್ತು ಸ್ಥಳಾಂತರಿಸುವಿಕೆಗೆ ಆದ್ಯತೆ ನೀಡುವಂತೆ ಮುಖ್ಯಮಂತ್ರಿ...

ಅಮೆರಿಕ-ಇಸ್ರೇಲ್-ಇರಾನ್ ಉದ್ವಿಗ್ನತೆ: ಖಮೇನಿ ಹತ್ಯೆಯ ನಂತರ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಭುಗಿಲೆದ್ದ ಪ್ರತಿಭಟನೆಗಳು

ಶ್ರೀನಗರ: ಅಮೆರಿಕ-ಇಸ್ರೇಲ್ ಬಾಂಬ್ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ ನಂತರ ಶ್ರೀನಗರ ನಗರದ ಕೆಲವು ಭಾಗಗಳಲ್ಲಿ ಭಾನುವಾರ ಸ್ವಯಂಪ್ರೇರಿತ ಪ್ರತಿಭಟನೆಗಳು ನಡೆದವು. ಜಮ್ಮು ಮತ್ತು ಕಾಶ್ಮೀರದ...

ದೇವನಹಳ್ಳಿ | ವಿದ್ಯಾರ್ಥಿನಿ ಮೇಲೆ ಅತ್ಯಾಚಾರ : ಖಾಸಗಿ ವಸತಿ ಶಾಲೆಯ ಮಾಲೀಕ, ಪ್ರಾಂಶುಪಾಲೆಯ ಬಂಧನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಒಬ್ಬಳು ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಮತ್ತೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಲೆಯ ಮಾಲೀಕ ಹಾಗೂ ಪ್ರಾಂಶುಪಾಲೆಯಾಗಿರುವ ಆತನ...

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, "ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ" ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್...